Homeಮುಖಪುಟಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ 3.1%ಕ್ಕೆ ಕುಸಿತ : ಚಿದಂಬರಂ ಟೀಕೆ

ಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ 3.1%ಕ್ಕೆ ಕುಸಿತ : ಚಿದಂಬರಂ ಟೀಕೆ

"2019-20ರ ಜನವರಿ-ಮಾರ್ಚ್ ತ್ರೈಮಾಸಿಕದ ಶೇ 3.1 ರಷ್ಟು ಜಿಡಿಪಿ ಬೆಳವಣಿಗೆಯು ಬಿಜೆಪಿ ಸರ್ಕಾರದ ಆರ್ಥಿಕ ನಿರ್ವಹಣೆಗೆ ಸಂಬಂಧಿಸಿದ ವ್ಯಾಖ್ಯಾನವಾಗಿದೆ" ಎಂದು ಚಿದಂಬರಂ ನುಡಿದಿದ್ದಾರೆ.

- Advertisement -
- Advertisement -

2019-20ರ ಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕ ಬೆಳವಣಿಗೆ ಶೇಕಡಾ 3.1 ಕ್ಕೆ ಇಳಿದಿದೆ ಎಂದು ರಾಷ್ಟ್ರೀಯ ಅಂಕಿಅಂಶಗಳ ಕಚೇರಿ (ಎನ್‌ಎಸ್‌ಒ) ಹೇಳಿದೆ.

ಶುಕ್ರವಾರ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, 2018-19 ರ ತ್ರೈಮಾಸಿಕದಲ್ಲಿ ದೇಶದ ಜಿಡಿಪಿ ಶೇಕಡಾ 5.7 ರಷ್ಟು ಇತ್ತು ಎಂದಿದೆ. ಕೊರೊನಾ ಸೋಂಕನ್ನು ಎದುರಿಸಲು ಭಾರತವೂ ಮಾರ್ಚ್ 25 ರ ನಂತರ ಲಾಕ್‌ಡೌನ್ ವಿಧಿಸಿತ್ತು. ಆನಂತರದ ಜಿಡಿಪಿ ಇನ್ನೂ ತೀವ್ರ ರೀತಿಯಲ್ಲಿ ಕುಸಿದಿರುತ್ತದೆ ಎನ್ನಲಾಗಿದೆ.

ಈ ವರ್ಷದ ಆರಂಭದಲ್ಲಿ ಕ್ರಮವಾಗಿ ಜನವರಿ ಮತ್ತು ಫೆಬ್ರವರಿಯಲ್ಲಿ ಬಿಡುಗಡೆಯಾದ ಎನ್‌ಎಸ್‌ಒ ತನ್ನ ಮೊದಲ ಮತ್ತು ಎರಡನೆಯ ಮುಂಗಡ ಅಂದಾಜುಗಳಲ್ಲಿ ರಿಸರ್ವ್ ಬ್ಯಾಂಕ್ 2019-20ರ ಜಿಡಿಪಿ ಬೆಳವಣಿಗೆಯನ್ನು ಶೇಕಡಾ 5 ಕ್ಕೆ ಏರಿಸಿತ್ತು.

ಜಿಡಿಪಿ ಇಳಿಕೆ ಕುರಿತು ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಪ್ರತಿಕ್ರಿಯಿಸಿ “2019-20ರ ಜನವರಿ-ಮಾರ್ಚ್ ತ್ರೈಮಾಸಿಕದ ಶೇ 3.1 ರಷ್ಟು ಜಿಡಿಪಿ ಬೆಳವಣಿಗೆಯು ಬಿಜೆಪಿ ಸರ್ಕಾರದ ಆರ್ಥಿಕ ನಿರ್ವಹಣೆಗೆ ಸಂಬಂಧಿಸಿದ ವ್ಯಾಖ್ಯಾನವಾಗಿದೆ” ಎಂದು ಹೇಳಿದ್ದಾರೆ.

