Homeಮುಖಪುಟಯುಎಸ್‌ಏಡ್‌ ವಿದೇಶಿ ನೆರವು ಸ್ಥಗಿತಗೊಳಿಸಿದ ಟ್ರಂಪ್ : ಬಾಗಿಲು ಮುಚ್ಚಿದ ಭಾರತದ ಮೊದಲ ಟ್ರಾನ್ಸ್‌ಜೆಂಡರ್ ಕ್ಲಿನಿಕ್

ಯುಎಸ್‌ಏಡ್‌ ವಿದೇಶಿ ನೆರವು ಸ್ಥಗಿತಗೊಳಿಸಿದ ಟ್ರಂಪ್ : ಬಾಗಿಲು ಮುಚ್ಚಿದ ಭಾರತದ ಮೊದಲ ಟ್ರಾನ್ಸ್‌ಜೆಂಡರ್ ಕ್ಲಿನಿಕ್

- Advertisement -
- Advertisement -

ಎಲ್ಲಾ ರೀತಿಯ ಯುಎಸ್‌ಏಡ್‌ ವಿದೇಶಿ ನೆರವನ್ನು 90 ದಿನಗಳ ಕಾಲ ಸ್ಥಗಿತಗೊಳಿಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶಿಸಿದ ಬಳಿಕ ಹೈದರಾಬಾದ್‌ನಲ್ಲಿ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳಿಗೆ ಆರೋಗ್ಯ ಸೌಲಭ್ಯ ಒದಗಿಸುತ್ತಿದ್ದ ‘ಮಿತ್ರ್ ಕ್ಲಿನಿಕ್’ ಮುಚ್ಚಲ್ಪಟ್ಟಿದೆ ಎಂದು ವರದಿಯಾಗಿದೆ.

ಡೊನಾಲ್ಡ್ ಟ್ರಂಪ್ ನೇತೃತ್ವದ ಸರ್ಕಾರ ಅಮೆರಿಕದಿಂದ ಇತರ ರಾಷ್ಟ್ರಗಳಿಗೆ ನೀಡಲಾಗುತ್ತಿರುವ ವಿವಿಧ ರೀತಿಯ ನೆರವುಗಳ ಕುರಿತು ಪರಿಶೀಲನೆಗೆ ಮುಂದಾಗಿದ್ದು, ಯುಎಸ್‌ಏಡ್‌ ಮೂಲಕ ನೀಡಲಾಗುತ್ತಿದ್ದ ಹಲವು ವಿದೇಶಿ ನೆರವುಗಳನ್ನು ಸ್ಥಗಿತಗೊಳಿಸಿದೆ.

ಉದ್ಯಮಿ ಎಲಾನ್‌ ಮಸ್ಕ್‌ ನೇತೃತ್ವದ ಅಮೆರಿಕದ ಸರ್ಕಾರಿ ದಕ್ಷತೆಯ ಇಲಾಖೆಯು ವೆಚ್ಚಗಳಲ್ಲಿ ಕಡಿತ ಮಾಡಲು ಈ ಕ್ರಮ ಕೈಗೊಂಡಿದೆ. ಟ್ರಂಪ್ ಮತ್ತು ಎಲಾನ್‌ ಮಸ್ಕ್‌ ಇಬ್ಬರೂ ಅಮೆರಿಕದಿಂದ ಇತರ ರಾಷ್ಟ್ರಗಳಿಗೆ ಹಣ ಹರಿಯುವುದನ್ನು ತಡೆಯಲು ಮುಂದಾಗಿದ್ದಾರೆ.

ಇದರಿಂದ ಯುಎಸ್‌ಏಡ್‌ ಮೂಲಕ ಜಗತ್ತಿನ ವಿವಿಧ ರಾಷ್ಟ್ರಗಳಲ್ಲಿ ನಡೆಯುತ್ತಿದ್ದ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದೆ. ಹೈದರಾಬಾದ್‌ನ ಟ್ರಾನ್ಸ್‌ಜೆಂಡರ್ ಕ್ಲಿನಿಕ್‌ ಕೂಡ ಅದರಲ್ಲಿ ಒಂದು. ಯುಎಸ್‌ಏಡ್‌ ಸ್ಥಗಿತದಿಂದ ಈ ಕ್ಲಿನಿಕ್‌ನಲ್ಲಿ ಹೆಚ್‌ಐವಿಗೆ ಚಿಕಿತ್ಸೆ ನೀಡುವ ಪ್ರಾಜೆಕ್ಟ್ ಅಕ್ಸೆಲರೇಟ್ ಕೂಡ ಬಂದ್ ಆಗಿದೆ.

