Homeಕರೋನಾ ತಲ್ಲಣಭಾರತದ ಕೊರೊನಾ ಪರೀಕ್ಷಾ ಪ್ರಮಾಣ ಕಡಿಮೆ: WHO

ಭಾರತದ ಕೊರೊನಾ ಪರೀಕ್ಷಾ ಪ್ರಮಾಣ ಕಡಿಮೆ: WHO

ಜರ್ಮನಿ, ತೈವಾನ್, ದಕ್ಷಿಣ ಕೊರಿಯಾ, ಜಪಾನ್ ಮತ್ತು ಯುಎಸ್ ನಂತಹ ಕೆಲವು ದೇಶಗಳಿಗೆ ಹೋಲಿಸಿದರೆ ಭಾರತವು ಒಟ್ಟಾರೆಯಾಗಿ ಕಡಿಮೆ ಪರೀಕ್ಷಾ ಪ್ರಮಾಣವನ್ನು ಹೊಂದಿದೆ ಎಂದು ಅವರು ಹೇಳಿದರು.

- Advertisement -
- Advertisement -

ಕೊರೊನಾಗೆ ಸಮರ್ಪಕ ಪರೀಕ್ಷೆಯ ಮಹತ್ವವನ್ನು ಒತ್ತಿಹೇಳುತ್ತಾ, ಸಾಂಕ್ರಾಮಿಕ ರೋಗವನ್ನು ಎದುರಿಸುವಲ್ಲಿ ಉತ್ತಮ ಸಾಧನೆ ತೋರಿದ ಇತರ ದೇಶಗಳಿಗೆ ಹೋಲಿಸಿದರೆ ಭಾರತದ ಪರೀಕ್ಷಾ ಪ್ರಮಾಣ ಕಡಿಮೆ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ (WHO) ಮುಖ್ಯ ವಿಜ್ಞಾನಿ ಡಾ.ಸೌಮ್ಯಾ ಸ್ವಾಮಿನಾಥನ್ ಮಂಗಳವಾರ ಹೇಳಿದ್ದಾರೆ.

ಜರ್ಮನಿ, ತೈವಾನ್, ದಕ್ಷಿಣ ಕೊರಿಯಾ, ಜಪಾನ್ ಮತ್ತು ಅಮೆರಿಕಾದಂತಹ ಕೆಲವು ದೇಶಗಳಿಗೆ ಹೋಲಿಸಿದರೆ ಭಾರತವು ಒಟ್ಟಾರೆಯಾಗಿ ಕಡಿಮೆ ಪರೀಕ್ಷಾ ಪ್ರಮಾಣವನ್ನು ಹೊಂದಿದೆ ಎಂದು ಅವರು ಹೇಳಿದರು.

ಪ್ರತಿ ಸಾರ್ವಜನಿಕ ಆರೋಗ್ಯ ಇಲಾಖೆಯು ಪ್ರತಿ ಮಿಲಿಯನ್‌ಗೆ ಪರೀಕ್ಷಾ ದರ ಎಷ್ಟು ಮತ್ತು ಪರೀಕ್ಷಾ ಸಕಾರಾತ್ಮಕ ದರ ಯಾವುದು ಎಂಬ ಮಾನದಂಡಗಳನ್ನು ಹೊಂದಿರಬೇಕು ಎಂದು ಹೇಳಿದರು.

ಪರೀಕ್ಷೆಯು ಅತ್ಯಂತ ಮುಖ್ಯವಾಗಿದೆ ಎಂದು WHO ಪದೇ ಪದೇ ಒತ್ತಿಹೇಳುತ್ತಿದೆ ಎಂದು ಅವರು ಹೇಳಿದರು.

“ನಾವು ಸಮರ್ಪಕವಾಗಿ ಪರೀಕ್ಷೆ ಮಾಡದಿದ್ದರೆ, ವೈರಸ್ ಎಲ್ಲಿದೆ ಎಂದು ನಮಗೆ ತಿಳಿಯುವುದಿಲ್ಲ. ನೀವು ಪರೀಕ್ಷಿಸದಿದ್ದರೆ, ನೀವು ಬೆಂಕಿಯೊಟ್ಟಿಗೆ ಕಣ್ಣುಮುಚ್ಚಿ ಹೋರಾಡಿದಂತಾಗುತ್ತದೆ. ನಾವು ಪರೀಕ್ಷಿಸಬೇಕು, ಪರೀಕ್ಷಿಸುತ್ತಿರಬೇಕು ಎಂದು ಹೇಳಿದರು.

