Homeಕರೋನಾ ತಲ್ಲಣಮೂರನೇ ದೇಶಿ ನಿರ್ಮಿತ ಬಯೋಲಾಜಿಕಲ್ E ಕಂಪನಿಯ ಲಸಿಕೆ ಸದ್ಯದಲ್ಲೇ ಮಾರುಕಟ್ಟೆಗೆ

ಮೂರನೇ ದೇಶಿ ನಿರ್ಮಿತ ಬಯೋಲಾಜಿಕಲ್ E ಕಂಪನಿಯ ಲಸಿಕೆ ಸದ್ಯದಲ್ಲೇ ಮಾರುಕಟ್ಟೆಗೆ

- Advertisement -
- Advertisement -

ಕೋವಿಶೀಲ್ಡ್, ಕೋವಾಕ್ಸೀನ್ ನಂತರ ಭಾರತದಲ್ಲಿ ಮೂರನೇ ದೇಶಿ ನಿರ್ಮಿತ ‘ಕೋವಿಡ್ 19’ ಹೆಸರಿನ ಹೊಸ ಕೊರೋನಾ ವ್ಯಾಕ್ಸೀನ್ ಮಾರುಕಟ್ಟೆಗೆ ಬರಲು ಸಿದ್ಧವಾಗಿದೆ. ಹೈದರಾಬಾದ್ ಮೂಲದ ಬಯೋಲಾಜಿಕಲ್ E ಸಂಸ್ಥೆಯೊಂದಿಗೆ ಕೇಂದ್ರ ಸರ್ಕಾರ 30 ಕೋಟಿ ವ್ಯಾಕ್ಸೀನ್ ಗಳ ಪೂರೈಕೆಗೆ ಒಪ್ಪಂದ ಮಾಡಿಕೊಂಡ ಬೆನ್ನಲ್ಲೇ ಈ ಮಾಹಿತಿ ಹೊರಬಿದ್ದಿದೆ. ಕೇಂದ್ರ ಸರ್ಕಾರದಿಂದ ತುರ್ತಿ ಪರಿಸ್ಥಿತಿಯ ಬಳಕೆಗೆ ಅನುಮತಿಯನ್ನು ನಿರೀಕ್ಷಿಸುತ್ತಿರುವ ಬಯೊಲಾಜಿಕಲ್ ಈ ಸಂಸ್ಥೆ ಸದ್ಯದಲ್ಲೇ ತನ್ನ ವ್ಯಾಕ್ಸೀನ್ ಅನ್ನು ದೇಶದಲ್ಲಿ ಬಿಡುಗಡೆಮಾಡಲು ಸಜ್ಜಾಗಿದೆ.

ದೇಶದ ಅತ್ಯಂತ ಹಳೆಯ ವ್ಯಾಕ್ಸೀನ್ ತಯಾರಿಕಾ ಕಂಪನಿಯಾದ ಬಯೋಲಾಜಿಕಲ್ E ತನ್ನ ಹೊಸ ವ್ಯಾಕ್ಸೀನ್ ನ ಪ್ರತಿ ಡೋಸ್ ಗೆ 500 ರೂಪಾಯಿಯಂತೆ ಮುಕ್ತ ಮಾರುಕಟ್ಟೆಯಲ್ಲಿ ಮಾರಲು ಸಿದ್ಧತೆ ನಡೆಸಿದೆ ಎಂದು ಕಂಪನಿಯ ಮೂಲಗಳಿಂದ ತಿಳಿದು ಬಂದಿದೆ.

ಎರಡು ಡೋಸ್‌ಗಳಲ್ಲಿ ಜನರಿಗೆ ಬಯೊಲಾಜಿಕಲ್ ಈ ಸಂಸ್ಥೆ ಕೊರೋನಾ ವ್ಯಾಕ್ಸೀನ್ ಅನ್ನು  ನೀಡಲು ಮುಂದಾಗಿದೆ. ಭಾರತದ ಜೊತೆಗೆ ವಿಶ್ವದ ಅತ್ಯಂತ ಕಡಿಮೆ ಬೆಲೆಯ ವ್ಯಾಕ್ಸೀನ್ ಇದಾಗಿರಲಿದೆ ಎಂದು ಕಂಪನಿಯ ಮೂಲಗಳು ಹೇಳಿವೆ.

ಈಗಾಗಲೇ ಫೇಸ್ 1 ಮತ್ತು ಫೇಸ್ 2 ಹಂತದ ಕ್ಲಿನಿಕಲ್ ಟ್ರಯಲ್ ನಲ್ಲಿ ಕಂಪನಿಯ ವ್ಯಾಕ್ಸೀನ್ ಉತ್ತಮ ಫಲಿತಾಂಶವನ್ನು ನೀಡಿದ್ದು ಸದ್ಯ ಸರ್ಕಾರದ ಅನುಮತಿಗಾಗಿ ಕಂಪನಿ ಕಾಯುತ್ತಿದೆ.

