Homeಎಕಾನಮಿಅಸಮರ್ಥರ ಕೈಯ್ಯಲ್ಲಿ ಭಾರತದ ಆರ್ಥಿಕ ವ್ಯವಸ್ಥೆ : ಎಚ್‌.ಎಸ್‌ ದೊರೆಸ್ವಾಮಿ

ಅಸಮರ್ಥರ ಕೈಯ್ಯಲ್ಲಿ ಭಾರತದ ಆರ್ಥಿಕ ವ್ಯವಸ್ಥೆ : ಎಚ್‌.ಎಸ್‌ ದೊರೆಸ್ವಾಮಿ

- Advertisement -
- Advertisement -

ಅಸಮರ್ಥರ ಕೈಯಲ್ಲಿರುವ ಭಾರತದ ಆರ್ಥಿಕತೆ ಚಿಂತಾಜನಕ ಸ್ಥಿತಿಯಲ್ಲಿದೆ ಎಂದು ಮಾಜಿ ವಿತ್ತಮಂತ್ರಿ ಪಿ.ಚಿದಂಬರಂ ಕಾತರ ವ್ಯಕ್ತಪಡಿಸಿದ್ದಾರೆ. ವಿತ್ತಮಂತ್ರಿ ನಿರ್ಮಲಾ ಸೀತಾರಾಮನ್ ಜೆಎನ್‌ಯುನಲ್ಲಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದವರು. ಆದರೆ ಆರ್ಥಿಕ ತೀರ್ಮಾನಗಳನ್ನು ತೆಗೆದುಕೊಳ್ಳುವವರು ಪ್ರಧಾನಿ ಮೋದಿ. ಭಾರತದ ಇಂದಿನ ಆರ್ಥಿಕತೆಯನ್ನು ನಿಭಾಯಿಸುವ ಸಾಮರ್ಥ್ಯ ವಿತ್ತಮಂತ್ರಿಗಿದ್ದರೂ, ಅವರನ್ನು ಕಡೆಗಣಿಸಿ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುತ್ತಿದೆ. ದೇಶದ ಆರ್ಥಿಕ ಬೆಳವಣಿಗೆ ಕುಂಟುತ್ತಾ ಸಾಗಿದೆ. ಯಾವಾಗ ಬೇಕಾದರೂ ಅದು ಮತ್ತಷ್ಟು ಬಿಗಡಾಯಿಸಬಹುದು ಎನ್ನುತ್ತಾರೆ ಪಿ.ಚಿದಂಬರಂ.

ಮಾರುಕಟ್ಟೆಗೆ ಸೇರುವ ಜನ ಒಬ್ಬರಿಗೊಬ್ಬರು ಪರಿಚಯಸ್ತರೇನಲ್ಲ. ನಂಬಿಕೆಯ ಮೇಲೆ ಅಲ್ಲಿಯ ವಹಿವಾಟು ನಡೆಯುತ್ತದೆ. ಆದರೆ ಅವರಲ್ಲಿ ಅಸ್ಥಿರತೆಯ ಭಯ ಉಂಟಾದರೆ ಮಾರುಕಟ್ಟೆಯಲ್ಲಿ ಏರುಪೇರು ಸಂಭವಿಸುತ್ತದೆ.

ಜಿಡಿಪಿ ಮೋದಿ ಆಳ್ವಿಕೆ ಆರಂಭವಾಗುವುದಕ್ಕೆ ಮೊದಲು 8 ಇದ್ದದ್ದು ಬರುಬರುತ್ತಾ 7.6, 6.6, 5.8, 5ಕ್ಕೆ ಇಳಿದು ಅದು ಈಗ 4.5ಕ್ಕೆ ಬಂದು ನಿಂತಿದೆ. ಇದರಿಂದ ಆಡಳಿತ ನಡೆಸುವವರಿಗೆ ತಲೆನೋವಾಗಿದೆ. ಆದರೆ ಅದನ್ನು ಅವರು ಪ್ರಕಟಪಡಿಸುವುದಿಲ್ಲ. ಮೋದಿಯವರ ತೀರ್ಮಾನವೇ ಅಂತ್ಯ ಎಂಬ ವಾತಾವರಣ ಸೃಷ್ಟಿಯಾಗಿದೆ. ಅದನ್ನು ಜಾರಿಗೆ ತರುವುದಷ್ಟೇ ಅರ್ಥಸಚಿವರ ಕೆಲಸ ಎಂಬುದು ಸತ್ಯ. ಈ ಪರಿಸ್ಥಿತಿಯಲ್ಲಿ ಆರ್ಥಿಕ ತಜ್ಞರಿಗೂ, ಸರ್ಕಾರಕ್ಕೂ ಘರ್ಷಣೆಗಳಾಗುತ್ತಿರುವುದು ನಮ್ಮ ನಿತ್ಯದ ನಿರಂತರ ಅನುಭವ.

