Homeಅಂತರಾಷ್ಟ್ರೀಯಕೃಷಿಯಿಂದ ರಕ್ಷಣಾ ಕ್ಷೇತ್ರದವರೆಗೂ ಹೂಡಿಕೆ ಮಾಡಿ: ನರೇಂದ್ರ ಮೋದಿ

ಕೃಷಿಯಿಂದ ರಕ್ಷಣಾ ಕ್ಷೇತ್ರದವರೆಗೂ ಹೂಡಿಕೆ ಮಾಡಿ: ನರೇಂದ್ರ ಮೋದಿ

ಕೃಷಿ ಕ್ಷೇತ್ರದಿಂದ ಹಿಡಿದು ರಕ್ಷಣಾ ಕ್ಷೇತ್ರ ಮತ್ತು ಬಾಹ್ಯಾಕಾಶ ಉದ್ಯಮದವರೆಗೆ ಎಲ್ಲಿಯಾದರೂ ಹೂಡಿಕೆ ಮಾಡಿ ಎಂದು ಮೋದಿ ಆಹ್ವಾನ ನೀಡಿದ್ದಾರೆ.

- Advertisement -
- Advertisement -

ಜಾಗತೀಕರಣ ಯುಗದಲ್ಲಿ ಅತಿದೊಡ್ಡ ಅಂತರರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಒಂದಾದ ‘ಇಂಡಿಯಾ ಗ್ಲೋಬಲ್ ವೀಕ್ 2020’ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ‘ಇಲ್ಲಿನ ಆರ್ಥಿಕತೆಯು ಈಗಾಗಲೇ ಚಿಗುರುತ್ತಿದೆ, ಭಾರತದಲ್ಲಿ ಹೂಡಿಕೆ ಮಾಡಿ’ ಎಂದು ಜಗತ್ತನ್ನು ಆಹ್ವಾನಿಸಿದ್ದಾರೆ.

“ಎಲ್ಲಾ ಜಾಗತಿಕ ಕಂಪನಿಗಳು ಭಾರತದಲ್ಲಿ ತಮ್ಮ ಬಂಡವಾಳ ಹೂಡಲು ನಾವು ಮುಕ್ತ ಅವಕಾಶವನ್ನು ನೀಡುತ್ತಿದ್ದೇವೆ. ಇಂತಹ ಅವಕಾಶಗಳನ್ನು ನೀಡುವ ಕೆಲವೇ ದೇಶಗಳಲ್ಲಿ ಈಗ ಭಾರತವು ಒಂದಾಗಿದೆ” ಎಂದಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 5,000 ಕ್ಕೂ ಹೆಚ್ಚು ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, “ಕೃಷಿ ಕ್ಷೇತ್ರದಿಂದ ಹಿಡಿದು ರಕ್ಷಣಾ ಕ್ಷೇತ್ರ ಮತ್ತು ಬಾಹ್ಯಾಕಾಶ ಉದ್ಯಮದವರೆಗೆ ಎಲ್ಲಿಯಾದರೂ ಹೂಡಿಕೆ ಮಾಡಿ. ಅಸಾಧ್ಯವೆಂದು ನಂಬಿದ್ದನ್ನು ಸಾಧಿಸುವ ಮನೋಭಾವ ಭಾರತೀಯರಿಗೆ ಇದೆ. ಮತ್ತಷ್ಟು ಜಾಗತಿಕ ಒಳಿತಿಗಾಗಿ, ಸಮೃದ್ಧಿಗೆ ಭಾರತವು ಏನು ಬೇಕಾದರೂ ಮಾಡಲು ಸಿದ್ಧವಾಗಿದೆ. ಇದು ಸುಧಾರಣೆ, ಪರಿವರ್ತನೆಯಾಗುತ್ತಿರುವ ಭಾರತ” ಎಂದು ಹೇಳಿದರು.

ಈಗ “ರಕ್ಷಣಾ ಕ್ಷೇತ್ರದಲ್ಲಿ ಹೂಡಿಕೆಗೆ ಅವಕಾಶಗಳಿವೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆಗೆ ಹೆಚ್ಚಿನ ಅವಕಾಶಗಳಿವೆ. ಜನರ ಅನುಕೂಲಕ್ಕಾಗಿ ಬಾಹ್ಯಾಕಾಶ ತಂತ್ರಜ್ಞಾನದ ವಾಣಿಜ್ಯಿಕ ಅಭಿವೃದ್ಧಿ ಮಾಡೋಣ” ಎಂದು ಅವರು ಹೇಳಿದರು.

“ಸಾಂಕ್ರಾಮಿಕ ರೋಗದಿಂದ ಭಾರತದ ಔಷಧ ಉದ್ಯಮವು ಭಾರತಕ್ಕೆ ಮಾತ್ರವಲ್ಲದೆ ಇಡೀ ಜಗತ್ತಿಗೆ ಒಂದು ಮೌಲ್ಯಯುತವಾದದ್ದು ಎಂದು ಮತ್ತೊಮ್ಮೆ ತೋರಿಸಿದೆ. ವಿಶೇಷವಾಗಿ ಅಭಿವೃದ್ಧಿ ಹೊಂದುತ್ತಿರುವ ದೇಶಗಳಿಗೆ ಕಡಿಮೆ ಬೆಲೆಯಲ್ಲಿ ಔಷಧಿಗಳನ್ನು ನೀಡುವಲ್ಲಿ ಇದು ಪ್ರಮುಖ ಪಾತ್ರ ವಹಿಸಿದೆ” ಎಂದು ಪ್ರಧಾನಿ ಹೇಳಿದರು.

ಸುಮಾರು 250 ಭಾಷಣಕಾರರು ಭೌಗೋಳಿಕ ರಾಜಕೀಯ, ವ್ಯವಹಾರ, ತಂತ್ರಜ್ಞಾನ, ಬ್ಯಾಂಕಿಂಗ್ ಮತ್ತು ಹಣಕಾಸು, ಫಾರ್ಮಾ, ರಕ್ಷಣಾ ಮತ್ತು ಭದ್ರತೆ ಮತ್ತು ಕಲೆ ಮತ್ತು ಸಂಸ್ಕೃತಿಯ ಕುರಿತು ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನ ಮಂತ್ರಿ ಕ್ಯಾಬಿನೆಟ್ ಸಹೋದ್ಯೋಗಿಗಳಾದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಕೂಡ ಸಭೆಯಲ್ಲಿ ಮಾತನಾಡಿದ್ದಾರೆ.


ಇದನ್ನೂ ಓದಿ : ಆದಿತ್ಯನಾಥ್‌ರ ’ಜಂಗಲ್ ರಾಜ್‌’ ಸರ್ಕಾರವನ್ನು ವಜಾಗೊಳಿಸಿ: ಕಾಂಗ್ರೆಸ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...