Homeಕರೋನಾ ತಲ್ಲಣಭಾರತದ ಕೊರೊನಾ ಪರೀಕ್ಷಾ ಪ್ರಮಾಣ ಕಡಿಮೆ: WHO

ಭಾರತದ ಕೊರೊನಾ ಪರೀಕ್ಷಾ ಪ್ರಮಾಣ ಕಡಿಮೆ: WHO

ಜರ್ಮನಿ, ತೈವಾನ್, ದಕ್ಷಿಣ ಕೊರಿಯಾ, ಜಪಾನ್ ಮತ್ತು ಯುಎಸ್ ನಂತಹ ಕೆಲವು ದೇಶಗಳಿಗೆ ಹೋಲಿಸಿದರೆ ಭಾರತವು ಒಟ್ಟಾರೆಯಾಗಿ ಕಡಿಮೆ ಪರೀಕ್ಷಾ ಪ್ರಮಾಣವನ್ನು ಹೊಂದಿದೆ ಎಂದು ಅವರು ಹೇಳಿದರು.

- Advertisement -
- Advertisement -

ಕೊರೊನಾಗೆ ಸಮರ್ಪಕ ಪರೀಕ್ಷೆಯ ಮಹತ್ವವನ್ನು ಒತ್ತಿಹೇಳುತ್ತಾ, ಸಾಂಕ್ರಾಮಿಕ ರೋಗವನ್ನು ಎದುರಿಸುವಲ್ಲಿ ಉತ್ತಮ ಸಾಧನೆ ತೋರಿದ ಇತರ ದೇಶಗಳಿಗೆ ಹೋಲಿಸಿದರೆ ಭಾರತದ ಪರೀಕ್ಷಾ ಪ್ರಮಾಣ ಕಡಿಮೆ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ (WHO) ಮುಖ್ಯ ವಿಜ್ಞಾನಿ ಡಾ.ಸೌಮ್ಯಾ ಸ್ವಾಮಿನಾಥನ್ ಮಂಗಳವಾರ ಹೇಳಿದ್ದಾರೆ.

ಜರ್ಮನಿ, ತೈವಾನ್, ದಕ್ಷಿಣ ಕೊರಿಯಾ, ಜಪಾನ್ ಮತ್ತು ಅಮೆರಿಕಾದಂತಹ ಕೆಲವು ದೇಶಗಳಿಗೆ ಹೋಲಿಸಿದರೆ ಭಾರತವು ಒಟ್ಟಾರೆಯಾಗಿ ಕಡಿಮೆ ಪರೀಕ್ಷಾ ಪ್ರಮಾಣವನ್ನು ಹೊಂದಿದೆ ಎಂದು ಅವರು ಹೇಳಿದರು.

ಪ್ರತಿ ಸಾರ್ವಜನಿಕ ಆರೋಗ್ಯ ಇಲಾಖೆಯು ಪ್ರತಿ ಮಿಲಿಯನ್‌ಗೆ ಪರೀಕ್ಷಾ ದರ ಎಷ್ಟು ಮತ್ತು ಪರೀಕ್ಷಾ ಸಕಾರಾತ್ಮಕ ದರ ಯಾವುದು ಎಂಬ ಮಾನದಂಡಗಳನ್ನು ಹೊಂದಿರಬೇಕು ಎಂದು ಹೇಳಿದರು.

ಪರೀಕ್ಷೆಯು ಅತ್ಯಂತ ಮುಖ್ಯವಾಗಿದೆ ಎಂದು WHO ಪದೇ ಪದೇ ಒತ್ತಿಹೇಳುತ್ತಿದೆ ಎಂದು ಅವರು ಹೇಳಿದರು.

“ನಾವು ಸಮರ್ಪಕವಾಗಿ ಪರೀಕ್ಷೆ ಮಾಡದಿದ್ದರೆ, ವೈರಸ್ ಎಲ್ಲಿದೆ ಎಂದು ನಮಗೆ ತಿಳಿಯುವುದಿಲ್ಲ. ನೀವು ಪರೀಕ್ಷಿಸದಿದ್ದರೆ, ನೀವು ಬೆಂಕಿಯೊಟ್ಟಿಗೆ ಕಣ್ಣುಮುಚ್ಚಿ ಹೋರಾಡಿದಂತಾಗುತ್ತದೆ. ನಾವು ಪರೀಕ್ಷಿಸಬೇಕು, ಪರೀಕ್ಷಿಸುತ್ತಿರಬೇಕು ಎಂದು ಹೇಳಿದರು.

