Homeಮುಖಪುಟಯುಎಸ್‌ಏಡ್‌ ವಿದೇಶಿ ನೆರವು ಸ್ಥಗಿತಗೊಳಿಸಿದ ಟ್ರಂಪ್ : ಬಾಗಿಲು ಮುಚ್ಚಿದ ಭಾರತದ ಮೊದಲ ಟ್ರಾನ್ಸ್‌ಜೆಂಡರ್ ಕ್ಲಿನಿಕ್

ಯುಎಸ್‌ಏಡ್‌ ವಿದೇಶಿ ನೆರವು ಸ್ಥಗಿತಗೊಳಿಸಿದ ಟ್ರಂಪ್ : ಬಾಗಿಲು ಮುಚ್ಚಿದ ಭಾರತದ ಮೊದಲ ಟ್ರಾನ್ಸ್‌ಜೆಂಡರ್ ಕ್ಲಿನಿಕ್

- Advertisement -
- Advertisement -

ಎಲ್ಲಾ ರೀತಿಯ ಯುಎಸ್‌ಏಡ್‌ ವಿದೇಶಿ ನೆರವನ್ನು 90 ದಿನಗಳ ಕಾಲ ಸ್ಥಗಿತಗೊಳಿಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶಿಸಿದ ಬಳಿಕ ಹೈದರಾಬಾದ್‌ನಲ್ಲಿ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳಿಗೆ ಆರೋಗ್ಯ ಸೌಲಭ್ಯ ಒದಗಿಸುತ್ತಿದ್ದ ‘ಮಿತ್ರ್ ಕ್ಲಿನಿಕ್’ ಮುಚ್ಚಲ್ಪಟ್ಟಿದೆ ಎಂದು ವರದಿಯಾಗಿದೆ.

ಡೊನಾಲ್ಡ್ ಟ್ರಂಪ್ ನೇತೃತ್ವದ ಸರ್ಕಾರ ಅಮೆರಿಕದಿಂದ ಇತರ ರಾಷ್ಟ್ರಗಳಿಗೆ ನೀಡಲಾಗುತ್ತಿರುವ ವಿವಿಧ ರೀತಿಯ ನೆರವುಗಳ ಕುರಿತು ಪರಿಶೀಲನೆಗೆ ಮುಂದಾಗಿದ್ದು, ಯುಎಸ್‌ಏಡ್‌ ಮೂಲಕ ನೀಡಲಾಗುತ್ತಿದ್ದ ಹಲವು ವಿದೇಶಿ ನೆರವುಗಳನ್ನು ಸ್ಥಗಿತಗೊಳಿಸಿದೆ.

ಉದ್ಯಮಿ ಎಲಾನ್‌ ಮಸ್ಕ್‌ ನೇತೃತ್ವದ ಅಮೆರಿಕದ ಸರ್ಕಾರಿ ದಕ್ಷತೆಯ ಇಲಾಖೆಯು ವೆಚ್ಚಗಳಲ್ಲಿ ಕಡಿತ ಮಾಡಲು ಈ ಕ್ರಮ ಕೈಗೊಂಡಿದೆ. ಟ್ರಂಪ್ ಮತ್ತು ಎಲಾನ್‌ ಮಸ್ಕ್‌ ಇಬ್ಬರೂ ಅಮೆರಿಕದಿಂದ ಇತರ ರಾಷ್ಟ್ರಗಳಿಗೆ ಹಣ ಹರಿಯುವುದನ್ನು ತಡೆಯಲು ಮುಂದಾಗಿದ್ದಾರೆ.

ಇದರಿಂದ ಯುಎಸ್‌ಏಡ್‌ ಮೂಲಕ ಜಗತ್ತಿನ ವಿವಿಧ ರಾಷ್ಟ್ರಗಳಲ್ಲಿ ನಡೆಯುತ್ತಿದ್ದ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದೆ. ಹೈದರಾಬಾದ್‌ನ ಟ್ರಾನ್ಸ್‌ಜೆಂಡರ್ ಕ್ಲಿನಿಕ್‌ ಕೂಡ ಅದರಲ್ಲಿ ಒಂದು. ಯುಎಸ್‌ಏಡ್‌ ಸ್ಥಗಿತದಿಂದ ಈ ಕ್ಲಿನಿಕ್‌ನಲ್ಲಿ ಹೆಚ್‌ಐವಿಗೆ ಚಿಕಿತ್ಸೆ ನೀಡುವ ಪ್ರಾಜೆಕ್ಟ್ ಅಕ್ಸೆಲರೇಟ್ ಕೂಡ ಬಂದ್ ಆಗಿದೆ.

