Homeಅಂತರಾಷ್ಟ್ರೀಯಭಾರತದ ಕೆಮ್ಮು ಸಿರಪ್ ಮಕ್ಕಳ ಸಾವಿಗೆ ಕಾರಣವಾಗುತ್ತಿದೆ: ತನಿಖೆಗೆ ಕಾಂಗ್ರೆಸ್ ಒತ್ತಾಯ

ಭಾರತದ ಕೆಮ್ಮು ಸಿರಪ್ ಮಕ್ಕಳ ಸಾವಿಗೆ ಕಾರಣವಾಗುತ್ತಿದೆ: ತನಿಖೆಗೆ ಕಾಂಗ್ರೆಸ್ ಒತ್ತಾಯ

- Advertisement -
- Advertisement -

ಭಾರತದಲ್ಲಿ ತಯಾರಿಸಿದ ಕೆಮ್ಮು ಸಿರಪ್‌ಗಳು ಮಾರಕವೆಂದು ಕಾಣುತ್ತಿದೆ. ಇದರಿಂದ ಜಗತ್ತಿನ ಮಕ್ಕಳು ಸಾವಿಗೀಡಾಗುತ್ತಿದ್ದಾರೆ. ಈ ಕುರಿತು ಮೋದಿ ಸರ್ಕಾರ ತುರ್ತು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಭಾರತದಲ್ಲಿ ತಯಾರಿಸಿದ ಕೆಮ್ಮು ಸಿರಪ್‌ಗಳು ಮಾರಕವಾಗುತ್ತಿದೆ. ಮೊದಲು ಈ ಸಿರಪ್ ಸೇವನೆಯಿಂದ ಗ್ಯಾಂಬಿಯಾದಲ್ಲಿ 70 ಮಕ್ಕಳ ಸಾವಿಗೀಡಾಗಿದ್ದರು ಮತ್ತು ಈಗ ಉಜ್ಬೇಕಿಸ್ತಾನ್‌ನಲ್ಲಿ 18 ಮಕ್ಕಳು ಮೃತಪಟ್ಟಿದ್ದಾರೆ. ಮೋದಿ ಸರ್ಕಾರವು ಭಾರತವನ್ನು ಜಗತ್ತಿಗೆ ಔಷಧಾಲಯ ಎಂದು ಹೆಮ್ಮೆಪಡುವುದನ್ನು ನಿಲ್ಲಿಸಬೇಕು ಮತ್ತು ಈ ತಯಾರಕ ಕಂಪನಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಈ ವರ್ಷದ ಸೆಪ್ಟಂಬರ್ 29 ರಂದು ಕೆಮ್ಮಿನ ಸಿರಪ್ ಸೇವಿಸಿದ ಗ್ಯಾಂಬಿಯಾದ 66 ಮಕ್ಕಳು ಸಾವನಪ್ಪಿದ್ದರು. ಈ ಕುರಿತು ಡಬ್ಲುಎಚ್‌ಓ ಭಾರತ ಸರ್ಕಾರದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾಕ್ಕೆ ಎಚ್ಚರಿಕೆ ನೀಡಿತ್ತು. ಹಾಗಾಗಿ ಹರಿಯಾಣ ಮೂಲಕ 4 ಔಷಧ ಕಂಪನಿಗಳ ಮೇಲೆ ವಿಸ್ತೃತ ತನಿಖೆ ನಡೆಸಲಾಗುವುದು ಎಂದು ಸರ್ಕಾರ ಹೇಳಿತ್ತು.