ಕೃಷಿ ಬೆಳವಣಿಗೆ ದರ ಮೋದಿ ಅಧಿಕಾರಕ್ಕೆ ಬಂದಾಗ 6.3 ಇತ್ತು. 2017ರಲ್ಲಿ 5ಕ್ಕೆ 2018ರಲ್ಲಿ 2.9ಕ್ಕೆ ಇಳಿದ ಅದು 2019ರಲ್ಲಿ 2.1ಕ್ಕೆ ಬಂದು ನಿಂತಿದೆ. ಕೈಗಾರಿಕಾ ಬೆಳವಣಿಗೆ ಶೇ.4.6 ಇದ್ದದ್ದು ಈಗ 2.4ಕ್ಕೆ ಇಳಿದಿದೆ. ಮೋದಿ ಅಧಿಕಾರಕ್ಕೆ ಬಂದ ಮೇಲೆ ಯಾವ ವರ್ಷವೂ ಅದು ಮೇಲಕ್ಕೇರಿದ್ದಿಲ್ಲ. ಇಳಿಮುಖವಾಗುತ್ತಲೇ ಇದೆ. ಬೃಹತ್ ಕೈಗಾರಿಕೆಗಳು ಮೋದಿ ಅಧಿಕಾರಕ್ಕೆ ಬರುವ ಮುನ್ನ 4.8 ಇದ್ದದ್ದು 0.2ಕ್ಕೆ ಇಳಿದಿದ್ದರೆ ಅದೇ ಸಣ್ಣ ಕೈಗಾರಿಕೆಗಳು 0.9 ಇದ್ದದ್ದು ಈಗ 2.7 ಆಗಿದೆ. ಹೀಗಾಗಿ ಇದು ಮುನ್ನಡೆ ಸಾಧಿಸಿದೆ.

ನಿರುದ್ಯೋಗದ ಸಮಸ್ಯೆ ಉಲ್ಬಣಗೊಂಡಿದೆ. ಗೃಹಬಳಕೆಯ ಸಾಮಗ್ರಿಗಳ ಮಾರಾಟವೂ ಇಳಿಮುಖವಾಗಿದೆ. ರೈತರು ಬೆಳೆದ ಬೆಳೆಗೆ ತಕ್ಕ ಬೆಲೆ ಸಿಗುತ್ತಿಲ್ಲ.

ಈರುಳ್ಳಿ ವಿಚಾರವನ್ನೇ ತೆಗೆದುಕೊಳ್ಳೋಣ. ರೈತರು ಈರುಳ್ಳಿ ಹೆಚ್ಚಾಗಿ ಬೆಳೆದರು. ವರ್ತಕರು ಅದನ್ನು ಅಗ್ಗವಾಗಿ ಕೊಂಡು ದಾಸ್ತಾನು ಮಾಡಿಕೊಂಡರು. ಈರುಳ್ಳಿ ಮಾರುಕಟ್ಟೆಯಲ್ಲಿ ತುಂಬಾ ಇದೆ. ಇದನ್ನು ರಫ್ತು ಮಾಡದಿದ್ದರೆ ರೈತರು, ವರ್ತಕರು ನಾಶವಾಗಿ ಬಿಡುತ್ತಾರೆ. ಈರುಳ್ಳಿ ಕೊಳೆತುಹೋಗುತ್ತದೆ ಕೂಡಲೇ ಅನುಮತಿಕೊಡಿ ಎಂದು ರಫ್ತುದಾರರು ಬೊಬ್ಬೆ ಹಾಕುತ್ತಾರೆ. ಅಧಿಕಾರಿಗಳಿಗೆ, ಮಂತ್ರಿಗೆ, ಶಾಸಕರಿಗೆ ಕಾಂಚಾಣ ಕೊಟ್ಟು ಸರಿಮಾಡಿಕೊಳ್ಳುತ್ತಾರೆ. ರೈತರಿಗೆ ನಾಮಹಾಕಿ ಈ ವರ್ತಕರು ಲಕ್ಷಾಂತರ ಸಂಪಾದಿಸುತ್ತಾರೆ.

ಈಗ ಈರುಳ್ಳಿ ಭಾರತದ ಮಾರುಕಟ್ಟೆಯಲ್ಲಿ ಇಲ್ಲವೇ ಇಲ್ಲ. ರಫ್ತುಮಾಡಿ ಮಿಕ್ಕ ಈರುಳ್ಳಿಯನ್ನು ಅವರು ಸ್ವಲ್ಪ ಸ್ವಲ್ಪವೇ ಮಾರುಕಟ್ಟೆಗೆ ಬಿಡುತ್ತಾರೆ. ಬೆಲೆ ಕೆಜಿಗೆ 100-200 ಆಯಿತು. ಅದರಿಂದ ಮಧ್ಯವರ್ತಿ ವರ್ತಕರಿಗೆ ಲಾಭ.

