Homeಮುಖಪುಟಜನಸಂಖ್ಯೆ ಅಧಿಕವಿದ್ದರೂ ಕಡಿಮೆಯಾದ ಭಾರತದ ಸಂತಾನೋತ್ಪತ್ತಿ ದರ: ವಿಶ್ವಸಂಸ್ಥೆ ವರದಿ

ಜನಸಂಖ್ಯೆ ಅಧಿಕವಿದ್ದರೂ ಕಡಿಮೆಯಾದ ಭಾರತದ ಸಂತಾನೋತ್ಪತ್ತಿ ದರ: ವಿಶ್ವಸಂಸ್ಥೆ ವರದಿ

- Advertisement -
- Advertisement -

2025 ರಲ್ಲಿ ಭಾರತದ ಜನಸಂಖ್ಯೆಯು 146 ಕೋಟಿ ತಲುಪಲಿದ್ದು, ಈ ಜನಸಂಖ್ಯೆ ವಿಶ್ವದಲ್ಲೇ ಅತಿ ಹೆಚ್ಚಾಗಿದ್ದರೂ, ದೇಶದ ಫಲವತ್ತತೆ ದರಗಳು ಬದಲಿ ಮಿತಿಗಿಂತ ಕಡಿಮೆಯಾಗಿದೆ ಎಂದು ಮಂಗಳವಾರ ಬಿಡುಗಡೆಯಾದ ವಿಶ್ವಸಂಸ್ಥೆಯ ವರದಿಯೊಂದು ಹೇಳಿದೆ. ಈ ದರವು ಮುಂಬರುವ ದಶಕಗಳಲ್ಲಿ ಜನಸಂಖ್ಯೆಯ ಗಾತ್ರವನ್ನು ಸ್ಥಿರಗೊಳಿಸುತ್ತದೆ ಎಂದು ವರದಿ ತಿಳಿಸಿದೆ. ಜನಸಂಖ್ಯೆ ಅಧಿಕವಿದ್ದರೂ ಕಡಿಮೆಯಾದ

“ನಿಜವಾದ ಫಲವತ್ತತೆ ಬಿಕ್ಕಟ್ಟು” ಎಂಬ ಶೀರ್ಷಿಕೆಯ ವಿಶ್ವಸಂಸ್ಥೆಯ ಜನಸಂಖ್ಯಾ ನಿಧಿಯ ವರದಿಯು, ಮುಂದಿನ 40 ವರ್ಷಗಳಲ್ಲಿ ಭಾರತದ ಜನಸಂಖ್ಯೆಯು ಕುಸಿತ ಪ್ರಾರಂಭವಾಗುವ ಮೊದಲು 1.7 ಶತಕೋಟಿಗೆ ಏರುತ್ತದೆ ಎಂದು ಅಂದಾಜಿಸಿದೆ. ಪ್ರಸ್ತುತ 1.41 ಶತಕೋಟಿ ಜನಸಂಖ್ಯೆಯನ್ನು ಹೊಂದಿರುವ ಚೀನಾ ಭಾರತದ ನಂತರ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿದೆ.

ಫಲವತ್ತತೆ ಕುಸಿತ ಭೀತಿ ಮೂಡಿಸಿದ್ದು, ಇದನ್ನು ಬದಲಿಸುವುದು ಅತ್ಯಗತ್ಯ ಎಂದು ವರದಿಯಲ್ಲಿ ಹೇಳಲಾಗಿದೆ. ಲಕ್ಷಾಂತರ ಜನರಿಗೆ ನಿಜವಾದ ಫಲವತ್ತತೆಯ ಗುರಿಗಳು ಏನು ಎಂಬುದನ್ನು ಅರ್ಥೈಸಿಕೊಳ್ಳಲು ಆಗುತ್ತಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.

