Homeಎಕಾನಮಿಅಸಮರ್ಥರ ಕೈಯ್ಯಲ್ಲಿ ಭಾರತದ ಆರ್ಥಿಕ ವ್ಯವಸ್ಥೆ : ಎಚ್‌.ಎಸ್‌ ದೊರೆಸ್ವಾಮಿ

ಅಸಮರ್ಥರ ಕೈಯ್ಯಲ್ಲಿ ಭಾರತದ ಆರ್ಥಿಕ ವ್ಯವಸ್ಥೆ : ಎಚ್‌.ಎಸ್‌ ದೊರೆಸ್ವಾಮಿ

- Advertisement -
- Advertisement -

ಅಸಮರ್ಥರ ಕೈಯಲ್ಲಿರುವ ಭಾರತದ ಆರ್ಥಿಕತೆ ಚಿಂತಾಜನಕ ಸ್ಥಿತಿಯಲ್ಲಿದೆ ಎಂದು ಮಾಜಿ ವಿತ್ತಮಂತ್ರಿ ಪಿ.ಚಿದಂಬರಂ ಕಾತರ ವ್ಯಕ್ತಪಡಿಸಿದ್ದಾರೆ. ವಿತ್ತಮಂತ್ರಿ ನಿರ್ಮಲಾ ಸೀತಾರಾಮನ್ ಜೆಎನ್‌ಯುನಲ್ಲಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದವರು. ಆದರೆ ಆರ್ಥಿಕ ತೀರ್ಮಾನಗಳನ್ನು ತೆಗೆದುಕೊಳ್ಳುವವರು ಪ್ರಧಾನಿ ಮೋದಿ. ಭಾರತದ ಇಂದಿನ ಆರ್ಥಿಕತೆಯನ್ನು ನಿಭಾಯಿಸುವ ಸಾಮರ್ಥ್ಯ ವಿತ್ತಮಂತ್ರಿಗಿದ್ದರೂ, ಅವರನ್ನು ಕಡೆಗಣಿಸಿ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುತ್ತಿದೆ. ದೇಶದ ಆರ್ಥಿಕ ಬೆಳವಣಿಗೆ ಕುಂಟುತ್ತಾ ಸಾಗಿದೆ. ಯಾವಾಗ ಬೇಕಾದರೂ ಅದು ಮತ್ತಷ್ಟು ಬಿಗಡಾಯಿಸಬಹುದು ಎನ್ನುತ್ತಾರೆ ಪಿ.ಚಿದಂಬರಂ.

ಮಾರುಕಟ್ಟೆಗೆ ಸೇರುವ ಜನ ಒಬ್ಬರಿಗೊಬ್ಬರು ಪರಿಚಯಸ್ತರೇನಲ್ಲ. ನಂಬಿಕೆಯ ಮೇಲೆ ಅಲ್ಲಿಯ ವಹಿವಾಟು ನಡೆಯುತ್ತದೆ. ಆದರೆ ಅವರಲ್ಲಿ ಅಸ್ಥಿರತೆಯ ಭಯ ಉಂಟಾದರೆ ಮಾರುಕಟ್ಟೆಯಲ್ಲಿ ಏರುಪೇರು ಸಂಭವಿಸುತ್ತದೆ.

ಜಿಡಿಪಿ ಮೋದಿ ಆಳ್ವಿಕೆ ಆರಂಭವಾಗುವುದಕ್ಕೆ ಮೊದಲು 8 ಇದ್ದದ್ದು ಬರುಬರುತ್ತಾ 7.6, 6.6, 5.8, 5ಕ್ಕೆ ಇಳಿದು ಅದು ಈಗ 4.5ಕ್ಕೆ ಬಂದು ನಿಂತಿದೆ. ಇದರಿಂದ ಆಡಳಿತ ನಡೆಸುವವರಿಗೆ ತಲೆನೋವಾಗಿದೆ. ಆದರೆ ಅದನ್ನು ಅವರು ಪ್ರಕಟಪಡಿಸುವುದಿಲ್ಲ. ಮೋದಿಯವರ ತೀರ್ಮಾನವೇ ಅಂತ್ಯ ಎಂಬ ವಾತಾವರಣ ಸೃಷ್ಟಿಯಾಗಿದೆ. ಅದನ್ನು ಜಾರಿಗೆ ತರುವುದಷ್ಟೇ ಅರ್ಥಸಚಿವರ ಕೆಲಸ ಎಂಬುದು ಸತ್ಯ. ಈ ಪರಿಸ್ಥಿತಿಯಲ್ಲಿ ಆರ್ಥಿಕ ತಜ್ಞರಿಗೂ, ಸರ್ಕಾರಕ್ಕೂ ಘರ್ಷಣೆಗಳಾಗುತ್ತಿರುವುದು ನಮ್ಮ ನಿತ್ಯದ ನಿರಂತರ ಅನುಭವ.

