Homeಮುಖಪುಟಭಾರತದಲ್ಲಿ ಸಂಪತ್ತಿನ ಅಸಮಾನತೆಯಲ್ಲಿ ಐತಿಹಾಸಿಕ ಮಟ್ಟದಲ್ಲಿ ಹೆಚ್ಚಳ: ವರದಿ

ಭಾರತದಲ್ಲಿ ಸಂಪತ್ತಿನ ಅಸಮಾನತೆಯಲ್ಲಿ ಐತಿಹಾಸಿಕ ಮಟ್ಟದಲ್ಲಿ ಹೆಚ್ಚಳ: ವರದಿ

- Advertisement -
- Advertisement -

ಪ್ಯಾರಿಸ್ ಮೂಲದ ವಿಶ್ವ ಅಸಮಾನತೆಯ ಪ್ರಯೋಗಾಲಯವು(World Inequality Lab) ಭಾರತದಲ್ಲಿ ಆದಾಯ ಮತ್ತು ಸಂಪತ್ತಿನ ಅಸಮಾನತೆ, 1922-2023: ದಿ ರೈಸ್ ಆಫ್ ದಿ ಬಿಲಿಯನೇರ್ ರಾಜ್ ಎಂಬ ಶೀರ್ಷಿಕೆಯಡಿ ವರದಿಯನ್ನು ಬಹಿರಂಗಪಡಿಸಿದ್ದು, ಭಾರತದಲ್ಲಿ ಸಂಪತ್ತಿನ ಅಸಮಾನತೆಯಲ್ಲಿ ಐತಿಹಾಸಿಕವಾಗಿ ಹೆಚ್ಚಳವಾಗಿದೆ ಎಂದು ಹೇಳಿದೆ.

ಭಾರತದ ಜನಸಂಖ್ಯೆಯ ಅಗ್ರ ಶೇ.1ರಷ್ಟು ಜನರು ದೇಶದ ಆದಾಯದ ಹೆಚ್ಚಿನ ಪಾಲು ಹೊಂದಿದ್ದಾರೆ ಎಂದು ವರ್ಲ್ಡ್ ಇನ್ಈಕ್ವಾಲಿಟಿ ಲ್ಯಾಬ್ (ಡಬ್ಲ್ಯುಐಎಲ್)ನ ಅಧ್ಯಯನ ವರದಿಯು ಹೇಳಿದ್ದು, ಒಟ್ಟು ಆದಾಯ ಮತ್ತು ಸಂಪತ್ತಿನಲ್ಲಿ ಅಗ್ರ 1% ಭಾರತೀಯರ ಪಾಲು 2022-23ರಲ್ಲಿ ಅದರ ಅತ್ಯಧಿಕ ಮಟ್ಟವನ್ನು ತಲುಪುವ ನಿರೀಕ್ಷೆಯಿದೆ ಎಂದು ಹೇಳಿದೆ.

World Inequality Lab 1922 ಮತ್ತು 2022ರ ನಡುವಿನ ಡೇಟಾವನ್ನು ವಿಶ್ಲೇಷಿಸಿದೆ. ಈ ವೇಳೆ ಸಂಪತ್ತಿನ ಅಸಮಾನತೆಯು ಐತಿಹಾಸಿಕ ಮಟ್ಟದಲ್ಲಿವೆ. ಇದು ಎಷ್ಟರ ಮಟ್ಟಿಗೆ ಎಂದರೆ ಬ್ರಿಟಿಷರ್ ವಶಾಹತು ಶಾಹಿ ಆಡಳಿತಕ್ಕಿಂತ ಹೆಚ್ಚು ಅಸಮಾನವಾಗಿದೆ ಎಂದು ಹೇಳಿದೆ.

2000 ವಿಷವಿಯ ಆರಂಭದಿಂದಲೂ ಭಾರತದಲ್ಲಿ ಸಂಪತ್ತಿನ ಅಸಮಾನತೆ ಗಗನಕ್ಕೇರಿದೆ, 2022-23ರಲ್ಲಿ ಅಗ್ರ 1 ಶೇಕಡಾ ಜನಸಂಖ್ಯೆಯ ಆದಾಯ ಮತ್ತು ಸಂಪತ್ತಿನ ಪಾಲು ಅನುಕ್ರಮವಾಗಿ ಶೇಕಡಾ 22.6 ಮತ್ತು ಶೇಕಡಾ 40.1ಕ್ಕೆ ಏರಿದೆ. 1980ರ ದಶಕದಿಂದ ಭಾರತದಲ್ಲಿ ಅಸಮಾನತೆಯು ತೀವ್ರವಾಗಿ ಹೆಚ್ಚುತ್ತಿದೆ ಮುಖ್ಯವಾಗಿ 2014-15 ಮತ್ತು 2022-23ರ ನಡುವೆ ಸಂಪತ್ತಿನ ಕೇಂದ್ರೀಕರಣದ ವಿಷಯದಲ್ಲಿ ಅಸಮಾನತೆಯ ಹೆಚ್ಚಳವನ್ನು ಗಮನಿಸಿದೆ.

