Homeಅಂತರಾಷ್ಟ್ರೀಯಭಾರತದ ಕೆಮ್ಮು ಸಿರಪ್ ಮಕ್ಕಳ ಸಾವಿಗೆ ಕಾರಣವಾಗುತ್ತಿದೆ: ತನಿಖೆಗೆ ಕಾಂಗ್ರೆಸ್ ಒತ್ತಾಯ

ಭಾರತದ ಕೆಮ್ಮು ಸಿರಪ್ ಮಕ್ಕಳ ಸಾವಿಗೆ ಕಾರಣವಾಗುತ್ತಿದೆ: ತನಿಖೆಗೆ ಕಾಂಗ್ರೆಸ್ ಒತ್ತಾಯ

- Advertisement -
- Advertisement -

ಭಾರತದಲ್ಲಿ ತಯಾರಿಸಿದ ಕೆಮ್ಮು ಸಿರಪ್‌ಗಳು ಮಾರಕವೆಂದು ಕಾಣುತ್ತಿದೆ. ಇದರಿಂದ ಜಗತ್ತಿನ ಮಕ್ಕಳು ಸಾವಿಗೀಡಾಗುತ್ತಿದ್ದಾರೆ. ಈ ಕುರಿತು ಮೋದಿ ಸರ್ಕಾರ ತುರ್ತು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಭಾರತದಲ್ಲಿ ತಯಾರಿಸಿದ ಕೆಮ್ಮು ಸಿರಪ್‌ಗಳು ಮಾರಕವಾಗುತ್ತಿದೆ. ಮೊದಲು ಈ ಸಿರಪ್ ಸೇವನೆಯಿಂದ ಗ್ಯಾಂಬಿಯಾದಲ್ಲಿ 70 ಮಕ್ಕಳ ಸಾವಿಗೀಡಾಗಿದ್ದರು ಮತ್ತು ಈಗ ಉಜ್ಬೇಕಿಸ್ತಾನ್‌ನಲ್ಲಿ 18 ಮಕ್ಕಳು ಮೃತಪಟ್ಟಿದ್ದಾರೆ. ಮೋದಿ ಸರ್ಕಾರವು ಭಾರತವನ್ನು ಜಗತ್ತಿಗೆ ಔಷಧಾಲಯ ಎಂದು ಹೆಮ್ಮೆಪಡುವುದನ್ನು ನಿಲ್ಲಿಸಬೇಕು ಮತ್ತು ಈ ತಯಾರಕ ಕಂಪನಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಈ ವರ್ಷದ ಸೆಪ್ಟಂಬರ್ 29 ರಂದು ಕೆಮ್ಮಿನ ಸಿರಪ್ ಸೇವಿಸಿದ ಗ್ಯಾಂಬಿಯಾದ 66 ಮಕ್ಕಳು ಸಾವನಪ್ಪಿದ್ದರು. ಈ ಕುರಿತು ಡಬ್ಲುಎಚ್‌ಓ ಭಾರತ ಸರ್ಕಾರದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾಕ್ಕೆ ಎಚ್ಚರಿಕೆ ನೀಡಿತ್ತು. ಹಾಗಾಗಿ ಹರಿಯಾಣ ಮೂಲಕ 4 ಔಷಧ ಕಂಪನಿಗಳ ಮೇಲೆ ವಿಸ್ತೃತ ತನಿಖೆ ನಡೆಸಲಾಗುವುದು ಎಂದು ಸರ್ಕಾರ ಹೇಳಿತ್ತು.

