Homeಎಕಾನಮಿಅಸಮರ್ಥರ ಕೈಯ್ಯಲ್ಲಿ ಭಾರತದ ಆರ್ಥಿಕ ವ್ಯವಸ್ಥೆ : ಎಚ್‌.ಎಸ್‌ ದೊರೆಸ್ವಾಮಿ

ಅಸಮರ್ಥರ ಕೈಯ್ಯಲ್ಲಿ ಭಾರತದ ಆರ್ಥಿಕ ವ್ಯವಸ್ಥೆ : ಎಚ್‌.ಎಸ್‌ ದೊರೆಸ್ವಾಮಿ

- Advertisement -
- Advertisement -

ಅಸಮರ್ಥರ ಕೈಯಲ್ಲಿರುವ ಭಾರತದ ಆರ್ಥಿಕತೆ ಚಿಂತಾಜನಕ ಸ್ಥಿತಿಯಲ್ಲಿದೆ ಎಂದು ಮಾಜಿ ವಿತ್ತಮಂತ್ರಿ ಪಿ.ಚಿದಂಬರಂ ಕಾತರ ವ್ಯಕ್ತಪಡಿಸಿದ್ದಾರೆ. ವಿತ್ತಮಂತ್ರಿ ನಿರ್ಮಲಾ ಸೀತಾರಾಮನ್ ಜೆಎನ್‌ಯುನಲ್ಲಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದವರು. ಆದರೆ ಆರ್ಥಿಕ ತೀರ್ಮಾನಗಳನ್ನು ತೆಗೆದುಕೊಳ್ಳುವವರು ಪ್ರಧಾನಿ ಮೋದಿ. ಭಾರತದ ಇಂದಿನ ಆರ್ಥಿಕತೆಯನ್ನು ನಿಭಾಯಿಸುವ ಸಾಮರ್ಥ್ಯ ವಿತ್ತಮಂತ್ರಿಗಿದ್ದರೂ, ಅವರನ್ನು ಕಡೆಗಣಿಸಿ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುತ್ತಿದೆ. ದೇಶದ ಆರ್ಥಿಕ ಬೆಳವಣಿಗೆ ಕುಂಟುತ್ತಾ ಸಾಗಿದೆ. ಯಾವಾಗ ಬೇಕಾದರೂ ಅದು ಮತ್ತಷ್ಟು ಬಿಗಡಾಯಿಸಬಹುದು ಎನ್ನುತ್ತಾರೆ ಪಿ.ಚಿದಂಬರಂ.

ಮಾರುಕಟ್ಟೆಗೆ ಸೇರುವ ಜನ ಒಬ್ಬರಿಗೊಬ್ಬರು ಪರಿಚಯಸ್ತರೇನಲ್ಲ. ನಂಬಿಕೆಯ ಮೇಲೆ ಅಲ್ಲಿಯ ವಹಿವಾಟು ನಡೆಯುತ್ತದೆ. ಆದರೆ ಅವರಲ್ಲಿ ಅಸ್ಥಿರತೆಯ ಭಯ ಉಂಟಾದರೆ ಮಾರುಕಟ್ಟೆಯಲ್ಲಿ ಏರುಪೇರು ಸಂಭವಿಸುತ್ತದೆ.

ಜಿಡಿಪಿ ಮೋದಿ ಆಳ್ವಿಕೆ ಆರಂಭವಾಗುವುದಕ್ಕೆ ಮೊದಲು 8 ಇದ್ದದ್ದು ಬರುಬರುತ್ತಾ 7.6, 6.6, 5.8, 5ಕ್ಕೆ ಇಳಿದು ಅದು ಈಗ 4.5ಕ್ಕೆ ಬಂದು ನಿಂತಿದೆ. ಇದರಿಂದ ಆಡಳಿತ ನಡೆಸುವವರಿಗೆ ತಲೆನೋವಾಗಿದೆ. ಆದರೆ ಅದನ್ನು ಅವರು ಪ್ರಕಟಪಡಿಸುವುದಿಲ್ಲ. ಮೋದಿಯವರ ತೀರ್ಮಾನವೇ ಅಂತ್ಯ ಎಂಬ ವಾತಾವರಣ ಸೃಷ್ಟಿಯಾಗಿದೆ. ಅದನ್ನು ಜಾರಿಗೆ ತರುವುದಷ್ಟೇ ಅರ್ಥಸಚಿವರ ಕೆಲಸ ಎಂಬುದು ಸತ್ಯ. ಈ ಪರಿಸ್ಥಿತಿಯಲ್ಲಿ ಆರ್ಥಿಕ ತಜ್ಞರಿಗೂ, ಸರ್ಕಾರಕ್ಕೂ ಘರ್ಷಣೆಗಳಾಗುತ್ತಿರುವುದು ನಮ್ಮ ನಿತ್ಯದ ನಿರಂತರ ಅನುಭವ.

