Homeಮುಖಪುಟಹಿಂಸಾಚಾರ ಪೀಡಿತ ಮಣಿಪುರಕ್ಕೆ ಇಂದು INDIAದ ನಿಯೋಗ ಭೇಟಿ

ಹಿಂಸಾಚಾರ ಪೀಡಿತ ಮಣಿಪುರಕ್ಕೆ ಇಂದು INDIAದ ನಿಯೋಗ ಭೇಟಿ

- Advertisement -
- Advertisement -

ಸುಮಾರು ಮೂರು ತಿಂಗಳಿನಿಂದ ಜನಾಂಗೀಯ ಹಿಂಸಾಚಾರ ನಡೆಯುತ್ತಿರುವ ಈಶಾನ್ಯ ರಾಜ್ಯ ಮಣಿಪುರಕ್ಕೆ ಇಂದು 21 ಸದಸ್ಯರ ವಿರೋಧ ಪಕ್ಷದ ನಿಯೋಗ ಭೇಟಿ ನೀಡಲಿದೆ.

ನಿಯೋಗದಲ್ಲಿ ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧರಿ ಮತ್ತು ಗೌರವ್ ಗೊಗೊಯ್, ತೃಣಮೂಲದ ಸುಶ್ಮಿತಾ ದೇವ್, ಡಿಎಂಕೆಯ ಕನಿಮೋಳಿ, ಆರ್‌ಜೆಡಿಯ ಮನೋಜ್ ಕುಮಾರ್ ಝಾ ಮತ್ತು ಜೆಡಿಯು ಮುಖ್ಯಸ್ಥ ರಾಜೀವ್ ರಂಜನ್ (ಲಾಲನ್) ಸಿಂಗ್ ಸೇರಿದಂತೆ ಇತರರು ಇದ್ದಾರೆ. INDIA ಮೈತ್ರಿಕೂಟ ರಚನೆಯಾದ ನಂತರ ಮೊದಲ ಬಾರಿಗೆ ಮಣಿಪುರ ರಾಜ್ಯಕ್ಕೆ ಅವರು ಭೇಟಿ ನೀಡುತ್ತಿದ್ದಾರೆ.

ಎರಡು ದಿನಗಳ ಭೇಟಿಯಲ್ಲಿ ಆಪ್ ನಾಯಕರು ಮಧ್ಯಾಹ್ನದ ಸುಮಾರಿಗೆ ಇಂಫಾಲ್‌ಗೆ ಬಂದಿಳಿದು ನೇರವಾಗಿ ಚುರಾಚಂದಪುರಕ್ಕೆ ಹೆಲಿಕಾಪ್ಟರ್ ತೆಗೆದುಕೊಂಡು ಅಲ್ಲಿ ಕುಕಿ ಬುಡಕಟ್ಟು ಮುಖಂಡರು, ನಾಗರಿಕ ಸಮಾಜ ಮತ್ತು ಮಹಿಳಾ ಗುಂಪುಗಳನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಿಯೋಗವು ಪರಿಹಾರ ಶಿಬಿರಗಳಿಗೆ ಭೇಟಿ ನೀಡಲಿದೆ ಮತ್ತು ಇಂಫಾಲ್‌ಗೆ ಹಿಂದಿರುಗುವ ಮೊದಲು ಹಿಂಸಾಚಾರದ ಸಂತ್ರಸ್ತರನ್ನು ಭೇಟಿ ಮಾಡುತ್ತದೆ, ಅಲ್ಲಿ ಅವರು ಮೈತಿ ಸಮುದಾಯದ ಸದಸ್ಯರನ್ನೂ ಕೂಡ ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜಸ್ಥಾನ ಮತ್ತು ಪಶ್ಚಿಮ ಬಂಗಾಳದಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳನ್ನು ಪುನರುಚ್ಚರಿಸಿ ವಿರೋಧ ಪಕ್ಷದ ಸಂಸದರನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ. ”ಈ I.N.D.I.A. ಮಣಿಪುರದಿಂದ ಹಿಂದಿರುಗಿದಾಗ, ಅಧೀರ್ ರಂಜನ್ ಚೌಧರಿ ಅವರ ರಾಜ್ಯ ಪಶ್ಚಿಮ ಬಂಗಾಳದಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳನ್ನು ಬೆಂಬಲಿಸುತ್ತದೆಯೇ? I.N.D.I.A. (ಮುಂಭಾಗ) ದ ಈ 20 ಸಂಸದರು ರಾಜಸ್ಥಾನ ಮತ್ತು ಪಶ್ಚಿಮ ಬಂಗಾಳದ ಬಗ್ಗೆ ವರದಿಗಳನ್ನು ನೀಡುತ್ತಾರೆಯೇ?” ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್‌ನ ಗೌರವ್ ಗೊಗೊಯ್ ಅವರು, ”ಮಣಿಪುರಕ್ಕೆ ಹೋಗಿ ಸತ್ಯವನ್ನು ಕಂಡುಕೊಳ್ಳುತ್ತೇವೆ ಮತ್ತು ಆ ಸತ್ಯವನ್ನು ಸಂಸತ್ತಿನ ಮುಂದೆ ಮಂಡಿಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಧಿಕಾರಕ್ಕಾಗಿ BJP-RSSನವರು ಮಣಿಪುರವನ್ನು ಸುಡುತ್ತಾರೆ, ಇಡೀ ದೇಶವನ್ನೂ ಸುಡುತ್ತಾರೆ: ರಾಹುಲ್ ವಾಗ್ದಾಳಿ

ತೃಣಮೂಲದ ಸುಶ್ಮಿತಾ ದೇವ್ ಅವರು, ”ಸರ್ಕಾರ ವಿಫಲವಾಗಿದೆ, ಆದ್ದರಿಂದ ನಾವು ಅಲ್ಲಿಗೆ ಹೋಗಿ ಏನು ಪರಿಹಾರ ಕಂಡುಕೊಳ್ಳಬಹುದು ಎಂಬುದನ್ನು ಯೋಚಿಸಬೇಕು” ಎಂದು ಹೇಳಿದರು.

