Homeಮುಖಪುಟಯುಎಸ್‌ಏಡ್‌ ವಿದೇಶಿ ನೆರವು ಸ್ಥಗಿತಗೊಳಿಸಿದ ಟ್ರಂಪ್ : ಬಾಗಿಲು ಮುಚ್ಚಿದ ಭಾರತದ ಮೊದಲ ಟ್ರಾನ್ಸ್‌ಜೆಂಡರ್ ಕ್ಲಿನಿಕ್

ಯುಎಸ್‌ಏಡ್‌ ವಿದೇಶಿ ನೆರವು ಸ್ಥಗಿತಗೊಳಿಸಿದ ಟ್ರಂಪ್ : ಬಾಗಿಲು ಮುಚ್ಚಿದ ಭಾರತದ ಮೊದಲ ಟ್ರಾನ್ಸ್‌ಜೆಂಡರ್ ಕ್ಲಿನಿಕ್

- Advertisement -
- Advertisement -

ಎಲ್ಲಾ ರೀತಿಯ ಯುಎಸ್‌ಏಡ್‌ ವಿದೇಶಿ ನೆರವನ್ನು 90 ದಿನಗಳ ಕಾಲ ಸ್ಥಗಿತಗೊಳಿಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶಿಸಿದ ಬಳಿಕ ಹೈದರಾಬಾದ್‌ನಲ್ಲಿ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳಿಗೆ ಆರೋಗ್ಯ ಸೌಲಭ್ಯ ಒದಗಿಸುತ್ತಿದ್ದ ‘ಮಿತ್ರ್ ಕ್ಲಿನಿಕ್’ ಮುಚ್ಚಲ್ಪಟ್ಟಿದೆ ಎಂದು ವರದಿಯಾಗಿದೆ.

ಡೊನಾಲ್ಡ್ ಟ್ರಂಪ್ ನೇತೃತ್ವದ ಸರ್ಕಾರ ಅಮೆರಿಕದಿಂದ ಇತರ ರಾಷ್ಟ್ರಗಳಿಗೆ ನೀಡಲಾಗುತ್ತಿರುವ ವಿವಿಧ ರೀತಿಯ ನೆರವುಗಳ ಕುರಿತು ಪರಿಶೀಲನೆಗೆ ಮುಂದಾಗಿದ್ದು, ಯುಎಸ್‌ಏಡ್‌ ಮೂಲಕ ನೀಡಲಾಗುತ್ತಿದ್ದ ಹಲವು ವಿದೇಶಿ ನೆರವುಗಳನ್ನು ಸ್ಥಗಿತಗೊಳಿಸಿದೆ.

ಉದ್ಯಮಿ ಎಲಾನ್‌ ಮಸ್ಕ್‌ ನೇತೃತ್ವದ ಅಮೆರಿಕದ ಸರ್ಕಾರಿ ದಕ್ಷತೆಯ ಇಲಾಖೆಯು ವೆಚ್ಚಗಳಲ್ಲಿ ಕಡಿತ ಮಾಡಲು ಈ ಕ್ರಮ ಕೈಗೊಂಡಿದೆ. ಟ್ರಂಪ್ ಮತ್ತು ಎಲಾನ್‌ ಮಸ್ಕ್‌ ಇಬ್ಬರೂ ಅಮೆರಿಕದಿಂದ ಇತರ ರಾಷ್ಟ್ರಗಳಿಗೆ ಹಣ ಹರಿಯುವುದನ್ನು ತಡೆಯಲು ಮುಂದಾಗಿದ್ದಾರೆ.

ಇದರಿಂದ ಯುಎಸ್‌ಏಡ್‌ ಮೂಲಕ ಜಗತ್ತಿನ ವಿವಿಧ ರಾಷ್ಟ್ರಗಳಲ್ಲಿ ನಡೆಯುತ್ತಿದ್ದ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದೆ. ಹೈದರಾಬಾದ್‌ನ ಟ್ರಾನ್ಸ್‌ಜೆಂಡರ್ ಕ್ಲಿನಿಕ್‌ ಕೂಡ ಅದರಲ್ಲಿ ಒಂದು. ಯುಎಸ್‌ಏಡ್‌ ಸ್ಥಗಿತದಿಂದ ಈ ಕ್ಲಿನಿಕ್‌ನಲ್ಲಿ ಹೆಚ್‌ಐವಿಗೆ ಚಿಕಿತ್ಸೆ ನೀಡುವ ಪ್ರಾಜೆಕ್ಟ್ ಅಕ್ಸೆಲರೇಟ್ ಕೂಡ ಬಂದ್ ಆಗಿದೆ.