ಬಯೊಲಾಜಿಕಲ್ ಈ ಸಂಸ್ಥೆಯ ಹೊಸ ವ್ಯಾಕ್ಸೀನ್ ಭಾರತ, ಆಫ್ರಿಕ, ದಕ್ಷಿಣ ಅಮೆರಿಕಾ ಮತ್ತು ಏಷ್ಯಾದ ದೇಶಗಳಲ್ಲಿನ ವ್ಯಾಕ್ಸೀನ್ ಕೊರತೆಯನ್ನು ನೀಗಿಸಲಿದೆ ಎಂದು‌ ಬಯೊಲಾಜಿಕಲ್ ಈ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಮಹಿಮಾ ಡಾಲ್ಟಾ ತಿಳಿಸಿದ್ದಾರೆ

ಬಯೊಲಾಜಿಕಲ್ E ಸಂಸ್ಥೆ ಅಮೆರಿಕಾದ ಟೆಕ್ಸಾಸ್ ನ ಚಿಲ್ಡ್ರನ್ ಹಾಸ್ಪಿಟಲ್ ಸೆಂಟರ್ ಫಾರ್ ವ್ಯಾಕ್ಸೀನ್ ಡೆವಲಪ್‌ಮೆಂಟ್ ಎಂಬ ಔಷಧ ಸಂಶೋಧನಾ ಸಂಸ್ಥೆಯ ಸಹಯೋಗದಲ್ಲಿ ಹೊಸ ವ್ಯಾಕ್ಸೀನ್ ಅನ್ನು ಅಭಿವೃದ್ಧಿಪಡಿಸಿದೆ. “ಭಾರತದಲ್ಲಿ ಕೋವಿಡ್ ವಿರುದ್ಧ ಹೋರಾಟದಲ್ಲಿ ನಾವು ಬಯೋಲಾಜಿಕಲ್ E ಸಂಸ್ಥೆಯ ಜೊತೆ ಕೈಜೋಡಿಸಲು ಅತ್ಯಂತ ಹೆಮ್ಮೆಯಾಗುತ್ತದೆ. ಜಗತ್ತು ಒಗ್ಗಟ್ಟಾಗಿ ಕೊರೋನಾ ವಿರುದ್ಧ ಹೋರಾಡುತ್ತಿದೆ” ಎಂದು ಟೆಕ್ಸಾಸ್ ಚಿಲ್ಡ್ರನ್ ಹಾಸ್ಪಿಟಲ್ ಸೆಂಟರ್ ನ ಪ್ರೊಫೆಸರ್ ಪೀಟರ್ ಹೊಟೇಝ್ ತಿಳಿಸಿದ್ದಾರೆ.

ಕಳೆದ ವರ್ಷ ಬಯೋಲಾಜಿಕಲ್ E ಔಷದೋತ್ಪಾದನಾ ಕಂಪನಿ ಅಮೆರಿಕಾದ ಜಾನ್ಸನ್ ಆ್ಯಂಡ್ ಜಾನ್ಸನ್ ನ ಭಾಗವಾಗಿರುವ ಜಾನ್ಸೆನ್ ಫಾರ್ಮಾಸುಟಿಕಲ್ NV ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಒಪ್ಪಂದದ ಪ್ರಕಾರ ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಯ Ad26.COV2.S. ಕೋವಿಡ್ 19 ಲಸಿಕೆಯ ಉತ್ಪಾದನೆಯ ಹಕ್ಕುಗಳನ್ನು ಬಯೋಲಾಜಿಕಲ್ E ಸಂಸ್ಥೆ ಪಡೆದುಕೊಂಡಿದೆ.

ದೇಶದ ಅತ್ಯಂತ ಹಳೆಯ ಔಷಧ ಉತ್ಪಾದನಾ ಕಂಪನಿ ಬಯೋಲಾಜಿಕಲ್ E 1953 ರಲ್ಲಿ ಕೆವಿಕೆ ರಾಜು ಅವರು ಕಂಪನಿಯನ್ನು ಆರಂಭಿಸಿದ್ದರು. ಆ ಸಂದರ್ಭದಲ್ಲಿ ದೇಶದ ಮೊಟ್ಟಮೊದಲ ಖಾಸಗಿ ಔಷಧ ತಯಾರಿಕ ಕಂಪಿನಿಯಾಗಿ ಬಯೋಲಾಜಿಕಲ್ E ಸಂಸ್ಥೆ ಗುರುತಿಸಿಕೊಂಡಿತ್ತು. ಇದುವರೆಗೆ ಜಗತ್ತಿನ 100 ದೇಶಗಳಿಗೆ ವಿವಿಧ ವ್ಯಾಕ್ಸೀನ್ ಪೂರೈಸುತ್ತಿರುವ ಬಯೋಲಾಜಿಕಲ್ E ಕಂಪನಿ ಇತರ ವೈದ್ಯಕೀಯ ಔಷಧಿಗಳನ್ನು ಭಾರತ ಮತ್ತು ಅಮೆರಿಕಾದ ಮಾರುಕಟ್ಟೆಗೆ ಪೂರೈಕೆ ಮಾಡುತ್ತಿದೆ.

ಭಾರತ ಸರ್ಕಾರದ ಅನುಮತಿಯ ನಂತರ ಕಂಪನಿಯು ದೊಡ್ಡ ಮಟ್ಟದಲ್ಲಿ COVID-19 ಹೆಸರಿನ ವ್ಯಾಕ್ಸೀನ್ ಅನ್ನು ಉತ್ಪಾದನೆಗೆ ತೊಡಗಲಿದೆ. ಭಾರತದಲ್ಲಿ ಜನರ ಕೈಗೆಟುಕ ದರದಲ್ಲಿ ಔಷಧೋತ್ಪನ್ನಗಳನ್ನು ವ್ಯಾಕ್ಸೀನ್ ಗಳನ್ನು ಪೂರೈಸುವುದು ಸಂಸ್ಥೆಯ ಉದ್ಧೇಶ ಬಯೋಲಾಜಿಕಲ್ E ಸಂಸ್ಥೆ ಮುಖ್ಯಸ್ಥರು ತಿಳಿಸಿದ್ದಾರೆ.


ಇದನ್ನೂ ಓದಿ; ಲಸಿಕೆ ಕುರಿತು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆಗಳು: ಕಟಕಟೆಯಲ್ಲಿ ಮೋದಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...