Homeಕರೋನಾ ತಲ್ಲಣಮೂರನೇ ದೇಶಿ ನಿರ್ಮಿತ ಬಯೋಲಾಜಿಕಲ್ E ಕಂಪನಿಯ ಲಸಿಕೆ ಸದ್ಯದಲ್ಲೇ ಮಾರುಕಟ್ಟೆಗೆ

ಮೂರನೇ ದೇಶಿ ನಿರ್ಮಿತ ಬಯೋಲಾಜಿಕಲ್ E ಕಂಪನಿಯ ಲಸಿಕೆ ಸದ್ಯದಲ್ಲೇ ಮಾರುಕಟ್ಟೆಗೆ

- Advertisement -
- Advertisement -

ಕೋವಿಶೀಲ್ಡ್, ಕೋವಾಕ್ಸೀನ್ ನಂತರ ಭಾರತದಲ್ಲಿ ಮೂರನೇ ದೇಶಿ ನಿರ್ಮಿತ ‘ಕೋವಿಡ್ 19’ ಹೆಸರಿನ ಹೊಸ ಕೊರೋನಾ ವ್ಯಾಕ್ಸೀನ್ ಮಾರುಕಟ್ಟೆಗೆ ಬರಲು ಸಿದ್ಧವಾಗಿದೆ. ಹೈದರಾಬಾದ್ ಮೂಲದ ಬಯೋಲಾಜಿಕಲ್ E ಸಂಸ್ಥೆಯೊಂದಿಗೆ ಕೇಂದ್ರ ಸರ್ಕಾರ 30 ಕೋಟಿ ವ್ಯಾಕ್ಸೀನ್ ಗಳ ಪೂರೈಕೆಗೆ ಒಪ್ಪಂದ ಮಾಡಿಕೊಂಡ ಬೆನ್ನಲ್ಲೇ ಈ ಮಾಹಿತಿ ಹೊರಬಿದ್ದಿದೆ. ಕೇಂದ್ರ ಸರ್ಕಾರದಿಂದ ತುರ್ತಿ ಪರಿಸ್ಥಿತಿಯ ಬಳಕೆಗೆ ಅನುಮತಿಯನ್ನು ನಿರೀಕ್ಷಿಸುತ್ತಿರುವ ಬಯೊಲಾಜಿಕಲ್ ಈ ಸಂಸ್ಥೆ ಸದ್ಯದಲ್ಲೇ ತನ್ನ ವ್ಯಾಕ್ಸೀನ್ ಅನ್ನು ದೇಶದಲ್ಲಿ ಬಿಡುಗಡೆಮಾಡಲು ಸಜ್ಜಾಗಿದೆ.

ದೇಶದ ಅತ್ಯಂತ ಹಳೆಯ ವ್ಯಾಕ್ಸೀನ್ ತಯಾರಿಕಾ ಕಂಪನಿಯಾದ ಬಯೋಲಾಜಿಕಲ್ E ತನ್ನ ಹೊಸ ವ್ಯಾಕ್ಸೀನ್ ನ ಪ್ರತಿ ಡೋಸ್ ಗೆ 500 ರೂಪಾಯಿಯಂತೆ ಮುಕ್ತ ಮಾರುಕಟ್ಟೆಯಲ್ಲಿ ಮಾರಲು ಸಿದ್ಧತೆ ನಡೆಸಿದೆ ಎಂದು ಕಂಪನಿಯ ಮೂಲಗಳಿಂದ ತಿಳಿದು ಬಂದಿದೆ.

ಎರಡು ಡೋಸ್‌ಗಳಲ್ಲಿ ಜನರಿಗೆ ಬಯೊಲಾಜಿಕಲ್ ಈ ಸಂಸ್ಥೆ ಕೊರೋನಾ ವ್ಯಾಕ್ಸೀನ್ ಅನ್ನು  ನೀಡಲು ಮುಂದಾಗಿದೆ. ಭಾರತದ ಜೊತೆಗೆ ವಿಶ್ವದ ಅತ್ಯಂತ ಕಡಿಮೆ ಬೆಲೆಯ ವ್ಯಾಕ್ಸೀನ್ ಇದಾಗಿರಲಿದೆ ಎಂದು ಕಂಪನಿಯ ಮೂಲಗಳು ಹೇಳಿವೆ.

ಈಗಾಗಲೇ ಫೇಸ್ 1 ಮತ್ತು ಫೇಸ್ 2 ಹಂತದ ಕ್ಲಿನಿಕಲ್ ಟ್ರಯಲ್ ನಲ್ಲಿ ಕಂಪನಿಯ ವ್ಯಾಕ್ಸೀನ್ ಉತ್ತಮ ಫಲಿತಾಂಶವನ್ನು ನೀಡಿದ್ದು ಸದ್ಯ ಸರ್ಕಾರದ ಅನುಮತಿಗಾಗಿ ಕಂಪನಿ ಕಾಯುತ್ತಿದೆ.

