Homeಮುಖಪುಟಯುಎಸ್‌ಏಡ್‌ ವಿದೇಶಿ ನೆರವು ಸ್ಥಗಿತಗೊಳಿಸಿದ ಟ್ರಂಪ್ : ಬಾಗಿಲು ಮುಚ್ಚಿದ ಭಾರತದ ಮೊದಲ ಟ್ರಾನ್ಸ್‌ಜೆಂಡರ್ ಕ್ಲಿನಿಕ್

ಯುಎಸ್‌ಏಡ್‌ ವಿದೇಶಿ ನೆರವು ಸ್ಥಗಿತಗೊಳಿಸಿದ ಟ್ರಂಪ್ : ಬಾಗಿಲು ಮುಚ್ಚಿದ ಭಾರತದ ಮೊದಲ ಟ್ರಾನ್ಸ್‌ಜೆಂಡರ್ ಕ್ಲಿನಿಕ್

- Advertisement -
- Advertisement -

ಎಲ್ಲಾ ರೀತಿಯ ಯುಎಸ್‌ಏಡ್‌ ವಿದೇಶಿ ನೆರವನ್ನು 90 ದಿನಗಳ ಕಾಲ ಸ್ಥಗಿತಗೊಳಿಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶಿಸಿದ ಬಳಿಕ ಹೈದರಾಬಾದ್‌ನಲ್ಲಿ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳಿಗೆ ಆರೋಗ್ಯ ಸೌಲಭ್ಯ ಒದಗಿಸುತ್ತಿದ್ದ ‘ಮಿತ್ರ್ ಕ್ಲಿನಿಕ್’ ಮುಚ್ಚಲ್ಪಟ್ಟಿದೆ ಎಂದು ವರದಿಯಾಗಿದೆ.

ಡೊನಾಲ್ಡ್ ಟ್ರಂಪ್ ನೇತೃತ್ವದ ಸರ್ಕಾರ ಅಮೆರಿಕದಿಂದ ಇತರ ರಾಷ್ಟ್ರಗಳಿಗೆ ನೀಡಲಾಗುತ್ತಿರುವ ವಿವಿಧ ರೀತಿಯ ನೆರವುಗಳ ಕುರಿತು ಪರಿಶೀಲನೆಗೆ ಮುಂದಾಗಿದ್ದು, ಯುಎಸ್‌ಏಡ್‌ ಮೂಲಕ ನೀಡಲಾಗುತ್ತಿದ್ದ ಹಲವು ವಿದೇಶಿ ನೆರವುಗಳನ್ನು ಸ್ಥಗಿತಗೊಳಿಸಿದೆ.

ಉದ್ಯಮಿ ಎಲಾನ್‌ ಮಸ್ಕ್‌ ನೇತೃತ್ವದ ಅಮೆರಿಕದ ಸರ್ಕಾರಿ ದಕ್ಷತೆಯ ಇಲಾಖೆಯು ವೆಚ್ಚಗಳಲ್ಲಿ ಕಡಿತ ಮಾಡಲು ಈ ಕ್ರಮ ಕೈಗೊಂಡಿದೆ. ಟ್ರಂಪ್ ಮತ್ತು ಎಲಾನ್‌ ಮಸ್ಕ್‌ ಇಬ್ಬರೂ ಅಮೆರಿಕದಿಂದ ಇತರ ರಾಷ್ಟ್ರಗಳಿಗೆ ಹಣ ಹರಿಯುವುದನ್ನು ತಡೆಯಲು ಮುಂದಾಗಿದ್ದಾರೆ.

ಇದರಿಂದ ಯುಎಸ್‌ಏಡ್‌ ಮೂಲಕ ಜಗತ್ತಿನ ವಿವಿಧ ರಾಷ್ಟ್ರಗಳಲ್ಲಿ ನಡೆಯುತ್ತಿದ್ದ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದೆ. ಹೈದರಾಬಾದ್‌ನ ಟ್ರಾನ್ಸ್‌ಜೆಂಡರ್ ಕ್ಲಿನಿಕ್‌ ಕೂಡ ಅದರಲ್ಲಿ ಒಂದು. ಯುಎಸ್‌ಏಡ್‌ ಸ್ಥಗಿತದಿಂದ ಈ ಕ್ಲಿನಿಕ್‌ನಲ್ಲಿ ಹೆಚ್‌ಐವಿಗೆ ಚಿಕಿತ್ಸೆ ನೀಡುವ ಪ್ರಾಜೆಕ್ಟ್ ಅಕ್ಸೆಲರೇಟ್ ಕೂಡ ಬಂದ್ ಆಗಿದೆ.

