Homeಅಂತರಾಷ್ಟ್ರೀಯಭಾರತದ ಕೆಮ್ಮು ಸಿರಪ್ ಮಕ್ಕಳ ಸಾವಿಗೆ ಕಾರಣವಾಗುತ್ತಿದೆ: ತನಿಖೆಗೆ ಕಾಂಗ್ರೆಸ್ ಒತ್ತಾಯ

ಭಾರತದ ಕೆಮ್ಮು ಸಿರಪ್ ಮಕ್ಕಳ ಸಾವಿಗೆ ಕಾರಣವಾಗುತ್ತಿದೆ: ತನಿಖೆಗೆ ಕಾಂಗ್ರೆಸ್ ಒತ್ತಾಯ

- Advertisement -
- Advertisement -

ಭಾರತದಲ್ಲಿ ತಯಾರಿಸಿದ ಕೆಮ್ಮು ಸಿರಪ್‌ಗಳು ಮಾರಕವೆಂದು ಕಾಣುತ್ತಿದೆ. ಇದರಿಂದ ಜಗತ್ತಿನ ಮಕ್ಕಳು ಸಾವಿಗೀಡಾಗುತ್ತಿದ್ದಾರೆ. ಈ ಕುರಿತು ಮೋದಿ ಸರ್ಕಾರ ತುರ್ತು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಭಾರತದಲ್ಲಿ ತಯಾರಿಸಿದ ಕೆಮ್ಮು ಸಿರಪ್‌ಗಳು ಮಾರಕವಾಗುತ್ತಿದೆ. ಮೊದಲು ಈ ಸಿರಪ್ ಸೇವನೆಯಿಂದ ಗ್ಯಾಂಬಿಯಾದಲ್ಲಿ 70 ಮಕ್ಕಳ ಸಾವಿಗೀಡಾಗಿದ್ದರು ಮತ್ತು ಈಗ ಉಜ್ಬೇಕಿಸ್ತಾನ್‌ನಲ್ಲಿ 18 ಮಕ್ಕಳು ಮೃತಪಟ್ಟಿದ್ದಾರೆ. ಮೋದಿ ಸರ್ಕಾರವು ಭಾರತವನ್ನು ಜಗತ್ತಿಗೆ ಔಷಧಾಲಯ ಎಂದು ಹೆಮ್ಮೆಪಡುವುದನ್ನು ನಿಲ್ಲಿಸಬೇಕು ಮತ್ತು ಈ ತಯಾರಕ ಕಂಪನಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಈ ವರ್ಷದ ಸೆಪ್ಟಂಬರ್ 29 ರಂದು ಕೆಮ್ಮಿನ ಸಿರಪ್ ಸೇವಿಸಿದ ಗ್ಯಾಂಬಿಯಾದ 66 ಮಕ್ಕಳು ಸಾವನಪ್ಪಿದ್ದರು. ಈ ಕುರಿತು ಡಬ್ಲುಎಚ್‌ಓ ಭಾರತ ಸರ್ಕಾರದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾಕ್ಕೆ ಎಚ್ಚರಿಕೆ ನೀಡಿತ್ತು. ಹಾಗಾಗಿ ಹರಿಯಾಣ ಮೂಲಕ 4 ಔಷಧ ಕಂಪನಿಗಳ ಮೇಲೆ ವಿಸ್ತೃತ ತನಿಖೆ ನಡೆಸಲಾಗುವುದು ಎಂದು ಸರ್ಕಾರ ಹೇಳಿತ್ತು.

