Homeಕರೋನಾ ತಲ್ಲಣಮೂರನೇ ದೇಶಿ ನಿರ್ಮಿತ ಬಯೋಲಾಜಿಕಲ್ E ಕಂಪನಿಯ ಲಸಿಕೆ ಸದ್ಯದಲ್ಲೇ ಮಾರುಕಟ್ಟೆಗೆ

ಮೂರನೇ ದೇಶಿ ನಿರ್ಮಿತ ಬಯೋಲಾಜಿಕಲ್ E ಕಂಪನಿಯ ಲಸಿಕೆ ಸದ್ಯದಲ್ಲೇ ಮಾರುಕಟ್ಟೆಗೆ

- Advertisement -
- Advertisement -

ಕೋವಿಶೀಲ್ಡ್, ಕೋವಾಕ್ಸೀನ್ ನಂತರ ಭಾರತದಲ್ಲಿ ಮೂರನೇ ದೇಶಿ ನಿರ್ಮಿತ ‘ಕೋವಿಡ್ 19’ ಹೆಸರಿನ ಹೊಸ ಕೊರೋನಾ ವ್ಯಾಕ್ಸೀನ್ ಮಾರುಕಟ್ಟೆಗೆ ಬರಲು ಸಿದ್ಧವಾಗಿದೆ. ಹೈದರಾಬಾದ್ ಮೂಲದ ಬಯೋಲಾಜಿಕಲ್ E ಸಂಸ್ಥೆಯೊಂದಿಗೆ ಕೇಂದ್ರ ಸರ್ಕಾರ 30 ಕೋಟಿ ವ್ಯಾಕ್ಸೀನ್ ಗಳ ಪೂರೈಕೆಗೆ ಒಪ್ಪಂದ ಮಾಡಿಕೊಂಡ ಬೆನ್ನಲ್ಲೇ ಈ ಮಾಹಿತಿ ಹೊರಬಿದ್ದಿದೆ. ಕೇಂದ್ರ ಸರ್ಕಾರದಿಂದ ತುರ್ತಿ ಪರಿಸ್ಥಿತಿಯ ಬಳಕೆಗೆ ಅನುಮತಿಯನ್ನು ನಿರೀಕ್ಷಿಸುತ್ತಿರುವ ಬಯೊಲಾಜಿಕಲ್ ಈ ಸಂಸ್ಥೆ ಸದ್ಯದಲ್ಲೇ ತನ್ನ ವ್ಯಾಕ್ಸೀನ್ ಅನ್ನು ದೇಶದಲ್ಲಿ ಬಿಡುಗಡೆಮಾಡಲು ಸಜ್ಜಾಗಿದೆ.

ದೇಶದ ಅತ್ಯಂತ ಹಳೆಯ ವ್ಯಾಕ್ಸೀನ್ ತಯಾರಿಕಾ ಕಂಪನಿಯಾದ ಬಯೋಲಾಜಿಕಲ್ E ತನ್ನ ಹೊಸ ವ್ಯಾಕ್ಸೀನ್ ನ ಪ್ರತಿ ಡೋಸ್ ಗೆ 500 ರೂಪಾಯಿಯಂತೆ ಮುಕ್ತ ಮಾರುಕಟ್ಟೆಯಲ್ಲಿ ಮಾರಲು ಸಿದ್ಧತೆ ನಡೆಸಿದೆ ಎಂದು ಕಂಪನಿಯ ಮೂಲಗಳಿಂದ ತಿಳಿದು ಬಂದಿದೆ.

ಎರಡು ಡೋಸ್‌ಗಳಲ್ಲಿ ಜನರಿಗೆ ಬಯೊಲಾಜಿಕಲ್ ಈ ಸಂಸ್ಥೆ ಕೊರೋನಾ ವ್ಯಾಕ್ಸೀನ್ ಅನ್ನು  ನೀಡಲು ಮುಂದಾಗಿದೆ. ಭಾರತದ ಜೊತೆಗೆ ವಿಶ್ವದ ಅತ್ಯಂತ ಕಡಿಮೆ ಬೆಲೆಯ ವ್ಯಾಕ್ಸೀನ್ ಇದಾಗಿರಲಿದೆ ಎಂದು ಕಂಪನಿಯ ಮೂಲಗಳು ಹೇಳಿವೆ.

ಈಗಾಗಲೇ ಫೇಸ್ 1 ಮತ್ತು ಫೇಸ್ 2 ಹಂತದ ಕ್ಲಿನಿಕಲ್ ಟ್ರಯಲ್ ನಲ್ಲಿ ಕಂಪನಿಯ ವ್ಯಾಕ್ಸೀನ್ ಉತ್ತಮ ಫಲಿತಾಂಶವನ್ನು ನೀಡಿದ್ದು ಸದ್ಯ ಸರ್ಕಾರದ ಅನುಮತಿಗಾಗಿ ಕಂಪನಿ ಕಾಯುತ್ತಿದೆ.