“ಭಾರತದಲ್ಲಿ ಪ್ರತಿ ಮಹಿಳೆಯ ಸರಾಸರಿ ಫಲವತ್ತತೆ 2.1 ಇದೆ. ಆದರೆ ಅದು ಈಗ 1.9ಕ್ಕೆ ಕುಸಿದಿದೆ. ಅಂದರೆ, ತಲೆಮಾರಿನಿಂದ ತಲೆಮಾರಿಗೆ ದೇಶದ ಜನಸಂಖ್ಯಾ ಗಾತ್ರವನ್ನು ಕಾಪಾಡಲು ಅಗತ್ಯವಿರುವಷ್ಟು ಮಕ್ಕಳಿಗೆ ಜನ್ಮನೀಡುವ ಸಾಮರ್ಥ್ಯ ಭಾರತೀಯ ಮಹಿಳೆಯರಲ್ಲಿ ಕುಸಿಯುತ್ತಿದೆ. ಈ ಕಾರಣದಿಂದಾಗಿ ಭಾರತದಲ್ಲಿ ಸದ್ಯ ಇರುವ ಯುವಶಕ್ತಿ ಹೆಚ್ಚಿನ ಮಹತ್ವ ಪಡೆದುಕೊಂಡಿದ್ದಾರೆ. ಇದರಲ್ಲಿ 0–14ರ ವಯೋಮಾನದವರ ಸಂಖ್ಯೆ ಶೇ 24ರಷ್ಟಿದೆ. 10ರಿಂದ 19ರ ವಯೋಮಾನದವರು ಶೇ 17ರಷ್ಟು ಮತ್ತು 10ರಿಂದ 24 ವರ್ಷದವರು ಶೇ 26ರಷ್ಟಿದೆ’’ ಎಂದು ವರದಿ ಹೇಳಿದೆ.

ಜಾಗತಿಕ ಜನಸಂಖ್ಯೆಯ 37% ರಷ್ಟಿರುವ 14 ದೇಶಗಳಲ್ಲಿ ಪುರುಷರು ಮತ್ತು ಮಹಿಳೆಯರು ಇಬ್ಬರೂ ಸೇರಿ 14,000 ವಯಸ್ಕರ ಆನ್‌ಲೈನ್ ಸಮೀಕ್ಷೆಯ ಮೂಲಕ ಈ ವರದಿಯ ಅಂಕಿ-ಅಂಶಗಳನ್ನು ಸಂಗ್ರಹಿಸಲಾಗಿದೆ.

ಭಾರತದಲ್ಲಿ ಸರಿಯಾದ ಉದ್ಯೋಗಾವಕಾಶ ಮತ್ತು ಸರ್ಕಾರದ ನೀತಿಗಳು ಬೆಂಬಲಿಸಿದ್ದೇ ಆದಲ್ಲಿ ಈಗಲೂ 15ರಿಂದ 64ರ ವಯೋಮಾನದ ದುಡಿಯುವ ವರ್ಗ ಶೇ 68ರಷ್ಟಿದೆ. 65ಕ್ಕಿಂತ ಮೇಲಿನವರ ಸಂಖ್ಯೆ ಶೇ 7ರಷ್ಟಿದೆ. ಇದು ಬರುವ ವರ್ಷಗಳಲ್ಲಿ ಇನ್ನೂ ಹೆಚ್ಚಾಗಲಿದೆ. ಜತೆಗೆ ಜನರ ಜೀವಿತಾವಧಿಯೂ ಹೆಚ್ಚಳವಾಗಲಿದೆ. 2025ರಲ್ಲಿ ಭಾರತೀಯರ ಜೀವಿತಾವಧಿಯು ಸರಾಸರಿಯಾಗಿ ಪುರುಷರಲ್ಲಿ 71 ವರ್ಷ ಹಾಗೂ ಮಹಿಳೆಯರಲ್ಲಿ 74 ವರ್ಷಕ್ಕೆ ಹೆಚ್ಚಳವಾಗಿದೆ.

