Homeಮುಖಪುಟಭಾರತದಲ್ಲಿ ಸಂಪತ್ತಿನ ಅಸಮಾನತೆಯಲ್ಲಿ ಐತಿಹಾಸಿಕ ಮಟ್ಟದಲ್ಲಿ ಹೆಚ್ಚಳ: ವರದಿ

ಭಾರತದಲ್ಲಿ ಸಂಪತ್ತಿನ ಅಸಮಾನತೆಯಲ್ಲಿ ಐತಿಹಾಸಿಕ ಮಟ್ಟದಲ್ಲಿ ಹೆಚ್ಚಳ: ವರದಿ

- Advertisement -
- Advertisement -

ಪ್ಯಾರಿಸ್ ಮೂಲದ ವಿಶ್ವ ಅಸಮಾನತೆಯ ಪ್ರಯೋಗಾಲಯವು(World Inequality Lab) ಭಾರತದಲ್ಲಿ ಆದಾಯ ಮತ್ತು ಸಂಪತ್ತಿನ ಅಸಮಾನತೆ, 1922-2023: ದಿ ರೈಸ್ ಆಫ್ ದಿ ಬಿಲಿಯನೇರ್ ರಾಜ್ ಎಂಬ ಶೀರ್ಷಿಕೆಯಡಿ ವರದಿಯನ್ನು ಬಹಿರಂಗಪಡಿಸಿದ್ದು, ಭಾರತದಲ್ಲಿ ಸಂಪತ್ತಿನ ಅಸಮಾನತೆಯಲ್ಲಿ ಐತಿಹಾಸಿಕವಾಗಿ ಹೆಚ್ಚಳವಾಗಿದೆ ಎಂದು ಹೇಳಿದೆ.

ಭಾರತದ ಜನಸಂಖ್ಯೆಯ ಅಗ್ರ ಶೇ.1ರಷ್ಟು ಜನರು ದೇಶದ ಆದಾಯದ ಹೆಚ್ಚಿನ ಪಾಲು ಹೊಂದಿದ್ದಾರೆ ಎಂದು ವರ್ಲ್ಡ್ ಇನ್ಈಕ್ವಾಲಿಟಿ ಲ್ಯಾಬ್ (ಡಬ್ಲ್ಯುಐಎಲ್)ನ ಅಧ್ಯಯನ ವರದಿಯು ಹೇಳಿದ್ದು, ಒಟ್ಟು ಆದಾಯ ಮತ್ತು ಸಂಪತ್ತಿನಲ್ಲಿ ಅಗ್ರ 1% ಭಾರತೀಯರ ಪಾಲು 2022-23ರಲ್ಲಿ ಅದರ ಅತ್ಯಧಿಕ ಮಟ್ಟವನ್ನು ತಲುಪುವ ನಿರೀಕ್ಷೆಯಿದೆ ಎಂದು ಹೇಳಿದೆ.

World Inequality Lab 1922 ಮತ್ತು 2022ರ ನಡುವಿನ ಡೇಟಾವನ್ನು ವಿಶ್ಲೇಷಿಸಿದೆ. ಈ ವೇಳೆ ಸಂಪತ್ತಿನ ಅಸಮಾನತೆಯು ಐತಿಹಾಸಿಕ ಮಟ್ಟದಲ್ಲಿವೆ. ಇದು ಎಷ್ಟರ ಮಟ್ಟಿಗೆ ಎಂದರೆ ಬ್ರಿಟಿಷರ್ ವಶಾಹತು ಶಾಹಿ ಆಡಳಿತಕ್ಕಿಂತ ಹೆಚ್ಚು ಅಸಮಾನವಾಗಿದೆ ಎಂದು ಹೇಳಿದೆ.

2000 ವಿಷವಿಯ ಆರಂಭದಿಂದಲೂ ಭಾರತದಲ್ಲಿ ಸಂಪತ್ತಿನ ಅಸಮಾನತೆ ಗಗನಕ್ಕೇರಿದೆ, 2022-23ರಲ್ಲಿ ಅಗ್ರ 1 ಶೇಕಡಾ ಜನಸಂಖ್ಯೆಯ ಆದಾಯ ಮತ್ತು ಸಂಪತ್ತಿನ ಪಾಲು ಅನುಕ್ರಮವಾಗಿ ಶೇಕಡಾ 22.6 ಮತ್ತು ಶೇಕಡಾ 40.1ಕ್ಕೆ ಏರಿದೆ. 1980ರ ದಶಕದಿಂದ ಭಾರತದಲ್ಲಿ ಅಸಮಾನತೆಯು ತೀವ್ರವಾಗಿ ಹೆಚ್ಚುತ್ತಿದೆ ಮುಖ್ಯವಾಗಿ 2014-15 ಮತ್ತು 2022-23ರ ನಡುವೆ ಸಂಪತ್ತಿನ ಕೇಂದ್ರೀಕರಣದ ವಿಷಯದಲ್ಲಿ ಅಸಮಾನತೆಯ ಹೆಚ್ಚಳವನ್ನು ಗಮನಿಸಿದೆ.

ಈ ಕುರಿತು ಪ್ರಬಂಧವನ್ನು ಥಾಮಸ್ ಪಿಕೆಟ್ಟಿ (ಪ್ಯಾರಿಸ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ವರ್ಲ್ಡ್ ಇನ್ಈಕ್ವಾಲಿಟಿ ಲ್ಯಾಬ್), ಲ್ಯೂಕಾಸ್ ಚಾನ್ಸೆಲ್ (ಹಾರ್ವರ್ಡ್ ಕೆನಡಿ ಸ್ಕೂಲ್ ಮತ್ತು ವರ್ಲ್ಡ್‌ ಇನ್ಈಕ್ವಾಲಿಟಿ ಲ್ಯಾಬ್) ಮತ್ತು ನಿತಿನ್ ಕುಮಾರ್ ಭಾರ್ತಿ (ನ್ಯೂಯಾರ್ಕ್ ವಿಶ್ವವಿದ್ಯಾಲಯ ಮತ್ತು ವರ್ಲ್ಡ್ ಇನ್ಈಕ್ವಾಲಿಟಿ ಲ್ಯಾಬ್) ಸಿದ್ದಪಡಿಸಿದ್ದಾರೆ.

