Homeಮುಖಪುಟಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ 3.1%ಕ್ಕೆ ಕುಸಿತ : ಚಿದಂಬರಂ ಟೀಕೆ

ಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ 3.1%ಕ್ಕೆ ಕುಸಿತ : ಚಿದಂಬರಂ ಟೀಕೆ

"2019-20ರ ಜನವರಿ-ಮಾರ್ಚ್ ತ್ರೈಮಾಸಿಕದ ಶೇ 3.1 ರಷ್ಟು ಜಿಡಿಪಿ ಬೆಳವಣಿಗೆಯು ಬಿಜೆಪಿ ಸರ್ಕಾರದ ಆರ್ಥಿಕ ನಿರ್ವಹಣೆಗೆ ಸಂಬಂಧಿಸಿದ ವ್ಯಾಖ್ಯಾನವಾಗಿದೆ" ಎಂದು ಚಿದಂಬರಂ ನುಡಿದಿದ್ದಾರೆ.

- Advertisement -
- Advertisement -

2019-20ರ ಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕ ಬೆಳವಣಿಗೆ ಶೇಕಡಾ 3.1 ಕ್ಕೆ ಇಳಿದಿದೆ ಎಂದು ರಾಷ್ಟ್ರೀಯ ಅಂಕಿಅಂಶಗಳ ಕಚೇರಿ (ಎನ್‌ಎಸ್‌ಒ) ಹೇಳಿದೆ.

ಶುಕ್ರವಾರ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, 2018-19 ರ ತ್ರೈಮಾಸಿಕದಲ್ಲಿ ದೇಶದ ಜಿಡಿಪಿ ಶೇಕಡಾ 5.7 ರಷ್ಟು ಇತ್ತು ಎಂದಿದೆ. ಕೊರೊನಾ ಸೋಂಕನ್ನು ಎದುರಿಸಲು ಭಾರತವೂ ಮಾರ್ಚ್ 25 ರ ನಂತರ ಲಾಕ್‌ಡೌನ್ ವಿಧಿಸಿತ್ತು. ಆನಂತರದ ಜಿಡಿಪಿ ಇನ್ನೂ ತೀವ್ರ ರೀತಿಯಲ್ಲಿ ಕುಸಿದಿರುತ್ತದೆ ಎನ್ನಲಾಗಿದೆ.

ಈ ವರ್ಷದ ಆರಂಭದಲ್ಲಿ ಕ್ರಮವಾಗಿ ಜನವರಿ ಮತ್ತು ಫೆಬ್ರವರಿಯಲ್ಲಿ ಬಿಡುಗಡೆಯಾದ ಎನ್‌ಎಸ್‌ಒ ತನ್ನ ಮೊದಲ ಮತ್ತು ಎರಡನೆಯ ಮುಂಗಡ ಅಂದಾಜುಗಳಲ್ಲಿ ರಿಸರ್ವ್ ಬ್ಯಾಂಕ್ 2019-20ರ ಜಿಡಿಪಿ ಬೆಳವಣಿಗೆಯನ್ನು ಶೇಕಡಾ 5 ಕ್ಕೆ ಏರಿಸಿತ್ತು.

ಜಿಡಿಪಿ ಇಳಿಕೆ ಕುರಿತು ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಪ್ರತಿಕ್ರಿಯಿಸಿ “2019-20ರ ಜನವರಿ-ಮಾರ್ಚ್ ತ್ರೈಮಾಸಿಕದ ಶೇ 3.1 ರಷ್ಟು ಜಿಡಿಪಿ ಬೆಳವಣಿಗೆಯು ಬಿಜೆಪಿ ಸರ್ಕಾರದ ಆರ್ಥಿಕ ನಿರ್ವಹಣೆಗೆ ಸಂಬಂಧಿಸಿದ ವ್ಯಾಖ್ಯಾನವಾಗಿದೆ” ಎಂದು ಹೇಳಿದ್ದಾರೆ.

