Homeಅಂತರಾಷ್ಟ್ರೀಯಭಾರತದ ಕೆಮ್ಮು ಸಿರಪ್ ಮಕ್ಕಳ ಸಾವಿಗೆ ಕಾರಣವಾಗುತ್ತಿದೆ: ತನಿಖೆಗೆ ಕಾಂಗ್ರೆಸ್ ಒತ್ತಾಯ

ಭಾರತದ ಕೆಮ್ಮು ಸಿರಪ್ ಮಕ್ಕಳ ಸಾವಿಗೆ ಕಾರಣವಾಗುತ್ತಿದೆ: ತನಿಖೆಗೆ ಕಾಂಗ್ರೆಸ್ ಒತ್ತಾಯ

- Advertisement -
- Advertisement -

ಭಾರತದಲ್ಲಿ ತಯಾರಿಸಿದ ಕೆಮ್ಮು ಸಿರಪ್‌ಗಳು ಮಾರಕವೆಂದು ಕಾಣುತ್ತಿದೆ. ಇದರಿಂದ ಜಗತ್ತಿನ ಮಕ್ಕಳು ಸಾವಿಗೀಡಾಗುತ್ತಿದ್ದಾರೆ. ಈ ಕುರಿತು ಮೋದಿ ಸರ್ಕಾರ ತುರ್ತು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಭಾರತದಲ್ಲಿ ತಯಾರಿಸಿದ ಕೆಮ್ಮು ಸಿರಪ್‌ಗಳು ಮಾರಕವಾಗುತ್ತಿದೆ. ಮೊದಲು ಈ ಸಿರಪ್ ಸೇವನೆಯಿಂದ ಗ್ಯಾಂಬಿಯಾದಲ್ಲಿ 70 ಮಕ್ಕಳ ಸಾವಿಗೀಡಾಗಿದ್ದರು ಮತ್ತು ಈಗ ಉಜ್ಬೇಕಿಸ್ತಾನ್‌ನಲ್ಲಿ 18 ಮಕ್ಕಳು ಮೃತಪಟ್ಟಿದ್ದಾರೆ. ಮೋದಿ ಸರ್ಕಾರವು ಭಾರತವನ್ನು ಜಗತ್ತಿಗೆ ಔಷಧಾಲಯ ಎಂದು ಹೆಮ್ಮೆಪಡುವುದನ್ನು ನಿಲ್ಲಿಸಬೇಕು ಮತ್ತು ಈ ತಯಾರಕ ಕಂಪನಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಈ ವರ್ಷದ ಸೆಪ್ಟಂಬರ್ 29 ರಂದು ಕೆಮ್ಮಿನ ಸಿರಪ್ ಸೇವಿಸಿದ ಗ್ಯಾಂಬಿಯಾದ 66 ಮಕ್ಕಳು ಸಾವನಪ್ಪಿದ್ದರು. ಈ ಕುರಿತು ಡಬ್ಲುಎಚ್‌ಓ ಭಾರತ ಸರ್ಕಾರದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾಕ್ಕೆ ಎಚ್ಚರಿಕೆ ನೀಡಿತ್ತು. ಹಾಗಾಗಿ ಹರಿಯಾಣ ಮೂಲಕ 4 ಔಷಧ ಕಂಪನಿಗಳ ಮೇಲೆ ವಿಸ್ತೃತ ತನಿಖೆ ನಡೆಸಲಾಗುವುದು ಎಂದು ಸರ್ಕಾರ ಹೇಳಿತ್ತು.

