Homeಮುಖಪುಟಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ: ದೃಢಪಡಿಸಿದ ವಿದೇಶಾಂಗ ಇಲಾಖೆ

ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ: ದೃಢಪಡಿಸಿದ ವಿದೇಶಾಂಗ ಇಲಾಖೆ

- Advertisement -
- Advertisement -

ಇಂದು (ಮೇ.10) ಸಂಜೆ 5 ಗಂಟೆಯಿಂದ ಅನ್ವಯವಾಗುವಂತೆ ಕದನ ವಿರಾಮಕ್ಕೆ ಭಾರತ ಮತ್ತು ಪಾಕಿಸ್ತಾನ ಒಪ್ಪಿರುವುದಾಗಿ ಭಾರತೀಯ ವಿದೇಶಾಂಗ ಸಚಿವಾಲಯ ಘೋಷಿಸಿದೆ.

“ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒ) ಇಂದು ಮಧ್ಯಾಹ್ನ 15:35 (3:35) ಗಂಟೆಗೆ ಭಾರತೀಯ ಡಿಜಿಎಂಒಗೆ ಕರೆ ಮಾಡಿದ್ದರು. ಭಾರತೀಯ ಕಾಲಮಾನ ಸಂಜೆ 5 ಗಂಟೆಯಿಂದ ಜಾರಿಗೆ ಬರುವಂತೆ ನೆಲ, ವಾಯು ಮತ್ತು ಸಮುದ್ರದ ಮೂಲಕ ನಡೆಸುವ ಎಲ್ಲಾ ರೀತಿಯ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಲು ಎರಡೂ ಕಡೆಯವರು ಒಪ್ಪಂದ ಮಾಡಿಕೊಳ್ಳಲಾಗಿದೆ” ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ತಿಳಿಸಿದ್ದಾರೆ.

“ಭಾರತ ಮತ್ತು ಪಾಕಿಸ್ತಾನ ಇಂದು ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ಬಗ್ಗೆ ಒಪ್ಪಂದ ಮಾಡಿಕೊಂಡಿವೆ. ಭಾರತವು ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳ ವಿರುದ್ಧ ದೃಢ ಮತ್ತು ರಾಜಿಯಾಗದ ನಿಲುವನ್ನು ನಿರಂತರವಾಗಿ ಕಾಯ್ದುಕೊಂಡಿದೆ. ಅದು ಹಾಗೆಯೇ ಮುಂದುವರಿಯುತ್ತದೆ” ಎಂದು ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್ ಹೇಳಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಕೂಡ ಹೇಳಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಟ್ರಂಪ್, “ಅಮೆರಿಕದ ಮಧ್ಯಸ್ಥಿಕೆಯಲ್ಲಿ ರಾತ್ರಿಯಿಡೀ ನಡೆದ ಮಾತುಕತೆ ನಂತರ, ಭಾರತ ಮತ್ತು ಪಾಕಿಸ್ತಾನ ಸಂಪೂರ್ಣ ಹಾಗೂ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗುತ್ತಿದೆ. ಬುದ್ದಿವಂತಿಕೆಯ ನಿರ್ಧಾರ ತೆಗೆದುಕೊಂಡ ಎರಡೂ ದೇಶಗಳಿಗೆ ಅಭಿನಂದನೆಗಳು” ಎಂದು ಬರೆದುಕೊಂಡಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ, “ಕಳೆದ 48 ಗಂಟೆಗಳಲ್ಲಿ, ಉಪಾಧ್ಯಕ್ಷರಾದ ಜೆ.ಡಿ ವ್ಯಾನ್ಸ್ ಮತ್ತು ನಾನು ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಮತ್ತು ಶೆಹಬಾಜ್ ಷರೀಫ್, ವಿದೇಶಾಂಗ ಸಚಿವ ಸುಬ್ರಹ್ಮಣ್ಯಂ ಜೈಶಂಕರ್, ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ಅಜಿತ್ ದೋವಲ್ ಮತ್ತು ಅಸಿಮ್ ಮಲಿಕ್ ಸೇರಿದಂತೆ ಹಿರಿಯ ಭಾರತೀಯ ಮತ್ತು ಪಾಕಿಸ್ತಾನಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದೇವೆ”

“ಭಾರತ ಮತ್ತು ಪಾಕಿಸ್ತಾನ ಸರ್ಕಾರಗಳು ತಕ್ಷಣದ ಕದನ ವಿರಾಮ ಮತ್ತು ಹೆಚ್ಚಿನ ವಿಷಯಗಳ ಕುರಿತು ಮಾತುಕತೆಗಳನ್ನು ಪ್ರಾರಂಭಿಸಲು ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗುತ್ತಿದೆ.”

“ಶಾಂತಿಯ ಮಾರ್ಗವನ್ನು ಆರಿಸಿಕೊಳ್ಳುವಲ್ಲಿ ಪ್ರಧಾನಿಗಳಾದ ಮೋದಿ ಮತ್ತು ಷರೀಫ್ ಅವರ ಬುದ್ಧಿವಂತಿಕೆ, ವಿವೇಕ ಮತ್ತು ಮುತ್ಸದ್ದಿತನವನ್ನು ನಾವು ಶ್ಲಾಘಿಸುತ್ತೇವೆ” ಎಂದು ಬರೆದುಕೊಂಡಿದ್ದಾರೆ.

‘ಭಾರತ-ಪಾಕಿಸ್ತಾನ ಸಂಘರ್ಷಕ್ಕೂ ನಮಗೂ ಸಂಬಂಧವಿಲ್ಲ’: ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...