Homeಮುಖಪುಟಭಾರತದಲ್ಲಿ ಸಂಪತ್ತಿನ ಅಸಮಾನತೆಯಲ್ಲಿ ಐತಿಹಾಸಿಕ ಮಟ್ಟದಲ್ಲಿ ಹೆಚ್ಚಳ: ವರದಿ

ಭಾರತದಲ್ಲಿ ಸಂಪತ್ತಿನ ಅಸಮಾನತೆಯಲ್ಲಿ ಐತಿಹಾಸಿಕ ಮಟ್ಟದಲ್ಲಿ ಹೆಚ್ಚಳ: ವರದಿ

- Advertisement -
- Advertisement -

ಪ್ಯಾರಿಸ್ ಮೂಲದ ವಿಶ್ವ ಅಸಮಾನತೆಯ ಪ್ರಯೋಗಾಲಯವು(World Inequality Lab) ಭಾರತದಲ್ಲಿ ಆದಾಯ ಮತ್ತು ಸಂಪತ್ತಿನ ಅಸಮಾನತೆ, 1922-2023: ದಿ ರೈಸ್ ಆಫ್ ದಿ ಬಿಲಿಯನೇರ್ ರಾಜ್ ಎಂಬ ಶೀರ್ಷಿಕೆಯಡಿ ವರದಿಯನ್ನು ಬಹಿರಂಗಪಡಿಸಿದ್ದು, ಭಾರತದಲ್ಲಿ ಸಂಪತ್ತಿನ ಅಸಮಾನತೆಯಲ್ಲಿ ಐತಿಹಾಸಿಕವಾಗಿ ಹೆಚ್ಚಳವಾಗಿದೆ ಎಂದು ಹೇಳಿದೆ.

ಭಾರತದ ಜನಸಂಖ್ಯೆಯ ಅಗ್ರ ಶೇ.1ರಷ್ಟು ಜನರು ದೇಶದ ಆದಾಯದ ಹೆಚ್ಚಿನ ಪಾಲು ಹೊಂದಿದ್ದಾರೆ ಎಂದು ವರ್ಲ್ಡ್ ಇನ್ಈಕ್ವಾಲಿಟಿ ಲ್ಯಾಬ್ (ಡಬ್ಲ್ಯುಐಎಲ್)ನ ಅಧ್ಯಯನ ವರದಿಯು ಹೇಳಿದ್ದು, ಒಟ್ಟು ಆದಾಯ ಮತ್ತು ಸಂಪತ್ತಿನಲ್ಲಿ ಅಗ್ರ 1% ಭಾರತೀಯರ ಪಾಲು 2022-23ರಲ್ಲಿ ಅದರ ಅತ್ಯಧಿಕ ಮಟ್ಟವನ್ನು ತಲುಪುವ ನಿರೀಕ್ಷೆಯಿದೆ ಎಂದು ಹೇಳಿದೆ.

World Inequality Lab 1922 ಮತ್ತು 2022ರ ನಡುವಿನ ಡೇಟಾವನ್ನು ವಿಶ್ಲೇಷಿಸಿದೆ. ಈ ವೇಳೆ ಸಂಪತ್ತಿನ ಅಸಮಾನತೆಯು ಐತಿಹಾಸಿಕ ಮಟ್ಟದಲ್ಲಿವೆ. ಇದು ಎಷ್ಟರ ಮಟ್ಟಿಗೆ ಎಂದರೆ ಬ್ರಿಟಿಷರ್ ವಶಾಹತು ಶಾಹಿ ಆಡಳಿತಕ್ಕಿಂತ ಹೆಚ್ಚು ಅಸಮಾನವಾಗಿದೆ ಎಂದು ಹೇಳಿದೆ.

2000 ವಿಷವಿಯ ಆರಂಭದಿಂದಲೂ ಭಾರತದಲ್ಲಿ ಸಂಪತ್ತಿನ ಅಸಮಾನತೆ ಗಗನಕ್ಕೇರಿದೆ, 2022-23ರಲ್ಲಿ ಅಗ್ರ 1 ಶೇಕಡಾ ಜನಸಂಖ್ಯೆಯ ಆದಾಯ ಮತ್ತು ಸಂಪತ್ತಿನ ಪಾಲು ಅನುಕ್ರಮವಾಗಿ ಶೇಕಡಾ 22.6 ಮತ್ತು ಶೇಕಡಾ 40.1ಕ್ಕೆ ಏರಿದೆ. 1980ರ ದಶಕದಿಂದ ಭಾರತದಲ್ಲಿ ಅಸಮಾನತೆಯು ತೀವ್ರವಾಗಿ ಹೆಚ್ಚುತ್ತಿದೆ ಮುಖ್ಯವಾಗಿ 2014-15 ಮತ್ತು 2022-23ರ ನಡುವೆ ಸಂಪತ್ತಿನ ಕೇಂದ್ರೀಕರಣದ ವಿಷಯದಲ್ಲಿ ಅಸಮಾನತೆಯ ಹೆಚ್ಚಳವನ್ನು ಗಮನಿಸಿದೆ.

ಈ ಕುರಿತು ಪ್ರಬಂಧವನ್ನು ಥಾಮಸ್ ಪಿಕೆಟ್ಟಿ (ಪ್ಯಾರಿಸ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ವರ್ಲ್ಡ್ ಇನ್ಈಕ್ವಾಲಿಟಿ ಲ್ಯಾಬ್), ಲ್ಯೂಕಾಸ್ ಚಾನ್ಸೆಲ್ (ಹಾರ್ವರ್ಡ್ ಕೆನಡಿ ಸ್ಕೂಲ್ ಮತ್ತು ವರ್ಲ್ಡ್‌ ಇನ್ಈಕ್ವಾಲಿಟಿ ಲ್ಯಾಬ್) ಮತ್ತು ನಿತಿನ್ ಕುಮಾರ್ ಭಾರ್ತಿ (ನ್ಯೂಯಾರ್ಕ್ ವಿಶ್ವವಿದ್ಯಾಲಯ ಮತ್ತು ವರ್ಲ್ಡ್ ಇನ್ಈಕ್ವಾಲಿಟಿ ಲ್ಯಾಬ್) ಸಿದ್ದಪಡಿಸಿದ್ದಾರೆ.

