HomeಮುಖಪುಟINDIAದ ನಿಯೋಗವು ಮಣಿಪುರ ಜನರ ಕಣ್ಣೀರು ಒರೆಸಿ ಬಂದಿದೆ: ರಾಘವ್ ಚಡ್ಡಾ

INDIAದ ನಿಯೋಗವು ಮಣಿಪುರ ಜನರ ಕಣ್ಣೀರು ಒರೆಸಿ ಬಂದಿದೆ: ರಾಘವ್ ಚಡ್ಡಾ

- Advertisement -
- Advertisement -

ವಿರೋಧ ಪಕ್ಷದ INDIA ಒಕ್ಕೂಟದ ನಿಯೋಗವು ಕಲಹ ಪೀಡಿತ ಮಣಿಪುರಕ್ಕೆ ಭೇಟಿ ನೀಡಿ ”ಮಣಿಪುರದ ಜನರ ಕಣ್ಣೀರು ಒರೆಸಿದ ನಂತರ ಹಿಂತಿರುಗಿದ್ದಾರೆ” ಎಂದು ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ ಅವರು ಸೋಮವಾರ ಶ್ಲಾಘಿಸಿದ್ದಾರೆ.

ಮಣಿಪುರದ ಪರಿಸ್ಥಿತಿ ಮತ್ತು ಸಂಸತ್ತಿನ ಮುಂಗಾರು ಅಧಿವೇಶನದ ಮುಂದಿನ ಕಾರ್ಯತಂತ್ರದ ಕುರಿತು 21 ಸಂಸದ ನಿಯೋಗವು ಉಳಿದ ಪ್ರತಿಪಕ್ಷಗಳ ಸದಸ್ಯರಿಗೆ ವಿವರಿಸಲು ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉಪಸ್ಥಿತರಿದ್ದರು.

ಈ ಸಭೆಯ ಬಳಿಕ ಮಣಿಪುರದ ಬಗ್ಗೆ ಪ್ರತಿಪಕ್ಷಗಳ ಮುಂದಿನ ನಡೆಯ ಬಗ್ಗೆ ನಿಯೋಗ ತಿಳಿಸಲಿದೆ ಎಂದು ಚಾಡಾ ಹೇಳಿದರು. ”ಮಣಿಪುರದ ಜನರ ಕಣ್ಣೀರು ಒರೆಸಿದ ನಂತರ INDIAದ ನಿಯೋಗ ಮರಳಿದೆ. ಇಂದು, ಸಂಸದರು ಸಭೆಯಲ್ಲಿ ಮಣಿಪುರದ ಪರಿಸ್ಥಿತಿಯನ್ನು ವಿವರಿಸುತ್ತಾರೆ, ನಂತರ ನಾವು ಈ ನಿಟ್ಟಿನಲ್ಲಿ ನಮ್ಮ ಮುಂದಿನ ನಡೆಯ ಬಗ್ಗೆ ನಿಮಗೆ ತಿಳಿಸುತ್ತೇವೆ…” ಎಂದು ಹೇಳಿದರು.

ಮೇ 3ರಿಂದ ಭಾರೀ ಹಿಂಸಾಚಾರದಿಂದ ಈಶಾನ್ಯ ರಾಜ್ಯ ಮಣಿಪುರ ನಲುಗಿಹೋಗಿದೆ. ಅಲ್ಲಿಯ ಪರಿಸ್ಥಿತಿಯನ್ನು ತಿಳಿಯಲು ವಿರೋಧಪಕ್ಷಗಳ INDIA ನೀಯೋಗ ಶನಿವಾರ ಹಾಗೂ ಭಾನುವಾರ ಮಣಿಪುರಕ್ಕೆ ಭೇಟಿ ನೀಡಿದ್ದರು.

ಮಣಿಪುರ ಚರ್ಚೆಗೆ ವಿಪಕ್ಷಗಳ ಪಟ್ಟು; ಉಭಯ ಸದನಗಳ ಕಲಾಪ ಮುಂದೂಡಿಕೆ

ಮಾನ್ಸೂನ್ ಅಧಿವೇಶನದಲ್ಲಿ ಎರಡು ಪ್ರಮುಖ ಬೆಳವಣಿಗೆಗಳು ನಡೆಯುವ ಸಾಧ್ಯತೆಯಿದೆ. ಸರ್ಕಾರವು ದೆಹಲಿ ಸೇವೆಗಳ ಮಸೂದೆಯನ್ನು ಮಂಡಿಸುವ ನಿರೀಕ್ಷೆಯಿದೆ. ವಿರೋಧ ಪಕ್ಷಗಳ ಒಕ್ಕೂಟ INDIAದಿಂದ ಅವಿಶ್ವಾಸ ನಿರ್ಣಯ ಮಂಡಿಸಲಾಗಿದೆ.

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಮಣಿಪುರದಲ್ಲಿ ಶಾಂತಿಯನ್ನು ಮರುಸ್ಥಾಪಿಸುವಲ್ಲಿ ವಿಫಲವಾಗಿದೆ. ಈ ಬಗ್ಗೆ ಪ್ರಧಾನಿ ಮೋದಿ ಸಂಸತ್ತಿನಲ್ಲಿ ಮಾತನಾಡುತ್ತಿಲ್ಲ. ಹಾಗಾಗಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಪ್ರತಿಪಕ್ಷಗಳು ಮಂಡಿಸಿವೆ. ಕೇಂದ್ರ ಮತ್ತು ಈಶಾನ್ಯ ರಾಜ್ಯಗಳೆರಡರಲ್ಲೂ ಬಿಜೆಪಿ ಅಧಿಕಾರದಲ್ಲಿದೆ. ಆದಾಗ್ಯೂ, ಸರ್ಕಾರವು ಬಹುಮತ ಹೊಂದಿರುವುದರಿಂದ ವಿಪಕ್ಷಗಳು ಸೋಲನುಭವಿಸಲಿದೆ. ಮತ್ತೊಂದೆಡೆ, ಪ್ರತಿಪಕ್ಷಗಳು ಈ ವಿಷಯದ ಬಗ್ಗೆ ತಮ್ಮ ಮೌನವನ್ನು ಮುರಿಯುವಂತೆ ಮಾಡಲು ಪ್ರಧಾನಿ ಮೋದಿಯನ್ನು ಒತ್ತಾಯಿಸಲು ಬಯಸುತ್ತವೆ.

ಮಣಿಪುರ ವಿಚಾರದ ಕುರಿತು ಚರ್ಚೆ ನಡೆಸಲು ಪ್ರತಿಪಕ್ಷಗಳುಯ ಪಟ್ಟು ಹಿಡಿದ ಕಾರಣಕ್ಕೆ ಉಭಯ ಸದನ ಕಲಾಪವನ್ನು ಮುಂದೂಡಲಾಗಿದೆ.

ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕ ರಂಜೀತ್ ರಂಜನ್, ”ನಾವು ಮಣಿಪುರದ ಬಗ್ಗೆ ಚರ್ಚೆಯನ್ನು ಬಯಸುತ್ತಿದ್ದೇವೆ…ಇಂದು ಲೋಕಸಭೆಯಲ್ಲಿ ಚರ್ಚೆ ಆಗಬೇಕು…” ಎಂದು ಹೇಳಿದ್ದಾರೆ.

”ನಾವು ಈ ಅಧಿವೇಶನದ ಆರಂಭದಿಂದಲೂ ಸಂಸತ್ತಿನಲ್ಲಿ ಮಣಿಪುರ (ಸಮಸ್ಯೆ) ಕುರಿತು ಚರ್ಚೆ ನಡೆಸುತ್ತಿದ್ದೇವೆ. ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರತಿಪಕ್ಷಗಳ ಮೈತ್ರಿಕೂಟದ ನಾಯಕರು ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಇಂದು ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಬಗ್ಗೆ ಚರ್ಚೆ ನಡೆಯಬೇಕೆಂದು ನಾವು ಬಯಸುತ್ತೇವೆ” ಎಂದು ಕಾಂಗ್ರೆಸ್ ನಾಯಕ ರಂಜೀತ್ ರಂಜನ್ ಹೇಳಿದ್ದಾರೆ.

