Homeಮುಖಪುಟಯುಎಸ್‌ಏಡ್‌ ವಿದೇಶಿ ನೆರವು ಸ್ಥಗಿತಗೊಳಿಸಿದ ಟ್ರಂಪ್ : ಬಾಗಿಲು ಮುಚ್ಚಿದ ಭಾರತದ ಮೊದಲ ಟ್ರಾನ್ಸ್‌ಜೆಂಡರ್ ಕ್ಲಿನಿಕ್

ಯುಎಸ್‌ಏಡ್‌ ವಿದೇಶಿ ನೆರವು ಸ್ಥಗಿತಗೊಳಿಸಿದ ಟ್ರಂಪ್ : ಬಾಗಿಲು ಮುಚ್ಚಿದ ಭಾರತದ ಮೊದಲ ಟ್ರಾನ್ಸ್‌ಜೆಂಡರ್ ಕ್ಲಿನಿಕ್

- Advertisement -
- Advertisement -

ಎಲ್ಲಾ ರೀತಿಯ ಯುಎಸ್‌ಏಡ್‌ ವಿದೇಶಿ ನೆರವನ್ನು 90 ದಿನಗಳ ಕಾಲ ಸ್ಥಗಿತಗೊಳಿಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶಿಸಿದ ಬಳಿಕ ಹೈದರಾಬಾದ್‌ನಲ್ಲಿ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳಿಗೆ ಆರೋಗ್ಯ ಸೌಲಭ್ಯ ಒದಗಿಸುತ್ತಿದ್ದ ‘ಮಿತ್ರ್ ಕ್ಲಿನಿಕ್’ ಮುಚ್ಚಲ್ಪಟ್ಟಿದೆ ಎಂದು ವರದಿಯಾಗಿದೆ.

ಡೊನಾಲ್ಡ್ ಟ್ರಂಪ್ ನೇತೃತ್ವದ ಸರ್ಕಾರ ಅಮೆರಿಕದಿಂದ ಇತರ ರಾಷ್ಟ್ರಗಳಿಗೆ ನೀಡಲಾಗುತ್ತಿರುವ ವಿವಿಧ ರೀತಿಯ ನೆರವುಗಳ ಕುರಿತು ಪರಿಶೀಲನೆಗೆ ಮುಂದಾಗಿದ್ದು, ಯುಎಸ್‌ಏಡ್‌ ಮೂಲಕ ನೀಡಲಾಗುತ್ತಿದ್ದ ಹಲವು ವಿದೇಶಿ ನೆರವುಗಳನ್ನು ಸ್ಥಗಿತಗೊಳಿಸಿದೆ.

ಉದ್ಯಮಿ ಎಲಾನ್‌ ಮಸ್ಕ್‌ ನೇತೃತ್ವದ ಅಮೆರಿಕದ ಸರ್ಕಾರಿ ದಕ್ಷತೆಯ ಇಲಾಖೆಯು ವೆಚ್ಚಗಳಲ್ಲಿ ಕಡಿತ ಮಾಡಲು ಈ ಕ್ರಮ ಕೈಗೊಂಡಿದೆ. ಟ್ರಂಪ್ ಮತ್ತು ಎಲಾನ್‌ ಮಸ್ಕ್‌ ಇಬ್ಬರೂ ಅಮೆರಿಕದಿಂದ ಇತರ ರಾಷ್ಟ್ರಗಳಿಗೆ ಹಣ ಹರಿಯುವುದನ್ನು ತಡೆಯಲು ಮುಂದಾಗಿದ್ದಾರೆ.

ಇದರಿಂದ ಯುಎಸ್‌ಏಡ್‌ ಮೂಲಕ ಜಗತ್ತಿನ ವಿವಿಧ ರಾಷ್ಟ್ರಗಳಲ್ಲಿ ನಡೆಯುತ್ತಿದ್ದ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದೆ. ಹೈದರಾಬಾದ್‌ನ ಟ್ರಾನ್ಸ್‌ಜೆಂಡರ್ ಕ್ಲಿನಿಕ್‌ ಕೂಡ ಅದರಲ್ಲಿ ಒಂದು. ಯುಎಸ್‌ಏಡ್‌ ಸ್ಥಗಿತದಿಂದ ಈ ಕ್ಲಿನಿಕ್‌ನಲ್ಲಿ ಹೆಚ್‌ಐವಿಗೆ ಚಿಕಿತ್ಸೆ ನೀಡುವ ಪ್ರಾಜೆಕ್ಟ್ ಅಕ್ಸೆಲರೇಟ್ ಕೂಡ ಬಂದ್ ಆಗಿದೆ.

