Homeಕರೋನಾ ತಲ್ಲಣಮೂರನೇ ದೇಶಿ ನಿರ್ಮಿತ ಬಯೋಲಾಜಿಕಲ್ E ಕಂಪನಿಯ ಲಸಿಕೆ ಸದ್ಯದಲ್ಲೇ ಮಾರುಕಟ್ಟೆಗೆ

ಮೂರನೇ ದೇಶಿ ನಿರ್ಮಿತ ಬಯೋಲಾಜಿಕಲ್ E ಕಂಪನಿಯ ಲಸಿಕೆ ಸದ್ಯದಲ್ಲೇ ಮಾರುಕಟ್ಟೆಗೆ

- Advertisement -
- Advertisement -

ಕೋವಿಶೀಲ್ಡ್, ಕೋವಾಕ್ಸೀನ್ ನಂತರ ಭಾರತದಲ್ಲಿ ಮೂರನೇ ದೇಶಿ ನಿರ್ಮಿತ ‘ಕೋವಿಡ್ 19’ ಹೆಸರಿನ ಹೊಸ ಕೊರೋನಾ ವ್ಯಾಕ್ಸೀನ್ ಮಾರುಕಟ್ಟೆಗೆ ಬರಲು ಸಿದ್ಧವಾಗಿದೆ. ಹೈದರಾಬಾದ್ ಮೂಲದ ಬಯೋಲಾಜಿಕಲ್ E ಸಂಸ್ಥೆಯೊಂದಿಗೆ ಕೇಂದ್ರ ಸರ್ಕಾರ 30 ಕೋಟಿ ವ್ಯಾಕ್ಸೀನ್ ಗಳ ಪೂರೈಕೆಗೆ ಒಪ್ಪಂದ ಮಾಡಿಕೊಂಡ ಬೆನ್ನಲ್ಲೇ ಈ ಮಾಹಿತಿ ಹೊರಬಿದ್ದಿದೆ. ಕೇಂದ್ರ ಸರ್ಕಾರದಿಂದ ತುರ್ತಿ ಪರಿಸ್ಥಿತಿಯ ಬಳಕೆಗೆ ಅನುಮತಿಯನ್ನು ನಿರೀಕ್ಷಿಸುತ್ತಿರುವ ಬಯೊಲಾಜಿಕಲ್ ಈ ಸಂಸ್ಥೆ ಸದ್ಯದಲ್ಲೇ ತನ್ನ ವ್ಯಾಕ್ಸೀನ್ ಅನ್ನು ದೇಶದಲ್ಲಿ ಬಿಡುಗಡೆಮಾಡಲು ಸಜ್ಜಾಗಿದೆ.

ದೇಶದ ಅತ್ಯಂತ ಹಳೆಯ ವ್ಯಾಕ್ಸೀನ್ ತಯಾರಿಕಾ ಕಂಪನಿಯಾದ ಬಯೋಲಾಜಿಕಲ್ E ತನ್ನ ಹೊಸ ವ್ಯಾಕ್ಸೀನ್ ನ ಪ್ರತಿ ಡೋಸ್ ಗೆ 500 ರೂಪಾಯಿಯಂತೆ ಮುಕ್ತ ಮಾರುಕಟ್ಟೆಯಲ್ಲಿ ಮಾರಲು ಸಿದ್ಧತೆ ನಡೆಸಿದೆ ಎಂದು ಕಂಪನಿಯ ಮೂಲಗಳಿಂದ ತಿಳಿದು ಬಂದಿದೆ.

ಎರಡು ಡೋಸ್‌ಗಳಲ್ಲಿ ಜನರಿಗೆ ಬಯೊಲಾಜಿಕಲ್ ಈ ಸಂಸ್ಥೆ ಕೊರೋನಾ ವ್ಯಾಕ್ಸೀನ್ ಅನ್ನು  ನೀಡಲು ಮುಂದಾಗಿದೆ. ಭಾರತದ ಜೊತೆಗೆ ವಿಶ್ವದ ಅತ್ಯಂತ ಕಡಿಮೆ ಬೆಲೆಯ ವ್ಯಾಕ್ಸೀನ್ ಇದಾಗಿರಲಿದೆ ಎಂದು ಕಂಪನಿಯ ಮೂಲಗಳು ಹೇಳಿವೆ.

ಈಗಾಗಲೇ ಫೇಸ್ 1 ಮತ್ತು ಫೇಸ್ 2 ಹಂತದ ಕ್ಲಿನಿಕಲ್ ಟ್ರಯಲ್ ನಲ್ಲಿ ಕಂಪನಿಯ ವ್ಯಾಕ್ಸೀನ್ ಉತ್ತಮ ಫಲಿತಾಂಶವನ್ನು ನೀಡಿದ್ದು ಸದ್ಯ ಸರ್ಕಾರದ ಅನುಮತಿಗಾಗಿ ಕಂಪನಿ ಕಾಯುತ್ತಿದೆ.