ಹರ್ಯಾಣದ ಸೋನಿಪತ್‌ನಲ್ಲಿರುವ ಮೇಡನ್ ಫಾರ್ಮಾಸ್ಯುಟಿಕಲ್ ಲಿಮಿಟೆಡ್ ಕಂಪನಿಯು ಕೆಮ್ಮಿನ ಸಿರಪ್ ಅನ್ನು ತಯಾರಿಸಿತ್ತು. ಅದನ್ನು ಸೇವಿಸಿದ ಗ್ಯಾಂಬಿಯಾದ ಮಕ್ಕಳು ಮೂತ್ರಪಿಂಡದ ಹಾನಿ ಸಮಸ್ಯೆಯಿಂದ ಪ್ರಾಣ ಬಿಟ್ಟಿದ್ದರು. ಈ ಸಿರಪ್‌ಗಳನ್ನು ಗ್ಯಾಂಬಿಯಾ ದೇಶಕ್ಕೆ ಮಾತ್ರ ರಫ್ತು ಮಾಡಲಾಗಿದೆಯೆ ಅಥವಾ ಇತರ ದೇಶಗಳಿಗೂ ಕಳುಹಿಸಲಾಗಿದೆಯೇ ಎಂಬುದರ ಕುರಿತು ಕಂಪನಿ ಇನ್ನು ಮಾಹಿತಿ ನೀಡಿಲ್ಲ. ಈ ಕುರಿತು ಎಚ್ಚರಿಕೆ ವಹಿಸುವಂತೆ ಇತರ ದೇಶಗಳಿಗೆ ಡಬ್ಲುಎಚ್‌ಓ ತಿಳಿಸಿತ್ತು. ಆದರೆ ಅದಾದ ಎರಡು ತಿಂಗಳ ನಂತರ ಸಿರಪ್ ಸೇವನೆಯಿಂದ ಉಜ್ಬೇಕಿಸ್ತಾನ್‌ನಲ್ಲಿ 18 ಮಕ್ಕಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

WHO ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಗೆಬ್ರೆಯೆಸಸ್ ಸುದ್ದಿಗಾರರೊಂದಿಗೆ ಮಾತನಾಡಿ, “ಪ್ರೋಮೆಥಾಜಿನ್ ಓರಲ್ ಸಲ್ಯೂಷನ್, ಕೋಫೆಕ್ಸ್‌ಮಾಲಿನ್ ಮಕ್ಕಳ ಕೆಮ್ಮಿನ ಸಿರಪ್, ಮ್ಯಾಕೋಫ್ ಮಕ್ಕಳ ಕೆಮ್ಮಿನ ಸಿರಪ್ ಮತ್ತು ಮ್ಯಾಗ್ರಿಪ್ ಎನ್ ಕೋಲ್ಡ್ ಸಿರಪ್ ಗ್ಯಾಂಬಿಯಾದಲ್ಲಿ ಮಕ್ಕಳ ಸಾವಿಗೆ ಕಾರಣವಾದ ಔಷಧಿಗಳಾಗಿವೆ” ಎಂದು ಹೇಳಿದ್ದರು. ಈ ನಾಲ್ಕೂ ಉತ್ಪನ್ನಗಳ ಮಾದರಿಗಳ ಪ್ರಯೋಗಾಲಯ ವಿಶ್ಲೇಷಣೆಯಲ್ಲಿ ಅವುಗಳು ಅಧಿಕ ಪ್ರಮಾಣದ ಡೈಥಿಲೀನ್ ಸ್ಟೈಕೋಲ್ ಮತ್ತು ಎಥಿಲೀನ್ ಗೈಕೋಲ್ ಅನ್ನು ಒಳಗೊಂಡಿವೆ ಎಂಬುದು ಖಚಿತಪಟ್ಟಿದೆ. ಈ ಉತ್ಪನ್ನಗಳ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ಇದುವರೆಗೂ ಡಬ್ಲುಎಚ್‌ಓ ಗ್ಯಾರಂಟಿ ನೀಡಿಲ್ಲ” ಎಂದು ಆರೋಪಿಸಿದ್ದರು.

ಇದನ್ನೂ ಓದಿ; ಒಪಿಎಸ್ ಜಾರಿ ಸಾಧ್ಯವಿಲ್ಲ ಎಂಬ ಸಿದ್ಧ ಉತ್ತರ ಬದಿಗಿಟ್ಟು ಸದನದಲ್ಲಿ ಚರ್ಚೆ ಮಾಡಲಿ: ಹೋರಾಟಗಾರರ ಪಟ್ಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...