ಇದೊಂದು ವಿಷವ್ಯೂಹ. ಈ ಬೆಲೆ ಏರಿಕೆಯನ್ನು ತಡೆಗಟ್ಟುವ ಯೋಗ್ಯತೆ ಸರ್ಕಾರಕ್ಕಿಲ್ಲ. ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ. ಬಡವರಿಗೆ ತಿಂಗಳಲ್ಲಿ 15 ದಿನ ಕೂಲಿ ಕೆಲಸ ಸಿಗುವುದೇ ದುರ್ಲಭವಾಗಿದೆ.

ತರಕಾರಿ, ದಿನಸಿ ಬೆಲೆಗಳು ಗಗನಕ್ಕೇರುತ್ತಿವೆ. ಅದನ್ನು ನಿಯಂತ್ರಣ ಮಾಡುವ ಇಚ್ಛಾಶಕ್ತಿ ಸರ್ಕಾರಕ್ಕಿಲ್ಲ. ಸಗಟುಬೆಲೆ ಹಣದುಬ್ಬರ ಶೇ.1.92ರಷ್ಟು ಹೆಚ್ಚಿದೆ. ಈ ಎಲ್ಲಾ ಸಮಸ್ಯೆಗಳು ತಾನೇ ತಾನಾಗಿ ಸರಿಹೋಗುತ್ತದೆ ಎಂದು ಸರ್ಕಾರ ಭಾವಿಸಿದಂತಿದೆ. ಆರ್ಥಿಕ ಸಚಿವರು ಸಮಸ್ಯೆಯನ್ನು ಅವರ ಮುಂದಿಟ್ಟಾಗ ವಿತಂಡವಾದ ಮಾಡುತ್ತಾರೆ. ಮೋದಿ ಮೌನತಳೆಯುತ್ತಾರೆ.

500, 1000 ರೂಗಳ ನೋಟುರದ್ದತಿ, ದೋಷಪೂರಿತ ಜಿಎಸ್‌ಟಿ, ಹೆಚ್ಚುತ್ತಿರುವ ನಿಯಂತ್ರಣ, ಪ್ರಧಾನಿ ಕಚೇರಿಯ ಅಧಿಕಾರದ ಕೇಂದ್ರೀಕರಣ ವ್ಯವಸ್ಥೆ ಇವುಗಳಿಂದ ಉಂಟಾಗಿರುವ ಗಂಡಾಂತರದ ಬಗೆಗೆ ಆರ್ಥಿಕ ತಜ್ಞರು ಎಚ್ಚರಿಕೆಯ ಮಾತನ್ನಾಡಿದರೆ ಅದನ್ನು ನಿರ್ಲಕ್ಷಿಸುವ ಮನೋಭಾವ ಸರ್ಕಾರದ್ದು. ಇಂದಿನ ಜ್ವಲಂತ ಸಮಸ್ಯೆಗಳು ದೇಶದ ಆರ್ಥಿಕ ಪರಿಸ್ಥಿತಿ ದಿನೇ ದಿನೇ ಹದಗೆಡುತ್ತಿದೆ ಎಂಬುದನ್ನು ಮೋದಿಯವರೂ, ಅರ್ಥಸಚಿವರು ಒಪ್ಪಿಕೊಳ್ಳುತ್ತಾರೆ. ಆದರೆ ಅವರು ಹೇಳುವುದು ಇಂದಿನ ಪರಿಸ್ಥಿತಿ ಹೀಗೆಯೇ ಮುಂದುವರೆಯುವುದಿಲ್ಲ. ವಿಶ್ವದ ಎಲ್ಲೆಡೆ ಈ ಸಮಸ್ಯೆ ಇದೆ. ಅಲ್ಲೆಲ್ಲ ಸರಿಹೋದರೆ ಇಲ್ಲಿಯೂ ಸರಿ ಹೋಗುತ್ತದೆ. ಅಚ್ಛೇದಿನ್ ಬಂದೇ ಬರುತ್ತದೆ ಎನ್ನುವುದು ಅವರ ವಾದ.

ಆರ್ಥಿಕ ತಜ್ಞರು, ಪ್ರಧಾನಿಗಳ ಆರ್ಥಿಕ ಸಲಹೆಗಾರರು ರಾಜೀನಾಮೆ ಕೊಟ್ಟುಹೋದರು. ಅವರು ನಿರ್ಗಮಿಸುವ ಮುನ್ನ ಹೇಳಿದ ಮಾತು: ಈ ದೇಶದ ಆರ್ಥಿಕ ಪರಿಸ್ಥಿತಿಯ ಸುಧಾರಣೆಯ ಕೆಲಸ ಸರ್ಜನ್ ಇಲ್ಲದೇ ಶಸ್ತ್ರಚಿಕಿತ್ಸೆ ಮಾಡಲು ಹೊರಟಂತಿದೆ. ಮುಗ್ಗಟ್ಟಿನಿಂದ ಬಳಲಿರುವ ಆರ್ಥಿಕ ವ್ಯವಸ್ಥೆಯು ಅಸಮರ್ಥರ ಹಿಡಿತದಲ್ಲಿ ನರಳುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...