ಜನವರಿ 2021ರಲ್ಲಿ ಸ್ಥಾಪನೆಯಾದ ‘ಮಿತ್ರ್ ಕ್ಲಿನಿಕ್’ ಭಾರತದ ಮೊದಲ ಟ್ರಾನ್ಸ್‌ಜೆಂಡರ್ ಕೇಂದ್ರಿತ ಆರೋಗ್ಯ ಕೇಂದ್ರಗಳಲ್ಲಿ ಒಂದಾಗಿದ್ದು, ಸಾಮಾನ್ಯ ಆರೋಗ್ಯ ಸಮಾಲೋಚನೆಗಳು, ಹೆಚ್ಐವಿ ಸಮಾಲೋಚನೆ ಮತ್ತು ಚಿಕಿತ್ಸೆ, ಮಾನಸಿಕ ಆರೋಗ್ಯ ಸಹಾಯ, ಲಿಂಗ ದೃಢೀಕರಣ ಸೇವೆಗಳು ಮತ್ತು ಕಾನೂನು ಮತ್ತು ಸಾಮಾಜಿಕ ಯೋಜನೆಗಳನ್ನು ಪಡೆಯಲು ಸಹಾಯದಂತಹ ಅಗತ್ಯ ಸೇವೆಗಳನ್ನು ಇದು ಒದಗಿಸುತ್ತಿತ್ತು.

LGBTQIA+ ಸಮುದಾಯದ ಆರೋಗ್ಯ ಅಗತ್ಯಗಳನ್ನು ಪೂರೈಸುವಲ್ಲಿ, ವಿಶೇಷವಾಗಿ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳಲ್ಲಿನ ಹೆಚ್‌ಐವಿ ಸಮಸ್ಯೆಯನ್ನು ಎದುರಿಸುವಲ್ಲಿ ಈ ಚಿಕಿತ್ಸಾಲಯವು ಪ್ರಮುಖ ಪಾತ್ರ ವಹಿಸುತ್ತಿತ್ತು.

2024ರ ಮಧ್ಯದ ವೇಳೆಗೆ, ಸುಮಾರು 4,900 ಕ್ಕೂ ಹೆಚ್ಚು ವ್ಯಕ್ತಿಗಳು ಈ ಕ್ಲಿನಿಕ್‌ನಲ್ಲಿ ನೋಂದಾಯಿಸಿಕೊಂಡಿದ್ದರು. ಮಾಸಿಕ 150–200 ವ್ಯಕ್ತಿಗಳಿಗೆ ಕ್ಲಿನಿಕ್ ಸೇವೆ ಒದಗಿಸುತ್ತಿತ್ತು. ಗಮನಾರ್ಹವಾಗಿ, ಕ್ಲಿನಿಕ್ ಏಳು ಟ್ರಾನ್ಸ್‌ಜೆಂಡರ್ ಸಿಬ್ಬಂದಿಯನ್ನು ನೇಮಿಸಿಕೊಂಡಿತ್ತು. ಅವರಿಗೆ ಉದ್ಯೋಗ ಮತ್ತು ಸಮುದಾಯದ ಪ್ರಜ್ಞೆಯನ್ನು ನೀಡಿತ್ತು.

ಟ್ರಾನ್ಸ್‌ಜೆಂಡರ್ ಕ್ಲಿನಿಕ್ ನೋಂದಾಯಿಸಿಕೊಂಡ ಒಟ್ಟು ರೋಗಿಗಳಲ್ಲಿ ಶೇಖಡ 6ರಷ್ಟು ಜನರು ಹೆಚ್‌ಐವಿ ಪಾಸಿಟಿವ್ ದೃಢಪಟ್ಟವರು ಇದ್ದರು. ಈ ಪೈಕಿ ಶೇಖಡ 83ರಷ್ಟು ಮಂದಿ ಆಂಟಿರೆಟ್ರೋವೈರಲ್ ಥೆರಪಿ (ಎಆರ್‌ಟಿ) ಚಿಕಿತ್ಸೆ ಪಡೆಯುತ್ತಿದ್ದರು. ಈ ಮಾಹಿತಿ ಕ್ಲಿನಿಕ್‌ನ ಮಹತ್ವವನ್ನು ಒತ್ತಿ ಹೇಳುತ್ತದೆ.