ಹರ್ಯಾಣದ ಸೋನಿಪತ್‌ನಲ್ಲಿರುವ ಮೇಡನ್ ಫಾರ್ಮಾಸ್ಯುಟಿಕಲ್ ಲಿಮಿಟೆಡ್ ಕಂಪನಿಯು ಕೆಮ್ಮಿನ ಸಿರಪ್ ಅನ್ನು ತಯಾರಿಸಿತ್ತು. ಅದನ್ನು ಸೇವಿಸಿದ ಗ್ಯಾಂಬಿಯಾದ ಮಕ್ಕಳು ಮೂತ್ರಪಿಂಡದ ಹಾನಿ ಸಮಸ್ಯೆಯಿಂದ ಪ್ರಾಣ ಬಿಟ್ಟಿದ್ದರು. ಈ ಸಿರಪ್‌ಗಳನ್ನು ಗ್ಯಾಂಬಿಯಾ ದೇಶಕ್ಕೆ ಮಾತ್ರ ರಫ್ತು ಮಾಡಲಾಗಿದೆಯೆ ಅಥವಾ ಇತರ ದೇಶಗಳಿಗೂ ಕಳುಹಿಸಲಾಗಿದೆಯೇ ಎಂಬುದರ ಕುರಿತು ಕಂಪನಿ ಇನ್ನು ಮಾಹಿತಿ ನೀಡಿಲ್ಲ. ಈ ಕುರಿತು ಎಚ್ಚರಿಕೆ ವಹಿಸುವಂತೆ ಇತರ ದೇಶಗಳಿಗೆ ಡಬ್ಲುಎಚ್‌ಓ ತಿಳಿಸಿತ್ತು. ಆದರೆ ಅದಾದ ಎರಡು ತಿಂಗಳ ನಂತರ ಸಿರಪ್ ಸೇವನೆಯಿಂದ ಉಜ್ಬೇಕಿಸ್ತಾನ್‌ನಲ್ಲಿ 18 ಮಕ್ಕಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

WHO ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಗೆಬ್ರೆಯೆಸಸ್ ಸುದ್ದಿಗಾರರೊಂದಿಗೆ ಮಾತನಾಡಿ, “ಪ್ರೋಮೆಥಾಜಿನ್ ಓರಲ್ ಸಲ್ಯೂಷನ್, ಕೋಫೆಕ್ಸ್‌ಮಾಲಿನ್ ಮಕ್ಕಳ ಕೆಮ್ಮಿನ ಸಿರಪ್, ಮ್ಯಾಕೋಫ್ ಮಕ್ಕಳ ಕೆಮ್ಮಿನ ಸಿರಪ್ ಮತ್ತು ಮ್ಯಾಗ್ರಿಪ್ ಎನ್ ಕೋಲ್ಡ್ ಸಿರಪ್ ಗ್ಯಾಂಬಿಯಾದಲ್ಲಿ ಮಕ್ಕಳ ಸಾವಿಗೆ ಕಾರಣವಾದ ಔಷಧಿಗಳಾಗಿವೆ” ಎಂದು ಹೇಳಿದ್ದರು. ಈ ನಾಲ್ಕೂ ಉತ್ಪನ್ನಗಳ ಮಾದರಿಗಳ ಪ್ರಯೋಗಾಲಯ ವಿಶ್ಲೇಷಣೆಯಲ್ಲಿ ಅವುಗಳು ಅಧಿಕ ಪ್ರಮಾಣದ ಡೈಥಿಲೀನ್ ಸ್ಟೈಕೋಲ್ ಮತ್ತು ಎಥಿಲೀನ್ ಗೈಕೋಲ್ ಅನ್ನು ಒಳಗೊಂಡಿವೆ ಎಂಬುದು ಖಚಿತಪಟ್ಟಿದೆ. ಈ ಉತ್ಪನ್ನಗಳ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ಇದುವರೆಗೂ ಡಬ್ಲುಎಚ್‌ಓ ಗ್ಯಾರಂಟಿ ನೀಡಿಲ್ಲ” ಎಂದು ಆರೋಪಿಸಿದ್ದರು.

ಇದನ್ನೂ ಓದಿ; ಒಪಿಎಸ್ ಜಾರಿ ಸಾಧ್ಯವಿಲ್ಲ ಎಂಬ ಸಿದ್ಧ ಉತ್ತರ ಬದಿಗಿಟ್ಟು ಸದನದಲ್ಲಿ ಚರ್ಚೆ ಮಾಡಲಿ: ಹೋರಾಟಗಾರರ ಪಟ್ಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...