ಜನವರಿ 2021ರಲ್ಲಿ ಸ್ಥಾಪನೆಯಾದ ‘ಮಿತ್ರ್ ಕ್ಲಿನಿಕ್’ ಭಾರತದ ಮೊದಲ ಟ್ರಾನ್ಸ್‌ಜೆಂಡರ್ ಕೇಂದ್ರಿತ ಆರೋಗ್ಯ ಕೇಂದ್ರಗಳಲ್ಲಿ ಒಂದಾಗಿದ್ದು, ಸಾಮಾನ್ಯ ಆರೋಗ್ಯ ಸಮಾಲೋಚನೆಗಳು, ಹೆಚ್ಐವಿ ಸಮಾಲೋಚನೆ ಮತ್ತು ಚಿಕಿತ್ಸೆ, ಮಾನಸಿಕ ಆರೋಗ್ಯ ಸಹಾಯ, ಲಿಂಗ ದೃಢೀಕರಣ ಸೇವೆಗಳು ಮತ್ತು ಕಾನೂನು ಮತ್ತು ಸಾಮಾಜಿಕ ಯೋಜನೆಗಳನ್ನು ಪಡೆಯಲು ಸಹಾಯದಂತಹ ಅಗತ್ಯ ಸೇವೆಗಳನ್ನು ಇದು ಒದಗಿಸುತ್ತಿತ್ತು.

LGBTQIA+ ಸಮುದಾಯದ ಆರೋಗ್ಯ ಅಗತ್ಯಗಳನ್ನು ಪೂರೈಸುವಲ್ಲಿ, ವಿಶೇಷವಾಗಿ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳಲ್ಲಿನ ಹೆಚ್‌ಐವಿ ಸಮಸ್ಯೆಯನ್ನು ಎದುರಿಸುವಲ್ಲಿ ಈ ಚಿಕಿತ್ಸಾಲಯವು ಪ್ರಮುಖ ಪಾತ್ರ ವಹಿಸುತ್ತಿತ್ತು.

2024ರ ಮಧ್ಯದ ವೇಳೆಗೆ, ಸುಮಾರು 4,900 ಕ್ಕೂ ಹೆಚ್ಚು ವ್ಯಕ್ತಿಗಳು ಈ ಕ್ಲಿನಿಕ್‌ನಲ್ಲಿ ನೋಂದಾಯಿಸಿಕೊಂಡಿದ್ದರು. ಮಾಸಿಕ 150–200 ವ್ಯಕ್ತಿಗಳಿಗೆ ಕ್ಲಿನಿಕ್ ಸೇವೆ ಒದಗಿಸುತ್ತಿತ್ತು. ಗಮನಾರ್ಹವಾಗಿ, ಕ್ಲಿನಿಕ್ ಏಳು ಟ್ರಾನ್ಸ್‌ಜೆಂಡರ್ ಸಿಬ್ಬಂದಿಯನ್ನು ನೇಮಿಸಿಕೊಂಡಿತ್ತು. ಅವರಿಗೆ ಉದ್ಯೋಗ ಮತ್ತು ಸಮುದಾಯದ ಪ್ರಜ್ಞೆಯನ್ನು ನೀಡಿತ್ತು.

ಟ್ರಾನ್ಸ್‌ಜೆಂಡರ್ ಕ್ಲಿನಿಕ್ ನೋಂದಾಯಿಸಿಕೊಂಡ ಒಟ್ಟು ರೋಗಿಗಳಲ್ಲಿ ಶೇಖಡ 6ರಷ್ಟು ಜನರು ಹೆಚ್‌ಐವಿ ಪಾಸಿಟಿವ್ ದೃಢಪಟ್ಟವರು ಇದ್ದರು. ಈ ಪೈಕಿ ಶೇಖಡ 83ರಷ್ಟು ಮಂದಿ ಆಂಟಿರೆಟ್ರೋವೈರಲ್ ಥೆರಪಿ (ಎಆರ್‌ಟಿ) ಚಿಕಿತ್ಸೆ ಪಡೆಯುತ್ತಿದ್ದರು. ಈ ಮಾಹಿತಿ ಕ್ಲಿನಿಕ್‌ನ ಮಹತ್ವವನ್ನು ಒತ್ತಿ ಹೇಳುತ್ತದೆ.