ಯುಎಸ್‌ಏಡ್‌ನ ಎಲ್ಲಾ ವಿದೇಶಿ ನೆರವುಗಳನ್ನು ಸ್ಥಗಿತಗೊಳಿಸುವ ಟ್ರಂಪ್ ಆದೇಶ ಜಗತ್ತಿನಾದ್ಯಂತ ವಿವಿಧ ಮಹತ್ವದ ಯೋಜನೆಗಳ ಮೇಲೆ ಭವಿಷ್ಯದಲ್ಲಿ ದೊಡ್ಡ ಪರಿಣಾಮ ಬೀರಬಹುದು ಎಂದು ಅಂದಾಜಿಸಲಾಗಿದೆ.

ಟ್ರಂಪ್‌ ಅವರ ಇಂತಹ ನೀತಿಗಳು ವಿಶ್ವದಾದ್ಯಂತ ದುರ್ಬಲ ಜನಸಂಖ್ಯೆಯ ಮೇಲೆ ವಿನಾಶಕಾರಿ ಪರಿಣಾಮಗಳನ್ನು ಬೀರುತ್ತವೆ. ‘ಮಿತ್ರ್ ಕ್ಲಿನಿಕ್’ ಮುಚ್ಚುವಿಕೆಯು ಅದನ್ನು ಎತ್ತಿ ತೋರಿಸಿದೆ. ಕ್ಲಿನಿಕ್ ಮುಚ್ಚಿದ್ದರಿಂದ ಸಾವಿರಾರು ಜನರು ನಿರ್ಣಾಯಕ ಆರೋಗ್ಯ ಸೇವೆಗಳಿಂದ ವಂಚಿತರಾಗುತ್ತಿದ್ದಾರೆ. ಅದರ ಸಿಬ್ಬಂದಿ ನಿರುದ್ಯೋಗಿಗಳಾಗಿದ್ದಾರೆ.

ಕ್ಲಿನಿಕ್‌ನಲ್ಲಿ ಕೆಲವು ಜೀವ ಉಳಿಸುವ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಮುಂದುವರಿಸಲು ಅನುಮತಿಸಲಾಗಿದೆಯಾದರೂ, ಟ್ರಾನ್ಸ್‌ಜೆಂಡರ್ ಸಮುದಾಯದ ಮೇಲೆ ಕ್ಲಿನಿಕ್ ಮುಚ್ಚುವಿಕೆ ದೀರ್ಘಕಾಲೀನ ಪರಿಣಾಮ ಬೀರಿಲಿದೆ ಎಂದು ವರದಿಗಳು ಹೇಳಿವೆ.

ಕ್ಲಿನಿಕ್ ಸ್ಥಗಿತಕ್ಕೆ ಎಲಾನ್‌ ಮಸ್ಕ್ ಪ್ರತಿಕ್ರಿಯೆ

ಭಾರತದ ಮೊಟ್ಟ ಮೊದಲ ಟ್ರಾನ್ಸ್‌ಜೆಂಡರ್ ಆರೋಗ್ಯ ಸೌಲಭ್ಯ, ‘ಮಿತ್ರ್ ಕ್ಲಿನಿಕ್’ ಮುಚ್ಚಿದೆ ಎಂಬ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಉದ್ಯಮಿ ಹಾಗೂ ಅಮೆರಿಕದ ಸರ್ಕಾರಿ ದಕ್ಷತೆಯ ಇಲಾಖೆಯ ಮುಖ್ಯಸ್ಥ ಎಲಾನ್‌ ಮಸ್ಕ್‌, “ಅದಕ್ಕೆ ಅಮೆರಿಕದ ತೆರಿಗೆದಾರರ ಹಣವನ್ನು ಬಳಸಲಾಗುತ್ತಿತ್ತು” ಎಂದು ಹೇಳಿದ್ದಾರೆ. ಇದು ಭಾರೀ ಟೀಕೆಗೆ ಕಾರಣವಾಗಿದೆ. ” “ಹಾಗಾದರೆ ಆರೋಗ್ಯ ಸೇವೆಗೆ ಹಣ ವ್ಯಯಿಸುವುದು ವ್ಯರ್ಥವೇ?” ಎಂದು ಹಲವು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...