ಕೃಷಿ ಬೆಳವಣಿಗೆ ದರ ಮೋದಿ ಅಧಿಕಾರಕ್ಕೆ ಬಂದಾಗ 6.3 ಇತ್ತು. 2017ರಲ್ಲಿ 5ಕ್ಕೆ 2018ರಲ್ಲಿ 2.9ಕ್ಕೆ ಇಳಿದ ಅದು 2019ರಲ್ಲಿ 2.1ಕ್ಕೆ ಬಂದು ನಿಂತಿದೆ. ಕೈಗಾರಿಕಾ ಬೆಳವಣಿಗೆ ಶೇ.4.6 ಇದ್ದದ್ದು ಈಗ 2.4ಕ್ಕೆ ಇಳಿದಿದೆ. ಮೋದಿ ಅಧಿಕಾರಕ್ಕೆ ಬಂದ ಮೇಲೆ ಯಾವ ವರ್ಷವೂ ಅದು ಮೇಲಕ್ಕೇರಿದ್ದಿಲ್ಲ. ಇಳಿಮುಖವಾಗುತ್ತಲೇ ಇದೆ. ಬೃಹತ್ ಕೈಗಾರಿಕೆಗಳು ಮೋದಿ ಅಧಿಕಾರಕ್ಕೆ ಬರುವ ಮುನ್ನ 4.8 ಇದ್ದದ್ದು 0.2ಕ್ಕೆ ಇಳಿದಿದ್ದರೆ ಅದೇ ಸಣ್ಣ ಕೈಗಾರಿಕೆಗಳು 0.9 ಇದ್ದದ್ದು ಈಗ 2.7 ಆಗಿದೆ. ಹೀಗಾಗಿ ಇದು ಮುನ್ನಡೆ ಸಾಧಿಸಿದೆ.

ನಿರುದ್ಯೋಗದ ಸಮಸ್ಯೆ ಉಲ್ಬಣಗೊಂಡಿದೆ. ಗೃಹಬಳಕೆಯ ಸಾಮಗ್ರಿಗಳ ಮಾರಾಟವೂ ಇಳಿಮುಖವಾಗಿದೆ. ರೈತರು ಬೆಳೆದ ಬೆಳೆಗೆ ತಕ್ಕ ಬೆಲೆ ಸಿಗುತ್ತಿಲ್ಲ.

ಈರುಳ್ಳಿ ವಿಚಾರವನ್ನೇ ತೆಗೆದುಕೊಳ್ಳೋಣ. ರೈತರು ಈರುಳ್ಳಿ ಹೆಚ್ಚಾಗಿ ಬೆಳೆದರು. ವರ್ತಕರು ಅದನ್ನು ಅಗ್ಗವಾಗಿ ಕೊಂಡು ದಾಸ್ತಾನು ಮಾಡಿಕೊಂಡರು. ಈರುಳ್ಳಿ ಮಾರುಕಟ್ಟೆಯಲ್ಲಿ ತುಂಬಾ ಇದೆ. ಇದನ್ನು ರಫ್ತು ಮಾಡದಿದ್ದರೆ ರೈತರು, ವರ್ತಕರು ನಾಶವಾಗಿ ಬಿಡುತ್ತಾರೆ. ಈರುಳ್ಳಿ ಕೊಳೆತುಹೋಗುತ್ತದೆ ಕೂಡಲೇ ಅನುಮತಿಕೊಡಿ ಎಂದು ರಫ್ತುದಾರರು ಬೊಬ್ಬೆ ಹಾಕುತ್ತಾರೆ. ಅಧಿಕಾರಿಗಳಿಗೆ, ಮಂತ್ರಿಗೆ, ಶಾಸಕರಿಗೆ ಕಾಂಚಾಣ ಕೊಟ್ಟು ಸರಿಮಾಡಿಕೊಳ್ಳುತ್ತಾರೆ. ರೈತರಿಗೆ ನಾಮಹಾಕಿ ಈ ವರ್ತಕರು ಲಕ್ಷಾಂತರ ಸಂಪಾದಿಸುತ್ತಾರೆ.

ಈಗ ಈರುಳ್ಳಿ ಭಾರತದ ಮಾರುಕಟ್ಟೆಯಲ್ಲಿ ಇಲ್ಲವೇ ಇಲ್ಲ. ರಫ್ತುಮಾಡಿ ಮಿಕ್ಕ ಈರುಳ್ಳಿಯನ್ನು ಅವರು ಸ್ವಲ್ಪ ಸ್ವಲ್ಪವೇ ಮಾರುಕಟ್ಟೆಗೆ ಬಿಡುತ್ತಾರೆ. ಬೆಲೆ ಕೆಜಿಗೆ 100-200 ಆಯಿತು. ಅದರಿಂದ ಮಧ್ಯವರ್ತಿ ವರ್ತಕರಿಗೆ ಲಾಭ.