ಯುಎಸ್‌ಏಡ್‌ನ ಎಲ್ಲಾ ವಿದೇಶಿ ನೆರವುಗಳನ್ನು ಸ್ಥಗಿತಗೊಳಿಸುವ ಟ್ರಂಪ್ ಆದೇಶ ಜಗತ್ತಿನಾದ್ಯಂತ ವಿವಿಧ ಮಹತ್ವದ ಯೋಜನೆಗಳ ಮೇಲೆ ಭವಿಷ್ಯದಲ್ಲಿ ದೊಡ್ಡ ಪರಿಣಾಮ ಬೀರಬಹುದು ಎಂದು ಅಂದಾಜಿಸಲಾಗಿದೆ.

ಟ್ರಂಪ್‌ ಅವರ ಇಂತಹ ನೀತಿಗಳು ವಿಶ್ವದಾದ್ಯಂತ ದುರ್ಬಲ ಜನಸಂಖ್ಯೆಯ ಮೇಲೆ ವಿನಾಶಕಾರಿ ಪರಿಣಾಮಗಳನ್ನು ಬೀರುತ್ತವೆ. ‘ಮಿತ್ರ್ ಕ್ಲಿನಿಕ್’ ಮುಚ್ಚುವಿಕೆಯು ಅದನ್ನು ಎತ್ತಿ ತೋರಿಸಿದೆ. ಕ್ಲಿನಿಕ್ ಮುಚ್ಚಿದ್ದರಿಂದ ಸಾವಿರಾರು ಜನರು ನಿರ್ಣಾಯಕ ಆರೋಗ್ಯ ಸೇವೆಗಳಿಂದ ವಂಚಿತರಾಗುತ್ತಿದ್ದಾರೆ. ಅದರ ಸಿಬ್ಬಂದಿ ನಿರುದ್ಯೋಗಿಗಳಾಗಿದ್ದಾರೆ.

ಕ್ಲಿನಿಕ್‌ನಲ್ಲಿ ಕೆಲವು ಜೀವ ಉಳಿಸುವ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಮುಂದುವರಿಸಲು ಅನುಮತಿಸಲಾಗಿದೆಯಾದರೂ, ಟ್ರಾನ್ಸ್‌ಜೆಂಡರ್ ಸಮುದಾಯದ ಮೇಲೆ ಕ್ಲಿನಿಕ್ ಮುಚ್ಚುವಿಕೆ ದೀರ್ಘಕಾಲೀನ ಪರಿಣಾಮ ಬೀರಿಲಿದೆ ಎಂದು ವರದಿಗಳು ಹೇಳಿವೆ.

ಕ್ಲಿನಿಕ್ ಸ್ಥಗಿತಕ್ಕೆ ಎಲಾನ್‌ ಮಸ್ಕ್ ಪ್ರತಿಕ್ರಿಯೆ

ಭಾರತದ ಮೊಟ್ಟ ಮೊದಲ ಟ್ರಾನ್ಸ್‌ಜೆಂಡರ್ ಆರೋಗ್ಯ ಸೌಲಭ್ಯ, ‘ಮಿತ್ರ್ ಕ್ಲಿನಿಕ್’ ಮುಚ್ಚಿದೆ ಎಂಬ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಉದ್ಯಮಿ ಹಾಗೂ ಅಮೆರಿಕದ ಸರ್ಕಾರಿ ದಕ್ಷತೆಯ ಇಲಾಖೆಯ ಮುಖ್ಯಸ್ಥ ಎಲಾನ್‌ ಮಸ್ಕ್‌, “ಅದಕ್ಕೆ ಅಮೆರಿಕದ ತೆರಿಗೆದಾರರ ಹಣವನ್ನು ಬಳಸಲಾಗುತ್ತಿತ್ತು” ಎಂದು ಹೇಳಿದ್ದಾರೆ. ಇದು ಭಾರೀ ಟೀಕೆಗೆ ಕಾರಣವಾಗಿದೆ. ” “ಹಾಗಾದರೆ ಆರೋಗ್ಯ ಸೇವೆಗೆ ಹಣ ವ್ಯಯಿಸುವುದು ವ್ಯರ್ಥವೇ?” ಎಂದು ಹಲವು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...