Homeಎಕಾನಮಿಅಸಮರ್ಥರ ಕೈಯ್ಯಲ್ಲಿ ಭಾರತದ ಆರ್ಥಿಕ ವ್ಯವಸ್ಥೆ : ಎಚ್‌.ಎಸ್‌ ದೊರೆಸ್ವಾಮಿ

ಅಸಮರ್ಥರ ಕೈಯ್ಯಲ್ಲಿ ಭಾರತದ ಆರ್ಥಿಕ ವ್ಯವಸ್ಥೆ : ಎಚ್‌.ಎಸ್‌ ದೊರೆಸ್ವಾಮಿ

- Advertisement -
- Advertisement -

ಅಸಮರ್ಥರ ಕೈಯಲ್ಲಿರುವ ಭಾರತದ ಆರ್ಥಿಕತೆ ಚಿಂತಾಜನಕ ಸ್ಥಿತಿಯಲ್ಲಿದೆ ಎಂದು ಮಾಜಿ ವಿತ್ತಮಂತ್ರಿ ಪಿ.ಚಿದಂಬರಂ ಕಾತರ ವ್ಯಕ್ತಪಡಿಸಿದ್ದಾರೆ. ವಿತ್ತಮಂತ್ರಿ ನಿರ್ಮಲಾ ಸೀತಾರಾಮನ್ ಜೆಎನ್‌ಯುನಲ್ಲಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದವರು. ಆದರೆ ಆರ್ಥಿಕ ತೀರ್ಮಾನಗಳನ್ನು ತೆಗೆದುಕೊಳ್ಳುವವರು ಪ್ರಧಾನಿ ಮೋದಿ. ಭಾರತದ ಇಂದಿನ ಆರ್ಥಿಕತೆಯನ್ನು ನಿಭಾಯಿಸುವ ಸಾಮರ್ಥ್ಯ ವಿತ್ತಮಂತ್ರಿಗಿದ್ದರೂ, ಅವರನ್ನು ಕಡೆಗಣಿಸಿ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುತ್ತಿದೆ. ದೇಶದ ಆರ್ಥಿಕ ಬೆಳವಣಿಗೆ ಕುಂಟುತ್ತಾ ಸಾಗಿದೆ. ಯಾವಾಗ ಬೇಕಾದರೂ ಅದು ಮತ್ತಷ್ಟು ಬಿಗಡಾಯಿಸಬಹುದು ಎನ್ನುತ್ತಾರೆ ಪಿ.ಚಿದಂಬರಂ.

ಮಾರುಕಟ್ಟೆಗೆ ಸೇರುವ ಜನ ಒಬ್ಬರಿಗೊಬ್ಬರು ಪರಿಚಯಸ್ತರೇನಲ್ಲ. ನಂಬಿಕೆಯ ಮೇಲೆ ಅಲ್ಲಿಯ ವಹಿವಾಟು ನಡೆಯುತ್ತದೆ. ಆದರೆ ಅವರಲ್ಲಿ ಅಸ್ಥಿರತೆಯ ಭಯ ಉಂಟಾದರೆ ಮಾರುಕಟ್ಟೆಯಲ್ಲಿ ಏರುಪೇರು ಸಂಭವಿಸುತ್ತದೆ.

ಜಿಡಿಪಿ ಮೋದಿ ಆಳ್ವಿಕೆ ಆರಂಭವಾಗುವುದಕ್ಕೆ ಮೊದಲು 8 ಇದ್ದದ್ದು ಬರುಬರುತ್ತಾ 7.6, 6.6, 5.8, 5ಕ್ಕೆ ಇಳಿದು ಅದು ಈಗ 4.5ಕ್ಕೆ ಬಂದು ನಿಂತಿದೆ. ಇದರಿಂದ ಆಡಳಿತ ನಡೆಸುವವರಿಗೆ ತಲೆನೋವಾಗಿದೆ. ಆದರೆ ಅದನ್ನು ಅವರು ಪ್ರಕಟಪಡಿಸುವುದಿಲ್ಲ. ಮೋದಿಯವರ ತೀರ್ಮಾನವೇ ಅಂತ್ಯ ಎಂಬ ವಾತಾವರಣ ಸೃಷ್ಟಿಯಾಗಿದೆ. ಅದನ್ನು ಜಾರಿಗೆ ತರುವುದಷ್ಟೇ ಅರ್ಥಸಚಿವರ ಕೆಲಸ ಎಂಬುದು ಸತ್ಯ. ಈ ಪರಿಸ್ಥಿತಿಯಲ್ಲಿ ಆರ್ಥಿಕ ತಜ್ಞರಿಗೂ, ಸರ್ಕಾರಕ್ಕೂ ಘರ್ಷಣೆಗಳಾಗುತ್ತಿರುವುದು ನಮ್ಮ ನಿತ್ಯದ ನಿರಂತರ ಅನುಭವ.

