Homeಮುಖಪುಟಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ 3.1%ಕ್ಕೆ ಕುಸಿತ : ಚಿದಂಬರಂ ಟೀಕೆ

ಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ 3.1%ಕ್ಕೆ ಕುಸಿತ : ಚಿದಂಬರಂ ಟೀಕೆ

"2019-20ರ ಜನವರಿ-ಮಾರ್ಚ್ ತ್ರೈಮಾಸಿಕದ ಶೇ 3.1 ರಷ್ಟು ಜಿಡಿಪಿ ಬೆಳವಣಿಗೆಯು ಬಿಜೆಪಿ ಸರ್ಕಾರದ ಆರ್ಥಿಕ ನಿರ್ವಹಣೆಗೆ ಸಂಬಂಧಿಸಿದ ವ್ಯಾಖ್ಯಾನವಾಗಿದೆ" ಎಂದು ಚಿದಂಬರಂ ನುಡಿದಿದ್ದಾರೆ.

- Advertisement -
- Advertisement -

2019-20ರ ಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕ ಬೆಳವಣಿಗೆ ಶೇಕಡಾ 3.1 ಕ್ಕೆ ಇಳಿದಿದೆ ಎಂದು ರಾಷ್ಟ್ರೀಯ ಅಂಕಿಅಂಶಗಳ ಕಚೇರಿ (ಎನ್‌ಎಸ್‌ಒ) ಹೇಳಿದೆ.

ಶುಕ್ರವಾರ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, 2018-19 ರ ತ್ರೈಮಾಸಿಕದಲ್ಲಿ ದೇಶದ ಜಿಡಿಪಿ ಶೇಕಡಾ 5.7 ರಷ್ಟು ಇತ್ತು ಎಂದಿದೆ. ಕೊರೊನಾ ಸೋಂಕನ್ನು ಎದುರಿಸಲು ಭಾರತವೂ ಮಾರ್ಚ್ 25 ರ ನಂತರ ಲಾಕ್‌ಡೌನ್ ವಿಧಿಸಿತ್ತು. ಆನಂತರದ ಜಿಡಿಪಿ ಇನ್ನೂ ತೀವ್ರ ರೀತಿಯಲ್ಲಿ ಕುಸಿದಿರುತ್ತದೆ ಎನ್ನಲಾಗಿದೆ.

ಈ ವರ್ಷದ ಆರಂಭದಲ್ಲಿ ಕ್ರಮವಾಗಿ ಜನವರಿ ಮತ್ತು ಫೆಬ್ರವರಿಯಲ್ಲಿ ಬಿಡುಗಡೆಯಾದ ಎನ್‌ಎಸ್‌ಒ ತನ್ನ ಮೊದಲ ಮತ್ತು ಎರಡನೆಯ ಮುಂಗಡ ಅಂದಾಜುಗಳಲ್ಲಿ ರಿಸರ್ವ್ ಬ್ಯಾಂಕ್ 2019-20ರ ಜಿಡಿಪಿ ಬೆಳವಣಿಗೆಯನ್ನು ಶೇಕಡಾ 5 ಕ್ಕೆ ಏರಿಸಿತ್ತು.

ಜಿಡಿಪಿ ಇಳಿಕೆ ಕುರಿತು ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಪ್ರತಿಕ್ರಿಯಿಸಿ “2019-20ರ ಜನವರಿ-ಮಾರ್ಚ್ ತ್ರೈಮಾಸಿಕದ ಶೇ 3.1 ರಷ್ಟು ಜಿಡಿಪಿ ಬೆಳವಣಿಗೆಯು ಬಿಜೆಪಿ ಸರ್ಕಾರದ ಆರ್ಥಿಕ ನಿರ್ವಹಣೆಗೆ ಸಂಬಂಧಿಸಿದ ವ್ಯಾಖ್ಯಾನವಾಗಿದೆ” ಎಂದು ಹೇಳಿದ್ದಾರೆ.