ಹರ್ಯಾಣದ ಸೋನಿಪತ್‌ನಲ್ಲಿರುವ ಮೇಡನ್ ಫಾರ್ಮಾಸ್ಯುಟಿಕಲ್ ಲಿಮಿಟೆಡ್ ಕಂಪನಿಯು ಕೆಮ್ಮಿನ ಸಿರಪ್ ಅನ್ನು ತಯಾರಿಸಿತ್ತು. ಅದನ್ನು ಸೇವಿಸಿದ ಗ್ಯಾಂಬಿಯಾದ ಮಕ್ಕಳು ಮೂತ್ರಪಿಂಡದ ಹಾನಿ ಸಮಸ್ಯೆಯಿಂದ ಪ್ರಾಣ ಬಿಟ್ಟಿದ್ದರು. ಈ ಸಿರಪ್‌ಗಳನ್ನು ಗ್ಯಾಂಬಿಯಾ ದೇಶಕ್ಕೆ ಮಾತ್ರ ರಫ್ತು ಮಾಡಲಾಗಿದೆಯೆ ಅಥವಾ ಇತರ ದೇಶಗಳಿಗೂ ಕಳುಹಿಸಲಾಗಿದೆಯೇ ಎಂಬುದರ ಕುರಿತು ಕಂಪನಿ ಇನ್ನು ಮಾಹಿತಿ ನೀಡಿಲ್ಲ. ಈ ಕುರಿತು ಎಚ್ಚರಿಕೆ ವಹಿಸುವಂತೆ ಇತರ ದೇಶಗಳಿಗೆ ಡಬ್ಲುಎಚ್‌ಓ ತಿಳಿಸಿತ್ತು. ಆದರೆ ಅದಾದ ಎರಡು ತಿಂಗಳ ನಂತರ ಸಿರಪ್ ಸೇವನೆಯಿಂದ ಉಜ್ಬೇಕಿಸ್ತಾನ್‌ನಲ್ಲಿ 18 ಮಕ್ಕಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

WHO ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಗೆಬ್ರೆಯೆಸಸ್ ಸುದ್ದಿಗಾರರೊಂದಿಗೆ ಮಾತನಾಡಿ, “ಪ್ರೋಮೆಥಾಜಿನ್ ಓರಲ್ ಸಲ್ಯೂಷನ್, ಕೋಫೆಕ್ಸ್‌ಮಾಲಿನ್ ಮಕ್ಕಳ ಕೆಮ್ಮಿನ ಸಿರಪ್, ಮ್ಯಾಕೋಫ್ ಮಕ್ಕಳ ಕೆಮ್ಮಿನ ಸಿರಪ್ ಮತ್ತು ಮ್ಯಾಗ್ರಿಪ್ ಎನ್ ಕೋಲ್ಡ್ ಸಿರಪ್ ಗ್ಯಾಂಬಿಯಾದಲ್ಲಿ ಮಕ್ಕಳ ಸಾವಿಗೆ ಕಾರಣವಾದ ಔಷಧಿಗಳಾಗಿವೆ” ಎಂದು ಹೇಳಿದ್ದರು. ಈ ನಾಲ್ಕೂ ಉತ್ಪನ್ನಗಳ ಮಾದರಿಗಳ ಪ್ರಯೋಗಾಲಯ ವಿಶ್ಲೇಷಣೆಯಲ್ಲಿ ಅವುಗಳು ಅಧಿಕ ಪ್ರಮಾಣದ ಡೈಥಿಲೀನ್ ಸ್ಟೈಕೋಲ್ ಮತ್ತು ಎಥಿಲೀನ್ ಗೈಕೋಲ್ ಅನ್ನು ಒಳಗೊಂಡಿವೆ ಎಂಬುದು ಖಚಿತಪಟ್ಟಿದೆ. ಈ ಉತ್ಪನ್ನಗಳ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ಇದುವರೆಗೂ ಡಬ್ಲುಎಚ್‌ಓ ಗ್ಯಾರಂಟಿ ನೀಡಿಲ್ಲ” ಎಂದು ಆರೋಪಿಸಿದ್ದರು.

ಇದನ್ನೂ ಓದಿ; ಒಪಿಎಸ್ ಜಾರಿ ಸಾಧ್ಯವಿಲ್ಲ ಎಂಬ ಸಿದ್ಧ ಉತ್ತರ ಬದಿಗಿಟ್ಟು ಸದನದಲ್ಲಿ ಚರ್ಚೆ ಮಾಡಲಿ: ಹೋರಾಟಗಾರರ ಪಟ್ಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...