Homeಕರೋನಾ ತಲ್ಲಣಭಾರತದ ಕೊರೊನಾ ಪರೀಕ್ಷಾ ಪ್ರಮಾಣ ಕಡಿಮೆ: WHO

ಭಾರತದ ಕೊರೊನಾ ಪರೀಕ್ಷಾ ಪ್ರಮಾಣ ಕಡಿಮೆ: WHO

ಜರ್ಮನಿ, ತೈವಾನ್, ದಕ್ಷಿಣ ಕೊರಿಯಾ, ಜಪಾನ್ ಮತ್ತು ಯುಎಸ್ ನಂತಹ ಕೆಲವು ದೇಶಗಳಿಗೆ ಹೋಲಿಸಿದರೆ ಭಾರತವು ಒಟ್ಟಾರೆಯಾಗಿ ಕಡಿಮೆ ಪರೀಕ್ಷಾ ಪ್ರಮಾಣವನ್ನು ಹೊಂದಿದೆ ಎಂದು ಅವರು ಹೇಳಿದರು.

- Advertisement -
- Advertisement -

ಕೊರೊನಾಗೆ ಸಮರ್ಪಕ ಪರೀಕ್ಷೆಯ ಮಹತ್ವವನ್ನು ಒತ್ತಿಹೇಳುತ್ತಾ, ಸಾಂಕ್ರಾಮಿಕ ರೋಗವನ್ನು ಎದುರಿಸುವಲ್ಲಿ ಉತ್ತಮ ಸಾಧನೆ ತೋರಿದ ಇತರ ದೇಶಗಳಿಗೆ ಹೋಲಿಸಿದರೆ ಭಾರತದ ಪರೀಕ್ಷಾ ಪ್ರಮಾಣ ಕಡಿಮೆ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ (WHO) ಮುಖ್ಯ ವಿಜ್ಞಾನಿ ಡಾ.ಸೌಮ್ಯಾ ಸ್ವಾಮಿನಾಥನ್ ಮಂಗಳವಾರ ಹೇಳಿದ್ದಾರೆ.

ಜರ್ಮನಿ, ತೈವಾನ್, ದಕ್ಷಿಣ ಕೊರಿಯಾ, ಜಪಾನ್ ಮತ್ತು ಅಮೆರಿಕಾದಂತಹ ಕೆಲವು ದೇಶಗಳಿಗೆ ಹೋಲಿಸಿದರೆ ಭಾರತವು ಒಟ್ಟಾರೆಯಾಗಿ ಕಡಿಮೆ ಪರೀಕ್ಷಾ ಪ್ರಮಾಣವನ್ನು ಹೊಂದಿದೆ ಎಂದು ಅವರು ಹೇಳಿದರು.

ಪ್ರತಿ ಸಾರ್ವಜನಿಕ ಆರೋಗ್ಯ ಇಲಾಖೆಯು ಪ್ರತಿ ಮಿಲಿಯನ್‌ಗೆ ಪರೀಕ್ಷಾ ದರ ಎಷ್ಟು ಮತ್ತು ಪರೀಕ್ಷಾ ಸಕಾರಾತ್ಮಕ ದರ ಯಾವುದು ಎಂಬ ಮಾನದಂಡಗಳನ್ನು ಹೊಂದಿರಬೇಕು ಎಂದು ಹೇಳಿದರು.

ಪರೀಕ್ಷೆಯು ಅತ್ಯಂತ ಮುಖ್ಯವಾಗಿದೆ ಎಂದು WHO ಪದೇ ಪದೇ ಒತ್ತಿಹೇಳುತ್ತಿದೆ ಎಂದು ಅವರು ಹೇಳಿದರು.

“ನಾವು ಸಮರ್ಪಕವಾಗಿ ಪರೀಕ್ಷೆ ಮಾಡದಿದ್ದರೆ, ವೈರಸ್ ಎಲ್ಲಿದೆ ಎಂದು ನಮಗೆ ತಿಳಿಯುವುದಿಲ್ಲ. ನೀವು ಪರೀಕ್ಷಿಸದಿದ್ದರೆ, ನೀವು ಬೆಂಕಿಯೊಟ್ಟಿಗೆ ಕಣ್ಣುಮುಚ್ಚಿ ಹೋರಾಡಿದಂತಾಗುತ್ತದೆ. ನಾವು ಪರೀಕ್ಷಿಸಬೇಕು, ಪರೀಕ್ಷಿಸುತ್ತಿರಬೇಕು ಎಂದು ಹೇಳಿದರು.