ಕೃಷಿ ಬೆಳವಣಿಗೆ ದರ ಮೋದಿ ಅಧಿಕಾರಕ್ಕೆ ಬಂದಾಗ 6.3 ಇತ್ತು. 2017ರಲ್ಲಿ 5ಕ್ಕೆ 2018ರಲ್ಲಿ 2.9ಕ್ಕೆ ಇಳಿದ ಅದು 2019ರಲ್ಲಿ 2.1ಕ್ಕೆ ಬಂದು ನಿಂತಿದೆ. ಕೈಗಾರಿಕಾ ಬೆಳವಣಿಗೆ ಶೇ.4.6 ಇದ್ದದ್ದು ಈಗ 2.4ಕ್ಕೆ ಇಳಿದಿದೆ. ಮೋದಿ ಅಧಿಕಾರಕ್ಕೆ ಬಂದ ಮೇಲೆ ಯಾವ ವರ್ಷವೂ ಅದು ಮೇಲಕ್ಕೇರಿದ್ದಿಲ್ಲ. ಇಳಿಮುಖವಾಗುತ್ತಲೇ ಇದೆ. ಬೃಹತ್ ಕೈಗಾರಿಕೆಗಳು ಮೋದಿ ಅಧಿಕಾರಕ್ಕೆ ಬರುವ ಮುನ್ನ 4.8 ಇದ್ದದ್ದು 0.2ಕ್ಕೆ ಇಳಿದಿದ್ದರೆ ಅದೇ ಸಣ್ಣ ಕೈಗಾರಿಕೆಗಳು 0.9 ಇದ್ದದ್ದು ಈಗ 2.7 ಆಗಿದೆ. ಹೀಗಾಗಿ ಇದು ಮುನ್ನಡೆ ಸಾಧಿಸಿದೆ.

ನಿರುದ್ಯೋಗದ ಸಮಸ್ಯೆ ಉಲ್ಬಣಗೊಂಡಿದೆ. ಗೃಹಬಳಕೆಯ ಸಾಮಗ್ರಿಗಳ ಮಾರಾಟವೂ ಇಳಿಮುಖವಾಗಿದೆ. ರೈತರು ಬೆಳೆದ ಬೆಳೆಗೆ ತಕ್ಕ ಬೆಲೆ ಸಿಗುತ್ತಿಲ್ಲ.

ಈರುಳ್ಳಿ ವಿಚಾರವನ್ನೇ ತೆಗೆದುಕೊಳ್ಳೋಣ. ರೈತರು ಈರುಳ್ಳಿ ಹೆಚ್ಚಾಗಿ ಬೆಳೆದರು. ವರ್ತಕರು ಅದನ್ನು ಅಗ್ಗವಾಗಿ ಕೊಂಡು ದಾಸ್ತಾನು ಮಾಡಿಕೊಂಡರು. ಈರುಳ್ಳಿ ಮಾರುಕಟ್ಟೆಯಲ್ಲಿ ತುಂಬಾ ಇದೆ. ಇದನ್ನು ರಫ್ತು ಮಾಡದಿದ್ದರೆ ರೈತರು, ವರ್ತಕರು ನಾಶವಾಗಿ ಬಿಡುತ್ತಾರೆ. ಈರುಳ್ಳಿ ಕೊಳೆತುಹೋಗುತ್ತದೆ ಕೂಡಲೇ ಅನುಮತಿಕೊಡಿ ಎಂದು ರಫ್ತುದಾರರು ಬೊಬ್ಬೆ ಹಾಕುತ್ತಾರೆ. ಅಧಿಕಾರಿಗಳಿಗೆ, ಮಂತ್ರಿಗೆ, ಶಾಸಕರಿಗೆ ಕಾಂಚಾಣ ಕೊಟ್ಟು ಸರಿಮಾಡಿಕೊಳ್ಳುತ್ತಾರೆ. ರೈತರಿಗೆ ನಾಮಹಾಕಿ ಈ ವರ್ತಕರು ಲಕ್ಷಾಂತರ ಸಂಪಾದಿಸುತ್ತಾರೆ.

ಈಗ ಈರುಳ್ಳಿ ಭಾರತದ ಮಾರುಕಟ್ಟೆಯಲ್ಲಿ ಇಲ್ಲವೇ ಇಲ್ಲ. ರಫ್ತುಮಾಡಿ ಮಿಕ್ಕ ಈರುಳ್ಳಿಯನ್ನು ಅವರು ಸ್ವಲ್ಪ ಸ್ವಲ್ಪವೇ ಮಾರುಕಟ್ಟೆಗೆ ಬಿಡುತ್ತಾರೆ. ಬೆಲೆ ಕೆಜಿಗೆ 100-200 ಆಯಿತು. ಅದರಿಂದ ಮಧ್ಯವರ್ತಿ ವರ್ತಕರಿಗೆ ಲಾಭ.

