Homeಎಕಾನಮಿಅಸಮರ್ಥರ ಕೈಯ್ಯಲ್ಲಿ ಭಾರತದ ಆರ್ಥಿಕ ವ್ಯವಸ್ಥೆ : ಎಚ್‌.ಎಸ್‌ ದೊರೆಸ್ವಾಮಿ

ಅಸಮರ್ಥರ ಕೈಯ್ಯಲ್ಲಿ ಭಾರತದ ಆರ್ಥಿಕ ವ್ಯವಸ್ಥೆ : ಎಚ್‌.ಎಸ್‌ ದೊರೆಸ್ವಾಮಿ

- Advertisement -
- Advertisement -

ಅಸಮರ್ಥರ ಕೈಯಲ್ಲಿರುವ ಭಾರತದ ಆರ್ಥಿಕತೆ ಚಿಂತಾಜನಕ ಸ್ಥಿತಿಯಲ್ಲಿದೆ ಎಂದು ಮಾಜಿ ವಿತ್ತಮಂತ್ರಿ ಪಿ.ಚಿದಂಬರಂ ಕಾತರ ವ್ಯಕ್ತಪಡಿಸಿದ್ದಾರೆ. ವಿತ್ತಮಂತ್ರಿ ನಿರ್ಮಲಾ ಸೀತಾರಾಮನ್ ಜೆಎನ್‌ಯುನಲ್ಲಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದವರು. ಆದರೆ ಆರ್ಥಿಕ ತೀರ್ಮಾನಗಳನ್ನು ತೆಗೆದುಕೊಳ್ಳುವವರು ಪ್ರಧಾನಿ ಮೋದಿ. ಭಾರತದ ಇಂದಿನ ಆರ್ಥಿಕತೆಯನ್ನು ನಿಭಾಯಿಸುವ ಸಾಮರ್ಥ್ಯ ವಿತ್ತಮಂತ್ರಿಗಿದ್ದರೂ, ಅವರನ್ನು ಕಡೆಗಣಿಸಿ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುತ್ತಿದೆ. ದೇಶದ ಆರ್ಥಿಕ ಬೆಳವಣಿಗೆ ಕುಂಟುತ್ತಾ ಸಾಗಿದೆ. ಯಾವಾಗ ಬೇಕಾದರೂ ಅದು ಮತ್ತಷ್ಟು ಬಿಗಡಾಯಿಸಬಹುದು ಎನ್ನುತ್ತಾರೆ ಪಿ.ಚಿದಂಬರಂ.

ಮಾರುಕಟ್ಟೆಗೆ ಸೇರುವ ಜನ ಒಬ್ಬರಿಗೊಬ್ಬರು ಪರಿಚಯಸ್ತರೇನಲ್ಲ. ನಂಬಿಕೆಯ ಮೇಲೆ ಅಲ್ಲಿಯ ವಹಿವಾಟು ನಡೆಯುತ್ತದೆ. ಆದರೆ ಅವರಲ್ಲಿ ಅಸ್ಥಿರತೆಯ ಭಯ ಉಂಟಾದರೆ ಮಾರುಕಟ್ಟೆಯಲ್ಲಿ ಏರುಪೇರು ಸಂಭವಿಸುತ್ತದೆ.

ಜಿಡಿಪಿ ಮೋದಿ ಆಳ್ವಿಕೆ ಆರಂಭವಾಗುವುದಕ್ಕೆ ಮೊದಲು 8 ಇದ್ದದ್ದು ಬರುಬರುತ್ತಾ 7.6, 6.6, 5.8, 5ಕ್ಕೆ ಇಳಿದು ಅದು ಈಗ 4.5ಕ್ಕೆ ಬಂದು ನಿಂತಿದೆ. ಇದರಿಂದ ಆಡಳಿತ ನಡೆಸುವವರಿಗೆ ತಲೆನೋವಾಗಿದೆ. ಆದರೆ ಅದನ್ನು ಅವರು ಪ್ರಕಟಪಡಿಸುವುದಿಲ್ಲ. ಮೋದಿಯವರ ತೀರ್ಮಾನವೇ ಅಂತ್ಯ ಎಂಬ ವಾತಾವರಣ ಸೃಷ್ಟಿಯಾಗಿದೆ. ಅದನ್ನು ಜಾರಿಗೆ ತರುವುದಷ್ಟೇ ಅರ್ಥಸಚಿವರ ಕೆಲಸ ಎಂಬುದು ಸತ್ಯ. ಈ ಪರಿಸ್ಥಿತಿಯಲ್ಲಿ ಆರ್ಥಿಕ ತಜ್ಞರಿಗೂ, ಸರ್ಕಾರಕ್ಕೂ ಘರ್ಷಣೆಗಳಾಗುತ್ತಿರುವುದು ನಮ್ಮ ನಿತ್ಯದ ನಿರಂತರ ಅನುಭವ.

