Homeಎಕಾನಮಿಅಸಮರ್ಥರ ಕೈಯ್ಯಲ್ಲಿ ಭಾರತದ ಆರ್ಥಿಕ ವ್ಯವಸ್ಥೆ : ಎಚ್‌.ಎಸ್‌ ದೊರೆಸ್ವಾಮಿ

ಅಸಮರ್ಥರ ಕೈಯ್ಯಲ್ಲಿ ಭಾರತದ ಆರ್ಥಿಕ ವ್ಯವಸ್ಥೆ : ಎಚ್‌.ಎಸ್‌ ದೊರೆಸ್ವಾಮಿ

- Advertisement -
- Advertisement -

ಅಸಮರ್ಥರ ಕೈಯಲ್ಲಿರುವ ಭಾರತದ ಆರ್ಥಿಕತೆ ಚಿಂತಾಜನಕ ಸ್ಥಿತಿಯಲ್ಲಿದೆ ಎಂದು ಮಾಜಿ ವಿತ್ತಮಂತ್ರಿ ಪಿ.ಚಿದಂಬರಂ ಕಾತರ ವ್ಯಕ್ತಪಡಿಸಿದ್ದಾರೆ. ವಿತ್ತಮಂತ್ರಿ ನಿರ್ಮಲಾ ಸೀತಾರಾಮನ್ ಜೆಎನ್‌ಯುನಲ್ಲಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದವರು. ಆದರೆ ಆರ್ಥಿಕ ತೀರ್ಮಾನಗಳನ್ನು ತೆಗೆದುಕೊಳ್ಳುವವರು ಪ್ರಧಾನಿ ಮೋದಿ. ಭಾರತದ ಇಂದಿನ ಆರ್ಥಿಕತೆಯನ್ನು ನಿಭಾಯಿಸುವ ಸಾಮರ್ಥ್ಯ ವಿತ್ತಮಂತ್ರಿಗಿದ್ದರೂ, ಅವರನ್ನು ಕಡೆಗಣಿಸಿ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುತ್ತಿದೆ. ದೇಶದ ಆರ್ಥಿಕ ಬೆಳವಣಿಗೆ ಕುಂಟುತ್ತಾ ಸಾಗಿದೆ. ಯಾವಾಗ ಬೇಕಾದರೂ ಅದು ಮತ್ತಷ್ಟು ಬಿಗಡಾಯಿಸಬಹುದು ಎನ್ನುತ್ತಾರೆ ಪಿ.ಚಿದಂಬರಂ.

ಮಾರುಕಟ್ಟೆಗೆ ಸೇರುವ ಜನ ಒಬ್ಬರಿಗೊಬ್ಬರು ಪರಿಚಯಸ್ತರೇನಲ್ಲ. ನಂಬಿಕೆಯ ಮೇಲೆ ಅಲ್ಲಿಯ ವಹಿವಾಟು ನಡೆಯುತ್ತದೆ. ಆದರೆ ಅವರಲ್ಲಿ ಅಸ್ಥಿರತೆಯ ಭಯ ಉಂಟಾದರೆ ಮಾರುಕಟ್ಟೆಯಲ್ಲಿ ಏರುಪೇರು ಸಂಭವಿಸುತ್ತದೆ.

ಜಿಡಿಪಿ ಮೋದಿ ಆಳ್ವಿಕೆ ಆರಂಭವಾಗುವುದಕ್ಕೆ ಮೊದಲು 8 ಇದ್ದದ್ದು ಬರುಬರುತ್ತಾ 7.6, 6.6, 5.8, 5ಕ್ಕೆ ಇಳಿದು ಅದು ಈಗ 4.5ಕ್ಕೆ ಬಂದು ನಿಂತಿದೆ. ಇದರಿಂದ ಆಡಳಿತ ನಡೆಸುವವರಿಗೆ ತಲೆನೋವಾಗಿದೆ. ಆದರೆ ಅದನ್ನು ಅವರು ಪ್ರಕಟಪಡಿಸುವುದಿಲ್ಲ. ಮೋದಿಯವರ ತೀರ್ಮಾನವೇ ಅಂತ್ಯ ಎಂಬ ವಾತಾವರಣ ಸೃಷ್ಟಿಯಾಗಿದೆ. ಅದನ್ನು ಜಾರಿಗೆ ತರುವುದಷ್ಟೇ ಅರ್ಥಸಚಿವರ ಕೆಲಸ ಎಂಬುದು ಸತ್ಯ. ಈ ಪರಿಸ್ಥಿತಿಯಲ್ಲಿ ಆರ್ಥಿಕ ತಜ್ಞರಿಗೂ, ಸರ್ಕಾರಕ್ಕೂ ಘರ್ಷಣೆಗಳಾಗುತ್ತಿರುವುದು ನಮ್ಮ ನಿತ್ಯದ ನಿರಂತರ ಅನುಭವ.

