Homeಮುಖಪುಟಜನಸಂಖ್ಯೆ ಅಧಿಕವಿದ್ದರೂ ಕಡಿಮೆಯಾದ ಭಾರತದ ಸಂತಾನೋತ್ಪತ್ತಿ ದರ: ವಿಶ್ವಸಂಸ್ಥೆ ವರದಿ

ಜನಸಂಖ್ಯೆ ಅಧಿಕವಿದ್ದರೂ ಕಡಿಮೆಯಾದ ಭಾರತದ ಸಂತಾನೋತ್ಪತ್ತಿ ದರ: ವಿಶ್ವಸಂಸ್ಥೆ ವರದಿ

- Advertisement -
- Advertisement -

2025 ರಲ್ಲಿ ಭಾರತದ ಜನಸಂಖ್ಯೆಯು 146 ಕೋಟಿ ತಲುಪಲಿದ್ದು, ಈ ಜನಸಂಖ್ಯೆ ವಿಶ್ವದಲ್ಲೇ ಅತಿ ಹೆಚ್ಚಾಗಿದ್ದರೂ, ದೇಶದ ಫಲವತ್ತತೆ ದರಗಳು ಬದಲಿ ಮಿತಿಗಿಂತ ಕಡಿಮೆಯಾಗಿದೆ ಎಂದು ಮಂಗಳವಾರ ಬಿಡುಗಡೆಯಾದ ವಿಶ್ವಸಂಸ್ಥೆಯ ವರದಿಯೊಂದು ಹೇಳಿದೆ. ಈ ದರವು ಮುಂಬರುವ ದಶಕಗಳಲ್ಲಿ ಜನಸಂಖ್ಯೆಯ ಗಾತ್ರವನ್ನು ಸ್ಥಿರಗೊಳಿಸುತ್ತದೆ ಎಂದು ವರದಿ ತಿಳಿಸಿದೆ. ಜನಸಂಖ್ಯೆ ಅಧಿಕವಿದ್ದರೂ ಕಡಿಮೆಯಾದ

“ನಿಜವಾದ ಫಲವತ್ತತೆ ಬಿಕ್ಕಟ್ಟು” ಎಂಬ ಶೀರ್ಷಿಕೆಯ ವಿಶ್ವಸಂಸ್ಥೆಯ ಜನಸಂಖ್ಯಾ ನಿಧಿಯ ವರದಿಯು, ಮುಂದಿನ 40 ವರ್ಷಗಳಲ್ಲಿ ಭಾರತದ ಜನಸಂಖ್ಯೆಯು ಕುಸಿತ ಪ್ರಾರಂಭವಾಗುವ ಮೊದಲು 1.7 ಶತಕೋಟಿಗೆ ಏರುತ್ತದೆ ಎಂದು ಅಂದಾಜಿಸಿದೆ. ಪ್ರಸ್ತುತ 1.41 ಶತಕೋಟಿ ಜನಸಂಖ್ಯೆಯನ್ನು ಹೊಂದಿರುವ ಚೀನಾ ಭಾರತದ ನಂತರ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿದೆ.

ಫಲವತ್ತತೆ ಕುಸಿತ ಭೀತಿ ಮೂಡಿಸಿದ್ದು, ಇದನ್ನು ಬದಲಿಸುವುದು ಅತ್ಯಗತ್ಯ ಎಂದು ವರದಿಯಲ್ಲಿ ಹೇಳಲಾಗಿದೆ. ಲಕ್ಷಾಂತರ ಜನರಿಗೆ ನಿಜವಾದ ಫಲವತ್ತತೆಯ ಗುರಿಗಳು ಏನು ಎಂಬುದನ್ನು ಅರ್ಥೈಸಿಕೊಳ್ಳಲು ಆಗುತ್ತಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.

“ಭಾರತದಲ್ಲಿ ಪ್ರತಿ ಮಹಿಳೆಯ ಸರಾಸರಿ ಫಲವತ್ತತೆ 2.1 ಇದೆ. ಆದರೆ ಅದು ಈಗ 1.9ಕ್ಕೆ ಕುಸಿದಿದೆ. ಅಂದರೆ, ತಲೆಮಾರಿನಿಂದ ತಲೆಮಾರಿಗೆ ದೇಶದ ಜನಸಂಖ್ಯಾ ಗಾತ್ರವನ್ನು ಕಾಪಾಡಲು ಅಗತ್ಯವಿರುವಷ್ಟು ಮಕ್ಕಳಿಗೆ ಜನ್ಮನೀಡುವ ಸಾಮರ್ಥ್ಯ ಭಾರತೀಯ ಮಹಿಳೆಯರಲ್ಲಿ ಕುಸಿಯುತ್ತಿದೆ. ಈ ಕಾರಣದಿಂದಾಗಿ ಭಾರತದಲ್ಲಿ ಸದ್ಯ ಇರುವ ಯುವಶಕ್ತಿ ಹೆಚ್ಚಿನ ಮಹತ್ವ ಪಡೆದುಕೊಂಡಿದ್ದಾರೆ. ಇದರಲ್ಲಿ 0–14ರ ವಯೋಮಾನದವರ ಸಂಖ್ಯೆ ಶೇ 24ರಷ್ಟಿದೆ. 10ರಿಂದ 19ರ ವಯೋಮಾನದವರು ಶೇ 17ರಷ್ಟು ಮತ್ತು 10ರಿಂದ 24 ವರ್ಷದವರು ಶೇ 26ರಷ್ಟಿದೆ’’ ಎಂದು ವರದಿ ಹೇಳಿದೆ.