ಕೃಷಿ ಬೆಳವಣಿಗೆ ದರ ಮೋದಿ ಅಧಿಕಾರಕ್ಕೆ ಬಂದಾಗ 6.3 ಇತ್ತು. 2017ರಲ್ಲಿ 5ಕ್ಕೆ 2018ರಲ್ಲಿ 2.9ಕ್ಕೆ ಇಳಿದ ಅದು 2019ರಲ್ಲಿ 2.1ಕ್ಕೆ ಬಂದು ನಿಂತಿದೆ. ಕೈಗಾರಿಕಾ ಬೆಳವಣಿಗೆ ಶೇ.4.6 ಇದ್ದದ್ದು ಈಗ 2.4ಕ್ಕೆ ಇಳಿದಿದೆ. ಮೋದಿ ಅಧಿಕಾರಕ್ಕೆ ಬಂದ ಮೇಲೆ ಯಾವ ವರ್ಷವೂ ಅದು ಮೇಲಕ್ಕೇರಿದ್ದಿಲ್ಲ. ಇಳಿಮುಖವಾಗುತ್ತಲೇ ಇದೆ. ಬೃಹತ್ ಕೈಗಾರಿಕೆಗಳು ಮೋದಿ ಅಧಿಕಾರಕ್ಕೆ ಬರುವ ಮುನ್ನ 4.8 ಇದ್ದದ್ದು 0.2ಕ್ಕೆ ಇಳಿದಿದ್ದರೆ ಅದೇ ಸಣ್ಣ ಕೈಗಾರಿಕೆಗಳು 0.9 ಇದ್ದದ್ದು ಈಗ 2.7 ಆಗಿದೆ. ಹೀಗಾಗಿ ಇದು ಮುನ್ನಡೆ ಸಾಧಿಸಿದೆ.

ನಿರುದ್ಯೋಗದ ಸಮಸ್ಯೆ ಉಲ್ಬಣಗೊಂಡಿದೆ. ಗೃಹಬಳಕೆಯ ಸಾಮಗ್ರಿಗಳ ಮಾರಾಟವೂ ಇಳಿಮುಖವಾಗಿದೆ. ರೈತರು ಬೆಳೆದ ಬೆಳೆಗೆ ತಕ್ಕ ಬೆಲೆ ಸಿಗುತ್ತಿಲ್ಲ.

ಈರುಳ್ಳಿ ವಿಚಾರವನ್ನೇ ತೆಗೆದುಕೊಳ್ಳೋಣ. ರೈತರು ಈರುಳ್ಳಿ ಹೆಚ್ಚಾಗಿ ಬೆಳೆದರು. ವರ್ತಕರು ಅದನ್ನು ಅಗ್ಗವಾಗಿ ಕೊಂಡು ದಾಸ್ತಾನು ಮಾಡಿಕೊಂಡರು. ಈರುಳ್ಳಿ ಮಾರುಕಟ್ಟೆಯಲ್ಲಿ ತುಂಬಾ ಇದೆ. ಇದನ್ನು ರಫ್ತು ಮಾಡದಿದ್ದರೆ ರೈತರು, ವರ್ತಕರು ನಾಶವಾಗಿ ಬಿಡುತ್ತಾರೆ. ಈರುಳ್ಳಿ ಕೊಳೆತುಹೋಗುತ್ತದೆ ಕೂಡಲೇ ಅನುಮತಿಕೊಡಿ ಎಂದು ರಫ್ತುದಾರರು ಬೊಬ್ಬೆ ಹಾಕುತ್ತಾರೆ. ಅಧಿಕಾರಿಗಳಿಗೆ, ಮಂತ್ರಿಗೆ, ಶಾಸಕರಿಗೆ ಕಾಂಚಾಣ ಕೊಟ್ಟು ಸರಿಮಾಡಿಕೊಳ್ಳುತ್ತಾರೆ. ರೈತರಿಗೆ ನಾಮಹಾಕಿ ಈ ವರ್ತಕರು ಲಕ್ಷಾಂತರ ಸಂಪಾದಿಸುತ್ತಾರೆ.

ಈಗ ಈರುಳ್ಳಿ ಭಾರತದ ಮಾರುಕಟ್ಟೆಯಲ್ಲಿ ಇಲ್ಲವೇ ಇಲ್ಲ. ರಫ್ತುಮಾಡಿ ಮಿಕ್ಕ ಈರುಳ್ಳಿಯನ್ನು ಅವರು ಸ್ವಲ್ಪ ಸ್ವಲ್ಪವೇ ಮಾರುಕಟ್ಟೆಗೆ ಬಿಡುತ್ತಾರೆ. ಬೆಲೆ ಕೆಜಿಗೆ 100-200 ಆಯಿತು. ಅದರಿಂದ ಮಧ್ಯವರ್ತಿ ವರ್ತಕರಿಗೆ ಲಾಭ.

