HomeಮುಖಪುಟINDIAದ ನಿಯೋಗವು ಮಣಿಪುರ ಜನರ ಕಣ್ಣೀರು ಒರೆಸಿ ಬಂದಿದೆ: ರಾಘವ್ ಚಡ್ಡಾ

INDIAದ ನಿಯೋಗವು ಮಣಿಪುರ ಜನರ ಕಣ್ಣೀರು ಒರೆಸಿ ಬಂದಿದೆ: ರಾಘವ್ ಚಡ್ಡಾ

- Advertisement -
- Advertisement -

ವಿರೋಧ ಪಕ್ಷದ INDIA ಒಕ್ಕೂಟದ ನಿಯೋಗವು ಕಲಹ ಪೀಡಿತ ಮಣಿಪುರಕ್ಕೆ ಭೇಟಿ ನೀಡಿ ”ಮಣಿಪುರದ ಜನರ ಕಣ್ಣೀರು ಒರೆಸಿದ ನಂತರ ಹಿಂತಿರುಗಿದ್ದಾರೆ” ಎಂದು ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ ಅವರು ಸೋಮವಾರ ಶ್ಲಾಘಿಸಿದ್ದಾರೆ.

ಮಣಿಪುರದ ಪರಿಸ್ಥಿತಿ ಮತ್ತು ಸಂಸತ್ತಿನ ಮುಂಗಾರು ಅಧಿವೇಶನದ ಮುಂದಿನ ಕಾರ್ಯತಂತ್ರದ ಕುರಿತು 21 ಸಂಸದ ನಿಯೋಗವು ಉಳಿದ ಪ್ರತಿಪಕ್ಷಗಳ ಸದಸ್ಯರಿಗೆ ವಿವರಿಸಲು ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉಪಸ್ಥಿತರಿದ್ದರು.

ಈ ಸಭೆಯ ಬಳಿಕ ಮಣಿಪುರದ ಬಗ್ಗೆ ಪ್ರತಿಪಕ್ಷಗಳ ಮುಂದಿನ ನಡೆಯ ಬಗ್ಗೆ ನಿಯೋಗ ತಿಳಿಸಲಿದೆ ಎಂದು ಚಾಡಾ ಹೇಳಿದರು. ”ಮಣಿಪುರದ ಜನರ ಕಣ್ಣೀರು ಒರೆಸಿದ ನಂತರ INDIAದ ನಿಯೋಗ ಮರಳಿದೆ. ಇಂದು, ಸಂಸದರು ಸಭೆಯಲ್ಲಿ ಮಣಿಪುರದ ಪರಿಸ್ಥಿತಿಯನ್ನು ವಿವರಿಸುತ್ತಾರೆ, ನಂತರ ನಾವು ಈ ನಿಟ್ಟಿನಲ್ಲಿ ನಮ್ಮ ಮುಂದಿನ ನಡೆಯ ಬಗ್ಗೆ ನಿಮಗೆ ತಿಳಿಸುತ್ತೇವೆ…” ಎಂದು ಹೇಳಿದರು.

ಮೇ 3ರಿಂದ ಭಾರೀ ಹಿಂಸಾಚಾರದಿಂದ ಈಶಾನ್ಯ ರಾಜ್ಯ ಮಣಿಪುರ ನಲುಗಿಹೋಗಿದೆ. ಅಲ್ಲಿಯ ಪರಿಸ್ಥಿತಿಯನ್ನು ತಿಳಿಯಲು ವಿರೋಧಪಕ್ಷಗಳ INDIA ನೀಯೋಗ ಶನಿವಾರ ಹಾಗೂ ಭಾನುವಾರ ಮಣಿಪುರಕ್ಕೆ ಭೇಟಿ ನೀಡಿದ್ದರು.

