Homeಕರೋನಾ ತಲ್ಲಣಮೂರನೇ ದೇಶಿ ನಿರ್ಮಿತ ಬಯೋಲಾಜಿಕಲ್ E ಕಂಪನಿಯ ಲಸಿಕೆ ಸದ್ಯದಲ್ಲೇ ಮಾರುಕಟ್ಟೆಗೆ

ಮೂರನೇ ದೇಶಿ ನಿರ್ಮಿತ ಬಯೋಲಾಜಿಕಲ್ E ಕಂಪನಿಯ ಲಸಿಕೆ ಸದ್ಯದಲ್ಲೇ ಮಾರುಕಟ್ಟೆಗೆ

- Advertisement -
- Advertisement -

ಕೋವಿಶೀಲ್ಡ್, ಕೋವಾಕ್ಸೀನ್ ನಂತರ ಭಾರತದಲ್ಲಿ ಮೂರನೇ ದೇಶಿ ನಿರ್ಮಿತ ‘ಕೋವಿಡ್ 19’ ಹೆಸರಿನ ಹೊಸ ಕೊರೋನಾ ವ್ಯಾಕ್ಸೀನ್ ಮಾರುಕಟ್ಟೆಗೆ ಬರಲು ಸಿದ್ಧವಾಗಿದೆ. ಹೈದರಾಬಾದ್ ಮೂಲದ ಬಯೋಲಾಜಿಕಲ್ E ಸಂಸ್ಥೆಯೊಂದಿಗೆ ಕೇಂದ್ರ ಸರ್ಕಾರ 30 ಕೋಟಿ ವ್ಯಾಕ್ಸೀನ್ ಗಳ ಪೂರೈಕೆಗೆ ಒಪ್ಪಂದ ಮಾಡಿಕೊಂಡ ಬೆನ್ನಲ್ಲೇ ಈ ಮಾಹಿತಿ ಹೊರಬಿದ್ದಿದೆ. ಕೇಂದ್ರ ಸರ್ಕಾರದಿಂದ ತುರ್ತಿ ಪರಿಸ್ಥಿತಿಯ ಬಳಕೆಗೆ ಅನುಮತಿಯನ್ನು ನಿರೀಕ್ಷಿಸುತ್ತಿರುವ ಬಯೊಲಾಜಿಕಲ್ ಈ ಸಂಸ್ಥೆ ಸದ್ಯದಲ್ಲೇ ತನ್ನ ವ್ಯಾಕ್ಸೀನ್ ಅನ್ನು ದೇಶದಲ್ಲಿ ಬಿಡುಗಡೆಮಾಡಲು ಸಜ್ಜಾಗಿದೆ.

ದೇಶದ ಅತ್ಯಂತ ಹಳೆಯ ವ್ಯಾಕ್ಸೀನ್ ತಯಾರಿಕಾ ಕಂಪನಿಯಾದ ಬಯೋಲಾಜಿಕಲ್ E ತನ್ನ ಹೊಸ ವ್ಯಾಕ್ಸೀನ್ ನ ಪ್ರತಿ ಡೋಸ್ ಗೆ 500 ರೂಪಾಯಿಯಂತೆ ಮುಕ್ತ ಮಾರುಕಟ್ಟೆಯಲ್ಲಿ ಮಾರಲು ಸಿದ್ಧತೆ ನಡೆಸಿದೆ ಎಂದು ಕಂಪನಿಯ ಮೂಲಗಳಿಂದ ತಿಳಿದು ಬಂದಿದೆ.

ಎರಡು ಡೋಸ್‌ಗಳಲ್ಲಿ ಜನರಿಗೆ ಬಯೊಲಾಜಿಕಲ್ ಈ ಸಂಸ್ಥೆ ಕೊರೋನಾ ವ್ಯಾಕ್ಸೀನ್ ಅನ್ನು  ನೀಡಲು ಮುಂದಾಗಿದೆ. ಭಾರತದ ಜೊತೆಗೆ ವಿಶ್ವದ ಅತ್ಯಂತ ಕಡಿಮೆ ಬೆಲೆಯ ವ್ಯಾಕ್ಸೀನ್ ಇದಾಗಿರಲಿದೆ ಎಂದು ಕಂಪನಿಯ ಮೂಲಗಳು ಹೇಳಿವೆ.

ಈಗಾಗಲೇ ಫೇಸ್ 1 ಮತ್ತು ಫೇಸ್ 2 ಹಂತದ ಕ್ಲಿನಿಕಲ್ ಟ್ರಯಲ್ ನಲ್ಲಿ ಕಂಪನಿಯ ವ್ಯಾಕ್ಸೀನ್ ಉತ್ತಮ ಫಲಿತಾಂಶವನ್ನು ನೀಡಿದ್ದು ಸದ್ಯ ಸರ್ಕಾರದ ಅನುಮತಿಗಾಗಿ ಕಂಪನಿ ಕಾಯುತ್ತಿದೆ.