ಜನವರಿ 2021ರಲ್ಲಿ ಸ್ಥಾಪನೆಯಾದ ‘ಮಿತ್ರ್ ಕ್ಲಿನಿಕ್’ ಭಾರತದ ಮೊದಲ ಟ್ರಾನ್ಸ್‌ಜೆಂಡರ್ ಕೇಂದ್ರಿತ ಆರೋಗ್ಯ ಕೇಂದ್ರಗಳಲ್ಲಿ ಒಂದಾಗಿದ್ದು, ಸಾಮಾನ್ಯ ಆರೋಗ್ಯ ಸಮಾಲೋಚನೆಗಳು, ಹೆಚ್ಐವಿ ಸಮಾಲೋಚನೆ ಮತ್ತು ಚಿಕಿತ್ಸೆ, ಮಾನಸಿಕ ಆರೋಗ್ಯ ಸಹಾಯ, ಲಿಂಗ ದೃಢೀಕರಣ ಸೇವೆಗಳು ಮತ್ತು ಕಾನೂನು ಮತ್ತು ಸಾಮಾಜಿಕ ಯೋಜನೆಗಳನ್ನು ಪಡೆಯಲು ಸಹಾಯದಂತಹ ಅಗತ್ಯ ಸೇವೆಗಳನ್ನು ಇದು ಒದಗಿಸುತ್ತಿತ್ತು.

LGBTQIA+ ಸಮುದಾಯದ ಆರೋಗ್ಯ ಅಗತ್ಯಗಳನ್ನು ಪೂರೈಸುವಲ್ಲಿ, ವಿಶೇಷವಾಗಿ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳಲ್ಲಿನ ಹೆಚ್‌ಐವಿ ಸಮಸ್ಯೆಯನ್ನು ಎದುರಿಸುವಲ್ಲಿ ಈ ಚಿಕಿತ್ಸಾಲಯವು ಪ್ರಮುಖ ಪಾತ್ರ ವಹಿಸುತ್ತಿತ್ತು.

2024ರ ಮಧ್ಯದ ವೇಳೆಗೆ, ಸುಮಾರು 4,900 ಕ್ಕೂ ಹೆಚ್ಚು ವ್ಯಕ್ತಿಗಳು ಈ ಕ್ಲಿನಿಕ್‌ನಲ್ಲಿ ನೋಂದಾಯಿಸಿಕೊಂಡಿದ್ದರು. ಮಾಸಿಕ 150–200 ವ್ಯಕ್ತಿಗಳಿಗೆ ಕ್ಲಿನಿಕ್ ಸೇವೆ ಒದಗಿಸುತ್ತಿತ್ತು. ಗಮನಾರ್ಹವಾಗಿ, ಕ್ಲಿನಿಕ್ ಏಳು ಟ್ರಾನ್ಸ್‌ಜೆಂಡರ್ ಸಿಬ್ಬಂದಿಯನ್ನು ನೇಮಿಸಿಕೊಂಡಿತ್ತು. ಅವರಿಗೆ ಉದ್ಯೋಗ ಮತ್ತು ಸಮುದಾಯದ ಪ್ರಜ್ಞೆಯನ್ನು ನೀಡಿತ್ತು.

ಟ್ರಾನ್ಸ್‌ಜೆಂಡರ್ ಕ್ಲಿನಿಕ್ ನೋಂದಾಯಿಸಿಕೊಂಡ ಒಟ್ಟು ರೋಗಿಗಳಲ್ಲಿ ಶೇಖಡ 6ರಷ್ಟು ಜನರು ಹೆಚ್‌ಐವಿ ಪಾಸಿಟಿವ್ ದೃಢಪಟ್ಟವರು ಇದ್ದರು. ಈ ಪೈಕಿ ಶೇಖಡ 83ರಷ್ಟು ಮಂದಿ ಆಂಟಿರೆಟ್ರೋವೈರಲ್ ಥೆರಪಿ (ಎಆರ್‌ಟಿ) ಚಿಕಿತ್ಸೆ ಪಡೆಯುತ್ತಿದ್ದರು. ಈ ಮಾಹಿತಿ ಕ್ಲಿನಿಕ್‌ನ ಮಹತ್ವವನ್ನು ಒತ್ತಿ ಹೇಳುತ್ತದೆ.