ಡಾ. ಸೌಮ್ಯಾ ಸ್ವಾಮಿನಾಥನ್ ಮುಂದಿನ 12 ತಿಂಗಳುಗಳವರೆಗೆ, ದೇಶಗಳು ಸಾರ್ವಜನಿಕ ಆರೋಗ್ಯ ಮತ್ತು ಸಾಮಾಜಿಕ ಕ್ರಮಗಳನ್ನು ಕಾರ್ಯರೂಪಕ್ಕೆ ತರಬೇಕಾಗಿದೆ ಎಂದು ಹೇಳಿದರು.

ಉತ್ತಮ ಆಡಳಿತ, ವೈಜ್ಞಾನಿಕ ಜ್ಞಾನದ ಆಧಾರದ ಮೇಲೆ ಉತ್ತಮ ಕಾರ್ಯತಂತ್ರದ ಯೋಜನೆ, ಸಮುದಾಯ, ವೈಯಕ್ತಿಕ ನಂಬಿಕೆಯ ಒಳಗೊಳ್ಳುವಿಕೆ, ಸರ್ಕಾರ ಮತ್ತು ಜನರ ನಡುವಿನ ಉತ್ತಮ ಸಂವಹನದಿಂದಾಗಿ ಕೆಲವು ದೇಶಗಳು ಮೊದಲ ಹಂತದಲ್ಲಿ ವೈರಸ್‌ನ್ನು ಯಶಸ್ವಿಯಾಗಿ ನಿಯಂತ್ರಿಸುತ್ತವೆ ಎಂದು ಹೇಳಿದರು.

ಆದರೆ ಪರೀಕ್ಷೆ ಮಾತ್ರ ಸಮಸ್ಯೆಯನ್ನು ಪರಿಹರಿಸಲು ಹೋಗುವುದಿಲ್ಲ ಸೋಂಕು ದೃಢಪಟ್ಟ ಜನರನ್ನು ಪ್ರತ್ಯೇಕಿಸುವುದು, ಸಂಪರ್ಕವನ್ನು ಪತ್ತೆಹಚ್ಚುವುದು ಮುಖ್ಯ ಎಂದು ಅವರು ಹೇಳಿದರು.

27-28 ಲಸಿಕೆಗಳು ಕ್ಲಿನಿಕಲ್ ಪ್ರಯೋಗಗಳಲ್ಲಿದ್ದರೆ, ಇನ್ನೂ 150 ಲಸಿಕೆಗಳು ಪೂರ್ವ-ಕ್ಲಿನಿಕಲ್ ಪರೀಕ್ಷೆಯಲ್ಲಿವೆ ಎಂದು ಅವರು ಹೇಳಿದರು. ಕೇವಲ ಐದು ಲಸಿಕೆಗಳು ಮೂರನೇ ಹಂತದ ಪ್ರಯೋಗಗಳಿಗೆ ಪ್ರವೇಶಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಲಸಿಕೆಗಳ ಸುರಕ್ಷತೆ ಮತ್ತು ಪರಿಣಾಮಕಾರಿತ್ವದ ಬಗ್ಗೆ ಮುಂದಿನ ಕೆಲವು ತಿಂಗಳುಗಳಲ್ಲಿ ನಾವು ತಿಳಿದುಕೊಳ್ಳುತ್ತೇವೆ. ನೀವು ಹೆಚ್ಚಿನ ಸಂಖ್ಯೆಯ ಆರೋಗ್ಯವಂತ ವ್ಯಕ್ತಿಗಳಿಗೆ ಲಸಿಕೆ ಹಾಕಲು ಹೋಗುವಾಗ ಸಾರ್ವಜನಿಕ ನಂಬಿಕೆಯನ್ನು ಪಡೆಯಲು ಸುರಕ್ಷತೆ ಮುಖ್ಯವಾಗಿದೆ ಎಂದರು.


ಇದನ್ನೂ ಓದಿ: ಕಮರಿದ ವಿಶ್ವಾಸ; ಕುಲೀನ ಅನುಮಾನಗಳ ನಡುವೆ, ಈ ದೇಶ ಮತ್ತೊಮ್ಮೆ ವಿಭಜನೆಯಾಗಿದೆ: ಶಿವಸುಂದರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...