Homeಮುಖಪುಟಐತಿಹಾಸಿಕ ಕುಸಿತಕ್ಕೆ ಸಾಕ್ಷಿಯಾದ ಭಾರತದ ಆರ್ಥಿಕತೆ; ವರ್ಷದ ಮೊದಲ ತ್ರೈಮಾಸಿಕದಲ್ಲೇ ಶೇ.-23.9 ರಷ್ಟು ಕುಸಿತ!

ಐತಿಹಾಸಿಕ ಕುಸಿತಕ್ಕೆ ಸಾಕ್ಷಿಯಾದ ಭಾರತದ ಆರ್ಥಿಕತೆ; ವರ್ಷದ ಮೊದಲ ತ್ರೈಮಾಸಿಕದಲ್ಲೇ ಶೇ.-23.9 ರಷ್ಟು ಕುಸಿತ!

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕದ ನಿರಂತರ ಲಾಕ್‌‌ಡೌನ್‌ನಿಂದಾಗಿ ಪ್ರಮುಖ ಕೈಗಾರಿಕೆಗಳು ಸ್ಥಗಿತಗೊಂಡ ಪರಿಣಾಮ ಹಾಗೂ ಲಕ್ಷಾಂತರ ಜನರ ನಿರುದ್ಯೋಗಿಗಳು ನಷ್ಟವಾಗಿದ್ದರಿಂದ, ಏಪ್ರಿಲ್-ಜೂನ್ ಅವಧಿಯಲ್ಲಿ ಭಾರತದ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ಶೇಕಡಾ 23.9 ರಷ್ಟು ಇಳಿಕೆಯಾಗಿದೆ.

ಭಾರತವು ತ್ರೈಮಾಸಿಕ ಅಂಕಿ ಅಂಶಗಳನ್ನು ಪ್ರಕಟಿಸಲು ಪ್ರಾರಂಭಿಸಿದ 1996 ರಿಂದೀಚೆಗೆ ಇದೇ ಮೊದಲ ಭಾರಿಗೆ ಆರ್ಥಿಕತೆ ಈ ಪ್ರಮಾಣದ ಇಳಿಕೆ ದಾಖಲಾಗಿದೆ. ಅಷ್ಟೇ ಅಲ್ಲದೆ ಏಷ್ಯಾದ ಪ್ರಮುಖ ಆರ್ಥಿಕತೆಯಲ್ಲಿ ಇದು ಅತ್ಯಂತ ಕೆಟ್ಟದಾದ ಆರ್ಥಿಕ ಕುಸಿತವಾಗಿದೆ.

2019–20 ರ ಇದೇ ಅವಧಿಯಲ್ಲಿ ದೇಶದ ಜಿಡಿಪಿ ಶೇ 5.2 ರಷ್ಟು ಬೆಳವಣಿಗೆ ಕಂಡಿತ್ತು ಎಂದು ಎನ್‌ಎಸ್‌ಒ ಅಂಕಿ ಅಂಶ ಹೇಳಿದೆ.

ಇದನ್ನೂ ಓದಿ: ಕೋವಿಡ್‌ನಿಂದ ನೆಲಕಚ್ಚಿರುವ ಆರ್ಥಿಕತೆಯನ್ನು ಮೇಲೆತ್ತಲು ಸರ್ಕಾರ ಮಾಡಬೇಕಾದುದ್ದೇನು?

ಬ್ಲೂಂಬರ್ಗ್‌ ಆರ್ಥಿಕ ತಜ್ಞರ ಲೆಕ್ಕಚಾರದ ಪ್ರಕಾರ ಭಾರತದ ಆರ್ಥಿಕತೆ ಶೇ. 15 ರಿಂದ ಶೇ. 25.9 ರ ನಡುವೆ ಕುಸಿಯಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಪ್ರಸ್ತುತ ಆರ್ಥಿಕ ಕುಸಿತವು ಎರಡನೇ ತ್ರೈಮಾಸಿಕದಲ್ಲೂ ಮುಂದುವರಿಯಲಿದೆ ಎಂದು ಅಂದಾಜಿಸಲಾಗಿದೆ.

