Homeಎಕಾನಮಿಭಾರತದ GDP ಚೇತರಿಸಿಕೊಳ್ಳಲು ಕೆಲವು ವರ್ಷಗಳೇ ಬೇಕು: RBI ಡೆಪ್ಯುಟಿ ಗವರ್ನರ್!

ಭಾರತದ GDP ಚೇತರಿಸಿಕೊಳ್ಳಲು ಕೆಲವು ವರ್ಷಗಳೇ ಬೇಕು: RBI ಡೆಪ್ಯುಟಿ ಗವರ್ನರ್!

2020-21ರ ಅಂತ್ಯದ ವೇಳೆಗೆ ಜಿಡಿಪಿಯ ಮಟ್ಟವು ಅದರ ಪೂರ್ವ-ಕೋವಿಡ್ ಮಟ್ಟಕ್ಕಿಂತ ಶೇಕಡಾ 6 ಕ್ಕಿಂತಲೂ ಕಡಿಮೆಯಾಗುತ್ತದೆ ಎಂದು ಎಚ್ಚರಿಸಿದ್ದಾರೆ.

- Advertisement -
- Advertisement -

ಕೊರೊನಾ ವೈರಸ್ ಆರ್ಥಿಕತೆಯ ಮೇಲೆ ಬೀರಿದ ಪರಿಣಾಮ ಉಳಿದ ಎಲ್ಲಕ್ಕಿಂತಲೂ ಭಿನ್ನವಾಗಿದೆ. ಕಳೆದುಹೋದ ಉತ್ಪಾದನಾ ಸಾಮರ್ಥ್ಯವನ್ನು ಮರಳಿ ಪಡೆಯಲು ವರ್ಷಗಳೇ ತೆಗೆದುಕೊಳ್ಳಬಹುದು ಎಂದು ಆರ್‌ಬಿಐ ಉಪ ಗವರ್ನರ್ ಮೈಕೆಲ್ ಪಾತ್ರಾ ಎಚ್ಚರಿಸಿದ್ದಾರೆ.

“2020-21ರ ಅಂತ್ಯದ ವೇಳೆಗೆ ಜಿಡಿಪಿಯ ಮಟ್ಟವು ಅದರ ಪೂರ್ವ-ಕೋವಿಡ್ ಮಟ್ಟಕ್ಕಿಂತ ಶೇಕಡಾ 6 ಕ್ಕಿಂತಲೂ ಕಡಿಮೆಯಾಗುತ್ತದೆ. ಕಳೆದುಹೋದ ಈ ಉತ್ಪಾದನೆಯನ್ನು ಮರಳಿ ಪಡೆಯಲು ವರ್ಷಗಳೇ ತೆಗೆದುಕೊಳ್ಳಬಹುದು” ಎಂದು ವಿತ್ತೀಯ ನೀತಿ ಸಮಿತಿಯ ಸಭೆಯಲ್ಲಿ ಮೈಕೆಲ್ ಪಾತ್ರಾ ಹೇಳಿದರು.

“ಆರ್ಥಿಕತೆಯ ಸಂಭಾವ್ಯ ಉತ್ಪಾದನೆಯು ಕುಸಿದಿದೆ ಎಂಬ ಪ್ರಜ್ಞೆಯೂ ಇದೆ. ಮತ್ತು ಕೋವಿಡ್ ನಂತರದ ಬೆಳವಣಿಗೆಯ ಪಥವು ಇಲ್ಲಿಯವರೆಗೆ ದಾಖಲಾಗಿರುವುದಕ್ಕಿಂತ ಬಹಳ ಭಿನ್ನವಾಗಿ ಕಾಣುತ್ತದೆ” ಎಂದು ಪಾತ್ರಾ ಹೇಳಿದರು. ರಚನಾತ್ಮಕ ಸುಧಾರಣೆಗಳನ್ನು ಪ್ರತಿಪಾದಿಸಿದ ಡೆಪ್ಯೂಟಿ ಗವರ್ನರ್, ಭಾರತದಲ್ಲಿ ವಿತ್ತೀಯ ಮತ್ತು ಹಣಕಾಸಿನ ನೀತಿ ಎರಡೂ ಬಿಗಿಯಾದ ನಿರ್ಬಂಧಗಳನ್ನು ಎದುರಿಸುತ್ತಿದೆ ಎಂದು ಸೂಚಿಸಿದರು.

ಇದನ್ನೂ ಓದಿ: 1 ವರ್ಷದಿಂದ ಫ್ರೀಜರ್​ನಲ್ಲಿ ಇಟ್ಟಿದ್ದ ನೂಡಲ್ಸ್ ತಿಂದು 9 ಮಂದಿ ಸಾವು!

“ಹಣಕಾಸಿನ ನೀತಿಗೆ ಸಂಬಂಧಿಸಿದಂತೆ, ಮೊದಲ ತ್ರೈಮಾಸಿಕದಲ್ಲಿ ಶೇಕಡಾ 32 ರಷ್ಟು ತೆರಿಗೆ ಆದಾಯದ ಕುಸಿತವಾಗಿದೆ. ಇದರ ಪರಿಣಾಮವಾಗಿ, ಏಪ್ರಿಲ್-ಆಗಸ್ಟ್ ಅವಧಿಯಲ್ಲಿ ಕೇಂದ್ರದ ಆದಾಯದ ಕೊರತೆಯು ಬಜೆಟ್ ಅಂದಾಜಿನ ಶೇಕಡಾ 121.9 ಆಗಿದೆ. ಹಣದುಬ್ಬರವು ಸತತ ಮೂರನೇ ತಿಂಗಳಿಗೆ ಶೇಕಡಾ 6 ಕ್ಕಿಂತ ಹೆಚ್ಚಿದೆ. ಬೆಳವಣಿಗೆಯ ಪ್ರಚೋದನೆಗಳನ್ನು ಅನ್ಲಾಕ್ ಮಾಡಲು ರಚನಾತ್ಮಕ ಸುಧಾರಣೆಗಳು ಬೇಕಾಗುತ್ತವೆ” ಎಂದು ಹೇಳಿದರು.

ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆಯು ಶೇಕಡಾ -23.9 ರಷ್ಟು ಕುಗ್ಗಿದೆ ಎಂದು ಅಂದಾಜಿಸಲಾಗಿತ್ತು.


ಇದನ್ನೂ ಓದಿ: ನಾನು ಬಂಡೆ ಅಲ್ಲ; ಬಿಜೆಪಿ ಸರ್ಕಾರದ ವಿರುದ್ಧ ಜನ ಬೀಸುವ ಕಲ್ಲು: ಡಿ.ಕೆ.ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....