ಕೃಷಿ ಬೆಳವಣಿಗೆ ದರ ಮೋದಿ ಅಧಿಕಾರಕ್ಕೆ ಬಂದಾಗ 6.3 ಇತ್ತು. 2017ರಲ್ಲಿ 5ಕ್ಕೆ 2018ರಲ್ಲಿ 2.9ಕ್ಕೆ ಇಳಿದ ಅದು 2019ರಲ್ಲಿ 2.1ಕ್ಕೆ ಬಂದು ನಿಂತಿದೆ. ಕೈಗಾರಿಕಾ ಬೆಳವಣಿಗೆ ಶೇ.4.6 ಇದ್ದದ್ದು ಈಗ 2.4ಕ್ಕೆ ಇಳಿದಿದೆ. ಮೋದಿ ಅಧಿಕಾರಕ್ಕೆ ಬಂದ ಮೇಲೆ ಯಾವ ವರ್ಷವೂ ಅದು ಮೇಲಕ್ಕೇರಿದ್ದಿಲ್ಲ. ಇಳಿಮುಖವಾಗುತ್ತಲೇ ಇದೆ. ಬೃಹತ್ ಕೈಗಾರಿಕೆಗಳು ಮೋದಿ ಅಧಿಕಾರಕ್ಕೆ ಬರುವ ಮುನ್ನ 4.8 ಇದ್ದದ್ದು 0.2ಕ್ಕೆ ಇಳಿದಿದ್ದರೆ ಅದೇ ಸಣ್ಣ ಕೈಗಾರಿಕೆಗಳು 0.9 ಇದ್ದದ್ದು ಈಗ 2.7 ಆಗಿದೆ. ಹೀಗಾಗಿ ಇದು ಮುನ್ನಡೆ ಸಾಧಿಸಿದೆ.

ನಿರುದ್ಯೋಗದ ಸಮಸ್ಯೆ ಉಲ್ಬಣಗೊಂಡಿದೆ. ಗೃಹಬಳಕೆಯ ಸಾಮಗ್ರಿಗಳ ಮಾರಾಟವೂ ಇಳಿಮುಖವಾಗಿದೆ. ರೈತರು ಬೆಳೆದ ಬೆಳೆಗೆ ತಕ್ಕ ಬೆಲೆ ಸಿಗುತ್ತಿಲ್ಲ.

ಈರುಳ್ಳಿ ವಿಚಾರವನ್ನೇ ತೆಗೆದುಕೊಳ್ಳೋಣ. ರೈತರು ಈರುಳ್ಳಿ ಹೆಚ್ಚಾಗಿ ಬೆಳೆದರು. ವರ್ತಕರು ಅದನ್ನು ಅಗ್ಗವಾಗಿ ಕೊಂಡು ದಾಸ್ತಾನು ಮಾಡಿಕೊಂಡರು. ಈರುಳ್ಳಿ ಮಾರುಕಟ್ಟೆಯಲ್ಲಿ ತುಂಬಾ ಇದೆ. ಇದನ್ನು ರಫ್ತು ಮಾಡದಿದ್ದರೆ ರೈತರು, ವರ್ತಕರು ನಾಶವಾಗಿ ಬಿಡುತ್ತಾರೆ. ಈರುಳ್ಳಿ ಕೊಳೆತುಹೋಗುತ್ತದೆ ಕೂಡಲೇ ಅನುಮತಿಕೊಡಿ ಎಂದು ರಫ್ತುದಾರರು ಬೊಬ್ಬೆ ಹಾಕುತ್ತಾರೆ. ಅಧಿಕಾರಿಗಳಿಗೆ, ಮಂತ್ರಿಗೆ, ಶಾಸಕರಿಗೆ ಕಾಂಚಾಣ ಕೊಟ್ಟು ಸರಿಮಾಡಿಕೊಳ್ಳುತ್ತಾರೆ. ರೈತರಿಗೆ ನಾಮಹಾಕಿ ಈ ವರ್ತಕರು ಲಕ್ಷಾಂತರ ಸಂಪಾದಿಸುತ್ತಾರೆ.

ಈಗ ಈರುಳ್ಳಿ ಭಾರತದ ಮಾರುಕಟ್ಟೆಯಲ್ಲಿ ಇಲ್ಲವೇ ಇಲ್ಲ. ರಫ್ತುಮಾಡಿ ಮಿಕ್ಕ ಈರುಳ್ಳಿಯನ್ನು ಅವರು ಸ್ವಲ್ಪ ಸ್ವಲ್ಪವೇ ಮಾರುಕಟ್ಟೆಗೆ ಬಿಡುತ್ತಾರೆ. ಬೆಲೆ ಕೆಜಿಗೆ 100-200 ಆಯಿತು. ಅದರಿಂದ ಮಧ್ಯವರ್ತಿ ವರ್ತಕರಿಗೆ ಲಾಭ.