ಜನವರಿ 2021ರಲ್ಲಿ ಸ್ಥಾಪನೆಯಾದ ‘ಮಿತ್ರ್ ಕ್ಲಿನಿಕ್’ ಭಾರತದ ಮೊದಲ ಟ್ರಾನ್ಸ್‌ಜೆಂಡರ್ ಕೇಂದ್ರಿತ ಆರೋಗ್ಯ ಕೇಂದ್ರಗಳಲ್ಲಿ ಒಂದಾಗಿದ್ದು, ಸಾಮಾನ್ಯ ಆರೋಗ್ಯ ಸಮಾಲೋಚನೆಗಳು, ಹೆಚ್ಐವಿ ಸಮಾಲೋಚನೆ ಮತ್ತು ಚಿಕಿತ್ಸೆ, ಮಾನಸಿಕ ಆರೋಗ್ಯ ಸಹಾಯ, ಲಿಂಗ ದೃಢೀಕರಣ ಸೇವೆಗಳು ಮತ್ತು ಕಾನೂನು ಮತ್ತು ಸಾಮಾಜಿಕ ಯೋಜನೆಗಳನ್ನು ಪಡೆಯಲು ಸಹಾಯದಂತಹ ಅಗತ್ಯ ಸೇವೆಗಳನ್ನು ಇದು ಒದಗಿಸುತ್ತಿತ್ತು.

LGBTQIA+ ಸಮುದಾಯದ ಆರೋಗ್ಯ ಅಗತ್ಯಗಳನ್ನು ಪೂರೈಸುವಲ್ಲಿ, ವಿಶೇಷವಾಗಿ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳಲ್ಲಿನ ಹೆಚ್‌ಐವಿ ಸಮಸ್ಯೆಯನ್ನು ಎದುರಿಸುವಲ್ಲಿ ಈ ಚಿಕಿತ್ಸಾಲಯವು ಪ್ರಮುಖ ಪಾತ್ರ ವಹಿಸುತ್ತಿತ್ತು.

2024ರ ಮಧ್ಯದ ವೇಳೆಗೆ, ಸುಮಾರು 4,900 ಕ್ಕೂ ಹೆಚ್ಚು ವ್ಯಕ್ತಿಗಳು ಈ ಕ್ಲಿನಿಕ್‌ನಲ್ಲಿ ನೋಂದಾಯಿಸಿಕೊಂಡಿದ್ದರು. ಮಾಸಿಕ 150–200 ವ್ಯಕ್ತಿಗಳಿಗೆ ಕ್ಲಿನಿಕ್ ಸೇವೆ ಒದಗಿಸುತ್ತಿತ್ತು. ಗಮನಾರ್ಹವಾಗಿ, ಕ್ಲಿನಿಕ್ ಏಳು ಟ್ರಾನ್ಸ್‌ಜೆಂಡರ್ ಸಿಬ್ಬಂದಿಯನ್ನು ನೇಮಿಸಿಕೊಂಡಿತ್ತು. ಅವರಿಗೆ ಉದ್ಯೋಗ ಮತ್ತು ಸಮುದಾಯದ ಪ್ರಜ್ಞೆಯನ್ನು ನೀಡಿತ್ತು.

ಟ್ರಾನ್ಸ್‌ಜೆಂಡರ್ ಕ್ಲಿನಿಕ್ ನೋಂದಾಯಿಸಿಕೊಂಡ ಒಟ್ಟು ರೋಗಿಗಳಲ್ಲಿ ಶೇಖಡ 6ರಷ್ಟು ಜನರು ಹೆಚ್‌ಐವಿ ಪಾಸಿಟಿವ್ ದೃಢಪಟ್ಟವರು ಇದ್ದರು. ಈ ಪೈಕಿ ಶೇಖಡ 83ರಷ್ಟು ಮಂದಿ ಆಂಟಿರೆಟ್ರೋವೈರಲ್ ಥೆರಪಿ (ಎಆರ್‌ಟಿ) ಚಿಕಿತ್ಸೆ ಪಡೆಯುತ್ತಿದ್ದರು. ಈ ಮಾಹಿತಿ ಕ್ಲಿನಿಕ್‌ನ ಮಹತ್ವವನ್ನು ಒತ್ತಿ ಹೇಳುತ್ತದೆ.