ಜಾಗತಿಕ ಜನಸಂಖ್ಯೆಯ 37% ರಷ್ಟಿರುವ 14 ದೇಶಗಳಲ್ಲಿ ಪುರುಷರು ಮತ್ತು ಮಹಿಳೆಯರು ಇಬ್ಬರೂ ಸೇರಿ 14,000 ವಯಸ್ಕರ ಆನ್‌ಲೈನ್ ಸಮೀಕ್ಷೆಯ ಮೂಲಕ ಈ ವರದಿಯ ಅಂಕಿ-ಅಂಶಗಳನ್ನು ಸಂಗ್ರಹಿಸಲಾಗಿದೆ.

ಭಾರತದಲ್ಲಿ ಸರಿಯಾದ ಉದ್ಯೋಗಾವಕಾಶ ಮತ್ತು ಸರ್ಕಾರದ ನೀತಿಗಳು ಬೆಂಬಲಿಸಿದ್ದೇ ಆದಲ್ಲಿ ಈಗಲೂ 15ರಿಂದ 64ರ ವಯೋಮಾನದ ದುಡಿಯುವ ವರ್ಗ ಶೇ 68ರಷ್ಟಿದೆ. 65ಕ್ಕಿಂತ ಮೇಲಿನವರ ಸಂಖ್ಯೆ ಶೇ 7ರಷ್ಟಿದೆ. ಇದು ಬರುವ ವರ್ಷಗಳಲ್ಲಿ ಇನ್ನೂ ಹೆಚ್ಚಾಗಲಿದೆ. ಜತೆಗೆ ಜನರ ಜೀವಿತಾವಧಿಯೂ ಹೆಚ್ಚಳವಾಗಲಿದೆ. 2025ರಲ್ಲಿ ಭಾರತೀಯರ ಜೀವಿತಾವಧಿಯು ಸರಾಸರಿಯಾಗಿ ಪುರುಷರಲ್ಲಿ 71 ವರ್ಷ ಹಾಗೂ ಮಹಿಳೆಯರಲ್ಲಿ 74 ವರ್ಷಕ್ಕೆ ಹೆಚ್ಚಳವಾಗಿದೆ.

‘ವಿಶ್ವಸಂಸ್ಥೆಯ ವರದಿಯನ್ವಯ ಭಾರತದ ಜನಸಂಖ್ಯೆ 170 ಕೋಟಿ ತಲುಪುವ ಮೊದಲೇ ಇದರ ಕುಸಿತವೂ (40 ವರ್ಷಗಳ ನಂತರ) ಆರಂಭವಾಗಲಿದೆ. ಈ ಸಂಖ್ಯೆಗಳ ಹಿಂದೆ ಕುಟುಂಬವನ್ನು ಹೊಂದುವ ಅಥವಾ ವಿಸ್ತರಿಸುವ ಆಲೋಚನೆಯುಳ್ಳ ಲಕ್ಷಾಂತರ ದಂಪತಿಗಳ ಕಥೆಗಳು ಅಡಗಿವೆ. ಇದು ಕುಟುಂಬ ಬೇಕೇ ಅಥವಾ ಬೇಡವೇ, ಬೇಕಾದರೆ ಎಂದು ಅಥವಾ ಎಷ್ಟು ಬಾರಿ ಗರ್ಭಧರಿಸಬಹುದು ಎಂಬುದನ್ನು ನಿರ್ಧರಿಸುತ್ತದೆ’ ಎಂಬುದನ್ನೂ ಈ ವರದಿ ಹೇಳಿದೆ.