1980ರ ದಶಕದ ಆರಂಭದಲ್ಲಿ, ಭಾರತ ಸರ್ಕಾರವು 1991ರಲ್ಲಿ ಉದಾರೀಕರಣಕ್ಕೆ ಕಾರಣವಾದ ಆರ್ಥಿಕ ಸುಧಾರಣೆಗಳನ್ನು ಪ್ರಾರಂಭಿಸಿದಾಗ, ಅಗ್ರ 1 ಶೇಕಡಾ ಆದಾಯದ ಷೇರುಗಳಲ್ಲಿನ ಕುಸಿತವು ಸ್ಥಗಿತಗೊಂಡಿತ್ತು. 1990ರ ದಶಕದ ಆರಂಭದಲ್ಲಿ, ಅಗ್ರ 1 ಶೇಕಡಾ ಆದಾಯದ ಷೇರುಗಳು ಮುಂದಿನ 30 ವರ್ಷಗಳಲ್ಲಿ ಸ್ಥಿರವಾಗಿ ಹೆಚ್ಚಿದ್ದು, 2022ರಲ್ಲಿ ಸಾರ್ವಕಾಲಿಕ ಗರಿಷ್ಠ 22.6 ಶೇಕಡಾವನ್ನು ತಲುಪಿದೆ. ಅಸಮಾನತೆಯು ಸ್ವಾತಂತ್ರ್ಯದ ನಂತರ 1980ರ ದಶಕದ ಆರಂಭದವರೆಗೆ ಕಡಿಮೆಯಾಯಿತು, ನಂತರ ಅದು ಏರಲು ಪ್ರಾರಂಭಿಸಿತು ಮತ್ತು 2000 ವಿಷವಿಯ ಆರಂಭದಿಂದ ಗಗನಕ್ಕೇರಿದೆ.

ಆದಾಯಗಳು ಮತ್ತು ಸಂಪತ್ತಿನ ಅತಿಯಾದ ಕೇಂದ್ರೀಕರಣವು ಸಮಾಜ ಮತ್ತು ಸರಕಾರದ ಮೇಲೆ ಅಸಮಾನ ಪ್ರಭಾವಕ್ಕೆ ಕಾರಣವಾಗಬಹುದು ಎಂದು ವರದಿ ಹೇಳಿದ್ದು,ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿಯ ವಿವಿಧ ಪ್ರಮುಖ ಸಂಸ್ಥೆಗಳ ಋಜುತ್ವವು ರಾಜಿ ಮಾಡಿಕೊಂಡಿರುವಂತೆ ಕಂಡುಬರುತ್ತಿದೆ. ಇದು ಭಾರತವು ಶ್ರೀಮಂತ ಪ್ರಭುತ್ವದತ್ತ ಜಾರುವ ಸಾಧ್ಯತೆಯನ್ನು ಇನ್ನಷ್ಟು ಸ್ಪಷ್ಟಗೊಳಿಸಿದೆ ಎಂದು ಹೇಳಿದೆ. ಆದಾಯ ಮತ್ತು ಸಂಪತ್ತು ಎರಡನ್ನೂ  ಲೆಕ್ಕ ಹಾಕಲು ತೆರಿಗೆ ಸಂಹಿತೆಯ ಪುನರ್ರಚನೆ ಅಗತ್ಯವಾಗಿದೆ ಎಂದು ವರದಿಯು ತಿಳಿಸಿದೆ.

ಪತ್ರಿಕೆಯ ಸಂಶೋಧನೆ ಪ್ರಬಂಧ ಪ್ರಕಟದ ಬೆನ್ನಲ್ಲಿ 2014ರಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಮೋದಿ ಸರಕಾರವನ್ನು ಟೀಕಿಸಿದ ಕಾಂಗ್ರೆಸ್, ಕೇಂದ್ರದ ತನ್ನ ಸರ್ಕಾರವು ಬಡತನವನ್ನು ನಿರ್ಮೂಲನೆ ಮಾಡಲು ಮತ್ತು ಸಮಾಜದ ಅಂಚಿನಲ್ಲಿರುವ ವರ್ಗದವರಿಗೆ ಆದಾಯ ಮತ್ತು ಜೀವನ ಮಟ್ಟವನ್ನು ಹೆಚ್ಚಿಸಲು ಅವಿರತವಾಗಿ ಕೆಲಸ ಮಾಡಿದೆ ಎಂದು ಬಿಜೆಪಿ ಸುಳ್ಳು ಹೇಳಿದೆ ಎಂದು ಟೀಕಿಸಿದೆ.

ಇದನ್ನು ಓದಿ: ಯೋಗಿ ಆದಿತ್ಯನಾಥ್‌ಗೆ ಶ್ಲಾಘಿಸಿ, ಮುಸ್ಲಿಮರ ವಿರುದ್ಧ ದ್ವೇಷ ಪೂರಿತ ಹೇಳಿಕೆ: ಬರೇಲಿ ಕೋರ್ಟ್ ಜಡ್ಜ್‌ಗೆ ಹೈಕೋರ್ಟ್‌ ತರಾಟೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...