ಕೃಷಿ ಬೆಳವಣಿಗೆ ದರ ಮೋದಿ ಅಧಿಕಾರಕ್ಕೆ ಬಂದಾಗ 6.3 ಇತ್ತು. 2017ರಲ್ಲಿ 5ಕ್ಕೆ 2018ರಲ್ಲಿ 2.9ಕ್ಕೆ ಇಳಿದ ಅದು 2019ರಲ್ಲಿ 2.1ಕ್ಕೆ ಬಂದು ನಿಂತಿದೆ. ಕೈಗಾರಿಕಾ ಬೆಳವಣಿಗೆ ಶೇ.4.6 ಇದ್ದದ್ದು ಈಗ 2.4ಕ್ಕೆ ಇಳಿದಿದೆ. ಮೋದಿ ಅಧಿಕಾರಕ್ಕೆ ಬಂದ ಮೇಲೆ ಯಾವ ವರ್ಷವೂ ಅದು ಮೇಲಕ್ಕೇರಿದ್ದಿಲ್ಲ. ಇಳಿಮುಖವಾಗುತ್ತಲೇ ಇದೆ. ಬೃಹತ್ ಕೈಗಾರಿಕೆಗಳು ಮೋದಿ ಅಧಿಕಾರಕ್ಕೆ ಬರುವ ಮುನ್ನ 4.8 ಇದ್ದದ್ದು 0.2ಕ್ಕೆ ಇಳಿದಿದ್ದರೆ ಅದೇ ಸಣ್ಣ ಕೈಗಾರಿಕೆಗಳು 0.9 ಇದ್ದದ್ದು ಈಗ 2.7 ಆಗಿದೆ. ಹೀಗಾಗಿ ಇದು ಮುನ್ನಡೆ ಸಾಧಿಸಿದೆ.

ನಿರುದ್ಯೋಗದ ಸಮಸ್ಯೆ ಉಲ್ಬಣಗೊಂಡಿದೆ. ಗೃಹಬಳಕೆಯ ಸಾಮಗ್ರಿಗಳ ಮಾರಾಟವೂ ಇಳಿಮುಖವಾಗಿದೆ. ರೈತರು ಬೆಳೆದ ಬೆಳೆಗೆ ತಕ್ಕ ಬೆಲೆ ಸಿಗುತ್ತಿಲ್ಲ.

ಈರುಳ್ಳಿ ವಿಚಾರವನ್ನೇ ತೆಗೆದುಕೊಳ್ಳೋಣ. ರೈತರು ಈರುಳ್ಳಿ ಹೆಚ್ಚಾಗಿ ಬೆಳೆದರು. ವರ್ತಕರು ಅದನ್ನು ಅಗ್ಗವಾಗಿ ಕೊಂಡು ದಾಸ್ತಾನು ಮಾಡಿಕೊಂಡರು. ಈರುಳ್ಳಿ ಮಾರುಕಟ್ಟೆಯಲ್ಲಿ ತುಂಬಾ ಇದೆ. ಇದನ್ನು ರಫ್ತು ಮಾಡದಿದ್ದರೆ ರೈತರು, ವರ್ತಕರು ನಾಶವಾಗಿ ಬಿಡುತ್ತಾರೆ. ಈರುಳ್ಳಿ ಕೊಳೆತುಹೋಗುತ್ತದೆ ಕೂಡಲೇ ಅನುಮತಿಕೊಡಿ ಎಂದು ರಫ್ತುದಾರರು ಬೊಬ್ಬೆ ಹಾಕುತ್ತಾರೆ. ಅಧಿಕಾರಿಗಳಿಗೆ, ಮಂತ್ರಿಗೆ, ಶಾಸಕರಿಗೆ ಕಾಂಚಾಣ ಕೊಟ್ಟು ಸರಿಮಾಡಿಕೊಳ್ಳುತ್ತಾರೆ. ರೈತರಿಗೆ ನಾಮಹಾಕಿ ಈ ವರ್ತಕರು ಲಕ್ಷಾಂತರ ಸಂಪಾದಿಸುತ್ತಾರೆ.

ಈಗ ಈರುಳ್ಳಿ ಭಾರತದ ಮಾರುಕಟ್ಟೆಯಲ್ಲಿ ಇಲ್ಲವೇ ಇಲ್ಲ. ರಫ್ತುಮಾಡಿ ಮಿಕ್ಕ ಈರುಳ್ಳಿಯನ್ನು ಅವರು ಸ್ವಲ್ಪ ಸ್ವಲ್ಪವೇ ಮಾರುಕಟ್ಟೆಗೆ ಬಿಡುತ್ತಾರೆ. ಬೆಲೆ ಕೆಜಿಗೆ 100-200 ಆಯಿತು. ಅದರಿಂದ ಮಧ್ಯವರ್ತಿ ವರ್ತಕರಿಗೆ ಲಾಭ.