ಬಯೊಲಾಜಿಕಲ್ ಈ ಸಂಸ್ಥೆಯ ಹೊಸ ವ್ಯಾಕ್ಸೀನ್ ಭಾರತ, ಆಫ್ರಿಕ, ದಕ್ಷಿಣ ಅಮೆರಿಕಾ ಮತ್ತು ಏಷ್ಯಾದ ದೇಶಗಳಲ್ಲಿನ ವ್ಯಾಕ್ಸೀನ್ ಕೊರತೆಯನ್ನು ನೀಗಿಸಲಿದೆ ಎಂದು‌ ಬಯೊಲಾಜಿಕಲ್ ಈ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಮಹಿಮಾ ಡಾಲ್ಟಾ ತಿಳಿಸಿದ್ದಾರೆ

ಬಯೊಲಾಜಿಕಲ್ E ಸಂಸ್ಥೆ ಅಮೆರಿಕಾದ ಟೆಕ್ಸಾಸ್ ನ ಚಿಲ್ಡ್ರನ್ ಹಾಸ್ಪಿಟಲ್ ಸೆಂಟರ್ ಫಾರ್ ವ್ಯಾಕ್ಸೀನ್ ಡೆವಲಪ್‌ಮೆಂಟ್ ಎಂಬ ಔಷಧ ಸಂಶೋಧನಾ ಸಂಸ್ಥೆಯ ಸಹಯೋಗದಲ್ಲಿ ಹೊಸ ವ್ಯಾಕ್ಸೀನ್ ಅನ್ನು ಅಭಿವೃದ್ಧಿಪಡಿಸಿದೆ. “ಭಾರತದಲ್ಲಿ ಕೋವಿಡ್ ವಿರುದ್ಧ ಹೋರಾಟದಲ್ಲಿ ನಾವು ಬಯೋಲಾಜಿಕಲ್ E ಸಂಸ್ಥೆಯ ಜೊತೆ ಕೈಜೋಡಿಸಲು ಅತ್ಯಂತ ಹೆಮ್ಮೆಯಾಗುತ್ತದೆ. ಜಗತ್ತು ಒಗ್ಗಟ್ಟಾಗಿ ಕೊರೋನಾ ವಿರುದ್ಧ ಹೋರಾಡುತ್ತಿದೆ” ಎಂದು ಟೆಕ್ಸಾಸ್ ಚಿಲ್ಡ್ರನ್ ಹಾಸ್ಪಿಟಲ್ ಸೆಂಟರ್ ನ ಪ್ರೊಫೆಸರ್ ಪೀಟರ್ ಹೊಟೇಝ್ ತಿಳಿಸಿದ್ದಾರೆ.

ಕಳೆದ ವರ್ಷ ಬಯೋಲಾಜಿಕಲ್ E ಔಷದೋತ್ಪಾದನಾ ಕಂಪನಿ ಅಮೆರಿಕಾದ ಜಾನ್ಸನ್ ಆ್ಯಂಡ್ ಜಾನ್ಸನ್ ನ ಭಾಗವಾಗಿರುವ ಜಾನ್ಸೆನ್ ಫಾರ್ಮಾಸುಟಿಕಲ್ NV ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಒಪ್ಪಂದದ ಪ್ರಕಾರ ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಯ Ad26.COV2.S. ಕೋವಿಡ್ 19 ಲಸಿಕೆಯ ಉತ್ಪಾದನೆಯ ಹಕ್ಕುಗಳನ್ನು ಬಯೋಲಾಜಿಕಲ್ E ಸಂಸ್ಥೆ ಪಡೆದುಕೊಂಡಿದೆ.

ದೇಶದ ಅತ್ಯಂತ ಹಳೆಯ ಔಷಧ ಉತ್ಪಾದನಾ ಕಂಪನಿ ಬಯೋಲಾಜಿಕಲ್ E 1953 ರಲ್ಲಿ ಕೆವಿಕೆ ರಾಜು ಅವರು ಕಂಪನಿಯನ್ನು ಆರಂಭಿಸಿದ್ದರು. ಆ ಸಂದರ್ಭದಲ್ಲಿ ದೇಶದ ಮೊಟ್ಟಮೊದಲ ಖಾಸಗಿ ಔಷಧ ತಯಾರಿಕ ಕಂಪಿನಿಯಾಗಿ ಬಯೋಲಾಜಿಕಲ್ E ಸಂಸ್ಥೆ ಗುರುತಿಸಿಕೊಂಡಿತ್ತು. ಇದುವರೆಗೆ ಜಗತ್ತಿನ 100 ದೇಶಗಳಿಗೆ ವಿವಿಧ ವ್ಯಾಕ್ಸೀನ್ ಪೂರೈಸುತ್ತಿರುವ ಬಯೋಲಾಜಿಕಲ್ E ಕಂಪನಿ ಇತರ ವೈದ್ಯಕೀಯ ಔಷಧಿಗಳನ್ನು ಭಾರತ ಮತ್ತು ಅಮೆರಿಕಾದ ಮಾರುಕಟ್ಟೆಗೆ ಪೂರೈಕೆ ಮಾಡುತ್ತಿದೆ.

ಭಾರತ ಸರ್ಕಾರದ ಅನುಮತಿಯ ನಂತರ ಕಂಪನಿಯು ದೊಡ್ಡ ಮಟ್ಟದಲ್ಲಿ COVID-19 ಹೆಸರಿನ ವ್ಯಾಕ್ಸೀನ್ ಅನ್ನು ಉತ್ಪಾದನೆಗೆ ತೊಡಗಲಿದೆ. ಭಾರತದಲ್ಲಿ ಜನರ ಕೈಗೆಟುಕ ದರದಲ್ಲಿ ಔಷಧೋತ್ಪನ್ನಗಳನ್ನು ವ್ಯಾಕ್ಸೀನ್ ಗಳನ್ನು ಪೂರೈಸುವುದು ಸಂಸ್ಥೆಯ ಉದ್ಧೇಶ ಬಯೋಲಾಜಿಕಲ್ E ಸಂಸ್ಥೆ ಮುಖ್ಯಸ್ಥರು ತಿಳಿಸಿದ್ದಾರೆ.


ಇದನ್ನೂ ಓದಿ; ಲಸಿಕೆ ಕುರಿತು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆಗಳು: ಕಟಕಟೆಯಲ್ಲಿ ಮೋದಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...