ಆರ್‌ಜೆಡಿಯ ಮನೋಜ್ ಝಾ ಅವರು, ”ಮಣಿಪುರದ ಜನರ ಕಷ್ಟವನ್ನು ಕೇಳಬೇಕಾಗಿದೆ ಆದರೆ ಸರ್ಕಾರ ಅವರ ಮಾತುಗಳನ್ನು ಕೇಳಲು ಮತ್ತು ಅವರ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳುತ್ತಿಲ್ಲ. ಹಾಗಾಗಿ ನಾವು ಆ ಪ್ರಯತ್ನವನ್ನು ಮಾಡುತ್ತಿದ್ದೇವೆ” ಎಂದು ಹೇಳಿದರು.

ಈ ತಿಂಗಳು ಮುಂಗಾರು ಅಧಿವೇಶನ ಆರಂಭವಾದಾಗಿನಿಂದ ಮಣಿಪುರ ಸಮಸ್ಯೆ ಸಂಸತ್ತಿನಲ್ಲಿ ಗದ್ದಲಕ್ಕೆ ಕಾರಣವಾಯಿತು, ವಿರೋಧ ಪಕ್ಷದ ಸಂಸದರು ಅದರ ಬಗ್ಗೆ ಸುದೀರ್ಘ ಚರ್ಚೆಗೆ ಒತ್ತಾಯಿಸಿದರು ಮತ್ತು ಸಂಸತ್ತಿನಲ್ಲಿ ಪ್ರಧಾನಿಯವರ ಹೇಳಿಕೆಗೆ ಒತ್ತಾಯಿಸಿದರು. ಆದರೆ ಪ್ರತಿಪಕ್ಷಗಳಿಗೆ ಗೃಹ ಸಚಿವ ಅಮಿತ್ ಶಾ ಉತ್ತರ ನೀಡಬೇಕೆಂದು ಕೇಂದ್ರ ಒತ್ತಾಯಿಸಿದೆ.

ಕಾಂಗ್ರೆಸ್ ತಂದಿರುವ ಅವಿಶ್ವಾಸ ನಿರ್ಣಯವನ್ನು ಎದುರಿಸಲು ಸರ್ಕಾರ ಸಜ್ಜಾಗಿದೆ. ಲೋಕಸಭೆಯ ಸ್ಪೀಕರ್ ಈ ಪ್ರಸ್ತಾವವನ್ನು ಅಂಗೀಕರಿಸಿದ್ದಾರೆ ಆದರೆ ಅವಿಶ್ವಾಸ ಮತದ ದಿನಾಂಕವನ್ನು ಇನ್ನೂ ನಿರ್ಧರಿಸಿಲ್ಲ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೂನ್ 29-30 ರಂದು ಮಣಿಪುರಕ್ಕೆ ಭೇಟಿ ನೀಡಿದ ಒಂದು ತಿಂಗಳ ನಂತರ ಪ್ರತಿಪಕ್ಷಗಳ ನಿಯೋಗವು ಮಣಿಪುರಕ್ಕೆ ಭೇಟಿ ನೀಡಿದೆ. ಅವರ ಭೇಟಿಯ ಮೊದಲ ದಿನ, ಅವರ ಬೆಂಗಾವಲು ಪಡೆಯನ್ನು ತಡೆಯಲಾಯಿತು. ಹಾಗಾಗಿ ಅವರು ರಾಜ್ಯ ರಾಜಧಾನಿ ಇಂಫಾಲ್‌ನಿಂದ ಹಿಂಸಾಚಾರ-ಪೀಡಿತ ಚುರಚಂದಪುರ ಜಿಲ್ಲೆಗೆ ಹೆಲಿಕಾಪ್ಟರ್‌ನಲ್ಲಿ ಹೋದರು.

ರಾಜೀನಾಮೆಯ ಬೇಡಿಕೆಗಳಿಗೆ ಮಣಿಯಲು ನಿರಾಕರಿಸಿರುವ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಸರ್ಕಾರವು ಈ ತಿಂಗಳ ಕೊನೆಯಲ್ಲಿ ಅಥವಾ ಆಗಸ್ಟ್ ಆರಂಭದಲ್ಲಿ ವಿಧಾನಸಭೆ ಅಧಿವೇಶನವನ್ನು ಕರೆಯಲು ನಿರ್ಧರಿಸಿದೆ.
ಮೇ 3 ರಂದು ಹಿಂಸಾಚಾರ ಭುಗಿಲೆದ್ದ ನಂತರ ಕನಿಷ್ಠ 180 ಜನರು ಸಾವನ್ನಪ್ಪಿದ್ದಾರೆ ಮತ್ತು ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

0
ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ಮಹಿಳೆಯೊಬ್ಬರ ಅಪಹರಣ ಪ್ರತ್ಯೇಕ ಪ್ರಕರಣದಲ್ಲಿ ಶಾಸಕ ಹೆಚ್‌.ಡಿ ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ. ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ...