Homeಕರೋನಾ ತಲ್ಲಣಮೂರನೇ ದೇಶಿ ನಿರ್ಮಿತ ಬಯೋಲಾಜಿಕಲ್ E ಕಂಪನಿಯ ಲಸಿಕೆ ಸದ್ಯದಲ್ಲೇ ಮಾರುಕಟ್ಟೆಗೆ

ಮೂರನೇ ದೇಶಿ ನಿರ್ಮಿತ ಬಯೋಲಾಜಿಕಲ್ E ಕಂಪನಿಯ ಲಸಿಕೆ ಸದ್ಯದಲ್ಲೇ ಮಾರುಕಟ್ಟೆಗೆ

- Advertisement -
- Advertisement -

ಕೋವಿಶೀಲ್ಡ್, ಕೋವಾಕ್ಸೀನ್ ನಂತರ ಭಾರತದಲ್ಲಿ ಮೂರನೇ ದೇಶಿ ನಿರ್ಮಿತ ‘ಕೋವಿಡ್ 19’ ಹೆಸರಿನ ಹೊಸ ಕೊರೋನಾ ವ್ಯಾಕ್ಸೀನ್ ಮಾರುಕಟ್ಟೆಗೆ ಬರಲು ಸಿದ್ಧವಾಗಿದೆ. ಹೈದರಾಬಾದ್ ಮೂಲದ ಬಯೋಲಾಜಿಕಲ್ E ಸಂಸ್ಥೆಯೊಂದಿಗೆ ಕೇಂದ್ರ ಸರ್ಕಾರ 30 ಕೋಟಿ ವ್ಯಾಕ್ಸೀನ್ ಗಳ ಪೂರೈಕೆಗೆ ಒಪ್ಪಂದ ಮಾಡಿಕೊಂಡ ಬೆನ್ನಲ್ಲೇ ಈ ಮಾಹಿತಿ ಹೊರಬಿದ್ದಿದೆ. ಕೇಂದ್ರ ಸರ್ಕಾರದಿಂದ ತುರ್ತಿ ಪರಿಸ್ಥಿತಿಯ ಬಳಕೆಗೆ ಅನುಮತಿಯನ್ನು ನಿರೀಕ್ಷಿಸುತ್ತಿರುವ ಬಯೊಲಾಜಿಕಲ್ ಈ ಸಂಸ್ಥೆ ಸದ್ಯದಲ್ಲೇ ತನ್ನ ವ್ಯಾಕ್ಸೀನ್ ಅನ್ನು ದೇಶದಲ್ಲಿ ಬಿಡುಗಡೆಮಾಡಲು ಸಜ್ಜಾಗಿದೆ.

ದೇಶದ ಅತ್ಯಂತ ಹಳೆಯ ವ್ಯಾಕ್ಸೀನ್ ತಯಾರಿಕಾ ಕಂಪನಿಯಾದ ಬಯೋಲಾಜಿಕಲ್ E ತನ್ನ ಹೊಸ ವ್ಯಾಕ್ಸೀನ್ ನ ಪ್ರತಿ ಡೋಸ್ ಗೆ 500 ರೂಪಾಯಿಯಂತೆ ಮುಕ್ತ ಮಾರುಕಟ್ಟೆಯಲ್ಲಿ ಮಾರಲು ಸಿದ್ಧತೆ ನಡೆಸಿದೆ ಎಂದು ಕಂಪನಿಯ ಮೂಲಗಳಿಂದ ತಿಳಿದು ಬಂದಿದೆ.

ಎರಡು ಡೋಸ್‌ಗಳಲ್ಲಿ ಜನರಿಗೆ ಬಯೊಲಾಜಿಕಲ್ ಈ ಸಂಸ್ಥೆ ಕೊರೋನಾ ವ್ಯಾಕ್ಸೀನ್ ಅನ್ನು  ನೀಡಲು ಮುಂದಾಗಿದೆ. ಭಾರತದ ಜೊತೆಗೆ ವಿಶ್ವದ ಅತ್ಯಂತ ಕಡಿಮೆ ಬೆಲೆಯ ವ್ಯಾಕ್ಸೀನ್ ಇದಾಗಿರಲಿದೆ ಎಂದು ಕಂಪನಿಯ ಮೂಲಗಳು ಹೇಳಿವೆ.

ಈಗಾಗಲೇ ಫೇಸ್ 1 ಮತ್ತು ಫೇಸ್ 2 ಹಂತದ ಕ್ಲಿನಿಕಲ್ ಟ್ರಯಲ್ ನಲ್ಲಿ ಕಂಪನಿಯ ವ್ಯಾಕ್ಸೀನ್ ಉತ್ತಮ ಫಲಿತಾಂಶವನ್ನು ನೀಡಿದ್ದು ಸದ್ಯ ಸರ್ಕಾರದ ಅನುಮತಿಗಾಗಿ ಕಂಪನಿ ಕಾಯುತ್ತಿದೆ.