ಡಾ. ಸೌಮ್ಯಾ ಸ್ವಾಮಿನಾಥನ್ ಮುಂದಿನ 12 ತಿಂಗಳುಗಳವರೆಗೆ, ದೇಶಗಳು ಸಾರ್ವಜನಿಕ ಆರೋಗ್ಯ ಮತ್ತು ಸಾಮಾಜಿಕ ಕ್ರಮಗಳನ್ನು ಕಾರ್ಯರೂಪಕ್ಕೆ ತರಬೇಕಾಗಿದೆ ಎಂದು ಹೇಳಿದರು.

ಉತ್ತಮ ಆಡಳಿತ, ವೈಜ್ಞಾನಿಕ ಜ್ಞಾನದ ಆಧಾರದ ಮೇಲೆ ಉತ್ತಮ ಕಾರ್ಯತಂತ್ರದ ಯೋಜನೆ, ಸಮುದಾಯ, ವೈಯಕ್ತಿಕ ನಂಬಿಕೆಯ ಒಳಗೊಳ್ಳುವಿಕೆ, ಸರ್ಕಾರ ಮತ್ತು ಜನರ ನಡುವಿನ ಉತ್ತಮ ಸಂವಹನದಿಂದಾಗಿ ಕೆಲವು ದೇಶಗಳು ಮೊದಲ ಹಂತದಲ್ಲಿ ವೈರಸ್‌ನ್ನು ಯಶಸ್ವಿಯಾಗಿ ನಿಯಂತ್ರಿಸುತ್ತವೆ ಎಂದು ಹೇಳಿದರು.

ಆದರೆ ಪರೀಕ್ಷೆ ಮಾತ್ರ ಸಮಸ್ಯೆಯನ್ನು ಪರಿಹರಿಸಲು ಹೋಗುವುದಿಲ್ಲ ಸೋಂಕು ದೃಢಪಟ್ಟ ಜನರನ್ನು ಪ್ರತ್ಯೇಕಿಸುವುದು, ಸಂಪರ್ಕವನ್ನು ಪತ್ತೆಹಚ್ಚುವುದು ಮುಖ್ಯ ಎಂದು ಅವರು ಹೇಳಿದರು.

27-28 ಲಸಿಕೆಗಳು ಕ್ಲಿನಿಕಲ್ ಪ್ರಯೋಗಗಳಲ್ಲಿದ್ದರೆ, ಇನ್ನೂ 150 ಲಸಿಕೆಗಳು ಪೂರ್ವ-ಕ್ಲಿನಿಕಲ್ ಪರೀಕ್ಷೆಯಲ್ಲಿವೆ ಎಂದು ಅವರು ಹೇಳಿದರು. ಕೇವಲ ಐದು ಲಸಿಕೆಗಳು ಮೂರನೇ ಹಂತದ ಪ್ರಯೋಗಗಳಿಗೆ ಪ್ರವೇಶಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಲಸಿಕೆಗಳ ಸುರಕ್ಷತೆ ಮತ್ತು ಪರಿಣಾಮಕಾರಿತ್ವದ ಬಗ್ಗೆ ಮುಂದಿನ ಕೆಲವು ತಿಂಗಳುಗಳಲ್ಲಿ ನಾವು ತಿಳಿದುಕೊಳ್ಳುತ್ತೇವೆ. ನೀವು ಹೆಚ್ಚಿನ ಸಂಖ್ಯೆಯ ಆರೋಗ್ಯವಂತ ವ್ಯಕ್ತಿಗಳಿಗೆ ಲಸಿಕೆ ಹಾಕಲು ಹೋಗುವಾಗ ಸಾರ್ವಜನಿಕ ನಂಬಿಕೆಯನ್ನು ಪಡೆಯಲು ಸುರಕ್ಷತೆ ಮುಖ್ಯವಾಗಿದೆ ಎಂದರು.


ಇದನ್ನೂ ಓದಿ: ಕಮರಿದ ವಿಶ್ವಾಸ; ಕುಲೀನ ಅನುಮಾನಗಳ ನಡುವೆ, ಈ ದೇಶ ಮತ್ತೊಮ್ಮೆ ವಿಭಜನೆಯಾಗಿದೆ: ಶಿವಸುಂದರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...