Homeಎಕಾನಮಿಅಸಮರ್ಥರ ಕೈಯ್ಯಲ್ಲಿ ಭಾರತದ ಆರ್ಥಿಕ ವ್ಯವಸ್ಥೆ : ಎಚ್‌.ಎಸ್‌ ದೊರೆಸ್ವಾಮಿ

ಅಸಮರ್ಥರ ಕೈಯ್ಯಲ್ಲಿ ಭಾರತದ ಆರ್ಥಿಕ ವ್ಯವಸ್ಥೆ : ಎಚ್‌.ಎಸ್‌ ದೊರೆಸ್ವಾಮಿ

- Advertisement -
- Advertisement -

ಅಸಮರ್ಥರ ಕೈಯಲ್ಲಿರುವ ಭಾರತದ ಆರ್ಥಿಕತೆ ಚಿಂತಾಜನಕ ಸ್ಥಿತಿಯಲ್ಲಿದೆ ಎಂದು ಮಾಜಿ ವಿತ್ತಮಂತ್ರಿ ಪಿ.ಚಿದಂಬರಂ ಕಾತರ ವ್ಯಕ್ತಪಡಿಸಿದ್ದಾರೆ. ವಿತ್ತಮಂತ್ರಿ ನಿರ್ಮಲಾ ಸೀತಾರಾಮನ್ ಜೆಎನ್‌ಯುನಲ್ಲಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದವರು. ಆದರೆ ಆರ್ಥಿಕ ತೀರ್ಮಾನಗಳನ್ನು ತೆಗೆದುಕೊಳ್ಳುವವರು ಪ್ರಧಾನಿ ಮೋದಿ. ಭಾರತದ ಇಂದಿನ ಆರ್ಥಿಕತೆಯನ್ನು ನಿಭಾಯಿಸುವ ಸಾಮರ್ಥ್ಯ ವಿತ್ತಮಂತ್ರಿಗಿದ್ದರೂ, ಅವರನ್ನು ಕಡೆಗಣಿಸಿ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುತ್ತಿದೆ. ದೇಶದ ಆರ್ಥಿಕ ಬೆಳವಣಿಗೆ ಕುಂಟುತ್ತಾ ಸಾಗಿದೆ. ಯಾವಾಗ ಬೇಕಾದರೂ ಅದು ಮತ್ತಷ್ಟು ಬಿಗಡಾಯಿಸಬಹುದು ಎನ್ನುತ್ತಾರೆ ಪಿ.ಚಿದಂಬರಂ.

ಮಾರುಕಟ್ಟೆಗೆ ಸೇರುವ ಜನ ಒಬ್ಬರಿಗೊಬ್ಬರು ಪರಿಚಯಸ್ತರೇನಲ್ಲ. ನಂಬಿಕೆಯ ಮೇಲೆ ಅಲ್ಲಿಯ ವಹಿವಾಟು ನಡೆಯುತ್ತದೆ. ಆದರೆ ಅವರಲ್ಲಿ ಅಸ್ಥಿರತೆಯ ಭಯ ಉಂಟಾದರೆ ಮಾರುಕಟ್ಟೆಯಲ್ಲಿ ಏರುಪೇರು ಸಂಭವಿಸುತ್ತದೆ.

ಜಿಡಿಪಿ ಮೋದಿ ಆಳ್ವಿಕೆ ಆರಂಭವಾಗುವುದಕ್ಕೆ ಮೊದಲು 8 ಇದ್ದದ್ದು ಬರುಬರುತ್ತಾ 7.6, 6.6, 5.8, 5ಕ್ಕೆ ಇಳಿದು ಅದು ಈಗ 4.5ಕ್ಕೆ ಬಂದು ನಿಂತಿದೆ. ಇದರಿಂದ ಆಡಳಿತ ನಡೆಸುವವರಿಗೆ ತಲೆನೋವಾಗಿದೆ. ಆದರೆ ಅದನ್ನು ಅವರು ಪ್ರಕಟಪಡಿಸುವುದಿಲ್ಲ. ಮೋದಿಯವರ ತೀರ್ಮಾನವೇ ಅಂತ್ಯ ಎಂಬ ವಾತಾವರಣ ಸೃಷ್ಟಿಯಾಗಿದೆ. ಅದನ್ನು ಜಾರಿಗೆ ತರುವುದಷ್ಟೇ ಅರ್ಥಸಚಿವರ ಕೆಲಸ ಎಂಬುದು ಸತ್ಯ. ಈ ಪರಿಸ್ಥಿತಿಯಲ್ಲಿ ಆರ್ಥಿಕ ತಜ್ಞರಿಗೂ, ಸರ್ಕಾರಕ್ಕೂ ಘರ್ಷಣೆಗಳಾಗುತ್ತಿರುವುದು ನಮ್ಮ ನಿತ್ಯದ ನಿರಂತರ ಅನುಭವ.