“ತ್ರೈಮಾಸಿಕದ ಜಿಡಿಪಿ ಶೇಕಡಾ 4 ಕ್ಕಿಂತ ಕಡಿಮೆ ಆಗಲಿದೆ ಎಂದು ನಾವು ಗ್ರಹಿಸಿದ್ದೇವು. ಆದರೆ ಈಗ 3.1% ರಷ್ಟು ಕೆಟ್ಟದಾಗಿದೆ”ಎಂದು ಅವರು ಟ್ವೀಟ್ ಮಾಡಿದ್ದಾರೆ.

ನಾಲ್ಕನೇ ತ್ರೈಮಾಸಿಕ (ಜನವರಿ-ಮಾರ್ಚ್ 2020) ಲಾಕ್‌ಡೌನ್ ಜಾರಿಗೊಳಿಸುವುದಕ್ಕಿಂತ ಮುಂಚೆಯಾಗಿದೆ, ಈ ಅವಧಿಯ 91 ದಿನಗಳಲ್ಲಿ 7 ದಿಗಳಷ್ಟೇ ಲಾಕ್ ಡೌನ್ ಸೇರಿದೆ” ಎಂದು ಅವರು ನೆನಪಿಸಿದರು.

ಅಲ್ಲದೆ, 2019-20 ರ ದೇಶದ ಹಣಕಾಸಿನ ಕೊರತೆಯು ಏಳು ವರ್ಷಗಳಲ್ಲೇ ಜಿಡಿಪಿ ಯ ಶೇಕಡಾ 4.6 ಕ್ಕೆ ಏರಿತು, 2012-13ರಲ್ಲಿ ಜಿಡಿಪಿಯ ಶೇಕಡಾ 4.9 ರಷ್ಟು ಹಣಕಾಸಿನ ಕೊರತೆ ದಾಖಲಾಗಿತ್ತು.

ಕಂಟ್ರೋಲರ್ ಜನರಲ್ ಆಫ್ ಅಕೌಂಟ್ಸ್ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, 2019-20ರಲ್ಲಿ ಹಣಕಾಸಿನ ಕೊರತೆಯು ಜಿಡಿಪಿಯ ಶೇಕಡಾ 4.59 ರಷ್ಟಿದೆ, ಫೆಬ್ರವರಿಯಲ್ಲಿ ಪರಿಷ್ಕೃತ ಅಂದಾಜುಗಳಲ್ಲಿ ಇದು 3.8 ಶೇಕಡಾ ಇತ್ತು. ಆದರೆ ಮೂಲ ಅಂದಾಜು ಶೇ 3.3 ರಷ್ಟಿತ್ತು.

ಸರ್ಕಾರದ ಸಾಲವನ್ನು ಪ್ರತಿಬಿಂಬಿಸುವ ಹಣಕಾಸಿನ ಕೊರತೆಯ ಹೆಚ್ಚಳವು ಮುಖ್ಯವಾಗಿ ತೆರಿಗೆ ಸಂಗ್ರಹದ ಕಾರಣದಿಂದಾಗಿತ್ತು, ಆದಾಯದ ಕೊರತೆಯು ಜಿಡಿಪಿಯ ಶೇಕಡಾ 2.4 ರ ಪರಿಷ್ಕೃತ ಅಂದಾಜಿನಿಂದ ಶೇಕಡಾ 3.27 ಕ್ಕೆ ಏರಿದೆ. ಮೂಲ ಅಂದಾಜು ಶೇಕಡಾ 2.3 ರಷ್ಟಿತ್ತು.


ಓದಿ: ಮೋದಿ 2.1; ಪ್ರಶ್ನೆಗಳೇ ಹುಟ್ಟದ ಕಾಲದಲ್ಲಿ ಹೇಳಿದೆಲ್ಲಾ ಸಾಧನೆಗಳೇ – ಎ.ನಾರಾಯಣ ಬರಹ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ನಾಸಿಕ್‌ನ...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...