‘ವಿಶ್ವಸಂಸ್ಥೆಯ ವರದಿಯನ್ವಯ ಭಾರತದ ಜನಸಂಖ್ಯೆ 170 ಕೋಟಿ ತಲುಪುವ ಮೊದಲೇ ಇದರ ಕುಸಿತವೂ (40 ವರ್ಷಗಳ ನಂತರ) ಆರಂಭವಾಗಲಿದೆ. ಈ ಸಂಖ್ಯೆಗಳ ಹಿಂದೆ ಕುಟುಂಬವನ್ನು ಹೊಂದುವ ಅಥವಾ ವಿಸ್ತರಿಸುವ ಆಲೋಚನೆಯುಳ್ಳ ಲಕ್ಷಾಂತರ ದಂಪತಿಗಳ ಕಥೆಗಳು ಅಡಗಿವೆ. ಇದು ಕುಟುಂಬ ಬೇಕೇ ಅಥವಾ ಬೇಡವೇ, ಬೇಕಾದರೆ ಎಂದು ಅಥವಾ ಎಷ್ಟು ಬಾರಿ ಗರ್ಭಧರಿಸಬಹುದು ಎಂಬುದನ್ನು ನಿರ್ಧರಿಸುತ್ತದೆ’ ಎಂಬುದನ್ನೂ ಈ ವರದಿ ಹೇಳಿದೆ.

ಸಮುದಾಯದ ನಿರೀಕ್ಷೆಗಳಿಂದಾಗಿ ಭಾರತದಲ್ಲಿ ಐದು ಮಹಿಳೆಯರಲ್ಲಿ ಒಬ್ಬರು ಉದ್ದೇಶಿತಕ್ಕಿಂತ ಹೆಚ್ಚಿನ ಮಕ್ಕಳನ್ನು ಹೊಂದಿದ್ದಾರೆ ಎಂದು ಸಮೀಕ್ಷೆ ತೋರಿಸುತ್ತದೆ. ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಒತ್ತಡದಿಂದಾಗಿ ಫಲವತ್ತತೆ ಗುರಿಗಳನ್ನು ಸಾಧಿಸುವಲ್ಲಿ ವಿಫಲರಾಗಿದ್ದೇವೆ ಎಂದು ಪ್ರತಿಕ್ರಿಯಿಸಿದವರಲ್ಲಿ ಹದಿನಾಲ್ಕು ಪ್ರತಿಶತದಷ್ಟು ಜನರು ಭಾವಿಸಿದರೆ, 30 ಪ್ರತಿಶತದಷ್ಟು ಮಹಿಳೆಯರು ಬಯಸದಿದ್ದಾಗ ಗರ್ಭಧಾರಣೆಯನ್ನು ಉಳಿಸಿಕೊಳ್ಳಲು ಒತ್ತಡಕ್ಕೊಳಗಾಗಿದ್ದೇವೆ ಎಂದು ಹೇಳಿದ್ದಾರೆ. ಜನಸಂಖ್ಯೆ ಅಧಿಕವಿದ್ದರೂ ಕಡಿಮೆಯಾದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕುಂಭಮೇಳ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 37 ಅಲ್ಲ, 82; ಸುಳ್ಳು ಹೇಳಿದ ಯುಪಿ ಆದಿತ್ಯನಾಥ್ ಸರ್ಕಾರ!

ಕುಂಭಮೇಳ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 37 ಅಲ್ಲ, 82; ಸುಳ್ಳು ಹೇಳಿದ ಯುಪಿ ಆದಿತ್ಯನಾಥ್ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣ : ಶಾರ್ಜೀಲ್ ಇಮಾಮ್‌ಗೆ 10 ದಿನಗಳ ಮಧ್ಯಂತರ ಜಾಮೀನು

ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಸಂಶೋಧನಾ ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅವರಿಗೆ ನ್ಯಾಯಾಲಯ ಸೋಮವಾರ (ಮಾ.9) 10 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ತನ್ನ ಸಹೋದರನ...

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...