ಯುಎಸ್‌ಏಡ್‌ನ ಎಲ್ಲಾ ವಿದೇಶಿ ನೆರವುಗಳನ್ನು ಸ್ಥಗಿತಗೊಳಿಸುವ ಟ್ರಂಪ್ ಆದೇಶ ಜಗತ್ತಿನಾದ್ಯಂತ ವಿವಿಧ ಮಹತ್ವದ ಯೋಜನೆಗಳ ಮೇಲೆ ಭವಿಷ್ಯದಲ್ಲಿ ದೊಡ್ಡ ಪರಿಣಾಮ ಬೀರಬಹುದು ಎಂದು ಅಂದಾಜಿಸಲಾಗಿದೆ.

ಟ್ರಂಪ್‌ ಅವರ ಇಂತಹ ನೀತಿಗಳು ವಿಶ್ವದಾದ್ಯಂತ ದುರ್ಬಲ ಜನಸಂಖ್ಯೆಯ ಮೇಲೆ ವಿನಾಶಕಾರಿ ಪರಿಣಾಮಗಳನ್ನು ಬೀರುತ್ತವೆ. ‘ಮಿತ್ರ್ ಕ್ಲಿನಿಕ್’ ಮುಚ್ಚುವಿಕೆಯು ಅದನ್ನು ಎತ್ತಿ ತೋರಿಸಿದೆ. ಕ್ಲಿನಿಕ್ ಮುಚ್ಚಿದ್ದರಿಂದ ಸಾವಿರಾರು ಜನರು ನಿರ್ಣಾಯಕ ಆರೋಗ್ಯ ಸೇವೆಗಳಿಂದ ವಂಚಿತರಾಗುತ್ತಿದ್ದಾರೆ. ಅದರ ಸಿಬ್ಬಂದಿ ನಿರುದ್ಯೋಗಿಗಳಾಗಿದ್ದಾರೆ.

ಕ್ಲಿನಿಕ್‌ನಲ್ಲಿ ಕೆಲವು ಜೀವ ಉಳಿಸುವ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಮುಂದುವರಿಸಲು ಅನುಮತಿಸಲಾಗಿದೆಯಾದರೂ, ಟ್ರಾನ್ಸ್‌ಜೆಂಡರ್ ಸಮುದಾಯದ ಮೇಲೆ ಕ್ಲಿನಿಕ್ ಮುಚ್ಚುವಿಕೆ ದೀರ್ಘಕಾಲೀನ ಪರಿಣಾಮ ಬೀರಿಲಿದೆ ಎಂದು ವರದಿಗಳು ಹೇಳಿವೆ.

ಕ್ಲಿನಿಕ್ ಸ್ಥಗಿತಕ್ಕೆ ಎಲಾನ್‌ ಮಸ್ಕ್ ಪ್ರತಿಕ್ರಿಯೆ

ಭಾರತದ ಮೊಟ್ಟ ಮೊದಲ ಟ್ರಾನ್ಸ್‌ಜೆಂಡರ್ ಆರೋಗ್ಯ ಸೌಲಭ್ಯ, ‘ಮಿತ್ರ್ ಕ್ಲಿನಿಕ್’ ಮುಚ್ಚಿದೆ ಎಂಬ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಉದ್ಯಮಿ ಹಾಗೂ ಅಮೆರಿಕದ ಸರ್ಕಾರಿ ದಕ್ಷತೆಯ ಇಲಾಖೆಯ ಮುಖ್ಯಸ್ಥ ಎಲಾನ್‌ ಮಸ್ಕ್‌, “ಅದಕ್ಕೆ ಅಮೆರಿಕದ ತೆರಿಗೆದಾರರ ಹಣವನ್ನು ಬಳಸಲಾಗುತ್ತಿತ್ತು” ಎಂದು ಹೇಳಿದ್ದಾರೆ. ಇದು ಭಾರೀ ಟೀಕೆಗೆ ಕಾರಣವಾಗಿದೆ. ” “ಹಾಗಾದರೆ ಆರೋಗ್ಯ ಸೇವೆಗೆ ಹಣ ವ್ಯಯಿಸುವುದು ವ್ಯರ್ಥವೇ?” ಎಂದು ಹಲವು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...