Homeಮುಖಪುಟಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ 3.1%ಕ್ಕೆ ಕುಸಿತ : ಚಿದಂಬರಂ ಟೀಕೆ

ಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ 3.1%ಕ್ಕೆ ಕುಸಿತ : ಚಿದಂಬರಂ ಟೀಕೆ

"2019-20ರ ಜನವರಿ-ಮಾರ್ಚ್ ತ್ರೈಮಾಸಿಕದ ಶೇ 3.1 ರಷ್ಟು ಜಿಡಿಪಿ ಬೆಳವಣಿಗೆಯು ಬಿಜೆಪಿ ಸರ್ಕಾರದ ಆರ್ಥಿಕ ನಿರ್ವಹಣೆಗೆ ಸಂಬಂಧಿಸಿದ ವ್ಯಾಖ್ಯಾನವಾಗಿದೆ" ಎಂದು ಚಿದಂಬರಂ ನುಡಿದಿದ್ದಾರೆ.

- Advertisement -
- Advertisement -

2019-20ರ ಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕ ಬೆಳವಣಿಗೆ ಶೇಕಡಾ 3.1 ಕ್ಕೆ ಇಳಿದಿದೆ ಎಂದು ರಾಷ್ಟ್ರೀಯ ಅಂಕಿಅಂಶಗಳ ಕಚೇರಿ (ಎನ್‌ಎಸ್‌ಒ) ಹೇಳಿದೆ.

ಶುಕ್ರವಾರ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, 2018-19 ರ ತ್ರೈಮಾಸಿಕದಲ್ಲಿ ದೇಶದ ಜಿಡಿಪಿ ಶೇಕಡಾ 5.7 ರಷ್ಟು ಇತ್ತು ಎಂದಿದೆ. ಕೊರೊನಾ ಸೋಂಕನ್ನು ಎದುರಿಸಲು ಭಾರತವೂ ಮಾರ್ಚ್ 25 ರ ನಂತರ ಲಾಕ್‌ಡೌನ್ ವಿಧಿಸಿತ್ತು. ಆನಂತರದ ಜಿಡಿಪಿ ಇನ್ನೂ ತೀವ್ರ ರೀತಿಯಲ್ಲಿ ಕುಸಿದಿರುತ್ತದೆ ಎನ್ನಲಾಗಿದೆ.

ಈ ವರ್ಷದ ಆರಂಭದಲ್ಲಿ ಕ್ರಮವಾಗಿ ಜನವರಿ ಮತ್ತು ಫೆಬ್ರವರಿಯಲ್ಲಿ ಬಿಡುಗಡೆಯಾದ ಎನ್‌ಎಸ್‌ಒ ತನ್ನ ಮೊದಲ ಮತ್ತು ಎರಡನೆಯ ಮುಂಗಡ ಅಂದಾಜುಗಳಲ್ಲಿ ರಿಸರ್ವ್ ಬ್ಯಾಂಕ್ 2019-20ರ ಜಿಡಿಪಿ ಬೆಳವಣಿಗೆಯನ್ನು ಶೇಕಡಾ 5 ಕ್ಕೆ ಏರಿಸಿತ್ತು.

ಜಿಡಿಪಿ ಇಳಿಕೆ ಕುರಿತು ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಪ್ರತಿಕ್ರಿಯಿಸಿ “2019-20ರ ಜನವರಿ-ಮಾರ್ಚ್ ತ್ರೈಮಾಸಿಕದ ಶೇ 3.1 ರಷ್ಟು ಜಿಡಿಪಿ ಬೆಳವಣಿಗೆಯು ಬಿಜೆಪಿ ಸರ್ಕಾರದ ಆರ್ಥಿಕ ನಿರ್ವಹಣೆಗೆ ಸಂಬಂಧಿಸಿದ ವ್ಯಾಖ್ಯಾನವಾಗಿದೆ” ಎಂದು ಹೇಳಿದ್ದಾರೆ.