1980ರ ದಶಕದ ಆರಂಭದಲ್ಲಿ, ಭಾರತ ಸರ್ಕಾರವು 1991ರಲ್ಲಿ ಉದಾರೀಕರಣಕ್ಕೆ ಕಾರಣವಾದ ಆರ್ಥಿಕ ಸುಧಾರಣೆಗಳನ್ನು ಪ್ರಾರಂಭಿಸಿದಾಗ, ಅಗ್ರ 1 ಶೇಕಡಾ ಆದಾಯದ ಷೇರುಗಳಲ್ಲಿನ ಕುಸಿತವು ಸ್ಥಗಿತಗೊಂಡಿತ್ತು. 1990ರ ದಶಕದ ಆರಂಭದಲ್ಲಿ, ಅಗ್ರ 1 ಶೇಕಡಾ ಆದಾಯದ ಷೇರುಗಳು ಮುಂದಿನ 30 ವರ್ಷಗಳಲ್ಲಿ ಸ್ಥಿರವಾಗಿ ಹೆಚ್ಚಿದ್ದು, 2022ರಲ್ಲಿ ಸಾರ್ವಕಾಲಿಕ ಗರಿಷ್ಠ 22.6 ಶೇಕಡಾವನ್ನು ತಲುಪಿದೆ. ಅಸಮಾನತೆಯು ಸ್ವಾತಂತ್ರ್ಯದ ನಂತರ 1980ರ ದಶಕದ ಆರಂಭದವರೆಗೆ ಕಡಿಮೆಯಾಯಿತು, ನಂತರ ಅದು ಏರಲು ಪ್ರಾರಂಭಿಸಿತು ಮತ್ತು 2000 ವಿಷವಿಯ ಆರಂಭದಿಂದ ಗಗನಕ್ಕೇರಿದೆ.

ಆದಾಯಗಳು ಮತ್ತು ಸಂಪತ್ತಿನ ಅತಿಯಾದ ಕೇಂದ್ರೀಕರಣವು ಸಮಾಜ ಮತ್ತು ಸರಕಾರದ ಮೇಲೆ ಅಸಮಾನ ಪ್ರಭಾವಕ್ಕೆ ಕಾರಣವಾಗಬಹುದು ಎಂದು ವರದಿ ಹೇಳಿದ್ದು,ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿಯ ವಿವಿಧ ಪ್ರಮುಖ ಸಂಸ್ಥೆಗಳ ಋಜುತ್ವವು ರಾಜಿ ಮಾಡಿಕೊಂಡಿರುವಂತೆ ಕಂಡುಬರುತ್ತಿದೆ. ಇದು ಭಾರತವು ಶ್ರೀಮಂತ ಪ್ರಭುತ್ವದತ್ತ ಜಾರುವ ಸಾಧ್ಯತೆಯನ್ನು ಇನ್ನಷ್ಟು ಸ್ಪಷ್ಟಗೊಳಿಸಿದೆ ಎಂದು ಹೇಳಿದೆ. ಆದಾಯ ಮತ್ತು ಸಂಪತ್ತು ಎರಡನ್ನೂ  ಲೆಕ್ಕ ಹಾಕಲು ತೆರಿಗೆ ಸಂಹಿತೆಯ ಪುನರ್ರಚನೆ ಅಗತ್ಯವಾಗಿದೆ ಎಂದು ವರದಿಯು ತಿಳಿಸಿದೆ.

ಪತ್ರಿಕೆಯ ಸಂಶೋಧನೆ ಪ್ರಬಂಧ ಪ್ರಕಟದ ಬೆನ್ನಲ್ಲಿ 2014ರಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಮೋದಿ ಸರಕಾರವನ್ನು ಟೀಕಿಸಿದ ಕಾಂಗ್ರೆಸ್, ಕೇಂದ್ರದ ತನ್ನ ಸರ್ಕಾರವು ಬಡತನವನ್ನು ನಿರ್ಮೂಲನೆ ಮಾಡಲು ಮತ್ತು ಸಮಾಜದ ಅಂಚಿನಲ್ಲಿರುವ ವರ್ಗದವರಿಗೆ ಆದಾಯ ಮತ್ತು ಜೀವನ ಮಟ್ಟವನ್ನು ಹೆಚ್ಚಿಸಲು ಅವಿರತವಾಗಿ ಕೆಲಸ ಮಾಡಿದೆ ಎಂದು ಬಿಜೆಪಿ ಸುಳ್ಳು ಹೇಳಿದೆ ಎಂದು ಟೀಕಿಸಿದೆ.

ಇದನ್ನು ಓದಿ: ಯೋಗಿ ಆದಿತ್ಯನಾಥ್‌ಗೆ ಶ್ಲಾಘಿಸಿ, ಮುಸ್ಲಿಮರ ವಿರುದ್ಧ ದ್ವೇಷ ಪೂರಿತ ಹೇಳಿಕೆ: ಬರೇಲಿ ಕೋರ್ಟ್ ಜಡ್ಜ್‌ಗೆ ಹೈಕೋರ್ಟ್‌ ತರಾಟೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...