ಬಯೊಲಾಜಿಕಲ್ ಈ ಸಂಸ್ಥೆಯ ಹೊಸ ವ್ಯಾಕ್ಸೀನ್ ಭಾರತ, ಆಫ್ರಿಕ, ದಕ್ಷಿಣ ಅಮೆರಿಕಾ ಮತ್ತು ಏಷ್ಯಾದ ದೇಶಗಳಲ್ಲಿನ ವ್ಯಾಕ್ಸೀನ್ ಕೊರತೆಯನ್ನು ನೀಗಿಸಲಿದೆ ಎಂದು‌ ಬಯೊಲಾಜಿಕಲ್ ಈ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಮಹಿಮಾ ಡಾಲ್ಟಾ ತಿಳಿಸಿದ್ದಾರೆ

ಬಯೊಲಾಜಿಕಲ್ E ಸಂಸ್ಥೆ ಅಮೆರಿಕಾದ ಟೆಕ್ಸಾಸ್ ನ ಚಿಲ್ಡ್ರನ್ ಹಾಸ್ಪಿಟಲ್ ಸೆಂಟರ್ ಫಾರ್ ವ್ಯಾಕ್ಸೀನ್ ಡೆವಲಪ್‌ಮೆಂಟ್ ಎಂಬ ಔಷಧ ಸಂಶೋಧನಾ ಸಂಸ್ಥೆಯ ಸಹಯೋಗದಲ್ಲಿ ಹೊಸ ವ್ಯಾಕ್ಸೀನ್ ಅನ್ನು ಅಭಿವೃದ್ಧಿಪಡಿಸಿದೆ. “ಭಾರತದಲ್ಲಿ ಕೋವಿಡ್ ವಿರುದ್ಧ ಹೋರಾಟದಲ್ಲಿ ನಾವು ಬಯೋಲಾಜಿಕಲ್ E ಸಂಸ್ಥೆಯ ಜೊತೆ ಕೈಜೋಡಿಸಲು ಅತ್ಯಂತ ಹೆಮ್ಮೆಯಾಗುತ್ತದೆ. ಜಗತ್ತು ಒಗ್ಗಟ್ಟಾಗಿ ಕೊರೋನಾ ವಿರುದ್ಧ ಹೋರಾಡುತ್ತಿದೆ” ಎಂದು ಟೆಕ್ಸಾಸ್ ಚಿಲ್ಡ್ರನ್ ಹಾಸ್ಪಿಟಲ್ ಸೆಂಟರ್ ನ ಪ್ರೊಫೆಸರ್ ಪೀಟರ್ ಹೊಟೇಝ್ ತಿಳಿಸಿದ್ದಾರೆ.

ಕಳೆದ ವರ್ಷ ಬಯೋಲಾಜಿಕಲ್ E ಔಷದೋತ್ಪಾದನಾ ಕಂಪನಿ ಅಮೆರಿಕಾದ ಜಾನ್ಸನ್ ಆ್ಯಂಡ್ ಜಾನ್ಸನ್ ನ ಭಾಗವಾಗಿರುವ ಜಾನ್ಸೆನ್ ಫಾರ್ಮಾಸುಟಿಕಲ್ NV ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಒಪ್ಪಂದದ ಪ್ರಕಾರ ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಯ Ad26.COV2.S. ಕೋವಿಡ್ 19 ಲಸಿಕೆಯ ಉತ್ಪಾದನೆಯ ಹಕ್ಕುಗಳನ್ನು ಬಯೋಲಾಜಿಕಲ್ E ಸಂಸ್ಥೆ ಪಡೆದುಕೊಂಡಿದೆ.

ದೇಶದ ಅತ್ಯಂತ ಹಳೆಯ ಔಷಧ ಉತ್ಪಾದನಾ ಕಂಪನಿ ಬಯೋಲಾಜಿಕಲ್ E 1953 ರಲ್ಲಿ ಕೆವಿಕೆ ರಾಜು ಅವರು ಕಂಪನಿಯನ್ನು ಆರಂಭಿಸಿದ್ದರು. ಆ ಸಂದರ್ಭದಲ್ಲಿ ದೇಶದ ಮೊಟ್ಟಮೊದಲ ಖಾಸಗಿ ಔಷಧ ತಯಾರಿಕ ಕಂಪಿನಿಯಾಗಿ ಬಯೋಲಾಜಿಕಲ್ E ಸಂಸ್ಥೆ ಗುರುತಿಸಿಕೊಂಡಿತ್ತು. ಇದುವರೆಗೆ ಜಗತ್ತಿನ 100 ದೇಶಗಳಿಗೆ ವಿವಿಧ ವ್ಯಾಕ್ಸೀನ್ ಪೂರೈಸುತ್ತಿರುವ ಬಯೋಲಾಜಿಕಲ್ E ಕಂಪನಿ ಇತರ ವೈದ್ಯಕೀಯ ಔಷಧಿಗಳನ್ನು ಭಾರತ ಮತ್ತು ಅಮೆರಿಕಾದ ಮಾರುಕಟ್ಟೆಗೆ ಪೂರೈಕೆ ಮಾಡುತ್ತಿದೆ.

ಭಾರತ ಸರ್ಕಾರದ ಅನುಮತಿಯ ನಂತರ ಕಂಪನಿಯು ದೊಡ್ಡ ಮಟ್ಟದಲ್ಲಿ COVID-19 ಹೆಸರಿನ ವ್ಯಾಕ್ಸೀನ್ ಅನ್ನು ಉತ್ಪಾದನೆಗೆ ತೊಡಗಲಿದೆ. ಭಾರತದಲ್ಲಿ ಜನರ ಕೈಗೆಟುಕ ದರದಲ್ಲಿ ಔಷಧೋತ್ಪನ್ನಗಳನ್ನು ವ್ಯಾಕ್ಸೀನ್ ಗಳನ್ನು ಪೂರೈಸುವುದು ಸಂಸ್ಥೆಯ ಉದ್ಧೇಶ ಬಯೋಲಾಜಿಕಲ್ E ಸಂಸ್ಥೆ ಮುಖ್ಯಸ್ಥರು ತಿಳಿಸಿದ್ದಾರೆ.


ಇದನ್ನೂ ಓದಿ; ಲಸಿಕೆ ಕುರಿತು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆಗಳು: ಕಟಕಟೆಯಲ್ಲಿ ಮೋದಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...