Homeಅಂತರಾಷ್ಟ್ರೀಯಭಾರತದ ಕೆಮ್ಮು ಸಿರಪ್ ಮಕ್ಕಳ ಸಾವಿಗೆ ಕಾರಣವಾಗುತ್ತಿದೆ: ತನಿಖೆಗೆ ಕಾಂಗ್ರೆಸ್ ಒತ್ತಾಯ

ಭಾರತದ ಕೆಮ್ಮು ಸಿರಪ್ ಮಕ್ಕಳ ಸಾವಿಗೆ ಕಾರಣವಾಗುತ್ತಿದೆ: ತನಿಖೆಗೆ ಕಾಂಗ್ರೆಸ್ ಒತ್ತಾಯ

- Advertisement -
- Advertisement -

ಭಾರತದಲ್ಲಿ ತಯಾರಿಸಿದ ಕೆಮ್ಮು ಸಿರಪ್‌ಗಳು ಮಾರಕವೆಂದು ಕಾಣುತ್ತಿದೆ. ಇದರಿಂದ ಜಗತ್ತಿನ ಮಕ್ಕಳು ಸಾವಿಗೀಡಾಗುತ್ತಿದ್ದಾರೆ. ಈ ಕುರಿತು ಮೋದಿ ಸರ್ಕಾರ ತುರ್ತು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಭಾರತದಲ್ಲಿ ತಯಾರಿಸಿದ ಕೆಮ್ಮು ಸಿರಪ್‌ಗಳು ಮಾರಕವಾಗುತ್ತಿದೆ. ಮೊದಲು ಈ ಸಿರಪ್ ಸೇವನೆಯಿಂದ ಗ್ಯಾಂಬಿಯಾದಲ್ಲಿ 70 ಮಕ್ಕಳ ಸಾವಿಗೀಡಾಗಿದ್ದರು ಮತ್ತು ಈಗ ಉಜ್ಬೇಕಿಸ್ತಾನ್‌ನಲ್ಲಿ 18 ಮಕ್ಕಳು ಮೃತಪಟ್ಟಿದ್ದಾರೆ. ಮೋದಿ ಸರ್ಕಾರವು ಭಾರತವನ್ನು ಜಗತ್ತಿಗೆ ಔಷಧಾಲಯ ಎಂದು ಹೆಮ್ಮೆಪಡುವುದನ್ನು ನಿಲ್ಲಿಸಬೇಕು ಮತ್ತು ಈ ತಯಾರಕ ಕಂಪನಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಈ ವರ್ಷದ ಸೆಪ್ಟಂಬರ್ 29 ರಂದು ಕೆಮ್ಮಿನ ಸಿರಪ್ ಸೇವಿಸಿದ ಗ್ಯಾಂಬಿಯಾದ 66 ಮಕ್ಕಳು ಸಾವನಪ್ಪಿದ್ದರು. ಈ ಕುರಿತು ಡಬ್ಲುಎಚ್‌ಓ ಭಾರತ ಸರ್ಕಾರದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾಕ್ಕೆ ಎಚ್ಚರಿಕೆ ನೀಡಿತ್ತು. ಹಾಗಾಗಿ ಹರಿಯಾಣ ಮೂಲಕ 4 ಔಷಧ ಕಂಪನಿಗಳ ಮೇಲೆ ವಿಸ್ತೃತ ತನಿಖೆ ನಡೆಸಲಾಗುವುದು ಎಂದು ಸರ್ಕಾರ ಹೇಳಿತ್ತು.