ಮಣಿಪುರ ಚರ್ಚೆಗೆ ವಿಪಕ್ಷಗಳ ಪಟ್ಟು; ಉಭಯ ಸದನಗಳ ಕಲಾಪ ಮುಂದೂಡಿಕೆ

ಮಾನ್ಸೂನ್ ಅಧಿವೇಶನದಲ್ಲಿ ಎರಡು ಪ್ರಮುಖ ಬೆಳವಣಿಗೆಗಳು ನಡೆಯುವ ಸಾಧ್ಯತೆಯಿದೆ. ಸರ್ಕಾರವು ದೆಹಲಿ ಸೇವೆಗಳ ಮಸೂದೆಯನ್ನು ಮಂಡಿಸುವ ನಿರೀಕ್ಷೆಯಿದೆ. ವಿರೋಧ ಪಕ್ಷಗಳ ಒಕ್ಕೂಟ INDIAದಿಂದ ಅವಿಶ್ವಾಸ ನಿರ್ಣಯ ಮಂಡಿಸಲಾಗಿದೆ.

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಮಣಿಪುರದಲ್ಲಿ ಶಾಂತಿಯನ್ನು ಮರುಸ್ಥಾಪಿಸುವಲ್ಲಿ ವಿಫಲವಾಗಿದೆ. ಈ ಬಗ್ಗೆ ಪ್ರಧಾನಿ ಮೋದಿ ಸಂಸತ್ತಿನಲ್ಲಿ ಮಾತನಾಡುತ್ತಿಲ್ಲ. ಹಾಗಾಗಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಪ್ರತಿಪಕ್ಷಗಳು ಮಂಡಿಸಿವೆ. ಕೇಂದ್ರ ಮತ್ತು ಈಶಾನ್ಯ ರಾಜ್ಯಗಳೆರಡರಲ್ಲೂ ಬಿಜೆಪಿ ಅಧಿಕಾರದಲ್ಲಿದೆ. ಆದಾಗ್ಯೂ, ಸರ್ಕಾರವು ಬಹುಮತ ಹೊಂದಿರುವುದರಿಂದ ವಿಪಕ್ಷಗಳು ಸೋಲನುಭವಿಸಲಿದೆ. ಮತ್ತೊಂದೆಡೆ, ಪ್ರತಿಪಕ್ಷಗಳು ಈ ವಿಷಯದ ಬಗ್ಗೆ ತಮ್ಮ ಮೌನವನ್ನು ಮುರಿಯುವಂತೆ ಮಾಡಲು ಪ್ರಧಾನಿ ಮೋದಿಯನ್ನು ಒತ್ತಾಯಿಸಲು ಬಯಸುತ್ತವೆ.

ಮಣಿಪುರ ವಿಚಾರದ ಕುರಿತು ಚರ್ಚೆ ನಡೆಸಲು ಪ್ರತಿಪಕ್ಷಗಳುಯ ಪಟ್ಟು ಹಿಡಿದ ಕಾರಣಕ್ಕೆ ಉಭಯ ಸದನ ಕಲಾಪವನ್ನು ಮುಂದೂಡಲಾಗಿದೆ.

ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕ ರಂಜೀತ್ ರಂಜನ್, ”ನಾವು ಮಣಿಪುರದ ಬಗ್ಗೆ ಚರ್ಚೆಯನ್ನು ಬಯಸುತ್ತಿದ್ದೇವೆ…ಇಂದು ಲೋಕಸಭೆಯಲ್ಲಿ ಚರ್ಚೆ ಆಗಬೇಕು…” ಎಂದು ಹೇಳಿದ್ದಾರೆ.

”ನಾವು ಈ ಅಧಿವೇಶನದ ಆರಂಭದಿಂದಲೂ ಸಂಸತ್ತಿನಲ್ಲಿ ಮಣಿಪುರ (ಸಮಸ್ಯೆ) ಕುರಿತು ಚರ್ಚೆ ನಡೆಸುತ್ತಿದ್ದೇವೆ. ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರತಿಪಕ್ಷಗಳ ಮೈತ್ರಿಕೂಟದ ನಾಯಕರು ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಇಂದು ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಬಗ್ಗೆ ಚರ್ಚೆ ನಡೆಯಬೇಕೆಂದು ನಾವು ಬಯಸುತ್ತೇವೆ” ಎಂದು ಕಾಂಗ್ರೆಸ್ ನಾಯಕ ರಂಜೀತ್ ರಂಜನ್ ಹೇಳಿದ್ದಾರೆ.