ಸಮುದಾಯದ ನಿರೀಕ್ಷೆಗಳಿಂದಾಗಿ ಭಾರತದಲ್ಲಿ ಐದು ಮಹಿಳೆಯರಲ್ಲಿ ಒಬ್ಬರು ಉದ್ದೇಶಿತಕ್ಕಿಂತ ಹೆಚ್ಚಿನ ಮಕ್ಕಳನ್ನು ಹೊಂದಿದ್ದಾರೆ ಎಂದು ಸಮೀಕ್ಷೆ ತೋರಿಸುತ್ತದೆ. ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಒತ್ತಡದಿಂದಾಗಿ ಫಲವತ್ತತೆ ಗುರಿಗಳನ್ನು ಸಾಧಿಸುವಲ್ಲಿ ವಿಫಲರಾಗಿದ್ದೇವೆ ಎಂದು ಪ್ರತಿಕ್ರಿಯಿಸಿದವರಲ್ಲಿ ಹದಿನಾಲ್ಕು ಪ್ರತಿಶತದಷ್ಟು ಜನರು ಭಾವಿಸಿದರೆ, 30 ಪ್ರತಿಶತದಷ್ಟು ಮಹಿಳೆಯರು ಬಯಸದಿದ್ದಾಗ ಗರ್ಭಧಾರಣೆಯನ್ನು ಉಳಿಸಿಕೊಳ್ಳಲು ಒತ್ತಡಕ್ಕೊಳಗಾಗಿದ್ದೇವೆ ಎಂದು ಹೇಳಿದ್ದಾರೆ. ಜನಸಂಖ್ಯೆ ಅಧಿಕವಿದ್ದರೂ ಕಡಿಮೆಯಾದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕುಂಭಮೇಳ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 37 ಅಲ್ಲ, 82; ಸುಳ್ಳು ಹೇಳಿದ ಯುಪಿ ಆದಿತ್ಯನಾಥ್ ಸರ್ಕಾರ!

ಕುಂಭಮೇಳ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 37 ಅಲ್ಲ, 82; ಸುಳ್ಳು ಹೇಳಿದ ಯುಪಿ ಆದಿತ್ಯನಾಥ್ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ 'ಕಾರ್ಮಿಕ, ರೈತ ವಿರೋಧಿ ಹಾಗೂ ಕಾರ್ಪೊರೇಟ್ ಪರ ನೀತಿಗಳ' ವಿರುದ್ಧ ಕಾರ್ಮಿಕ ಸಂಘಟನೆಗಳು ಗುರುವಾರ (ಫೆ.12) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದಿಂದ ವಿವಿಧ ರಾಜ್ಯಗಳಲ್ಲಿ ಜನ ಜೀವನ...

ಅದಾನಿ ಮಾನನಷ್ಟ ಪ್ರಕರಣದಲ್ಲಿ ಪತ್ರಕರ್ತ ರವಿ ನಾಯರ್‌ಗೆ ಶಿಕ್ಷೆ: ‘ಇದು ಪತ್ರಿಕಾ ಸ್ವಾತಂತ್ರ್ಯಕ್ಕೆ ಹೊಡೆತ’ ಎಂದ ಪತ್ರಕರ್ತರ ಸಂಘಟನೆಗಳು

ಅದಾನಿ ಎಂಟರ್‌ಪ್ರೈಸಸ್ ದಾಖಲಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಿಖಾ ಪತ್ರಕರ್ತ ರವಿ ನಾಯರ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿರುವುದನ್ನು ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಮತ್ತು ಹಲವಾರು ಪತ್ರಿಕಾ ಸಂಸ್ಥೆಗಳು...

‘ನಾವು ಯಾರನ್ನೂ ನಿಂದಿಸಿಲ್ಲ’: ಚೇಂಬರ್ ‘ದುರ್ವರ್ತನೆ’ ಆರೋಪಕ್ಕೆ ಪ್ರಿಯಾಂಕಾ ಗಾಂಧಿ ಸ್ಪಷ್ಟನೆ 

ನವದೆಹಲಿ: ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಯಲ್ಲಿ ತಮ್ಮ ಪಕ್ಷದ ಸಂಸದರು "ಅನುಚಿತವಾಗಿ ವರ್ತಿಸಿದ್ದಾರೆ" ಎಂದು ಆರೋಪಿಸಿದಾಗ, ಅವರನ್ನು ಬೆಂಬಲಿಸಿದ್ದೇನೆ ಎಂದು ಹೇಳಿದ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂಸದೀಯ ವ್ಯವಹಾರಗಳ...

‘ಭಾರತಕ್ಕೆ ಮರಳಲು ಇದು ಕೊನೆಯ ಅವಕಾಶ’: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್‌ ಎಚ್ಚರಿಕೆ

ಭಾರತದ ಹೊರಗೆ ಇರುವ ಉದ್ಯಮಿ ವಿಜಯ್ ಮಲ್ಯ ನ್ಯಾಯಾಲಯದ ಪ್ರಕ್ರಿಯೆಗಳಿಂದ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್, ಅವರಿಗೆ ಭಾರತಕ್ಕೆ ಮರಳಲು “ಒಂದು ಕೊನೆಯ ಅವಕಾಶ” ನೀಡಿದೆ. ಒಂದು ವೇಳೆ...