ಬಯೊಲಾಜಿಕಲ್ ಈ ಸಂಸ್ಥೆಯ ಹೊಸ ವ್ಯಾಕ್ಸೀನ್ ಭಾರತ, ಆಫ್ರಿಕ, ದಕ್ಷಿಣ ಅಮೆರಿಕಾ ಮತ್ತು ಏಷ್ಯಾದ ದೇಶಗಳಲ್ಲಿನ ವ್ಯಾಕ್ಸೀನ್ ಕೊರತೆಯನ್ನು ನೀಗಿಸಲಿದೆ ಎಂದು‌ ಬಯೊಲಾಜಿಕಲ್ ಈ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಮಹಿಮಾ ಡಾಲ್ಟಾ ತಿಳಿಸಿದ್ದಾರೆ

ಬಯೊಲಾಜಿಕಲ್ E ಸಂಸ್ಥೆ ಅಮೆರಿಕಾದ ಟೆಕ್ಸಾಸ್ ನ ಚಿಲ್ಡ್ರನ್ ಹಾಸ್ಪಿಟಲ್ ಸೆಂಟರ್ ಫಾರ್ ವ್ಯಾಕ್ಸೀನ್ ಡೆವಲಪ್‌ಮೆಂಟ್ ಎಂಬ ಔಷಧ ಸಂಶೋಧನಾ ಸಂಸ್ಥೆಯ ಸಹಯೋಗದಲ್ಲಿ ಹೊಸ ವ್ಯಾಕ್ಸೀನ್ ಅನ್ನು ಅಭಿವೃದ್ಧಿಪಡಿಸಿದೆ. “ಭಾರತದಲ್ಲಿ ಕೋವಿಡ್ ವಿರುದ್ಧ ಹೋರಾಟದಲ್ಲಿ ನಾವು ಬಯೋಲಾಜಿಕಲ್ E ಸಂಸ್ಥೆಯ ಜೊತೆ ಕೈಜೋಡಿಸಲು ಅತ್ಯಂತ ಹೆಮ್ಮೆಯಾಗುತ್ತದೆ. ಜಗತ್ತು ಒಗ್ಗಟ್ಟಾಗಿ ಕೊರೋನಾ ವಿರುದ್ಧ ಹೋರಾಡುತ್ತಿದೆ” ಎಂದು ಟೆಕ್ಸಾಸ್ ಚಿಲ್ಡ್ರನ್ ಹಾಸ್ಪಿಟಲ್ ಸೆಂಟರ್ ನ ಪ್ರೊಫೆಸರ್ ಪೀಟರ್ ಹೊಟೇಝ್ ತಿಳಿಸಿದ್ದಾರೆ.

ಕಳೆದ ವರ್ಷ ಬಯೋಲಾಜಿಕಲ್ E ಔಷದೋತ್ಪಾದನಾ ಕಂಪನಿ ಅಮೆರಿಕಾದ ಜಾನ್ಸನ್ ಆ್ಯಂಡ್ ಜಾನ್ಸನ್ ನ ಭಾಗವಾಗಿರುವ ಜಾನ್ಸೆನ್ ಫಾರ್ಮಾಸುಟಿಕಲ್ NV ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಒಪ್ಪಂದದ ಪ್ರಕಾರ ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಯ Ad26.COV2.S. ಕೋವಿಡ್ 19 ಲಸಿಕೆಯ ಉತ್ಪಾದನೆಯ ಹಕ್ಕುಗಳನ್ನು ಬಯೋಲಾಜಿಕಲ್ E ಸಂಸ್ಥೆ ಪಡೆದುಕೊಂಡಿದೆ.

ದೇಶದ ಅತ್ಯಂತ ಹಳೆಯ ಔಷಧ ಉತ್ಪಾದನಾ ಕಂಪನಿ ಬಯೋಲಾಜಿಕಲ್ E 1953 ರಲ್ಲಿ ಕೆವಿಕೆ ರಾಜು ಅವರು ಕಂಪನಿಯನ್ನು ಆರಂಭಿಸಿದ್ದರು. ಆ ಸಂದರ್ಭದಲ್ಲಿ ದೇಶದ ಮೊಟ್ಟಮೊದಲ ಖಾಸಗಿ ಔಷಧ ತಯಾರಿಕ ಕಂಪಿನಿಯಾಗಿ ಬಯೋಲಾಜಿಕಲ್ E ಸಂಸ್ಥೆ ಗುರುತಿಸಿಕೊಂಡಿತ್ತು. ಇದುವರೆಗೆ ಜಗತ್ತಿನ 100 ದೇಶಗಳಿಗೆ ವಿವಿಧ ವ್ಯಾಕ್ಸೀನ್ ಪೂರೈಸುತ್ತಿರುವ ಬಯೋಲಾಜಿಕಲ್ E ಕಂಪನಿ ಇತರ ವೈದ್ಯಕೀಯ ಔಷಧಿಗಳನ್ನು ಭಾರತ ಮತ್ತು ಅಮೆರಿಕಾದ ಮಾರುಕಟ್ಟೆಗೆ ಪೂರೈಕೆ ಮಾಡುತ್ತಿದೆ.

ಭಾರತ ಸರ್ಕಾರದ ಅನುಮತಿಯ ನಂತರ ಕಂಪನಿಯು ದೊಡ್ಡ ಮಟ್ಟದಲ್ಲಿ COVID-19 ಹೆಸರಿನ ವ್ಯಾಕ್ಸೀನ್ ಅನ್ನು ಉತ್ಪಾದನೆಗೆ ತೊಡಗಲಿದೆ. ಭಾರತದಲ್ಲಿ ಜನರ ಕೈಗೆಟುಕ ದರದಲ್ಲಿ ಔಷಧೋತ್ಪನ್ನಗಳನ್ನು ವ್ಯಾಕ್ಸೀನ್ ಗಳನ್ನು ಪೂರೈಸುವುದು ಸಂಸ್ಥೆಯ ಉದ್ಧೇಶ ಬಯೋಲಾಜಿಕಲ್ E ಸಂಸ್ಥೆ ಮುಖ್ಯಸ್ಥರು ತಿಳಿಸಿದ್ದಾರೆ.


ಇದನ್ನೂ ಓದಿ; ಲಸಿಕೆ ಕುರಿತು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆಗಳು: ಕಟಕಟೆಯಲ್ಲಿ ಮೋದಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...