ಹರ್ಯಾಣದ ಸೋನಿಪತ್‌ನಲ್ಲಿರುವ ಮೇಡನ್ ಫಾರ್ಮಾಸ್ಯುಟಿಕಲ್ ಲಿಮಿಟೆಡ್ ಕಂಪನಿಯು ಕೆಮ್ಮಿನ ಸಿರಪ್ ಅನ್ನು ತಯಾರಿಸಿತ್ತು. ಅದನ್ನು ಸೇವಿಸಿದ ಗ್ಯಾಂಬಿಯಾದ ಮಕ್ಕಳು ಮೂತ್ರಪಿಂಡದ ಹಾನಿ ಸಮಸ್ಯೆಯಿಂದ ಪ್ರಾಣ ಬಿಟ್ಟಿದ್ದರು. ಈ ಸಿರಪ್‌ಗಳನ್ನು ಗ್ಯಾಂಬಿಯಾ ದೇಶಕ್ಕೆ ಮಾತ್ರ ರಫ್ತು ಮಾಡಲಾಗಿದೆಯೆ ಅಥವಾ ಇತರ ದೇಶಗಳಿಗೂ ಕಳುಹಿಸಲಾಗಿದೆಯೇ ಎಂಬುದರ ಕುರಿತು ಕಂಪನಿ ಇನ್ನು ಮಾಹಿತಿ ನೀಡಿಲ್ಲ. ಈ ಕುರಿತು ಎಚ್ಚರಿಕೆ ವಹಿಸುವಂತೆ ಇತರ ದೇಶಗಳಿಗೆ ಡಬ್ಲುಎಚ್‌ಓ ತಿಳಿಸಿತ್ತು. ಆದರೆ ಅದಾದ ಎರಡು ತಿಂಗಳ ನಂತರ ಸಿರಪ್ ಸೇವನೆಯಿಂದ ಉಜ್ಬೇಕಿಸ್ತಾನ್‌ನಲ್ಲಿ 18 ಮಕ್ಕಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

WHO ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಗೆಬ್ರೆಯೆಸಸ್ ಸುದ್ದಿಗಾರರೊಂದಿಗೆ ಮಾತನಾಡಿ, “ಪ್ರೋಮೆಥಾಜಿನ್ ಓರಲ್ ಸಲ್ಯೂಷನ್, ಕೋಫೆಕ್ಸ್‌ಮಾಲಿನ್ ಮಕ್ಕಳ ಕೆಮ್ಮಿನ ಸಿರಪ್, ಮ್ಯಾಕೋಫ್ ಮಕ್ಕಳ ಕೆಮ್ಮಿನ ಸಿರಪ್ ಮತ್ತು ಮ್ಯಾಗ್ರಿಪ್ ಎನ್ ಕೋಲ್ಡ್ ಸಿರಪ್ ಗ್ಯಾಂಬಿಯಾದಲ್ಲಿ ಮಕ್ಕಳ ಸಾವಿಗೆ ಕಾರಣವಾದ ಔಷಧಿಗಳಾಗಿವೆ” ಎಂದು ಹೇಳಿದ್ದರು. ಈ ನಾಲ್ಕೂ ಉತ್ಪನ್ನಗಳ ಮಾದರಿಗಳ ಪ್ರಯೋಗಾಲಯ ವಿಶ್ಲೇಷಣೆಯಲ್ಲಿ ಅವುಗಳು ಅಧಿಕ ಪ್ರಮಾಣದ ಡೈಥಿಲೀನ್ ಸ್ಟೈಕೋಲ್ ಮತ್ತು ಎಥಿಲೀನ್ ಗೈಕೋಲ್ ಅನ್ನು ಒಳಗೊಂಡಿವೆ ಎಂಬುದು ಖಚಿತಪಟ್ಟಿದೆ. ಈ ಉತ್ಪನ್ನಗಳ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ಇದುವರೆಗೂ ಡಬ್ಲುಎಚ್‌ಓ ಗ್ಯಾರಂಟಿ ನೀಡಿಲ್ಲ” ಎಂದು ಆರೋಪಿಸಿದ್ದರು.

ಇದನ್ನೂ ಓದಿ; ಒಪಿಎಸ್ ಜಾರಿ ಸಾಧ್ಯವಿಲ್ಲ ಎಂಬ ಸಿದ್ಧ ಉತ್ತರ ಬದಿಗಿಟ್ಟು ಸದನದಲ್ಲಿ ಚರ್ಚೆ ಮಾಡಲಿ: ಹೋರಾಟಗಾರರ ಪಟ್ಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...