ಇದೊಂದು ವಿಷವ್ಯೂಹ. ಈ ಬೆಲೆ ಏರಿಕೆಯನ್ನು ತಡೆಗಟ್ಟುವ ಯೋಗ್ಯತೆ ಸರ್ಕಾರಕ್ಕಿಲ್ಲ. ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ. ಬಡವರಿಗೆ ತಿಂಗಳಲ್ಲಿ 15 ದಿನ ಕೂಲಿ ಕೆಲಸ ಸಿಗುವುದೇ ದುರ್ಲಭವಾಗಿದೆ.

ತರಕಾರಿ, ದಿನಸಿ ಬೆಲೆಗಳು ಗಗನಕ್ಕೇರುತ್ತಿವೆ. ಅದನ್ನು ನಿಯಂತ್ರಣ ಮಾಡುವ ಇಚ್ಛಾಶಕ್ತಿ ಸರ್ಕಾರಕ್ಕಿಲ್ಲ. ಸಗಟುಬೆಲೆ ಹಣದುಬ್ಬರ ಶೇ.1.92ರಷ್ಟು ಹೆಚ್ಚಿದೆ. ಈ ಎಲ್ಲಾ ಸಮಸ್ಯೆಗಳು ತಾನೇ ತಾನಾಗಿ ಸರಿಹೋಗುತ್ತದೆ ಎಂದು ಸರ್ಕಾರ ಭಾವಿಸಿದಂತಿದೆ. ಆರ್ಥಿಕ ಸಚಿವರು ಸಮಸ್ಯೆಯನ್ನು ಅವರ ಮುಂದಿಟ್ಟಾಗ ವಿತಂಡವಾದ ಮಾಡುತ್ತಾರೆ. ಮೋದಿ ಮೌನತಳೆಯುತ್ತಾರೆ.

500, 1000 ರೂಗಳ ನೋಟುರದ್ದತಿ, ದೋಷಪೂರಿತ ಜಿಎಸ್‌ಟಿ, ಹೆಚ್ಚುತ್ತಿರುವ ನಿಯಂತ್ರಣ, ಪ್ರಧಾನಿ ಕಚೇರಿಯ ಅಧಿಕಾರದ ಕೇಂದ್ರೀಕರಣ ವ್ಯವಸ್ಥೆ ಇವುಗಳಿಂದ ಉಂಟಾಗಿರುವ ಗಂಡಾಂತರದ ಬಗೆಗೆ ಆರ್ಥಿಕ ತಜ್ಞರು ಎಚ್ಚರಿಕೆಯ ಮಾತನ್ನಾಡಿದರೆ ಅದನ್ನು ನಿರ್ಲಕ್ಷಿಸುವ ಮನೋಭಾವ ಸರ್ಕಾರದ್ದು. ಇಂದಿನ ಜ್ವಲಂತ ಸಮಸ್ಯೆಗಳು ದೇಶದ ಆರ್ಥಿಕ ಪರಿಸ್ಥಿತಿ ದಿನೇ ದಿನೇ ಹದಗೆಡುತ್ತಿದೆ ಎಂಬುದನ್ನು ಮೋದಿಯವರೂ, ಅರ್ಥಸಚಿವರು ಒಪ್ಪಿಕೊಳ್ಳುತ್ತಾರೆ. ಆದರೆ ಅವರು ಹೇಳುವುದು ಇಂದಿನ ಪರಿಸ್ಥಿತಿ ಹೀಗೆಯೇ ಮುಂದುವರೆಯುವುದಿಲ್ಲ. ವಿಶ್ವದ ಎಲ್ಲೆಡೆ ಈ ಸಮಸ್ಯೆ ಇದೆ. ಅಲ್ಲೆಲ್ಲ ಸರಿಹೋದರೆ ಇಲ್ಲಿಯೂ ಸರಿ ಹೋಗುತ್ತದೆ. ಅಚ್ಛೇದಿನ್ ಬಂದೇ ಬರುತ್ತದೆ ಎನ್ನುವುದು ಅವರ ವಾದ.

ಆರ್ಥಿಕ ತಜ್ಞರು, ಪ್ರಧಾನಿಗಳ ಆರ್ಥಿಕ ಸಲಹೆಗಾರರು ರಾಜೀನಾಮೆ ಕೊಟ್ಟುಹೋದರು. ಅವರು ನಿರ್ಗಮಿಸುವ ಮುನ್ನ ಹೇಳಿದ ಮಾತು: ಈ ದೇಶದ ಆರ್ಥಿಕ ಪರಿಸ್ಥಿತಿಯ ಸುಧಾರಣೆಯ ಕೆಲಸ ಸರ್ಜನ್ ಇಲ್ಲದೇ ಶಸ್ತ್ರಚಿಕಿತ್ಸೆ ಮಾಡಲು ಹೊರಟಂತಿದೆ. ಮುಗ್ಗಟ್ಟಿನಿಂದ ಬಳಲಿರುವ ಆರ್ಥಿಕ ವ್ಯವಸ್ಥೆಯು ಅಸಮರ್ಥರ ಹಿಡಿತದಲ್ಲಿ ನರಳುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...