2019–2020 ನೇ ಆರ್ಥಿಕ ವರ್ಷದ 1 ನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಬೆಳವಣಿಗೆ 5.2% ದಾಖಲಾಗಿತ್ತು. 2ನೇ ತ್ರೈಮಾಸಿಕದಲ್ಲಿ 4.4 % ದಾಖಲಾದರೆ, 3ನೇ ತ್ರೈಮಾಸಿಕದಲ್ಲಿ 4.1% ದಾಖಲಾಗಿ, 4ನೇ ತ್ರೈಮಾಸಿಕದ ಹೊತ್ತಿದೆ 3.1% ಬೆಳವಣಿಗೆ ದಾಖಲಾಗಿತ್ತು.

ಆದರೆ 2020–21 ನೇ ಆರ್ಥಿಕ ವರ್ಷದ 1 ನೇ ತ್ರೈಮಾಸಿಕದಲ್ಲೇ 23.9% ದಷ್ಟು ಇಳಿಯಾಗಿದೆ. ಈ ಇಳಿಕೆ ಎರಡನೆ ತ್ರೈಮಾಸಿಕದಲ್ಲೂ ಮುಂದುವೆರೆಯಲಿದೆ ಎನ್ನಲಾಗಿದೆ.

ಇದನ್ನೂ ಓದಿ: ಮೋದಿ 2.1: ಆರ್ಥಿಕ ಸಮಸ್ಯೆಗೆ ಪರಿಹಾರ ಕಾಣದ ಕೇಂದ್ರ ಸರ್ಕಾರಕ್ಕೆ ಕೊರೊನಾ ನೆಪ!

ಮೇ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜಿಡಿಪಿಯ ಶೇಕಡಾ 10 ಕ್ಕೆ ಸಮನಾದ ಪ್ರಚೋದಕ ಪ್ಯಾಕೇಜ್ ಅನ್ನು ಘೋಷಿಸಿದ ಹೊರತಾಗಿಯು ಬೇಡಿಕೆ ಮತ್ತು ಉತ್ಪಾದನೆ ಇನ್ನೂ ಚೇತರಿಸಿಕೊಂಡಿಲ್ಲ.

ದೇಶದಲ್ಲಿ ಕೊರೊನಾ ಪ್ರಾರಂಭವಾಗುವುದಕ್ಕೆ ಮುಂಚೆ, ಆರ್ಥಿಕತೆಯು ನಿಧಾನಗತಿಯ ಬೆಳವಣಿಗೆ ಮತ್ತು ಕಡಿಮೆ ಬೇಡಿಕೆಯ ಹೊರತಾಗಿಯೂ, ಆರ್ಥಿಕತೆಯನ್ನು ಅಂದಾಜು 2.8 ಟ್ರಿಲಿಯನ್ ಡಾಲರ್‌‌ನಿಂದ 2024 ರವೇಳೆಗೆ 5 ಟ್ರಿಲಿಯನ್‌ ಡಾಲರ್‌ ಪರಿವರ್ತಿಸುವ ಗುರಿಯನ್ನು ಹೊಂದಿದೆ ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹೇಳಿತ್ತು.

ಕಳೆದವಾರ ಕೇಂದ್ರ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮ್, ‘ಕೊರೊನಾ ಸಾಂಕ್ರಾಮಿಕವು ದೇವರ ಕಾರ್ಯ. ಹಾಗಾಗಿಯೇ ಜಿಎಸ್‌ಟಿ ಸಂಗ್ರಹದಲ್ಲಿ ಕುಸಿತವಾಗಿದೆ’ ಎಂದು ಜಿಎಸ್‌ಟಿ ಕುಸಿತದ ಬಗ್ಗೆ ಹೇಳಿದ್ದರು.

ಇದನ್ನೂ ಓದಿ: ದೇವರ ಸಂದೇಶವಾಹಕರೆ, ಆರ್ಥಿಕ ತಪ್ಪು ನಿರ್ವಹಣೆಗೆ ಕಾರಣರ್ಯಾರು? ಪಿ.ಚಿದಂಬರಂ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...