ಇದೊಂದು ವಿಷವ್ಯೂಹ. ಈ ಬೆಲೆ ಏರಿಕೆಯನ್ನು ತಡೆಗಟ್ಟುವ ಯೋಗ್ಯತೆ ಸರ್ಕಾರಕ್ಕಿಲ್ಲ. ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ. ಬಡವರಿಗೆ ತಿಂಗಳಲ್ಲಿ 15 ದಿನ ಕೂಲಿ ಕೆಲಸ ಸಿಗುವುದೇ ದುರ್ಲಭವಾಗಿದೆ.

ತರಕಾರಿ, ದಿನಸಿ ಬೆಲೆಗಳು ಗಗನಕ್ಕೇರುತ್ತಿವೆ. ಅದನ್ನು ನಿಯಂತ್ರಣ ಮಾಡುವ ಇಚ್ಛಾಶಕ್ತಿ ಸರ್ಕಾರಕ್ಕಿಲ್ಲ. ಸಗಟುಬೆಲೆ ಹಣದುಬ್ಬರ ಶೇ.1.92ರಷ್ಟು ಹೆಚ್ಚಿದೆ. ಈ ಎಲ್ಲಾ ಸಮಸ್ಯೆಗಳು ತಾನೇ ತಾನಾಗಿ ಸರಿಹೋಗುತ್ತದೆ ಎಂದು ಸರ್ಕಾರ ಭಾವಿಸಿದಂತಿದೆ. ಆರ್ಥಿಕ ಸಚಿವರು ಸಮಸ್ಯೆಯನ್ನು ಅವರ ಮುಂದಿಟ್ಟಾಗ ವಿತಂಡವಾದ ಮಾಡುತ್ತಾರೆ. ಮೋದಿ ಮೌನತಳೆಯುತ್ತಾರೆ.

500, 1000 ರೂಗಳ ನೋಟುರದ್ದತಿ, ದೋಷಪೂರಿತ ಜಿಎಸ್‌ಟಿ, ಹೆಚ್ಚುತ್ತಿರುವ ನಿಯಂತ್ರಣ, ಪ್ರಧಾನಿ ಕಚೇರಿಯ ಅಧಿಕಾರದ ಕೇಂದ್ರೀಕರಣ ವ್ಯವಸ್ಥೆ ಇವುಗಳಿಂದ ಉಂಟಾಗಿರುವ ಗಂಡಾಂತರದ ಬಗೆಗೆ ಆರ್ಥಿಕ ತಜ್ಞರು ಎಚ್ಚರಿಕೆಯ ಮಾತನ್ನಾಡಿದರೆ ಅದನ್ನು ನಿರ್ಲಕ್ಷಿಸುವ ಮನೋಭಾವ ಸರ್ಕಾರದ್ದು. ಇಂದಿನ ಜ್ವಲಂತ ಸಮಸ್ಯೆಗಳು ದೇಶದ ಆರ್ಥಿಕ ಪರಿಸ್ಥಿತಿ ದಿನೇ ದಿನೇ ಹದಗೆಡುತ್ತಿದೆ ಎಂಬುದನ್ನು ಮೋದಿಯವರೂ, ಅರ್ಥಸಚಿವರು ಒಪ್ಪಿಕೊಳ್ಳುತ್ತಾರೆ. ಆದರೆ ಅವರು ಹೇಳುವುದು ಇಂದಿನ ಪರಿಸ್ಥಿತಿ ಹೀಗೆಯೇ ಮುಂದುವರೆಯುವುದಿಲ್ಲ. ವಿಶ್ವದ ಎಲ್ಲೆಡೆ ಈ ಸಮಸ್ಯೆ ಇದೆ. ಅಲ್ಲೆಲ್ಲ ಸರಿಹೋದರೆ ಇಲ್ಲಿಯೂ ಸರಿ ಹೋಗುತ್ತದೆ. ಅಚ್ಛೇದಿನ್ ಬಂದೇ ಬರುತ್ತದೆ ಎನ್ನುವುದು ಅವರ ವಾದ.

ಆರ್ಥಿಕ ತಜ್ಞರು, ಪ್ರಧಾನಿಗಳ ಆರ್ಥಿಕ ಸಲಹೆಗಾರರು ರಾಜೀನಾಮೆ ಕೊಟ್ಟುಹೋದರು. ಅವರು ನಿರ್ಗಮಿಸುವ ಮುನ್ನ ಹೇಳಿದ ಮಾತು: ಈ ದೇಶದ ಆರ್ಥಿಕ ಪರಿಸ್ಥಿತಿಯ ಸುಧಾರಣೆಯ ಕೆಲಸ ಸರ್ಜನ್ ಇಲ್ಲದೇ ಶಸ್ತ್ರಚಿಕಿತ್ಸೆ ಮಾಡಲು ಹೊರಟಂತಿದೆ. ಮುಗ್ಗಟ್ಟಿನಿಂದ ಬಳಲಿರುವ ಆರ್ಥಿಕ ವ್ಯವಸ್ಥೆಯು ಅಸಮರ್ಥರ ಹಿಡಿತದಲ್ಲಿ ನರಳುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...