Homeಮುಖಪುಟಐತಿಹಾಸಿಕ ಕುಸಿತಕ್ಕೆ ಸಾಕ್ಷಿಯಾದ ಭಾರತದ ಆರ್ಥಿಕತೆ; ವರ್ಷದ ಮೊದಲ ತ್ರೈಮಾಸಿಕದಲ್ಲೇ ಶೇ.-23.9 ರಷ್ಟು ಕುಸಿತ!

ಐತಿಹಾಸಿಕ ಕುಸಿತಕ್ಕೆ ಸಾಕ್ಷಿಯಾದ ಭಾರತದ ಆರ್ಥಿಕತೆ; ವರ್ಷದ ಮೊದಲ ತ್ರೈಮಾಸಿಕದಲ್ಲೇ ಶೇ.-23.9 ರಷ್ಟು ಕುಸಿತ!

- Advertisement -
- Advertisement -

ಕೊರೊನಾ ವೈರಸ್ ಸಾಂಕ್ರಾಮಿಕದ ನಿರಂತರ ಲಾಕ್‌‌ಡೌನ್‌ನಿಂದಾಗಿ ಪ್ರಮುಖ ಕೈಗಾರಿಕೆಗಳು ಸ್ಥಗಿತಗೊಂಡ ಪರಿಣಾಮ ಹಾಗೂ ಲಕ್ಷಾಂತರ ಜನರ ನಿರುದ್ಯೋಗಿಗಳು ನಷ್ಟವಾಗಿದ್ದರಿಂದ, ಏಪ್ರಿಲ್-ಜೂನ್ ಅವಧಿಯಲ್ಲಿ ಭಾರತದ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ಶೇಕಡಾ 23.9 ರಷ್ಟು ಇಳಿಕೆಯಾಗಿದೆ.

ಭಾರತವು ತ್ರೈಮಾಸಿಕ ಅಂಕಿ ಅಂಶಗಳನ್ನು ಪ್ರಕಟಿಸಲು ಪ್ರಾರಂಭಿಸಿದ 1996 ರಿಂದೀಚೆಗೆ ಇದೇ ಮೊದಲ ಭಾರಿಗೆ ಆರ್ಥಿಕತೆ ಈ ಪ್ರಮಾಣದ ಇಳಿಕೆ ದಾಖಲಾಗಿದೆ. ಅಷ್ಟೇ ಅಲ್ಲದೆ ಏಷ್ಯಾದ ಪ್ರಮುಖ ಆರ್ಥಿಕತೆಯಲ್ಲಿ ಇದು ಅತ್ಯಂತ ಕೆಟ್ಟದಾದ ಆರ್ಥಿಕ ಕುಸಿತವಾಗಿದೆ.

2019–20 ರ ಇದೇ ಅವಧಿಯಲ್ಲಿ ದೇಶದ ಜಿಡಿಪಿ ಶೇ 5.2 ರಷ್ಟು ಬೆಳವಣಿಗೆ ಕಂಡಿತ್ತು ಎಂದು ಎನ್‌ಎಸ್‌ಒ ಅಂಕಿ ಅಂಶ ಹೇಳಿದೆ.

ಇದನ್ನೂ ಓದಿ: ಕೋವಿಡ್‌ನಿಂದ ನೆಲಕಚ್ಚಿರುವ ಆರ್ಥಿಕತೆಯನ್ನು ಮೇಲೆತ್ತಲು ಸರ್ಕಾರ ಮಾಡಬೇಕಾದುದ್ದೇನು?

ಬ್ಲೂಂಬರ್ಗ್‌ ಆರ್ಥಿಕ ತಜ್ಞರ ಲೆಕ್ಕಚಾರದ ಪ್ರಕಾರ ಭಾರತದ ಆರ್ಥಿಕತೆ ಶೇ. 15 ರಿಂದ ಶೇ. 25.9 ರ ನಡುವೆ ಕುಸಿಯಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಪ್ರಸ್ತುತ ಆರ್ಥಿಕ ಕುಸಿತವು ಎರಡನೇ ತ್ರೈಮಾಸಿಕದಲ್ಲೂ ಮುಂದುವರಿಯಲಿದೆ ಎಂದು ಅಂದಾಜಿಸಲಾಗಿದೆ.