ಜನವರಿ 2021ರಲ್ಲಿ ಸ್ಥಾಪನೆಯಾದ ‘ಮಿತ್ರ್ ಕ್ಲಿನಿಕ್’ ಭಾರತದ ಮೊದಲ ಟ್ರಾನ್ಸ್‌ಜೆಂಡರ್ ಕೇಂದ್ರಿತ ಆರೋಗ್ಯ ಕೇಂದ್ರಗಳಲ್ಲಿ ಒಂದಾಗಿದ್ದು, ಸಾಮಾನ್ಯ ಆರೋಗ್ಯ ಸಮಾಲೋಚನೆಗಳು, ಹೆಚ್ಐವಿ ಸಮಾಲೋಚನೆ ಮತ್ತು ಚಿಕಿತ್ಸೆ, ಮಾನಸಿಕ ಆರೋಗ್ಯ ಸಹಾಯ, ಲಿಂಗ ದೃಢೀಕರಣ ಸೇವೆಗಳು ಮತ್ತು ಕಾನೂನು ಮತ್ತು ಸಾಮಾಜಿಕ ಯೋಜನೆಗಳನ್ನು ಪಡೆಯಲು ಸಹಾಯದಂತಹ ಅಗತ್ಯ ಸೇವೆಗಳನ್ನು ಇದು ಒದಗಿಸುತ್ತಿತ್ತು.

LGBTQIA+ ಸಮುದಾಯದ ಆರೋಗ್ಯ ಅಗತ್ಯಗಳನ್ನು ಪೂರೈಸುವಲ್ಲಿ, ವಿಶೇಷವಾಗಿ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳಲ್ಲಿನ ಹೆಚ್‌ಐವಿ ಸಮಸ್ಯೆಯನ್ನು ಎದುರಿಸುವಲ್ಲಿ ಈ ಚಿಕಿತ್ಸಾಲಯವು ಪ್ರಮುಖ ಪಾತ್ರ ವಹಿಸುತ್ತಿತ್ತು.

2024ರ ಮಧ್ಯದ ವೇಳೆಗೆ, ಸುಮಾರು 4,900 ಕ್ಕೂ ಹೆಚ್ಚು ವ್ಯಕ್ತಿಗಳು ಈ ಕ್ಲಿನಿಕ್‌ನಲ್ಲಿ ನೋಂದಾಯಿಸಿಕೊಂಡಿದ್ದರು. ಮಾಸಿಕ 150–200 ವ್ಯಕ್ತಿಗಳಿಗೆ ಕ್ಲಿನಿಕ್ ಸೇವೆ ಒದಗಿಸುತ್ತಿತ್ತು. ಗಮನಾರ್ಹವಾಗಿ, ಕ್ಲಿನಿಕ್ ಏಳು ಟ್ರಾನ್ಸ್‌ಜೆಂಡರ್ ಸಿಬ್ಬಂದಿಯನ್ನು ನೇಮಿಸಿಕೊಂಡಿತ್ತು. ಅವರಿಗೆ ಉದ್ಯೋಗ ಮತ್ತು ಸಮುದಾಯದ ಪ್ರಜ್ಞೆಯನ್ನು ನೀಡಿತ್ತು.

ಟ್ರಾನ್ಸ್‌ಜೆಂಡರ್ ಕ್ಲಿನಿಕ್ ನೋಂದಾಯಿಸಿಕೊಂಡ ಒಟ್ಟು ರೋಗಿಗಳಲ್ಲಿ ಶೇಖಡ 6ರಷ್ಟು ಜನರು ಹೆಚ್‌ಐವಿ ಪಾಸಿಟಿವ್ ದೃಢಪಟ್ಟವರು ಇದ್ದರು. ಈ ಪೈಕಿ ಶೇಖಡ 83ರಷ್ಟು ಮಂದಿ ಆಂಟಿರೆಟ್ರೋವೈರಲ್ ಥೆರಪಿ (ಎಆರ್‌ಟಿ) ಚಿಕಿತ್ಸೆ ಪಡೆಯುತ್ತಿದ್ದರು. ಈ ಮಾಹಿತಿ ಕ್ಲಿನಿಕ್‌ನ ಮಹತ್ವವನ್ನು ಒತ್ತಿ ಹೇಳುತ್ತದೆ.