ಡಾ. ಸೌಮ್ಯಾ ಸ್ವಾಮಿನಾಥನ್ ಮುಂದಿನ 12 ತಿಂಗಳುಗಳವರೆಗೆ, ದೇಶಗಳು ಸಾರ್ವಜನಿಕ ಆರೋಗ್ಯ ಮತ್ತು ಸಾಮಾಜಿಕ ಕ್ರಮಗಳನ್ನು ಕಾರ್ಯರೂಪಕ್ಕೆ ತರಬೇಕಾಗಿದೆ ಎಂದು ಹೇಳಿದರು.

ಉತ್ತಮ ಆಡಳಿತ, ವೈಜ್ಞಾನಿಕ ಜ್ಞಾನದ ಆಧಾರದ ಮೇಲೆ ಉತ್ತಮ ಕಾರ್ಯತಂತ್ರದ ಯೋಜನೆ, ಸಮುದಾಯ, ವೈಯಕ್ತಿಕ ನಂಬಿಕೆಯ ಒಳಗೊಳ್ಳುವಿಕೆ, ಸರ್ಕಾರ ಮತ್ತು ಜನರ ನಡುವಿನ ಉತ್ತಮ ಸಂವಹನದಿಂದಾಗಿ ಕೆಲವು ದೇಶಗಳು ಮೊದಲ ಹಂತದಲ್ಲಿ ವೈರಸ್‌ನ್ನು ಯಶಸ್ವಿಯಾಗಿ ನಿಯಂತ್ರಿಸುತ್ತವೆ ಎಂದು ಹೇಳಿದರು.

ಆದರೆ ಪರೀಕ್ಷೆ ಮಾತ್ರ ಸಮಸ್ಯೆಯನ್ನು ಪರಿಹರಿಸಲು ಹೋಗುವುದಿಲ್ಲ ಸೋಂಕು ದೃಢಪಟ್ಟ ಜನರನ್ನು ಪ್ರತ್ಯೇಕಿಸುವುದು, ಸಂಪರ್ಕವನ್ನು ಪತ್ತೆಹಚ್ಚುವುದು ಮುಖ್ಯ ಎಂದು ಅವರು ಹೇಳಿದರು.

27-28 ಲಸಿಕೆಗಳು ಕ್ಲಿನಿಕಲ್ ಪ್ರಯೋಗಗಳಲ್ಲಿದ್ದರೆ, ಇನ್ನೂ 150 ಲಸಿಕೆಗಳು ಪೂರ್ವ-ಕ್ಲಿನಿಕಲ್ ಪರೀಕ್ಷೆಯಲ್ಲಿವೆ ಎಂದು ಅವರು ಹೇಳಿದರು. ಕೇವಲ ಐದು ಲಸಿಕೆಗಳು ಮೂರನೇ ಹಂತದ ಪ್ರಯೋಗಗಳಿಗೆ ಪ್ರವೇಶಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಲಸಿಕೆಗಳ ಸುರಕ್ಷತೆ ಮತ್ತು ಪರಿಣಾಮಕಾರಿತ್ವದ ಬಗ್ಗೆ ಮುಂದಿನ ಕೆಲವು ತಿಂಗಳುಗಳಲ್ಲಿ ನಾವು ತಿಳಿದುಕೊಳ್ಳುತ್ತೇವೆ. ನೀವು ಹೆಚ್ಚಿನ ಸಂಖ್ಯೆಯ ಆರೋಗ್ಯವಂತ ವ್ಯಕ್ತಿಗಳಿಗೆ ಲಸಿಕೆ ಹಾಕಲು ಹೋಗುವಾಗ ಸಾರ್ವಜನಿಕ ನಂಬಿಕೆಯನ್ನು ಪಡೆಯಲು ಸುರಕ್ಷತೆ ಮುಖ್ಯವಾಗಿದೆ ಎಂದರು.


ಇದನ್ನೂ ಓದಿ: ಕಮರಿದ ವಿಶ್ವಾಸ; ಕುಲೀನ ಅನುಮಾನಗಳ ನಡುವೆ, ಈ ದೇಶ ಮತ್ತೊಮ್ಮೆ ವಿಭಜನೆಯಾಗಿದೆ: ಶಿವಸುಂದರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...