“ತ್ರೈಮಾಸಿಕದ ಜಿಡಿಪಿ ಶೇಕಡಾ 4 ಕ್ಕಿಂತ ಕಡಿಮೆ ಆಗಲಿದೆ ಎಂದು ನಾವು ಗ್ರಹಿಸಿದ್ದೇವು. ಆದರೆ ಈಗ 3.1% ರಷ್ಟು ಕೆಟ್ಟದಾಗಿದೆ”ಎಂದು ಅವರು ಟ್ವೀಟ್ ಮಾಡಿದ್ದಾರೆ.

ನಾಲ್ಕನೇ ತ್ರೈಮಾಸಿಕ (ಜನವರಿ-ಮಾರ್ಚ್ 2020) ಲಾಕ್‌ಡೌನ್ ಜಾರಿಗೊಳಿಸುವುದಕ್ಕಿಂತ ಮುಂಚೆಯಾಗಿದೆ, ಈ ಅವಧಿಯ 91 ದಿನಗಳಲ್ಲಿ 7 ದಿಗಳಷ್ಟೇ ಲಾಕ್ ಡೌನ್ ಸೇರಿದೆ” ಎಂದು ಅವರು ನೆನಪಿಸಿದರು.

ಅಲ್ಲದೆ, 2019-20 ರ ದೇಶದ ಹಣಕಾಸಿನ ಕೊರತೆಯು ಏಳು ವರ್ಷಗಳಲ್ಲೇ ಜಿಡಿಪಿ ಯ ಶೇಕಡಾ 4.6 ಕ್ಕೆ ಏರಿತು, 2012-13ರಲ್ಲಿ ಜಿಡಿಪಿಯ ಶೇಕಡಾ 4.9 ರಷ್ಟು ಹಣಕಾಸಿನ ಕೊರತೆ ದಾಖಲಾಗಿತ್ತು.

ಕಂಟ್ರೋಲರ್ ಜನರಲ್ ಆಫ್ ಅಕೌಂಟ್ಸ್ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, 2019-20ರಲ್ಲಿ ಹಣಕಾಸಿನ ಕೊರತೆಯು ಜಿಡಿಪಿಯ ಶೇಕಡಾ 4.59 ರಷ್ಟಿದೆ, ಫೆಬ್ರವರಿಯಲ್ಲಿ ಪರಿಷ್ಕೃತ ಅಂದಾಜುಗಳಲ್ಲಿ ಇದು 3.8 ಶೇಕಡಾ ಇತ್ತು. ಆದರೆ ಮೂಲ ಅಂದಾಜು ಶೇ 3.3 ರಷ್ಟಿತ್ತು.

ಸರ್ಕಾರದ ಸಾಲವನ್ನು ಪ್ರತಿಬಿಂಬಿಸುವ ಹಣಕಾಸಿನ ಕೊರತೆಯ ಹೆಚ್ಚಳವು ಮುಖ್ಯವಾಗಿ ತೆರಿಗೆ ಸಂಗ್ರಹದ ಕಾರಣದಿಂದಾಗಿತ್ತು, ಆದಾಯದ ಕೊರತೆಯು ಜಿಡಿಪಿಯ ಶೇಕಡಾ 2.4 ರ ಪರಿಷ್ಕೃತ ಅಂದಾಜಿನಿಂದ ಶೇಕಡಾ 3.27 ಕ್ಕೆ ಏರಿದೆ. ಮೂಲ ಅಂದಾಜು ಶೇಕಡಾ 2.3 ರಷ್ಟಿತ್ತು.


ಓದಿ: ಮೋದಿ 2.1; ಪ್ರಶ್ನೆಗಳೇ ಹುಟ್ಟದ ಕಾಲದಲ್ಲಿ ಹೇಳಿದೆಲ್ಲಾ ಸಾಧನೆಗಳೇ – ಎ.ನಾರಾಯಣ ಬರಹ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...