Homeಕರೋನಾ ತಲ್ಲಣಮೂರನೇ ದೇಶಿ ನಿರ್ಮಿತ ಬಯೋಲಾಜಿಕಲ್ E ಕಂಪನಿಯ ಲಸಿಕೆ ಸದ್ಯದಲ್ಲೇ ಮಾರುಕಟ್ಟೆಗೆ

ಮೂರನೇ ದೇಶಿ ನಿರ್ಮಿತ ಬಯೋಲಾಜಿಕಲ್ E ಕಂಪನಿಯ ಲಸಿಕೆ ಸದ್ಯದಲ್ಲೇ ಮಾರುಕಟ್ಟೆಗೆ

- Advertisement -
- Advertisement -

ಕೋವಿಶೀಲ್ಡ್, ಕೋವಾಕ್ಸೀನ್ ನಂತರ ಭಾರತದಲ್ಲಿ ಮೂರನೇ ದೇಶಿ ನಿರ್ಮಿತ ‘ಕೋವಿಡ್ 19’ ಹೆಸರಿನ ಹೊಸ ಕೊರೋನಾ ವ್ಯಾಕ್ಸೀನ್ ಮಾರುಕಟ್ಟೆಗೆ ಬರಲು ಸಿದ್ಧವಾಗಿದೆ. ಹೈದರಾಬಾದ್ ಮೂಲದ ಬಯೋಲಾಜಿಕಲ್ E ಸಂಸ್ಥೆಯೊಂದಿಗೆ ಕೇಂದ್ರ ಸರ್ಕಾರ 30 ಕೋಟಿ ವ್ಯಾಕ್ಸೀನ್ ಗಳ ಪೂರೈಕೆಗೆ ಒಪ್ಪಂದ ಮಾಡಿಕೊಂಡ ಬೆನ್ನಲ್ಲೇ ಈ ಮಾಹಿತಿ ಹೊರಬಿದ್ದಿದೆ. ಕೇಂದ್ರ ಸರ್ಕಾರದಿಂದ ತುರ್ತಿ ಪರಿಸ್ಥಿತಿಯ ಬಳಕೆಗೆ ಅನುಮತಿಯನ್ನು ನಿರೀಕ್ಷಿಸುತ್ತಿರುವ ಬಯೊಲಾಜಿಕಲ್ ಈ ಸಂಸ್ಥೆ ಸದ್ಯದಲ್ಲೇ ತನ್ನ ವ್ಯಾಕ್ಸೀನ್ ಅನ್ನು ದೇಶದಲ್ಲಿ ಬಿಡುಗಡೆಮಾಡಲು ಸಜ್ಜಾಗಿದೆ.

ದೇಶದ ಅತ್ಯಂತ ಹಳೆಯ ವ್ಯಾಕ್ಸೀನ್ ತಯಾರಿಕಾ ಕಂಪನಿಯಾದ ಬಯೋಲಾಜಿಕಲ್ E ತನ್ನ ಹೊಸ ವ್ಯಾಕ್ಸೀನ್ ನ ಪ್ರತಿ ಡೋಸ್ ಗೆ 500 ರೂಪಾಯಿಯಂತೆ ಮುಕ್ತ ಮಾರುಕಟ್ಟೆಯಲ್ಲಿ ಮಾರಲು ಸಿದ್ಧತೆ ನಡೆಸಿದೆ ಎಂದು ಕಂಪನಿಯ ಮೂಲಗಳಿಂದ ತಿಳಿದು ಬಂದಿದೆ.

ಎರಡು ಡೋಸ್‌ಗಳಲ್ಲಿ ಜನರಿಗೆ ಬಯೊಲಾಜಿಕಲ್ ಈ ಸಂಸ್ಥೆ ಕೊರೋನಾ ವ್ಯಾಕ್ಸೀನ್ ಅನ್ನು  ನೀಡಲು ಮುಂದಾಗಿದೆ. ಭಾರತದ ಜೊತೆಗೆ ವಿಶ್ವದ ಅತ್ಯಂತ ಕಡಿಮೆ ಬೆಲೆಯ ವ್ಯಾಕ್ಸೀನ್ ಇದಾಗಿರಲಿದೆ ಎಂದು ಕಂಪನಿಯ ಮೂಲಗಳು ಹೇಳಿವೆ.

ಈಗಾಗಲೇ ಫೇಸ್ 1 ಮತ್ತು ಫೇಸ್ 2 ಹಂತದ ಕ್ಲಿನಿಕಲ್ ಟ್ರಯಲ್ ನಲ್ಲಿ ಕಂಪನಿಯ ವ್ಯಾಕ್ಸೀನ್ ಉತ್ತಮ ಫಲಿತಾಂಶವನ್ನು ನೀಡಿದ್ದು ಸದ್ಯ ಸರ್ಕಾರದ ಅನುಮತಿಗಾಗಿ ಕಂಪನಿ ಕಾಯುತ್ತಿದೆ.