ಯುಎಸ್‌ಏಡ್‌ನ ಎಲ್ಲಾ ವಿದೇಶಿ ನೆರವುಗಳನ್ನು ಸ್ಥಗಿತಗೊಳಿಸುವ ಟ್ರಂಪ್ ಆದೇಶ ಜಗತ್ತಿನಾದ್ಯಂತ ವಿವಿಧ ಮಹತ್ವದ ಯೋಜನೆಗಳ ಮೇಲೆ ಭವಿಷ್ಯದಲ್ಲಿ ದೊಡ್ಡ ಪರಿಣಾಮ ಬೀರಬಹುದು ಎಂದು ಅಂದಾಜಿಸಲಾಗಿದೆ.

ಟ್ರಂಪ್‌ ಅವರ ಇಂತಹ ನೀತಿಗಳು ವಿಶ್ವದಾದ್ಯಂತ ದುರ್ಬಲ ಜನಸಂಖ್ಯೆಯ ಮೇಲೆ ವಿನಾಶಕಾರಿ ಪರಿಣಾಮಗಳನ್ನು ಬೀರುತ್ತವೆ. ‘ಮಿತ್ರ್ ಕ್ಲಿನಿಕ್’ ಮುಚ್ಚುವಿಕೆಯು ಅದನ್ನು ಎತ್ತಿ ತೋರಿಸಿದೆ. ಕ್ಲಿನಿಕ್ ಮುಚ್ಚಿದ್ದರಿಂದ ಸಾವಿರಾರು ಜನರು ನಿರ್ಣಾಯಕ ಆರೋಗ್ಯ ಸೇವೆಗಳಿಂದ ವಂಚಿತರಾಗುತ್ತಿದ್ದಾರೆ. ಅದರ ಸಿಬ್ಬಂದಿ ನಿರುದ್ಯೋಗಿಗಳಾಗಿದ್ದಾರೆ.

ಕ್ಲಿನಿಕ್‌ನಲ್ಲಿ ಕೆಲವು ಜೀವ ಉಳಿಸುವ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಮುಂದುವರಿಸಲು ಅನುಮತಿಸಲಾಗಿದೆಯಾದರೂ, ಟ್ರಾನ್ಸ್‌ಜೆಂಡರ್ ಸಮುದಾಯದ ಮೇಲೆ ಕ್ಲಿನಿಕ್ ಮುಚ್ಚುವಿಕೆ ದೀರ್ಘಕಾಲೀನ ಪರಿಣಾಮ ಬೀರಿಲಿದೆ ಎಂದು ವರದಿಗಳು ಹೇಳಿವೆ.

ಕ್ಲಿನಿಕ್ ಸ್ಥಗಿತಕ್ಕೆ ಎಲಾನ್‌ ಮಸ್ಕ್ ಪ್ರತಿಕ್ರಿಯೆ

ಭಾರತದ ಮೊಟ್ಟ ಮೊದಲ ಟ್ರಾನ್ಸ್‌ಜೆಂಡರ್ ಆರೋಗ್ಯ ಸೌಲಭ್ಯ, ‘ಮಿತ್ರ್ ಕ್ಲಿನಿಕ್’ ಮುಚ್ಚಿದೆ ಎಂಬ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಉದ್ಯಮಿ ಹಾಗೂ ಅಮೆರಿಕದ ಸರ್ಕಾರಿ ದಕ್ಷತೆಯ ಇಲಾಖೆಯ ಮುಖ್ಯಸ್ಥ ಎಲಾನ್‌ ಮಸ್ಕ್‌, “ಅದಕ್ಕೆ ಅಮೆರಿಕದ ತೆರಿಗೆದಾರರ ಹಣವನ್ನು ಬಳಸಲಾಗುತ್ತಿತ್ತು” ಎಂದು ಹೇಳಿದ್ದಾರೆ. ಇದು ಭಾರೀ ಟೀಕೆಗೆ ಕಾರಣವಾಗಿದೆ. ” “ಹಾಗಾದರೆ ಆರೋಗ್ಯ ಸೇವೆಗೆ ಹಣ ವ್ಯಯಿಸುವುದು ವ್ಯರ್ಥವೇ?” ಎಂದು ಹಲವು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...