ಕೃಷಿ ಬೆಳವಣಿಗೆ ದರ ಮೋದಿ ಅಧಿಕಾರಕ್ಕೆ ಬಂದಾಗ 6.3 ಇತ್ತು. 2017ರಲ್ಲಿ 5ಕ್ಕೆ 2018ರಲ್ಲಿ 2.9ಕ್ಕೆ ಇಳಿದ ಅದು 2019ರಲ್ಲಿ 2.1ಕ್ಕೆ ಬಂದು ನಿಂತಿದೆ. ಕೈಗಾರಿಕಾ ಬೆಳವಣಿಗೆ ಶೇ.4.6 ಇದ್ದದ್ದು ಈಗ 2.4ಕ್ಕೆ ಇಳಿದಿದೆ. ಮೋದಿ ಅಧಿಕಾರಕ್ಕೆ ಬಂದ ಮೇಲೆ ಯಾವ ವರ್ಷವೂ ಅದು ಮೇಲಕ್ಕೇರಿದ್ದಿಲ್ಲ. ಇಳಿಮುಖವಾಗುತ್ತಲೇ ಇದೆ. ಬೃಹತ್ ಕೈಗಾರಿಕೆಗಳು ಮೋದಿ ಅಧಿಕಾರಕ್ಕೆ ಬರುವ ಮುನ್ನ 4.8 ಇದ್ದದ್ದು 0.2ಕ್ಕೆ ಇಳಿದಿದ್ದರೆ ಅದೇ ಸಣ್ಣ ಕೈಗಾರಿಕೆಗಳು 0.9 ಇದ್ದದ್ದು ಈಗ 2.7 ಆಗಿದೆ. ಹೀಗಾಗಿ ಇದು ಮುನ್ನಡೆ ಸಾಧಿಸಿದೆ.

ನಿರುದ್ಯೋಗದ ಸಮಸ್ಯೆ ಉಲ್ಬಣಗೊಂಡಿದೆ. ಗೃಹಬಳಕೆಯ ಸಾಮಗ್ರಿಗಳ ಮಾರಾಟವೂ ಇಳಿಮುಖವಾಗಿದೆ. ರೈತರು ಬೆಳೆದ ಬೆಳೆಗೆ ತಕ್ಕ ಬೆಲೆ ಸಿಗುತ್ತಿಲ್ಲ.

ಈರುಳ್ಳಿ ವಿಚಾರವನ್ನೇ ತೆಗೆದುಕೊಳ್ಳೋಣ. ರೈತರು ಈರುಳ್ಳಿ ಹೆಚ್ಚಾಗಿ ಬೆಳೆದರು. ವರ್ತಕರು ಅದನ್ನು ಅಗ್ಗವಾಗಿ ಕೊಂಡು ದಾಸ್ತಾನು ಮಾಡಿಕೊಂಡರು. ಈರುಳ್ಳಿ ಮಾರುಕಟ್ಟೆಯಲ್ಲಿ ತುಂಬಾ ಇದೆ. ಇದನ್ನು ರಫ್ತು ಮಾಡದಿದ್ದರೆ ರೈತರು, ವರ್ತಕರು ನಾಶವಾಗಿ ಬಿಡುತ್ತಾರೆ. ಈರುಳ್ಳಿ ಕೊಳೆತುಹೋಗುತ್ತದೆ ಕೂಡಲೇ ಅನುಮತಿಕೊಡಿ ಎಂದು ರಫ್ತುದಾರರು ಬೊಬ್ಬೆ ಹಾಕುತ್ತಾರೆ. ಅಧಿಕಾರಿಗಳಿಗೆ, ಮಂತ್ರಿಗೆ, ಶಾಸಕರಿಗೆ ಕಾಂಚಾಣ ಕೊಟ್ಟು ಸರಿಮಾಡಿಕೊಳ್ಳುತ್ತಾರೆ. ರೈತರಿಗೆ ನಾಮಹಾಕಿ ಈ ವರ್ತಕರು ಲಕ್ಷಾಂತರ ಸಂಪಾದಿಸುತ್ತಾರೆ.

ಈಗ ಈರುಳ್ಳಿ ಭಾರತದ ಮಾರುಕಟ್ಟೆಯಲ್ಲಿ ಇಲ್ಲವೇ ಇಲ್ಲ. ರಫ್ತುಮಾಡಿ ಮಿಕ್ಕ ಈರುಳ್ಳಿಯನ್ನು ಅವರು ಸ್ವಲ್ಪ ಸ್ವಲ್ಪವೇ ಮಾರುಕಟ್ಟೆಗೆ ಬಿಡುತ್ತಾರೆ. ಬೆಲೆ ಕೆಜಿಗೆ 100-200 ಆಯಿತು. ಅದರಿಂದ ಮಧ್ಯವರ್ತಿ ವರ್ತಕರಿಗೆ ಲಾಭ.