ಕೆಲಸದ ಸ್ಥಳದಲ್ಲಿ ಜಾತಿ ತಾರತಮ್ಯದ ಬಗ್ಗೆ ರಾಜ್ಯಸಭೆಯಲ್ಲಿ ಖರ್ಗೆ ಕಳವಳ; ಒಡಿಶಾ ಅಂಗನವಾಡಿ ಘಟನೆ ಉಲ್ಲೇಖ

ಕೆಲಸದ ಸ್ಥಳಗಳಲ್ಲಿ ಆಗುತ್ತಿರುವ ಜಾತಿ ತಾರತಮ್ಯದ ಕುರಿತು ರಾಜ್ಯಸಭೆಯಲ್ಲಿ ಗುರುವಾರ (ಫೆ.12) ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದರು. ಒಡಿಶಾದ ಅಂಗನವಾಡಿಯೊಂದರಲ್ಲಿ ದಲಿತ ಮಹಿಳೆ ತಯಾರಿಸಿದ ಆಹಾರವನ್ನು...

ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ...

‘ಆಕೆಯ ಜೀವ ಮುಖ್ಯ’: ಅಮೆರಿಕದ ಪೊಲೀಸ್ ಅಧಿಕಾರಿ ವೇಗದ ಚಾಲನೆಯಿಂದ ಸಾವನ್ನಪ್ಪಿದ ಭಾರತೀಯ ವಿದ್ಯಾರ್ಥಿನಿಯ ಕುಟುಂಬಕ್ಕೆ 260 ಕೋಟಿ ಪರಿಹಾರ

2023 ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಚಾಲನೆ ಮಾಡುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ಡಿಕ್ಕಿ ಹೊಡೆದ ಕಾರಣ ಸಾವನ್ನಪ್ಪಿದ ಭಾರತದ 23 ವರ್ಷದ ಪದವೀಧರ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಕುಟುಂಬಕ್ಕೆ ಸಿಯಾಟಲ್ ನಗರವು...

ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ನಿಲುವಳಿ ಸೂಚನೆ ಸಲ್ಲಿಕೆ; ಸಂಸತ್ ಸದಸ್ಯತ್ವ ರದ್ದುಗೊಳಿಸುವಂತೆ ಆಗ್ರಹ

ಲೋಕಸಭೆ ಅಧಿವೇಶನದಲ್ಲಿ ಗುರುವಾರ (ಫೆ.12) ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಿಲುವಳಿ ಸೂಚನೆ ಸಲ್ಲಿಸಿದ್ದು, ಅವರ ಸಂಸತ್ತಿನ ಸದಸ್ಯತ್ವ ರದ್ದುಗೊಳಿಸುವಂತೆ ಕೋರಿದೆ. ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ನಿಶಿಕಾಂತ್...

ಕಾನ್ಪುರ ಲ್ಯಾಂಬೋರ್ಗಿನಿ ಅಪಘಾತ: ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಪುತ್ರ ಶಿವಂ ಮಿಶ್ರಾ ಬಂಧನ

2026 ಫೆಬ್ರವರಿ 8, ಭಾನುವಾರದಂದು ವಿಐಪಿ ರಸ್ತೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದ ಹೈ ಪ್ರೊಫೈಲ್ ಲ್ಯಾಂಬೋರ್ಗಿನಿ ಅಪಘಾತಕ್ಕೆ ಸಂಬಂಧಿಸಿದಂತೆ ಸ್ಥಳೀಯ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು...

ಫೆಬ್ರವರಿ 12 ರಂದು ಭಾರತ್ ಬಂದ್| ಹಲವು ರಾಜ್ಯಗಳಲ್ಲಿ ಬಂದ್ ಗೆ ಪೂರ್ಣ ಬೆಂಬಲ: ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಫೆಬ್ರವರಿ 12, ಗುರುವಾರ ಸಾರ್ವತ್ರಿಕ ಮುಷ್ಕರಕ್ಕೆ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ಕರೆ ನೀಡಿದೆ. ಕರ್ನಾಟಕದಲ್ಲಿಯೂ ಕಾರ್ಮಿಕ ಸಂಘಟನೆಗಳು ಮುಷ್ಕರವನ್ನು ನಡೆಸುತ್ತಿವೆ. ಕೇಂದ್ರ ಸರ್ಕಾರದ 4...