ಯುಎಸ್‌ಏಡ್‌ನ ಎಲ್ಲಾ ವಿದೇಶಿ ನೆರವುಗಳನ್ನು ಸ್ಥಗಿತಗೊಳಿಸುವ ಟ್ರಂಪ್ ಆದೇಶ ಜಗತ್ತಿನಾದ್ಯಂತ ವಿವಿಧ ಮಹತ್ವದ ಯೋಜನೆಗಳ ಮೇಲೆ ಭವಿಷ್ಯದಲ್ಲಿ ದೊಡ್ಡ ಪರಿಣಾಮ ಬೀರಬಹುದು ಎಂದು ಅಂದಾಜಿಸಲಾಗಿದೆ.

ಟ್ರಂಪ್‌ ಅವರ ಇಂತಹ ನೀತಿಗಳು ವಿಶ್ವದಾದ್ಯಂತ ದುರ್ಬಲ ಜನಸಂಖ್ಯೆಯ ಮೇಲೆ ವಿನಾಶಕಾರಿ ಪರಿಣಾಮಗಳನ್ನು ಬೀರುತ್ತವೆ. ‘ಮಿತ್ರ್ ಕ್ಲಿನಿಕ್’ ಮುಚ್ಚುವಿಕೆಯು ಅದನ್ನು ಎತ್ತಿ ತೋರಿಸಿದೆ. ಕ್ಲಿನಿಕ್ ಮುಚ್ಚಿದ್ದರಿಂದ ಸಾವಿರಾರು ಜನರು ನಿರ್ಣಾಯಕ ಆರೋಗ್ಯ ಸೇವೆಗಳಿಂದ ವಂಚಿತರಾಗುತ್ತಿದ್ದಾರೆ. ಅದರ ಸಿಬ್ಬಂದಿ ನಿರುದ್ಯೋಗಿಗಳಾಗಿದ್ದಾರೆ.

ಕ್ಲಿನಿಕ್‌ನಲ್ಲಿ ಕೆಲವು ಜೀವ ಉಳಿಸುವ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಮುಂದುವರಿಸಲು ಅನುಮತಿಸಲಾಗಿದೆಯಾದರೂ, ಟ್ರಾನ್ಸ್‌ಜೆಂಡರ್ ಸಮುದಾಯದ ಮೇಲೆ ಕ್ಲಿನಿಕ್ ಮುಚ್ಚುವಿಕೆ ದೀರ್ಘಕಾಲೀನ ಪರಿಣಾಮ ಬೀರಿಲಿದೆ ಎಂದು ವರದಿಗಳು ಹೇಳಿವೆ.

ಕ್ಲಿನಿಕ್ ಸ್ಥಗಿತಕ್ಕೆ ಎಲಾನ್‌ ಮಸ್ಕ್ ಪ್ರತಿಕ್ರಿಯೆ

ಭಾರತದ ಮೊಟ್ಟ ಮೊದಲ ಟ್ರಾನ್ಸ್‌ಜೆಂಡರ್ ಆರೋಗ್ಯ ಸೌಲಭ್ಯ, ‘ಮಿತ್ರ್ ಕ್ಲಿನಿಕ್’ ಮುಚ್ಚಿದೆ ಎಂಬ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಉದ್ಯಮಿ ಹಾಗೂ ಅಮೆರಿಕದ ಸರ್ಕಾರಿ ದಕ್ಷತೆಯ ಇಲಾಖೆಯ ಮುಖ್ಯಸ್ಥ ಎಲಾನ್‌ ಮಸ್ಕ್‌, “ಅದಕ್ಕೆ ಅಮೆರಿಕದ ತೆರಿಗೆದಾರರ ಹಣವನ್ನು ಬಳಸಲಾಗುತ್ತಿತ್ತು” ಎಂದು ಹೇಳಿದ್ದಾರೆ. ಇದು ಭಾರೀ ಟೀಕೆಗೆ ಕಾರಣವಾಗಿದೆ. ” “ಹಾಗಾದರೆ ಆರೋಗ್ಯ ಸೇವೆಗೆ ಹಣ ವ್ಯಯಿಸುವುದು ವ್ಯರ್ಥವೇ?” ಎಂದು ಹಲವು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...