ಇದೊಂದು ವಿಷವ್ಯೂಹ. ಈ ಬೆಲೆ ಏರಿಕೆಯನ್ನು ತಡೆಗಟ್ಟುವ ಯೋಗ್ಯತೆ ಸರ್ಕಾರಕ್ಕಿಲ್ಲ. ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ. ಬಡವರಿಗೆ ತಿಂಗಳಲ್ಲಿ 15 ದಿನ ಕೂಲಿ ಕೆಲಸ ಸಿಗುವುದೇ ದುರ್ಲಭವಾಗಿದೆ.

ತರಕಾರಿ, ದಿನಸಿ ಬೆಲೆಗಳು ಗಗನಕ್ಕೇರುತ್ತಿವೆ. ಅದನ್ನು ನಿಯಂತ್ರಣ ಮಾಡುವ ಇಚ್ಛಾಶಕ್ತಿ ಸರ್ಕಾರಕ್ಕಿಲ್ಲ. ಸಗಟುಬೆಲೆ ಹಣದುಬ್ಬರ ಶೇ.1.92ರಷ್ಟು ಹೆಚ್ಚಿದೆ. ಈ ಎಲ್ಲಾ ಸಮಸ್ಯೆಗಳು ತಾನೇ ತಾನಾಗಿ ಸರಿಹೋಗುತ್ತದೆ ಎಂದು ಸರ್ಕಾರ ಭಾವಿಸಿದಂತಿದೆ. ಆರ್ಥಿಕ ಸಚಿವರು ಸಮಸ್ಯೆಯನ್ನು ಅವರ ಮುಂದಿಟ್ಟಾಗ ವಿತಂಡವಾದ ಮಾಡುತ್ತಾರೆ. ಮೋದಿ ಮೌನತಳೆಯುತ್ತಾರೆ.

500, 1000 ರೂಗಳ ನೋಟುರದ್ದತಿ, ದೋಷಪೂರಿತ ಜಿಎಸ್‌ಟಿ, ಹೆಚ್ಚುತ್ತಿರುವ ನಿಯಂತ್ರಣ, ಪ್ರಧಾನಿ ಕಚೇರಿಯ ಅಧಿಕಾರದ ಕೇಂದ್ರೀಕರಣ ವ್ಯವಸ್ಥೆ ಇವುಗಳಿಂದ ಉಂಟಾಗಿರುವ ಗಂಡಾಂತರದ ಬಗೆಗೆ ಆರ್ಥಿಕ ತಜ್ಞರು ಎಚ್ಚರಿಕೆಯ ಮಾತನ್ನಾಡಿದರೆ ಅದನ್ನು ನಿರ್ಲಕ್ಷಿಸುವ ಮನೋಭಾವ ಸರ್ಕಾರದ್ದು. ಇಂದಿನ ಜ್ವಲಂತ ಸಮಸ್ಯೆಗಳು ದೇಶದ ಆರ್ಥಿಕ ಪರಿಸ್ಥಿತಿ ದಿನೇ ದಿನೇ ಹದಗೆಡುತ್ತಿದೆ ಎಂಬುದನ್ನು ಮೋದಿಯವರೂ, ಅರ್ಥಸಚಿವರು ಒಪ್ಪಿಕೊಳ್ಳುತ್ತಾರೆ. ಆದರೆ ಅವರು ಹೇಳುವುದು ಇಂದಿನ ಪರಿಸ್ಥಿತಿ ಹೀಗೆಯೇ ಮುಂದುವರೆಯುವುದಿಲ್ಲ. ವಿಶ್ವದ ಎಲ್ಲೆಡೆ ಈ ಸಮಸ್ಯೆ ಇದೆ. ಅಲ್ಲೆಲ್ಲ ಸರಿಹೋದರೆ ಇಲ್ಲಿಯೂ ಸರಿ ಹೋಗುತ್ತದೆ. ಅಚ್ಛೇದಿನ್ ಬಂದೇ ಬರುತ್ತದೆ ಎನ್ನುವುದು ಅವರ ವಾದ.

ಆರ್ಥಿಕ ತಜ್ಞರು, ಪ್ರಧಾನಿಗಳ ಆರ್ಥಿಕ ಸಲಹೆಗಾರರು ರಾಜೀನಾಮೆ ಕೊಟ್ಟುಹೋದರು. ಅವರು ನಿರ್ಗಮಿಸುವ ಮುನ್ನ ಹೇಳಿದ ಮಾತು: ಈ ದೇಶದ ಆರ್ಥಿಕ ಪರಿಸ್ಥಿತಿಯ ಸುಧಾರಣೆಯ ಕೆಲಸ ಸರ್ಜನ್ ಇಲ್ಲದೇ ಶಸ್ತ್ರಚಿಕಿತ್ಸೆ ಮಾಡಲು ಹೊರಟಂತಿದೆ. ಮುಗ್ಗಟ್ಟಿನಿಂದ ಬಳಲಿರುವ ಆರ್ಥಿಕ ವ್ಯವಸ್ಥೆಯು ಅಸಮರ್ಥರ ಹಿಡಿತದಲ್ಲಿ ನರಳುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...