HomeಮುಖಪುಟINDIAದ ನಿಯೋಗವು ಮಣಿಪುರ ಜನರ ಕಣ್ಣೀರು ಒರೆಸಿ ಬಂದಿದೆ: ರಾಘವ್ ಚಡ್ಡಾ

INDIAದ ನಿಯೋಗವು ಮಣಿಪುರ ಜನರ ಕಣ್ಣೀರು ಒರೆಸಿ ಬಂದಿದೆ: ರಾಘವ್ ಚಡ್ಡಾ

- Advertisement -
- Advertisement -

ವಿರೋಧ ಪಕ್ಷದ INDIA ಒಕ್ಕೂಟದ ನಿಯೋಗವು ಕಲಹ ಪೀಡಿತ ಮಣಿಪುರಕ್ಕೆ ಭೇಟಿ ನೀಡಿ ”ಮಣಿಪುರದ ಜನರ ಕಣ್ಣೀರು ಒರೆಸಿದ ನಂತರ ಹಿಂತಿರುಗಿದ್ದಾರೆ” ಎಂದು ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ ಅವರು ಸೋಮವಾರ ಶ್ಲಾಘಿಸಿದ್ದಾರೆ.

ಮಣಿಪುರದ ಪರಿಸ್ಥಿತಿ ಮತ್ತು ಸಂಸತ್ತಿನ ಮುಂಗಾರು ಅಧಿವೇಶನದ ಮುಂದಿನ ಕಾರ್ಯತಂತ್ರದ ಕುರಿತು 21 ಸಂಸದ ನಿಯೋಗವು ಉಳಿದ ಪ್ರತಿಪಕ್ಷಗಳ ಸದಸ್ಯರಿಗೆ ವಿವರಿಸಲು ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉಪಸ್ಥಿತರಿದ್ದರು.

ಈ ಸಭೆಯ ಬಳಿಕ ಮಣಿಪುರದ ಬಗ್ಗೆ ಪ್ರತಿಪಕ್ಷಗಳ ಮುಂದಿನ ನಡೆಯ ಬಗ್ಗೆ ನಿಯೋಗ ತಿಳಿಸಲಿದೆ ಎಂದು ಚಾಡಾ ಹೇಳಿದರು. ”ಮಣಿಪುರದ ಜನರ ಕಣ್ಣೀರು ಒರೆಸಿದ ನಂತರ INDIAದ ನಿಯೋಗ ಮರಳಿದೆ. ಇಂದು, ಸಂಸದರು ಸಭೆಯಲ್ಲಿ ಮಣಿಪುರದ ಪರಿಸ್ಥಿತಿಯನ್ನು ವಿವರಿಸುತ್ತಾರೆ, ನಂತರ ನಾವು ಈ ನಿಟ್ಟಿನಲ್ಲಿ ನಮ್ಮ ಮುಂದಿನ ನಡೆಯ ಬಗ್ಗೆ ನಿಮಗೆ ತಿಳಿಸುತ್ತೇವೆ…” ಎಂದು ಹೇಳಿದರು.

ಮೇ 3ರಿಂದ ಭಾರೀ ಹಿಂಸಾಚಾರದಿಂದ ಈಶಾನ್ಯ ರಾಜ್ಯ ಮಣಿಪುರ ನಲುಗಿಹೋಗಿದೆ. ಅಲ್ಲಿಯ ಪರಿಸ್ಥಿತಿಯನ್ನು ತಿಳಿಯಲು ವಿರೋಧಪಕ್ಷಗಳ INDIA ನೀಯೋಗ ಶನಿವಾರ ಹಾಗೂ ಭಾನುವಾರ ಮಣಿಪುರಕ್ಕೆ ಭೇಟಿ ನೀಡಿದ್ದರು.