ಬಯೊಲಾಜಿಕಲ್ ಈ ಸಂಸ್ಥೆಯ ಹೊಸ ವ್ಯಾಕ್ಸೀನ್ ಭಾರತ, ಆಫ್ರಿಕ, ದಕ್ಷಿಣ ಅಮೆರಿಕಾ ಮತ್ತು ಏಷ್ಯಾದ ದೇಶಗಳಲ್ಲಿನ ವ್ಯಾಕ್ಸೀನ್ ಕೊರತೆಯನ್ನು ನೀಗಿಸಲಿದೆ ಎಂದು‌ ಬಯೊಲಾಜಿಕಲ್ ಈ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಮಹಿಮಾ ಡಾಲ್ಟಾ ತಿಳಿಸಿದ್ದಾರೆ

ಬಯೊಲಾಜಿಕಲ್ E ಸಂಸ್ಥೆ ಅಮೆರಿಕಾದ ಟೆಕ್ಸಾಸ್ ನ ಚಿಲ್ಡ್ರನ್ ಹಾಸ್ಪಿಟಲ್ ಸೆಂಟರ್ ಫಾರ್ ವ್ಯಾಕ್ಸೀನ್ ಡೆವಲಪ್‌ಮೆಂಟ್ ಎಂಬ ಔಷಧ ಸಂಶೋಧನಾ ಸಂಸ್ಥೆಯ ಸಹಯೋಗದಲ್ಲಿ ಹೊಸ ವ್ಯಾಕ್ಸೀನ್ ಅನ್ನು ಅಭಿವೃದ್ಧಿಪಡಿಸಿದೆ. “ಭಾರತದಲ್ಲಿ ಕೋವಿಡ್ ವಿರುದ್ಧ ಹೋರಾಟದಲ್ಲಿ ನಾವು ಬಯೋಲಾಜಿಕಲ್ E ಸಂಸ್ಥೆಯ ಜೊತೆ ಕೈಜೋಡಿಸಲು ಅತ್ಯಂತ ಹೆಮ್ಮೆಯಾಗುತ್ತದೆ. ಜಗತ್ತು ಒಗ್ಗಟ್ಟಾಗಿ ಕೊರೋನಾ ವಿರುದ್ಧ ಹೋರಾಡುತ್ತಿದೆ” ಎಂದು ಟೆಕ್ಸಾಸ್ ಚಿಲ್ಡ್ರನ್ ಹಾಸ್ಪಿಟಲ್ ಸೆಂಟರ್ ನ ಪ್ರೊಫೆಸರ್ ಪೀಟರ್ ಹೊಟೇಝ್ ತಿಳಿಸಿದ್ದಾರೆ.

ಕಳೆದ ವರ್ಷ ಬಯೋಲಾಜಿಕಲ್ E ಔಷದೋತ್ಪಾದನಾ ಕಂಪನಿ ಅಮೆರಿಕಾದ ಜಾನ್ಸನ್ ಆ್ಯಂಡ್ ಜಾನ್ಸನ್ ನ ಭಾಗವಾಗಿರುವ ಜಾನ್ಸೆನ್ ಫಾರ್ಮಾಸುಟಿಕಲ್ NV ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಒಪ್ಪಂದದ ಪ್ರಕಾರ ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಯ Ad26.COV2.S. ಕೋವಿಡ್ 19 ಲಸಿಕೆಯ ಉತ್ಪಾದನೆಯ ಹಕ್ಕುಗಳನ್ನು ಬಯೋಲಾಜಿಕಲ್ E ಸಂಸ್ಥೆ ಪಡೆದುಕೊಂಡಿದೆ.

ದೇಶದ ಅತ್ಯಂತ ಹಳೆಯ ಔಷಧ ಉತ್ಪಾದನಾ ಕಂಪನಿ ಬಯೋಲಾಜಿಕಲ್ E 1953 ರಲ್ಲಿ ಕೆವಿಕೆ ರಾಜು ಅವರು ಕಂಪನಿಯನ್ನು ಆರಂಭಿಸಿದ್ದರು. ಆ ಸಂದರ್ಭದಲ್ಲಿ ದೇಶದ ಮೊಟ್ಟಮೊದಲ ಖಾಸಗಿ ಔಷಧ ತಯಾರಿಕ ಕಂಪಿನಿಯಾಗಿ ಬಯೋಲಾಜಿಕಲ್ E ಸಂಸ್ಥೆ ಗುರುತಿಸಿಕೊಂಡಿತ್ತು. ಇದುವರೆಗೆ ಜಗತ್ತಿನ 100 ದೇಶಗಳಿಗೆ ವಿವಿಧ ವ್ಯಾಕ್ಸೀನ್ ಪೂರೈಸುತ್ತಿರುವ ಬಯೋಲಾಜಿಕಲ್ E ಕಂಪನಿ ಇತರ ವೈದ್ಯಕೀಯ ಔಷಧಿಗಳನ್ನು ಭಾರತ ಮತ್ತು ಅಮೆರಿಕಾದ ಮಾರುಕಟ್ಟೆಗೆ ಪೂರೈಕೆ ಮಾಡುತ್ತಿದೆ.

ಭಾರತ ಸರ್ಕಾರದ ಅನುಮತಿಯ ನಂತರ ಕಂಪನಿಯು ದೊಡ್ಡ ಮಟ್ಟದಲ್ಲಿ COVID-19 ಹೆಸರಿನ ವ್ಯಾಕ್ಸೀನ್ ಅನ್ನು ಉತ್ಪಾದನೆಗೆ ತೊಡಗಲಿದೆ. ಭಾರತದಲ್ಲಿ ಜನರ ಕೈಗೆಟುಕ ದರದಲ್ಲಿ ಔಷಧೋತ್ಪನ್ನಗಳನ್ನು ವ್ಯಾಕ್ಸೀನ್ ಗಳನ್ನು ಪೂರೈಸುವುದು ಸಂಸ್ಥೆಯ ಉದ್ಧೇಶ ಬಯೋಲಾಜಿಕಲ್ E ಸಂಸ್ಥೆ ಮುಖ್ಯಸ್ಥರು ತಿಳಿಸಿದ್ದಾರೆ.


ಇದನ್ನೂ ಓದಿ; ಲಸಿಕೆ ಕುರಿತು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆಗಳು: ಕಟಕಟೆಯಲ್ಲಿ ಮೋದಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...