ಇದೊಂದು ವಿಷವ್ಯೂಹ. ಈ ಬೆಲೆ ಏರಿಕೆಯನ್ನು ತಡೆಗಟ್ಟುವ ಯೋಗ್ಯತೆ ಸರ್ಕಾರಕ್ಕಿಲ್ಲ. ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ. ಬಡವರಿಗೆ ತಿಂಗಳಲ್ಲಿ 15 ದಿನ ಕೂಲಿ ಕೆಲಸ ಸಿಗುವುದೇ ದುರ್ಲಭವಾಗಿದೆ.

ತರಕಾರಿ, ದಿನಸಿ ಬೆಲೆಗಳು ಗಗನಕ್ಕೇರುತ್ತಿವೆ. ಅದನ್ನು ನಿಯಂತ್ರಣ ಮಾಡುವ ಇಚ್ಛಾಶಕ್ತಿ ಸರ್ಕಾರಕ್ಕಿಲ್ಲ. ಸಗಟುಬೆಲೆ ಹಣದುಬ್ಬರ ಶೇ.1.92ರಷ್ಟು ಹೆಚ್ಚಿದೆ. ಈ ಎಲ್ಲಾ ಸಮಸ್ಯೆಗಳು ತಾನೇ ತಾನಾಗಿ ಸರಿಹೋಗುತ್ತದೆ ಎಂದು ಸರ್ಕಾರ ಭಾವಿಸಿದಂತಿದೆ. ಆರ್ಥಿಕ ಸಚಿವರು ಸಮಸ್ಯೆಯನ್ನು ಅವರ ಮುಂದಿಟ್ಟಾಗ ವಿತಂಡವಾದ ಮಾಡುತ್ತಾರೆ. ಮೋದಿ ಮೌನತಳೆಯುತ್ತಾರೆ.

500, 1000 ರೂಗಳ ನೋಟುರದ್ದತಿ, ದೋಷಪೂರಿತ ಜಿಎಸ್‌ಟಿ, ಹೆಚ್ಚುತ್ತಿರುವ ನಿಯಂತ್ರಣ, ಪ್ರಧಾನಿ ಕಚೇರಿಯ ಅಧಿಕಾರದ ಕೇಂದ್ರೀಕರಣ ವ್ಯವಸ್ಥೆ ಇವುಗಳಿಂದ ಉಂಟಾಗಿರುವ ಗಂಡಾಂತರದ ಬಗೆಗೆ ಆರ್ಥಿಕ ತಜ್ಞರು ಎಚ್ಚರಿಕೆಯ ಮಾತನ್ನಾಡಿದರೆ ಅದನ್ನು ನಿರ್ಲಕ್ಷಿಸುವ ಮನೋಭಾವ ಸರ್ಕಾರದ್ದು. ಇಂದಿನ ಜ್ವಲಂತ ಸಮಸ್ಯೆಗಳು ದೇಶದ ಆರ್ಥಿಕ ಪರಿಸ್ಥಿತಿ ದಿನೇ ದಿನೇ ಹದಗೆಡುತ್ತಿದೆ ಎಂಬುದನ್ನು ಮೋದಿಯವರೂ, ಅರ್ಥಸಚಿವರು ಒಪ್ಪಿಕೊಳ್ಳುತ್ತಾರೆ. ಆದರೆ ಅವರು ಹೇಳುವುದು ಇಂದಿನ ಪರಿಸ್ಥಿತಿ ಹೀಗೆಯೇ ಮುಂದುವರೆಯುವುದಿಲ್ಲ. ವಿಶ್ವದ ಎಲ್ಲೆಡೆ ಈ ಸಮಸ್ಯೆ ಇದೆ. ಅಲ್ಲೆಲ್ಲ ಸರಿಹೋದರೆ ಇಲ್ಲಿಯೂ ಸರಿ ಹೋಗುತ್ತದೆ. ಅಚ್ಛೇದಿನ್ ಬಂದೇ ಬರುತ್ತದೆ ಎನ್ನುವುದು ಅವರ ವಾದ.

ಆರ್ಥಿಕ ತಜ್ಞರು, ಪ್ರಧಾನಿಗಳ ಆರ್ಥಿಕ ಸಲಹೆಗಾರರು ರಾಜೀನಾಮೆ ಕೊಟ್ಟುಹೋದರು. ಅವರು ನಿರ್ಗಮಿಸುವ ಮುನ್ನ ಹೇಳಿದ ಮಾತು: ಈ ದೇಶದ ಆರ್ಥಿಕ ಪರಿಸ್ಥಿತಿಯ ಸುಧಾರಣೆಯ ಕೆಲಸ ಸರ್ಜನ್ ಇಲ್ಲದೇ ಶಸ್ತ್ರಚಿಕಿತ್ಸೆ ಮಾಡಲು ಹೊರಟಂತಿದೆ. ಮುಗ್ಗಟ್ಟಿನಿಂದ ಬಳಲಿರುವ ಆರ್ಥಿಕ ವ್ಯವಸ್ಥೆಯು ಅಸಮರ್ಥರ ಹಿಡಿತದಲ್ಲಿ ನರಳುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...