ಹರ್ಯಾಣದ ಸೋನಿಪತ್‌ನಲ್ಲಿರುವ ಮೇಡನ್ ಫಾರ್ಮಾಸ್ಯುಟಿಕಲ್ ಲಿಮಿಟೆಡ್ ಕಂಪನಿಯು ಕೆಮ್ಮಿನ ಸಿರಪ್ ಅನ್ನು ತಯಾರಿಸಿತ್ತು. ಅದನ್ನು ಸೇವಿಸಿದ ಗ್ಯಾಂಬಿಯಾದ ಮಕ್ಕಳು ಮೂತ್ರಪಿಂಡದ ಹಾನಿ ಸಮಸ್ಯೆಯಿಂದ ಪ್ರಾಣ ಬಿಟ್ಟಿದ್ದರು. ಈ ಸಿರಪ್‌ಗಳನ್ನು ಗ್ಯಾಂಬಿಯಾ ದೇಶಕ್ಕೆ ಮಾತ್ರ ರಫ್ತು ಮಾಡಲಾಗಿದೆಯೆ ಅಥವಾ ಇತರ ದೇಶಗಳಿಗೂ ಕಳುಹಿಸಲಾಗಿದೆಯೇ ಎಂಬುದರ ಕುರಿತು ಕಂಪನಿ ಇನ್ನು ಮಾಹಿತಿ ನೀಡಿಲ್ಲ. ಈ ಕುರಿತು ಎಚ್ಚರಿಕೆ ವಹಿಸುವಂತೆ ಇತರ ದೇಶಗಳಿಗೆ ಡಬ್ಲುಎಚ್‌ಓ ತಿಳಿಸಿತ್ತು. ಆದರೆ ಅದಾದ ಎರಡು ತಿಂಗಳ ನಂತರ ಸಿರಪ್ ಸೇವನೆಯಿಂದ ಉಜ್ಬೇಕಿಸ್ತಾನ್‌ನಲ್ಲಿ 18 ಮಕ್ಕಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

WHO ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಗೆಬ್ರೆಯೆಸಸ್ ಸುದ್ದಿಗಾರರೊಂದಿಗೆ ಮಾತನಾಡಿ, “ಪ್ರೋಮೆಥಾಜಿನ್ ಓರಲ್ ಸಲ್ಯೂಷನ್, ಕೋಫೆಕ್ಸ್‌ಮಾಲಿನ್ ಮಕ್ಕಳ ಕೆಮ್ಮಿನ ಸಿರಪ್, ಮ್ಯಾಕೋಫ್ ಮಕ್ಕಳ ಕೆಮ್ಮಿನ ಸಿರಪ್ ಮತ್ತು ಮ್ಯಾಗ್ರಿಪ್ ಎನ್ ಕೋಲ್ಡ್ ಸಿರಪ್ ಗ್ಯಾಂಬಿಯಾದಲ್ಲಿ ಮಕ್ಕಳ ಸಾವಿಗೆ ಕಾರಣವಾದ ಔಷಧಿಗಳಾಗಿವೆ” ಎಂದು ಹೇಳಿದ್ದರು. ಈ ನಾಲ್ಕೂ ಉತ್ಪನ್ನಗಳ ಮಾದರಿಗಳ ಪ್ರಯೋಗಾಲಯ ವಿಶ್ಲೇಷಣೆಯಲ್ಲಿ ಅವುಗಳು ಅಧಿಕ ಪ್ರಮಾಣದ ಡೈಥಿಲೀನ್ ಸ್ಟೈಕೋಲ್ ಮತ್ತು ಎಥಿಲೀನ್ ಗೈಕೋಲ್ ಅನ್ನು ಒಳಗೊಂಡಿವೆ ಎಂಬುದು ಖಚಿತಪಟ್ಟಿದೆ. ಈ ಉತ್ಪನ್ನಗಳ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ಇದುವರೆಗೂ ಡಬ್ಲುಎಚ್‌ಓ ಗ್ಯಾರಂಟಿ ನೀಡಿಲ್ಲ” ಎಂದು ಆರೋಪಿಸಿದ್ದರು.

ಇದನ್ನೂ ಓದಿ; ಒಪಿಎಸ್ ಜಾರಿ ಸಾಧ್ಯವಿಲ್ಲ ಎಂಬ ಸಿದ್ಧ ಉತ್ತರ ಬದಿಗಿಟ್ಟು ಸದನದಲ್ಲಿ ಚರ್ಚೆ ಮಾಡಲಿ: ಹೋರಾಟಗಾರರ ಪಟ್ಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...