“ತ್ರೈಮಾಸಿಕದ ಜಿಡಿಪಿ ಶೇಕಡಾ 4 ಕ್ಕಿಂತ ಕಡಿಮೆ ಆಗಲಿದೆ ಎಂದು ನಾವು ಗ್ರಹಿಸಿದ್ದೇವು. ಆದರೆ ಈಗ 3.1% ರಷ್ಟು ಕೆಟ್ಟದಾಗಿದೆ”ಎಂದು ಅವರು ಟ್ವೀಟ್ ಮಾಡಿದ್ದಾರೆ.

ನಾಲ್ಕನೇ ತ್ರೈಮಾಸಿಕ (ಜನವರಿ-ಮಾರ್ಚ್ 2020) ಲಾಕ್‌ಡೌನ್ ಜಾರಿಗೊಳಿಸುವುದಕ್ಕಿಂತ ಮುಂಚೆಯಾಗಿದೆ, ಈ ಅವಧಿಯ 91 ದಿನಗಳಲ್ಲಿ 7 ದಿಗಳಷ್ಟೇ ಲಾಕ್ ಡೌನ್ ಸೇರಿದೆ” ಎಂದು ಅವರು ನೆನಪಿಸಿದರು.

ಅಲ್ಲದೆ, 2019-20 ರ ದೇಶದ ಹಣಕಾಸಿನ ಕೊರತೆಯು ಏಳು ವರ್ಷಗಳಲ್ಲೇ ಜಿಡಿಪಿ ಯ ಶೇಕಡಾ 4.6 ಕ್ಕೆ ಏರಿತು, 2012-13ರಲ್ಲಿ ಜಿಡಿಪಿಯ ಶೇಕಡಾ 4.9 ರಷ್ಟು ಹಣಕಾಸಿನ ಕೊರತೆ ದಾಖಲಾಗಿತ್ತು.

ಕಂಟ್ರೋಲರ್ ಜನರಲ್ ಆಫ್ ಅಕೌಂಟ್ಸ್ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, 2019-20ರಲ್ಲಿ ಹಣಕಾಸಿನ ಕೊರತೆಯು ಜಿಡಿಪಿಯ ಶೇಕಡಾ 4.59 ರಷ್ಟಿದೆ, ಫೆಬ್ರವರಿಯಲ್ಲಿ ಪರಿಷ್ಕೃತ ಅಂದಾಜುಗಳಲ್ಲಿ ಇದು 3.8 ಶೇಕಡಾ ಇತ್ತು. ಆದರೆ ಮೂಲ ಅಂದಾಜು ಶೇ 3.3 ರಷ್ಟಿತ್ತು.

ಸರ್ಕಾರದ ಸಾಲವನ್ನು ಪ್ರತಿಬಿಂಬಿಸುವ ಹಣಕಾಸಿನ ಕೊರತೆಯ ಹೆಚ್ಚಳವು ಮುಖ್ಯವಾಗಿ ತೆರಿಗೆ ಸಂಗ್ರಹದ ಕಾರಣದಿಂದಾಗಿತ್ತು, ಆದಾಯದ ಕೊರತೆಯು ಜಿಡಿಪಿಯ ಶೇಕಡಾ 2.4 ರ ಪರಿಷ್ಕೃತ ಅಂದಾಜಿನಿಂದ ಶೇಕಡಾ 3.27 ಕ್ಕೆ ಏರಿದೆ. ಮೂಲ ಅಂದಾಜು ಶೇಕಡಾ 2.3 ರಷ್ಟಿತ್ತು.


ಓದಿ: ಮೋದಿ 2.1; ಪ್ರಶ್ನೆಗಳೇ ಹುಟ್ಟದ ಕಾಲದಲ್ಲಿ ಹೇಳಿದೆಲ್ಲಾ ಸಾಧನೆಗಳೇ – ಎ.ನಾರಾಯಣ ಬರಹ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...