ಮಣಿಪುರ ಚರ್ಚೆಗೆ ವಿಪಕ್ಷಗಳ ಪಟ್ಟು; ಉಭಯ ಸದನಗಳ ಕಲಾಪ ಮುಂದೂಡಿಕೆ

ಮಾನ್ಸೂನ್ ಅಧಿವೇಶನದಲ್ಲಿ ಎರಡು ಪ್ರಮುಖ ಬೆಳವಣಿಗೆಗಳು ನಡೆಯುವ ಸಾಧ್ಯತೆಯಿದೆ. ಸರ್ಕಾರವು ದೆಹಲಿ ಸೇವೆಗಳ ಮಸೂದೆಯನ್ನು ಮಂಡಿಸುವ ನಿರೀಕ್ಷೆಯಿದೆ. ವಿರೋಧ ಪಕ್ಷಗಳ ಒಕ್ಕೂಟ INDIAದಿಂದ ಅವಿಶ್ವಾಸ ನಿರ್ಣಯ ಮಂಡಿಸಲಾಗಿದೆ.

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಮಣಿಪುರದಲ್ಲಿ ಶಾಂತಿಯನ್ನು ಮರುಸ್ಥಾಪಿಸುವಲ್ಲಿ ವಿಫಲವಾಗಿದೆ. ಈ ಬಗ್ಗೆ ಪ್ರಧಾನಿ ಮೋದಿ ಸಂಸತ್ತಿನಲ್ಲಿ ಮಾತನಾಡುತ್ತಿಲ್ಲ. ಹಾಗಾಗಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಪ್ರತಿಪಕ್ಷಗಳು ಮಂಡಿಸಿವೆ. ಕೇಂದ್ರ ಮತ್ತು ಈಶಾನ್ಯ ರಾಜ್ಯಗಳೆರಡರಲ್ಲೂ ಬಿಜೆಪಿ ಅಧಿಕಾರದಲ್ಲಿದೆ. ಆದಾಗ್ಯೂ, ಸರ್ಕಾರವು ಬಹುಮತ ಹೊಂದಿರುವುದರಿಂದ ವಿಪಕ್ಷಗಳು ಸೋಲನುಭವಿಸಲಿದೆ. ಮತ್ತೊಂದೆಡೆ, ಪ್ರತಿಪಕ್ಷಗಳು ಈ ವಿಷಯದ ಬಗ್ಗೆ ತಮ್ಮ ಮೌನವನ್ನು ಮುರಿಯುವಂತೆ ಮಾಡಲು ಪ್ರಧಾನಿ ಮೋದಿಯನ್ನು ಒತ್ತಾಯಿಸಲು ಬಯಸುತ್ತವೆ.

ಮಣಿಪುರ ವಿಚಾರದ ಕುರಿತು ಚರ್ಚೆ ನಡೆಸಲು ಪ್ರತಿಪಕ್ಷಗಳುಯ ಪಟ್ಟು ಹಿಡಿದ ಕಾರಣಕ್ಕೆ ಉಭಯ ಸದನ ಕಲಾಪವನ್ನು ಮುಂದೂಡಲಾಗಿದೆ.

ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕ ರಂಜೀತ್ ರಂಜನ್, ”ನಾವು ಮಣಿಪುರದ ಬಗ್ಗೆ ಚರ್ಚೆಯನ್ನು ಬಯಸುತ್ತಿದ್ದೇವೆ…ಇಂದು ಲೋಕಸಭೆಯಲ್ಲಿ ಚರ್ಚೆ ಆಗಬೇಕು…” ಎಂದು ಹೇಳಿದ್ದಾರೆ.

”ನಾವು ಈ ಅಧಿವೇಶನದ ಆರಂಭದಿಂದಲೂ ಸಂಸತ್ತಿನಲ್ಲಿ ಮಣಿಪುರ (ಸಮಸ್ಯೆ) ಕುರಿತು ಚರ್ಚೆ ನಡೆಸುತ್ತಿದ್ದೇವೆ. ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರತಿಪಕ್ಷಗಳ ಮೈತ್ರಿಕೂಟದ ನಾಯಕರು ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಇಂದು ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಬಗ್ಗೆ ಚರ್ಚೆ ನಡೆಯಬೇಕೆಂದು ನಾವು ಬಯಸುತ್ತೇವೆ” ಎಂದು ಕಾಂಗ್ರೆಸ್ ನಾಯಕ ರಂಜೀತ್ ರಂಜನ್ ಹೇಳಿದ್ದಾರೆ.