ಇದೊಂದು ವಿಷವ್ಯೂಹ. ಈ ಬೆಲೆ ಏರಿಕೆಯನ್ನು ತಡೆಗಟ್ಟುವ ಯೋಗ್ಯತೆ ಸರ್ಕಾರಕ್ಕಿಲ್ಲ. ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ. ಬಡವರಿಗೆ ತಿಂಗಳಲ್ಲಿ 15 ದಿನ ಕೂಲಿ ಕೆಲಸ ಸಿಗುವುದೇ ದುರ್ಲಭವಾಗಿದೆ.

ತರಕಾರಿ, ದಿನಸಿ ಬೆಲೆಗಳು ಗಗನಕ್ಕೇರುತ್ತಿವೆ. ಅದನ್ನು ನಿಯಂತ್ರಣ ಮಾಡುವ ಇಚ್ಛಾಶಕ್ತಿ ಸರ್ಕಾರಕ್ಕಿಲ್ಲ. ಸಗಟುಬೆಲೆ ಹಣದುಬ್ಬರ ಶೇ.1.92ರಷ್ಟು ಹೆಚ್ಚಿದೆ. ಈ ಎಲ್ಲಾ ಸಮಸ್ಯೆಗಳು ತಾನೇ ತಾನಾಗಿ ಸರಿಹೋಗುತ್ತದೆ ಎಂದು ಸರ್ಕಾರ ಭಾವಿಸಿದಂತಿದೆ. ಆರ್ಥಿಕ ಸಚಿವರು ಸಮಸ್ಯೆಯನ್ನು ಅವರ ಮುಂದಿಟ್ಟಾಗ ವಿತಂಡವಾದ ಮಾಡುತ್ತಾರೆ. ಮೋದಿ ಮೌನತಳೆಯುತ್ತಾರೆ.

500, 1000 ರೂಗಳ ನೋಟುರದ್ದತಿ, ದೋಷಪೂರಿತ ಜಿಎಸ್‌ಟಿ, ಹೆಚ್ಚುತ್ತಿರುವ ನಿಯಂತ್ರಣ, ಪ್ರಧಾನಿ ಕಚೇರಿಯ ಅಧಿಕಾರದ ಕೇಂದ್ರೀಕರಣ ವ್ಯವಸ್ಥೆ ಇವುಗಳಿಂದ ಉಂಟಾಗಿರುವ ಗಂಡಾಂತರದ ಬಗೆಗೆ ಆರ್ಥಿಕ ತಜ್ಞರು ಎಚ್ಚರಿಕೆಯ ಮಾತನ್ನಾಡಿದರೆ ಅದನ್ನು ನಿರ್ಲಕ್ಷಿಸುವ ಮನೋಭಾವ ಸರ್ಕಾರದ್ದು. ಇಂದಿನ ಜ್ವಲಂತ ಸಮಸ್ಯೆಗಳು ದೇಶದ ಆರ್ಥಿಕ ಪರಿಸ್ಥಿತಿ ದಿನೇ ದಿನೇ ಹದಗೆಡುತ್ತಿದೆ ಎಂಬುದನ್ನು ಮೋದಿಯವರೂ, ಅರ್ಥಸಚಿವರು ಒಪ್ಪಿಕೊಳ್ಳುತ್ತಾರೆ. ಆದರೆ ಅವರು ಹೇಳುವುದು ಇಂದಿನ ಪರಿಸ್ಥಿತಿ ಹೀಗೆಯೇ ಮುಂದುವರೆಯುವುದಿಲ್ಲ. ವಿಶ್ವದ ಎಲ್ಲೆಡೆ ಈ ಸಮಸ್ಯೆ ಇದೆ. ಅಲ್ಲೆಲ್ಲ ಸರಿಹೋದರೆ ಇಲ್ಲಿಯೂ ಸರಿ ಹೋಗುತ್ತದೆ. ಅಚ್ಛೇದಿನ್ ಬಂದೇ ಬರುತ್ತದೆ ಎನ್ನುವುದು ಅವರ ವಾದ.

ಆರ್ಥಿಕ ತಜ್ಞರು, ಪ್ರಧಾನಿಗಳ ಆರ್ಥಿಕ ಸಲಹೆಗಾರರು ರಾಜೀನಾಮೆ ಕೊಟ್ಟುಹೋದರು. ಅವರು ನಿರ್ಗಮಿಸುವ ಮುನ್ನ ಹೇಳಿದ ಮಾತು: ಈ ದೇಶದ ಆರ್ಥಿಕ ಪರಿಸ್ಥಿತಿಯ ಸುಧಾರಣೆಯ ಕೆಲಸ ಸರ್ಜನ್ ಇಲ್ಲದೇ ಶಸ್ತ್ರಚಿಕಿತ್ಸೆ ಮಾಡಲು ಹೊರಟಂತಿದೆ. ಮುಗ್ಗಟ್ಟಿನಿಂದ ಬಳಲಿರುವ ಆರ್ಥಿಕ ವ್ಯವಸ್ಥೆಯು ಅಸಮರ್ಥರ ಹಿಡಿತದಲ್ಲಿ ನರಳುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...