ಬಯೊಲಾಜಿಕಲ್ ಈ ಸಂಸ್ಥೆಯ ಹೊಸ ವ್ಯಾಕ್ಸೀನ್ ಭಾರತ, ಆಫ್ರಿಕ, ದಕ್ಷಿಣ ಅಮೆರಿಕಾ ಮತ್ತು ಏಷ್ಯಾದ ದೇಶಗಳಲ್ಲಿನ ವ್ಯಾಕ್ಸೀನ್ ಕೊರತೆಯನ್ನು ನೀಗಿಸಲಿದೆ ಎಂದು‌ ಬಯೊಲಾಜಿಕಲ್ ಈ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಮಹಿಮಾ ಡಾಲ್ಟಾ ತಿಳಿಸಿದ್ದಾರೆ

ಬಯೊಲಾಜಿಕಲ್ E ಸಂಸ್ಥೆ ಅಮೆರಿಕಾದ ಟೆಕ್ಸಾಸ್ ನ ಚಿಲ್ಡ್ರನ್ ಹಾಸ್ಪಿಟಲ್ ಸೆಂಟರ್ ಫಾರ್ ವ್ಯಾಕ್ಸೀನ್ ಡೆವಲಪ್‌ಮೆಂಟ್ ಎಂಬ ಔಷಧ ಸಂಶೋಧನಾ ಸಂಸ್ಥೆಯ ಸಹಯೋಗದಲ್ಲಿ ಹೊಸ ವ್ಯಾಕ್ಸೀನ್ ಅನ್ನು ಅಭಿವೃದ್ಧಿಪಡಿಸಿದೆ. “ಭಾರತದಲ್ಲಿ ಕೋವಿಡ್ ವಿರುದ್ಧ ಹೋರಾಟದಲ್ಲಿ ನಾವು ಬಯೋಲಾಜಿಕಲ್ E ಸಂಸ್ಥೆಯ ಜೊತೆ ಕೈಜೋಡಿಸಲು ಅತ್ಯಂತ ಹೆಮ್ಮೆಯಾಗುತ್ತದೆ. ಜಗತ್ತು ಒಗ್ಗಟ್ಟಾಗಿ ಕೊರೋನಾ ವಿರುದ್ಧ ಹೋರಾಡುತ್ತಿದೆ” ಎಂದು ಟೆಕ್ಸಾಸ್ ಚಿಲ್ಡ್ರನ್ ಹಾಸ್ಪಿಟಲ್ ಸೆಂಟರ್ ನ ಪ್ರೊಫೆಸರ್ ಪೀಟರ್ ಹೊಟೇಝ್ ತಿಳಿಸಿದ್ದಾರೆ.

ಕಳೆದ ವರ್ಷ ಬಯೋಲಾಜಿಕಲ್ E ಔಷದೋತ್ಪಾದನಾ ಕಂಪನಿ ಅಮೆರಿಕಾದ ಜಾನ್ಸನ್ ಆ್ಯಂಡ್ ಜಾನ್ಸನ್ ನ ಭಾಗವಾಗಿರುವ ಜಾನ್ಸೆನ್ ಫಾರ್ಮಾಸುಟಿಕಲ್ NV ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಒಪ್ಪಂದದ ಪ್ರಕಾರ ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಯ Ad26.COV2.S. ಕೋವಿಡ್ 19 ಲಸಿಕೆಯ ಉತ್ಪಾದನೆಯ ಹಕ್ಕುಗಳನ್ನು ಬಯೋಲಾಜಿಕಲ್ E ಸಂಸ್ಥೆ ಪಡೆದುಕೊಂಡಿದೆ.

ದೇಶದ ಅತ್ಯಂತ ಹಳೆಯ ಔಷಧ ಉತ್ಪಾದನಾ ಕಂಪನಿ ಬಯೋಲಾಜಿಕಲ್ E 1953 ರಲ್ಲಿ ಕೆವಿಕೆ ರಾಜು ಅವರು ಕಂಪನಿಯನ್ನು ಆರಂಭಿಸಿದ್ದರು. ಆ ಸಂದರ್ಭದಲ್ಲಿ ದೇಶದ ಮೊಟ್ಟಮೊದಲ ಖಾಸಗಿ ಔಷಧ ತಯಾರಿಕ ಕಂಪಿನಿಯಾಗಿ ಬಯೋಲಾಜಿಕಲ್ E ಸಂಸ್ಥೆ ಗುರುತಿಸಿಕೊಂಡಿತ್ತು. ಇದುವರೆಗೆ ಜಗತ್ತಿನ 100 ದೇಶಗಳಿಗೆ ವಿವಿಧ ವ್ಯಾಕ್ಸೀನ್ ಪೂರೈಸುತ್ತಿರುವ ಬಯೋಲಾಜಿಕಲ್ E ಕಂಪನಿ ಇತರ ವೈದ್ಯಕೀಯ ಔಷಧಿಗಳನ್ನು ಭಾರತ ಮತ್ತು ಅಮೆರಿಕಾದ ಮಾರುಕಟ್ಟೆಗೆ ಪೂರೈಕೆ ಮಾಡುತ್ತಿದೆ.

ಭಾರತ ಸರ್ಕಾರದ ಅನುಮತಿಯ ನಂತರ ಕಂಪನಿಯು ದೊಡ್ಡ ಮಟ್ಟದಲ್ಲಿ COVID-19 ಹೆಸರಿನ ವ್ಯಾಕ್ಸೀನ್ ಅನ್ನು ಉತ್ಪಾದನೆಗೆ ತೊಡಗಲಿದೆ. ಭಾರತದಲ್ಲಿ ಜನರ ಕೈಗೆಟುಕ ದರದಲ್ಲಿ ಔಷಧೋತ್ಪನ್ನಗಳನ್ನು ವ್ಯಾಕ್ಸೀನ್ ಗಳನ್ನು ಪೂರೈಸುವುದು ಸಂಸ್ಥೆಯ ಉದ್ಧೇಶ ಬಯೋಲಾಜಿಕಲ್ E ಸಂಸ್ಥೆ ಮುಖ್ಯಸ್ಥರು ತಿಳಿಸಿದ್ದಾರೆ.


ಇದನ್ನೂ ಓದಿ; ಲಸಿಕೆ ಕುರಿತು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆಗಳು: ಕಟಕಟೆಯಲ್ಲಿ ಮೋದಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...