ಬಯೊಲಾಜಿಕಲ್ ಈ ಸಂಸ್ಥೆಯ ಹೊಸ ವ್ಯಾಕ್ಸೀನ್ ಭಾರತ, ಆಫ್ರಿಕ, ದಕ್ಷಿಣ ಅಮೆರಿಕಾ ಮತ್ತು ಏಷ್ಯಾದ ದೇಶಗಳಲ್ಲಿನ ವ್ಯಾಕ್ಸೀನ್ ಕೊರತೆಯನ್ನು ನೀಗಿಸಲಿದೆ ಎಂದು‌ ಬಯೊಲಾಜಿಕಲ್ ಈ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಮಹಿಮಾ ಡಾಲ್ಟಾ ತಿಳಿಸಿದ್ದಾರೆ

ಬಯೊಲಾಜಿಕಲ್ E ಸಂಸ್ಥೆ ಅಮೆರಿಕಾದ ಟೆಕ್ಸಾಸ್ ನ ಚಿಲ್ಡ್ರನ್ ಹಾಸ್ಪಿಟಲ್ ಸೆಂಟರ್ ಫಾರ್ ವ್ಯಾಕ್ಸೀನ್ ಡೆವಲಪ್‌ಮೆಂಟ್ ಎಂಬ ಔಷಧ ಸಂಶೋಧನಾ ಸಂಸ್ಥೆಯ ಸಹಯೋಗದಲ್ಲಿ ಹೊಸ ವ್ಯಾಕ್ಸೀನ್ ಅನ್ನು ಅಭಿವೃದ್ಧಿಪಡಿಸಿದೆ. “ಭಾರತದಲ್ಲಿ ಕೋವಿಡ್ ವಿರುದ್ಧ ಹೋರಾಟದಲ್ಲಿ ನಾವು ಬಯೋಲಾಜಿಕಲ್ E ಸಂಸ್ಥೆಯ ಜೊತೆ ಕೈಜೋಡಿಸಲು ಅತ್ಯಂತ ಹೆಮ್ಮೆಯಾಗುತ್ತದೆ. ಜಗತ್ತು ಒಗ್ಗಟ್ಟಾಗಿ ಕೊರೋನಾ ವಿರುದ್ಧ ಹೋರಾಡುತ್ತಿದೆ” ಎಂದು ಟೆಕ್ಸಾಸ್ ಚಿಲ್ಡ್ರನ್ ಹಾಸ್ಪಿಟಲ್ ಸೆಂಟರ್ ನ ಪ್ರೊಫೆಸರ್ ಪೀಟರ್ ಹೊಟೇಝ್ ತಿಳಿಸಿದ್ದಾರೆ.

ಕಳೆದ ವರ್ಷ ಬಯೋಲಾಜಿಕಲ್ E ಔಷದೋತ್ಪಾದನಾ ಕಂಪನಿ ಅಮೆರಿಕಾದ ಜಾನ್ಸನ್ ಆ್ಯಂಡ್ ಜಾನ್ಸನ್ ನ ಭಾಗವಾಗಿರುವ ಜಾನ್ಸೆನ್ ಫಾರ್ಮಾಸುಟಿಕಲ್ NV ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಒಪ್ಪಂದದ ಪ್ರಕಾರ ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಯ Ad26.COV2.S. ಕೋವಿಡ್ 19 ಲಸಿಕೆಯ ಉತ್ಪಾದನೆಯ ಹಕ್ಕುಗಳನ್ನು ಬಯೋಲಾಜಿಕಲ್ E ಸಂಸ್ಥೆ ಪಡೆದುಕೊಂಡಿದೆ.

ದೇಶದ ಅತ್ಯಂತ ಹಳೆಯ ಔಷಧ ಉತ್ಪಾದನಾ ಕಂಪನಿ ಬಯೋಲಾಜಿಕಲ್ E 1953 ರಲ್ಲಿ ಕೆವಿಕೆ ರಾಜು ಅವರು ಕಂಪನಿಯನ್ನು ಆರಂಭಿಸಿದ್ದರು. ಆ ಸಂದರ್ಭದಲ್ಲಿ ದೇಶದ ಮೊಟ್ಟಮೊದಲ ಖಾಸಗಿ ಔಷಧ ತಯಾರಿಕ ಕಂಪಿನಿಯಾಗಿ ಬಯೋಲಾಜಿಕಲ್ E ಸಂಸ್ಥೆ ಗುರುತಿಸಿಕೊಂಡಿತ್ತು. ಇದುವರೆಗೆ ಜಗತ್ತಿನ 100 ದೇಶಗಳಿಗೆ ವಿವಿಧ ವ್ಯಾಕ್ಸೀನ್ ಪೂರೈಸುತ್ತಿರುವ ಬಯೋಲಾಜಿಕಲ್ E ಕಂಪನಿ ಇತರ ವೈದ್ಯಕೀಯ ಔಷಧಿಗಳನ್ನು ಭಾರತ ಮತ್ತು ಅಮೆರಿಕಾದ ಮಾರುಕಟ್ಟೆಗೆ ಪೂರೈಕೆ ಮಾಡುತ್ತಿದೆ.

ಭಾರತ ಸರ್ಕಾರದ ಅನುಮತಿಯ ನಂತರ ಕಂಪನಿಯು ದೊಡ್ಡ ಮಟ್ಟದಲ್ಲಿ COVID-19 ಹೆಸರಿನ ವ್ಯಾಕ್ಸೀನ್ ಅನ್ನು ಉತ್ಪಾದನೆಗೆ ತೊಡಗಲಿದೆ. ಭಾರತದಲ್ಲಿ ಜನರ ಕೈಗೆಟುಕ ದರದಲ್ಲಿ ಔಷಧೋತ್ಪನ್ನಗಳನ್ನು ವ್ಯಾಕ್ಸೀನ್ ಗಳನ್ನು ಪೂರೈಸುವುದು ಸಂಸ್ಥೆಯ ಉದ್ಧೇಶ ಬಯೋಲಾಜಿಕಲ್ E ಸಂಸ್ಥೆ ಮುಖ್ಯಸ್ಥರು ತಿಳಿಸಿದ್ದಾರೆ.


ಇದನ್ನೂ ಓದಿ; ಲಸಿಕೆ ಕುರಿತು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆಗಳು: ಕಟಕಟೆಯಲ್ಲಿ ಮೋದಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...