Homeಅಂತರಾಷ್ಟ್ರೀಯಕೃಷಿಯಿಂದ ರಕ್ಷಣಾ ಕ್ಷೇತ್ರದವರೆಗೂ ಹೂಡಿಕೆ ಮಾಡಿ: ನರೇಂದ್ರ ಮೋದಿ

ಕೃಷಿಯಿಂದ ರಕ್ಷಣಾ ಕ್ಷೇತ್ರದವರೆಗೂ ಹೂಡಿಕೆ ಮಾಡಿ: ನರೇಂದ್ರ ಮೋದಿ

ಕೃಷಿ ಕ್ಷೇತ್ರದಿಂದ ಹಿಡಿದು ರಕ್ಷಣಾ ಕ್ಷೇತ್ರ ಮತ್ತು ಬಾಹ್ಯಾಕಾಶ ಉದ್ಯಮದವರೆಗೆ ಎಲ್ಲಿಯಾದರೂ ಹೂಡಿಕೆ ಮಾಡಿ ಎಂದು ಮೋದಿ ಆಹ್ವಾನ ನೀಡಿದ್ದಾರೆ.

- Advertisement -
- Advertisement -

ಜಾಗತೀಕರಣ ಯುಗದಲ್ಲಿ ಅತಿದೊಡ್ಡ ಅಂತರರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಒಂದಾದ ‘ಇಂಡಿಯಾ ಗ್ಲೋಬಲ್ ವೀಕ್ 2020’ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ‘ಇಲ್ಲಿನ ಆರ್ಥಿಕತೆಯು ಈಗಾಗಲೇ ಚಿಗುರುತ್ತಿದೆ, ಭಾರತದಲ್ಲಿ ಹೂಡಿಕೆ ಮಾಡಿ’ ಎಂದು ಜಗತ್ತನ್ನು ಆಹ್ವಾನಿಸಿದ್ದಾರೆ.

“ಎಲ್ಲಾ ಜಾಗತಿಕ ಕಂಪನಿಗಳು ಭಾರತದಲ್ಲಿ ತಮ್ಮ ಬಂಡವಾಳ ಹೂಡಲು ನಾವು ಮುಕ್ತ ಅವಕಾಶವನ್ನು ನೀಡುತ್ತಿದ್ದೇವೆ. ಇಂತಹ ಅವಕಾಶಗಳನ್ನು ನೀಡುವ ಕೆಲವೇ ದೇಶಗಳಲ್ಲಿ ಈಗ ಭಾರತವು ಒಂದಾಗಿದೆ” ಎಂದಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 5,000 ಕ್ಕೂ ಹೆಚ್ಚು ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, “ಕೃಷಿ ಕ್ಷೇತ್ರದಿಂದ ಹಿಡಿದು ರಕ್ಷಣಾ ಕ್ಷೇತ್ರ ಮತ್ತು ಬಾಹ್ಯಾಕಾಶ ಉದ್ಯಮದವರೆಗೆ ಎಲ್ಲಿಯಾದರೂ ಹೂಡಿಕೆ ಮಾಡಿ. ಅಸಾಧ್ಯವೆಂದು ನಂಬಿದ್ದನ್ನು ಸಾಧಿಸುವ ಮನೋಭಾವ ಭಾರತೀಯರಿಗೆ ಇದೆ. ಮತ್ತಷ್ಟು ಜಾಗತಿಕ ಒಳಿತಿಗಾಗಿ, ಸಮೃದ್ಧಿಗೆ ಭಾರತವು ಏನು ಬೇಕಾದರೂ ಮಾಡಲು ಸಿದ್ಧವಾಗಿದೆ. ಇದು ಸುಧಾರಣೆ, ಪರಿವರ್ತನೆಯಾಗುತ್ತಿರುವ ಭಾರತ” ಎಂದು ಹೇಳಿದರು.

ಈಗ “ರಕ್ಷಣಾ ಕ್ಷೇತ್ರದಲ್ಲಿ ಹೂಡಿಕೆಗೆ ಅವಕಾಶಗಳಿವೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆಗೆ ಹೆಚ್ಚಿನ ಅವಕಾಶಗಳಿವೆ. ಜನರ ಅನುಕೂಲಕ್ಕಾಗಿ ಬಾಹ್ಯಾಕಾಶ ತಂತ್ರಜ್ಞಾನದ ವಾಣಿಜ್ಯಿಕ ಅಭಿವೃದ್ಧಿ ಮಾಡೋಣ” ಎಂದು ಅವರು ಹೇಳಿದರು.

“ಸಾಂಕ್ರಾಮಿಕ ರೋಗದಿಂದ ಭಾರತದ ಔಷಧ ಉದ್ಯಮವು ಭಾರತಕ್ಕೆ ಮಾತ್ರವಲ್ಲದೆ ಇಡೀ ಜಗತ್ತಿಗೆ ಒಂದು ಮೌಲ್ಯಯುತವಾದದ್ದು ಎಂದು ಮತ್ತೊಮ್ಮೆ ತೋರಿಸಿದೆ. ವಿಶೇಷವಾಗಿ ಅಭಿವೃದ್ಧಿ ಹೊಂದುತ್ತಿರುವ ದೇಶಗಳಿಗೆ ಕಡಿಮೆ ಬೆಲೆಯಲ್ಲಿ ಔಷಧಿಗಳನ್ನು ನೀಡುವಲ್ಲಿ ಇದು ಪ್ರಮುಖ ಪಾತ್ರ ವಹಿಸಿದೆ” ಎಂದು ಪ್ರಧಾನಿ ಹೇಳಿದರು.

ಸುಮಾರು 250 ಭಾಷಣಕಾರರು ಭೌಗೋಳಿಕ ರಾಜಕೀಯ, ವ್ಯವಹಾರ, ತಂತ್ರಜ್ಞಾನ, ಬ್ಯಾಂಕಿಂಗ್ ಮತ್ತು ಹಣಕಾಸು, ಫಾರ್ಮಾ, ರಕ್ಷಣಾ ಮತ್ತು ಭದ್ರತೆ ಮತ್ತು ಕಲೆ ಮತ್ತು ಸಂಸ್ಕೃತಿಯ ಕುರಿತು ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನ ಮಂತ್ರಿ ಕ್ಯಾಬಿನೆಟ್ ಸಹೋದ್ಯೋಗಿಗಳಾದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಕೂಡ ಸಭೆಯಲ್ಲಿ ಮಾತನಾಡಿದ್ದಾರೆ.


ಇದನ್ನೂ ಓದಿ : ಆದಿತ್ಯನಾಥ್‌ರ ’ಜಂಗಲ್ ರಾಜ್‌’ ಸರ್ಕಾರವನ್ನು ವಜಾಗೊಳಿಸಿ: ಕಾಂಗ್ರೆಸ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...