ಇದನ್ನೂ ಓದಿ: ಮಣಿಪುರ ಸಂಘರ್ಷ ಪರಿಹರಿಸದಿದ್ರೆ ದೇಶದ ಭದ್ರತೆಗೂ ಸಮಸ್ಯೆ ಆಗಲಿದೆ: ಅಧೀರ್ ಚೌಧರಿ ಎಚ್ಚರಿಕೆ

ದೆಹಲಿ ಆಡಳಿತ ಸೇವಾ ಮಸೂದೆ:

ದೆಹಲಿಯಲ್ಲಿನ ಆಡಳಿತ ಸೇವೆಗಳ ನಿಯಂತ್ರಣದ ಕುರಿತು ಮಸೂದೆಯನ್ನು ಮಂಡನೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಎಎಪಿ ಸಂಸದರು ಕಿಡಿಕಾರಿದರು.

ಸುಗ್ರೀವಾಜ್ಞೆಯನ್ನು ಪ್ರಜಾಸತ್ತಾತ್ಮಕವಲ್ಲ ಎಂದು ಕರೆದ ಚಡ್ಡಾ, ರಾಷ್ಟ್ರ ರಾಜಧಾನಿಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರವನ್ನು ನಾಶಮಾಡಲು ಇದು ಬಿಜೆಪಿಯ ತಂತ್ರವಾಗಿದೆ ಎಂದು ಹೇಳಿದರು.

”ಈ ಮಸೂದೆ ಕೇವಲ ದೇಶದ ಸಂವಿಧಾನದ ವಿರುದ್ಧ ಮಾತ್ರವಲ್ಲದೆ ದೆಹಲಿಯ 2 ಕೋಟಿ ಜನರ ವಿರುದ್ಧವೂ ಆಗಿದೆ. ದೆಹಲಿಯ ಜನರು ಅವರನ್ನು ಧಿಕ್ಕರಿಸಿ, ಎಎಪಿಗೆ ಬೆಂಬಲಿಸಿದ್ದಾರೆ. ಹಾಗಾಗಿ ಬಿಜೆಪಿ ಹೈಕಮಾಂಡ್ ಇದೀಗ ದೆಹಲಿ ಸರ್ಕಾರವನ್ನು ನಾಶಮಾಡಲು ನಿರ್ಧಾರವನ್ನು ತೆಗೆದುಕೊಂಡಿದೆ” ಎಂದು ಅವರು ಹೇಳಿದರು.

”ಆಗಸ್ಟ್ 4ರವರೆಗೆ ಸದನದಲ್ಲಿ ಹಾಜರಿರಲು ರಾಜ್ಯಸಭೆಯಲ್ಲಿ ತನ್ನ ಎಲ್ಲಾ ಸಂಸದರಿಗೆ ಎಎಪಿ ಮೂರು ಸಾಲಿನ ವಿಪ್ ನೀಡಿದೆ. ಈ ಮಸೂದೆಯು ದೆಹಲಿ ಸರ್ಕಾರಕ್ಕೆ ವರ್ಗಾವಣೆ ಮತ್ತು ಪೋಸ್ಟಿಂಗ್ ಅಧಿಕಾರವನ್ನು ನೀಡುವ ಸುಪ್ರೀಂ ಕೋರ್ಟ್ ಆದೇಶವನ್ನು ನಿರಾಕರಿಸುವ ಸುಗ್ರೀವಾಜ್ಞೆಯನ್ನು ಬದಲಿಸಲು ಪ್ರಯತ್ನಿಸುತ್ತದೆ.”

ಕೇಂದ್ರ ಸರ್ಕಾರವು ಉಭಯ ಸದನಗಳಲ್ಲಿ ಸಾಕಷ್ಟು ಸಂಖ್ಯಾಬಲ ಹೊಂದಿದ್ದರೂ ಮಸೂದೆ ಅಂಗೀಕಾರವನ್ನು ವಿರೋಧಿಸುವುದಾಗಿ I.N.D.I.A ಗುಂಪು ಈ ಹಿಂದೆ ಹೇಳಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...