2019–2020 ನೇ ಆರ್ಥಿಕ ವರ್ಷದ 1 ನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಬೆಳವಣಿಗೆ 5.2% ದಾಖಲಾಗಿತ್ತು. 2ನೇ ತ್ರೈಮಾಸಿಕದಲ್ಲಿ 4.4 % ದಾಖಲಾದರೆ, 3ನೇ ತ್ರೈಮಾಸಿಕದಲ್ಲಿ 4.1% ದಾಖಲಾಗಿ, 4ನೇ ತ್ರೈಮಾಸಿಕದ ಹೊತ್ತಿದೆ 3.1% ಬೆಳವಣಿಗೆ ದಾಖಲಾಗಿತ್ತು.

ಆದರೆ 2020–21 ನೇ ಆರ್ಥಿಕ ವರ್ಷದ 1 ನೇ ತ್ರೈಮಾಸಿಕದಲ್ಲೇ 23.9% ದಷ್ಟು ಇಳಿಯಾಗಿದೆ. ಈ ಇಳಿಕೆ ಎರಡನೆ ತ್ರೈಮಾಸಿಕದಲ್ಲೂ ಮುಂದುವೆರೆಯಲಿದೆ ಎನ್ನಲಾಗಿದೆ.

ಇದನ್ನೂ ಓದಿ: ಮೋದಿ 2.1: ಆರ್ಥಿಕ ಸಮಸ್ಯೆಗೆ ಪರಿಹಾರ ಕಾಣದ ಕೇಂದ್ರ ಸರ್ಕಾರಕ್ಕೆ ಕೊರೊನಾ ನೆಪ!

ಮೇ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜಿಡಿಪಿಯ ಶೇಕಡಾ 10 ಕ್ಕೆ ಸಮನಾದ ಪ್ರಚೋದಕ ಪ್ಯಾಕೇಜ್ ಅನ್ನು ಘೋಷಿಸಿದ ಹೊರತಾಗಿಯು ಬೇಡಿಕೆ ಮತ್ತು ಉತ್ಪಾದನೆ ಇನ್ನೂ ಚೇತರಿಸಿಕೊಂಡಿಲ್ಲ.

ದೇಶದಲ್ಲಿ ಕೊರೊನಾ ಪ್ರಾರಂಭವಾಗುವುದಕ್ಕೆ ಮುಂಚೆ, ಆರ್ಥಿಕತೆಯು ನಿಧಾನಗತಿಯ ಬೆಳವಣಿಗೆ ಮತ್ತು ಕಡಿಮೆ ಬೇಡಿಕೆಯ ಹೊರತಾಗಿಯೂ, ಆರ್ಥಿಕತೆಯನ್ನು ಅಂದಾಜು 2.8 ಟ್ರಿಲಿಯನ್ ಡಾಲರ್‌‌ನಿಂದ 2024 ರವೇಳೆಗೆ 5 ಟ್ರಿಲಿಯನ್‌ ಡಾಲರ್‌ ಪರಿವರ್ತಿಸುವ ಗುರಿಯನ್ನು ಹೊಂದಿದೆ ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹೇಳಿತ್ತು.

ಕಳೆದವಾರ ಕೇಂದ್ರ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮ್, ‘ಕೊರೊನಾ ಸಾಂಕ್ರಾಮಿಕವು ದೇವರ ಕಾರ್ಯ. ಹಾಗಾಗಿಯೇ ಜಿಎಸ್‌ಟಿ ಸಂಗ್ರಹದಲ್ಲಿ ಕುಸಿತವಾಗಿದೆ’ ಎಂದು ಜಿಎಸ್‌ಟಿ ಕುಸಿತದ ಬಗ್ಗೆ ಹೇಳಿದ್ದರು.

ಇದನ್ನೂ ಓದಿ: ದೇವರ ಸಂದೇಶವಾಹಕರೆ, ಆರ್ಥಿಕ ತಪ್ಪು ನಿರ್ವಹಣೆಗೆ ಕಾರಣರ್ಯಾರು? ಪಿ.ಚಿದಂಬರಂ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...