ಇದನ್ನೂ ಓದಿ: ಮಣಿಪುರ ಸಂಘರ್ಷ ಪರಿಹರಿಸದಿದ್ರೆ ದೇಶದ ಭದ್ರತೆಗೂ ಸಮಸ್ಯೆ ಆಗಲಿದೆ: ಅಧೀರ್ ಚೌಧರಿ ಎಚ್ಚರಿಕೆ

ದೆಹಲಿ ಆಡಳಿತ ಸೇವಾ ಮಸೂದೆ:

ದೆಹಲಿಯಲ್ಲಿನ ಆಡಳಿತ ಸೇವೆಗಳ ನಿಯಂತ್ರಣದ ಕುರಿತು ಮಸೂದೆಯನ್ನು ಮಂಡನೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಎಎಪಿ ಸಂಸದರು ಕಿಡಿಕಾರಿದರು.

ಸುಗ್ರೀವಾಜ್ಞೆಯನ್ನು ಪ್ರಜಾಸತ್ತಾತ್ಮಕವಲ್ಲ ಎಂದು ಕರೆದ ಚಡ್ಡಾ, ರಾಷ್ಟ್ರ ರಾಜಧಾನಿಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರವನ್ನು ನಾಶಮಾಡಲು ಇದು ಬಿಜೆಪಿಯ ತಂತ್ರವಾಗಿದೆ ಎಂದು ಹೇಳಿದರು.

”ಈ ಮಸೂದೆ ಕೇವಲ ದೇಶದ ಸಂವಿಧಾನದ ವಿರುದ್ಧ ಮಾತ್ರವಲ್ಲದೆ ದೆಹಲಿಯ 2 ಕೋಟಿ ಜನರ ವಿರುದ್ಧವೂ ಆಗಿದೆ. ದೆಹಲಿಯ ಜನರು ಅವರನ್ನು ಧಿಕ್ಕರಿಸಿ, ಎಎಪಿಗೆ ಬೆಂಬಲಿಸಿದ್ದಾರೆ. ಹಾಗಾಗಿ ಬಿಜೆಪಿ ಹೈಕಮಾಂಡ್ ಇದೀಗ ದೆಹಲಿ ಸರ್ಕಾರವನ್ನು ನಾಶಮಾಡಲು ನಿರ್ಧಾರವನ್ನು ತೆಗೆದುಕೊಂಡಿದೆ” ಎಂದು ಅವರು ಹೇಳಿದರು.

”ಆಗಸ್ಟ್ 4ರವರೆಗೆ ಸದನದಲ್ಲಿ ಹಾಜರಿರಲು ರಾಜ್ಯಸಭೆಯಲ್ಲಿ ತನ್ನ ಎಲ್ಲಾ ಸಂಸದರಿಗೆ ಎಎಪಿ ಮೂರು ಸಾಲಿನ ವಿಪ್ ನೀಡಿದೆ. ಈ ಮಸೂದೆಯು ದೆಹಲಿ ಸರ್ಕಾರಕ್ಕೆ ವರ್ಗಾವಣೆ ಮತ್ತು ಪೋಸ್ಟಿಂಗ್ ಅಧಿಕಾರವನ್ನು ನೀಡುವ ಸುಪ್ರೀಂ ಕೋರ್ಟ್ ಆದೇಶವನ್ನು ನಿರಾಕರಿಸುವ ಸುಗ್ರೀವಾಜ್ಞೆಯನ್ನು ಬದಲಿಸಲು ಪ್ರಯತ್ನಿಸುತ್ತದೆ.”

ಕೇಂದ್ರ ಸರ್ಕಾರವು ಉಭಯ ಸದನಗಳಲ್ಲಿ ಸಾಕಷ್ಟು ಸಂಖ್ಯಾಬಲ ಹೊಂದಿದ್ದರೂ ಮಸೂದೆ ಅಂಗೀಕಾರವನ್ನು ವಿರೋಧಿಸುವುದಾಗಿ I.N.D.I.A ಗುಂಪು ಈ ಹಿಂದೆ ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...