ಇದೊಂದು ವಿಷವ್ಯೂಹ. ಈ ಬೆಲೆ ಏರಿಕೆಯನ್ನು ತಡೆಗಟ್ಟುವ ಯೋಗ್ಯತೆ ಸರ್ಕಾರಕ್ಕಿಲ್ಲ. ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ. ಬಡವರಿಗೆ ತಿಂಗಳಲ್ಲಿ 15 ದಿನ ಕೂಲಿ ಕೆಲಸ ಸಿಗುವುದೇ ದುರ್ಲಭವಾಗಿದೆ.

ತರಕಾರಿ, ದಿನಸಿ ಬೆಲೆಗಳು ಗಗನಕ್ಕೇರುತ್ತಿವೆ. ಅದನ್ನು ನಿಯಂತ್ರಣ ಮಾಡುವ ಇಚ್ಛಾಶಕ್ತಿ ಸರ್ಕಾರಕ್ಕಿಲ್ಲ. ಸಗಟುಬೆಲೆ ಹಣದುಬ್ಬರ ಶೇ.1.92ರಷ್ಟು ಹೆಚ್ಚಿದೆ. ಈ ಎಲ್ಲಾ ಸಮಸ್ಯೆಗಳು ತಾನೇ ತಾನಾಗಿ ಸರಿಹೋಗುತ್ತದೆ ಎಂದು ಸರ್ಕಾರ ಭಾವಿಸಿದಂತಿದೆ. ಆರ್ಥಿಕ ಸಚಿವರು ಸಮಸ್ಯೆಯನ್ನು ಅವರ ಮುಂದಿಟ್ಟಾಗ ವಿತಂಡವಾದ ಮಾಡುತ್ತಾರೆ. ಮೋದಿ ಮೌನತಳೆಯುತ್ತಾರೆ.

500, 1000 ರೂಗಳ ನೋಟುರದ್ದತಿ, ದೋಷಪೂರಿತ ಜಿಎಸ್‌ಟಿ, ಹೆಚ್ಚುತ್ತಿರುವ ನಿಯಂತ್ರಣ, ಪ್ರಧಾನಿ ಕಚೇರಿಯ ಅಧಿಕಾರದ ಕೇಂದ್ರೀಕರಣ ವ್ಯವಸ್ಥೆ ಇವುಗಳಿಂದ ಉಂಟಾಗಿರುವ ಗಂಡಾಂತರದ ಬಗೆಗೆ ಆರ್ಥಿಕ ತಜ್ಞರು ಎಚ್ಚರಿಕೆಯ ಮಾತನ್ನಾಡಿದರೆ ಅದನ್ನು ನಿರ್ಲಕ್ಷಿಸುವ ಮನೋಭಾವ ಸರ್ಕಾರದ್ದು. ಇಂದಿನ ಜ್ವಲಂತ ಸಮಸ್ಯೆಗಳು ದೇಶದ ಆರ್ಥಿಕ ಪರಿಸ್ಥಿತಿ ದಿನೇ ದಿನೇ ಹದಗೆಡುತ್ತಿದೆ ಎಂಬುದನ್ನು ಮೋದಿಯವರೂ, ಅರ್ಥಸಚಿವರು ಒಪ್ಪಿಕೊಳ್ಳುತ್ತಾರೆ. ಆದರೆ ಅವರು ಹೇಳುವುದು ಇಂದಿನ ಪರಿಸ್ಥಿತಿ ಹೀಗೆಯೇ ಮುಂದುವರೆಯುವುದಿಲ್ಲ. ವಿಶ್ವದ ಎಲ್ಲೆಡೆ ಈ ಸಮಸ್ಯೆ ಇದೆ. ಅಲ್ಲೆಲ್ಲ ಸರಿಹೋದರೆ ಇಲ್ಲಿಯೂ ಸರಿ ಹೋಗುತ್ತದೆ. ಅಚ್ಛೇದಿನ್ ಬಂದೇ ಬರುತ್ತದೆ ಎನ್ನುವುದು ಅವರ ವಾದ.

ಆರ್ಥಿಕ ತಜ್ಞರು, ಪ್ರಧಾನಿಗಳ ಆರ್ಥಿಕ ಸಲಹೆಗಾರರು ರಾಜೀನಾಮೆ ಕೊಟ್ಟುಹೋದರು. ಅವರು ನಿರ್ಗಮಿಸುವ ಮುನ್ನ ಹೇಳಿದ ಮಾತು: ಈ ದೇಶದ ಆರ್ಥಿಕ ಪರಿಸ್ಥಿತಿಯ ಸುಧಾರಣೆಯ ಕೆಲಸ ಸರ್ಜನ್ ಇಲ್ಲದೇ ಶಸ್ತ್ರಚಿಕಿತ್ಸೆ ಮಾಡಲು ಹೊರಟಂತಿದೆ. ಮುಗ್ಗಟ್ಟಿನಿಂದ ಬಳಲಿರುವ ಆರ್ಥಿಕ ವ್ಯವಸ್ಥೆಯು ಅಸಮರ್ಥರ ಹಿಡಿತದಲ್ಲಿ ನರಳುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...