ಇದನ್ನೂ ಓದಿ: ಮಣಿಪುರ ಸಂಘರ್ಷ ಪರಿಹರಿಸದಿದ್ರೆ ದೇಶದ ಭದ್ರತೆಗೂ ಸಮಸ್ಯೆ ಆಗಲಿದೆ: ಅಧೀರ್ ಚೌಧರಿ ಎಚ್ಚರಿಕೆ

ದೆಹಲಿ ಆಡಳಿತ ಸೇವಾ ಮಸೂದೆ:

ದೆಹಲಿಯಲ್ಲಿನ ಆಡಳಿತ ಸೇವೆಗಳ ನಿಯಂತ್ರಣದ ಕುರಿತು ಮಸೂದೆಯನ್ನು ಮಂಡನೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಎಎಪಿ ಸಂಸದರು ಕಿಡಿಕಾರಿದರು.

ಸುಗ್ರೀವಾಜ್ಞೆಯನ್ನು ಪ್ರಜಾಸತ್ತಾತ್ಮಕವಲ್ಲ ಎಂದು ಕರೆದ ಚಡ್ಡಾ, ರಾಷ್ಟ್ರ ರಾಜಧಾನಿಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರವನ್ನು ನಾಶಮಾಡಲು ಇದು ಬಿಜೆಪಿಯ ತಂತ್ರವಾಗಿದೆ ಎಂದು ಹೇಳಿದರು.

”ಈ ಮಸೂದೆ ಕೇವಲ ದೇಶದ ಸಂವಿಧಾನದ ವಿರುದ್ಧ ಮಾತ್ರವಲ್ಲದೆ ದೆಹಲಿಯ 2 ಕೋಟಿ ಜನರ ವಿರುದ್ಧವೂ ಆಗಿದೆ. ದೆಹಲಿಯ ಜನರು ಅವರನ್ನು ಧಿಕ್ಕರಿಸಿ, ಎಎಪಿಗೆ ಬೆಂಬಲಿಸಿದ್ದಾರೆ. ಹಾಗಾಗಿ ಬಿಜೆಪಿ ಹೈಕಮಾಂಡ್ ಇದೀಗ ದೆಹಲಿ ಸರ್ಕಾರವನ್ನು ನಾಶಮಾಡಲು ನಿರ್ಧಾರವನ್ನು ತೆಗೆದುಕೊಂಡಿದೆ” ಎಂದು ಅವರು ಹೇಳಿದರು.

”ಆಗಸ್ಟ್ 4ರವರೆಗೆ ಸದನದಲ್ಲಿ ಹಾಜರಿರಲು ರಾಜ್ಯಸಭೆಯಲ್ಲಿ ತನ್ನ ಎಲ್ಲಾ ಸಂಸದರಿಗೆ ಎಎಪಿ ಮೂರು ಸಾಲಿನ ವಿಪ್ ನೀಡಿದೆ. ಈ ಮಸೂದೆಯು ದೆಹಲಿ ಸರ್ಕಾರಕ್ಕೆ ವರ್ಗಾವಣೆ ಮತ್ತು ಪೋಸ್ಟಿಂಗ್ ಅಧಿಕಾರವನ್ನು ನೀಡುವ ಸುಪ್ರೀಂ ಕೋರ್ಟ್ ಆದೇಶವನ್ನು ನಿರಾಕರಿಸುವ ಸುಗ್ರೀವಾಜ್ಞೆಯನ್ನು ಬದಲಿಸಲು ಪ್ರಯತ್ನಿಸುತ್ತದೆ.”

ಕೇಂದ್ರ ಸರ್ಕಾರವು ಉಭಯ ಸದನಗಳಲ್ಲಿ ಸಾಕಷ್ಟು ಸಂಖ್ಯಾಬಲ ಹೊಂದಿದ್ದರೂ ಮಸೂದೆ ಅಂಗೀಕಾರವನ್ನು ವಿರೋಧಿಸುವುದಾಗಿ I.N.D.I.A ಗುಂಪು ಈ ಹಿಂದೆ ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...