“ತ್ರೈಮಾಸಿಕದ ಜಿಡಿಪಿ ಶೇಕಡಾ 4 ಕ್ಕಿಂತ ಕಡಿಮೆ ಆಗಲಿದೆ ಎಂದು ನಾವು ಗ್ರಹಿಸಿದ್ದೇವು. ಆದರೆ ಈಗ 3.1% ರಷ್ಟು ಕೆಟ್ಟದಾಗಿದೆ”ಎಂದು ಅವರು ಟ್ವೀಟ್ ಮಾಡಿದ್ದಾರೆ.

ನಾಲ್ಕನೇ ತ್ರೈಮಾಸಿಕ (ಜನವರಿ-ಮಾರ್ಚ್ 2020) ಲಾಕ್‌ಡೌನ್ ಜಾರಿಗೊಳಿಸುವುದಕ್ಕಿಂತ ಮುಂಚೆಯಾಗಿದೆ, ಈ ಅವಧಿಯ 91 ದಿನಗಳಲ್ಲಿ 7 ದಿಗಳಷ್ಟೇ ಲಾಕ್ ಡೌನ್ ಸೇರಿದೆ” ಎಂದು ಅವರು ನೆನಪಿಸಿದರು.

ಅಲ್ಲದೆ, 2019-20 ರ ದೇಶದ ಹಣಕಾಸಿನ ಕೊರತೆಯು ಏಳು ವರ್ಷಗಳಲ್ಲೇ ಜಿಡಿಪಿ ಯ ಶೇಕಡಾ 4.6 ಕ್ಕೆ ಏರಿತು, 2012-13ರಲ್ಲಿ ಜಿಡಿಪಿಯ ಶೇಕಡಾ 4.9 ರಷ್ಟು ಹಣಕಾಸಿನ ಕೊರತೆ ದಾಖಲಾಗಿತ್ತು.

ಕಂಟ್ರೋಲರ್ ಜನರಲ್ ಆಫ್ ಅಕೌಂಟ್ಸ್ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, 2019-20ರಲ್ಲಿ ಹಣಕಾಸಿನ ಕೊರತೆಯು ಜಿಡಿಪಿಯ ಶೇಕಡಾ 4.59 ರಷ್ಟಿದೆ, ಫೆಬ್ರವರಿಯಲ್ಲಿ ಪರಿಷ್ಕೃತ ಅಂದಾಜುಗಳಲ್ಲಿ ಇದು 3.8 ಶೇಕಡಾ ಇತ್ತು. ಆದರೆ ಮೂಲ ಅಂದಾಜು ಶೇ 3.3 ರಷ್ಟಿತ್ತು.

ಸರ್ಕಾರದ ಸಾಲವನ್ನು ಪ್ರತಿಬಿಂಬಿಸುವ ಹಣಕಾಸಿನ ಕೊರತೆಯ ಹೆಚ್ಚಳವು ಮುಖ್ಯವಾಗಿ ತೆರಿಗೆ ಸಂಗ್ರಹದ ಕಾರಣದಿಂದಾಗಿತ್ತು, ಆದಾಯದ ಕೊರತೆಯು ಜಿಡಿಪಿಯ ಶೇಕಡಾ 2.4 ರ ಪರಿಷ್ಕೃತ ಅಂದಾಜಿನಿಂದ ಶೇಕಡಾ 3.27 ಕ್ಕೆ ಏರಿದೆ. ಮೂಲ ಅಂದಾಜು ಶೇಕಡಾ 2.3 ರಷ್ಟಿತ್ತು.


ಓದಿ: ಮೋದಿ 2.1; ಪ್ರಶ್ನೆಗಳೇ ಹುಟ್ಟದ ಕಾಲದಲ್ಲಿ ಹೇಳಿದೆಲ್ಲಾ ಸಾಧನೆಗಳೇ – ಎ.ನಾರಾಯಣ ಬರಹ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...