ಈ ಕುರಿತು ಪ್ರಬಂಧವನ್ನು ಥಾಮಸ್ ಪಿಕೆಟ್ಟಿ (ಪ್ಯಾರಿಸ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ವರ್ಲ್ಡ್ ಇನ್ಈಕ್ವಾಲಿಟಿ ಲ್ಯಾಬ್), ಲ್ಯೂಕಾಸ್ ಚಾನ್ಸೆಲ್ (ಹಾರ್ವರ್ಡ್ ಕೆನಡಿ ಸ್ಕೂಲ್ ಮತ್ತು ವರ್ಲ್ಡ್‌ ಇನ್ಈಕ್ವಾಲಿಟಿ ಲ್ಯಾಬ್) ಮತ್ತು ನಿತಿನ್ ಕುಮಾರ್ ಭಾರ್ತಿ (ನ್ಯೂಯಾರ್ಕ್ ವಿಶ್ವವಿದ್ಯಾಲಯ ಮತ್ತು ವರ್ಲ್ಡ್ ಇನ್ಈಕ್ವಾಲಿಟಿ ಲ್ಯಾಬ್) ಸಿದ್ದಪಡಿಸಿದ್ದಾರೆ.

1980ರ ದಶಕದ ಆರಂಭದಲ್ಲಿ, ಭಾರತ ಸರ್ಕಾರವು 1991ರಲ್ಲಿ ಉದಾರೀಕರಣಕ್ಕೆ ಕಾರಣವಾದ ಆರ್ಥಿಕ ಸುಧಾರಣೆಗಳನ್ನು ಪ್ರಾರಂಭಿಸಿದಾಗ, ಅಗ್ರ 1 ಶೇಕಡಾ ಆದಾಯದ ಷೇರುಗಳಲ್ಲಿನ ಕುಸಿತವು ಸ್ಥಗಿತಗೊಂಡಿತ್ತು. 1990ರ ದಶಕದ ಆರಂಭದಲ್ಲಿ, ಅಗ್ರ 1 ಶೇಕಡಾ ಆದಾಯದ ಷೇರುಗಳು ಮುಂದಿನ 30 ವರ್ಷಗಳಲ್ಲಿ ಸ್ಥಿರವಾಗಿ ಹೆಚ್ಚಿದ್ದು, 2022ರಲ್ಲಿ ಸಾರ್ವಕಾಲಿಕ ಗರಿಷ್ಠ 22.6 ಶೇಕಡಾವನ್ನು ತಲುಪಿದೆ. ಅಸಮಾನತೆಯು ಸ್ವಾತಂತ್ರ್ಯದ ನಂತರ 1980ರ ದಶಕದ ಆರಂಭದವರೆಗೆ ಕಡಿಮೆಯಾಯಿತು, ನಂತರ ಅದು ಏರಲು ಪ್ರಾರಂಭಿಸಿತು ಮತ್ತು 2000 ವಿಷವಿಯ ಆರಂಭದಿಂದ ಗಗನಕ್ಕೇರಿದೆ.

ಆದಾಯಗಳು ಮತ್ತು ಸಂಪತ್ತಿನ ಅತಿಯಾದ ಕೇಂದ್ರೀಕರಣವು ಸಮಾಜ ಮತ್ತು ಸರಕಾರದ ಮೇಲೆ ಅಸಮಾನ ಪ್ರಭಾವಕ್ಕೆ ಕಾರಣವಾಗಬಹುದು ಎಂದು ವರದಿ ಹೇಳಿದ್ದು,ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿಯ ವಿವಿಧ ಪ್ರಮುಖ ಸಂಸ್ಥೆಗಳ ಋಜುತ್ವವು ರಾಜಿ ಮಾಡಿಕೊಂಡಿರುವಂತೆ ಕಂಡುಬರುತ್ತಿದೆ. ಇದು ಭಾರತವು ಶ್ರೀಮಂತ ಪ್ರಭುತ್ವದತ್ತ ಜಾರುವ ಸಾಧ್ಯತೆಯನ್ನು ಇನ್ನಷ್ಟು ಸ್ಪಷ್ಟಗೊಳಿಸಿದೆ ಎಂದು ಹೇಳಿದೆ. ಆದಾಯ ಮತ್ತು ಸಂಪತ್ತು ಎರಡನ್ನೂ  ಲೆಕ್ಕ ಹಾಕಲು ತೆರಿಗೆ ಸಂಹಿತೆಯ ಪುನರ್ರಚನೆ ಅಗತ್ಯವಾಗಿದೆ ಎಂದು ವರದಿಯು ತಿಳಿಸಿದೆ.

ಪತ್ರಿಕೆಯ ಸಂಶೋಧನೆ ಪ್ರಬಂಧ ಪ್ರಕಟದ ಬೆನ್ನಲ್ಲಿ 2014ರಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಮೋದಿ ಸರಕಾರವನ್ನು ಟೀಕಿಸಿದ ಕಾಂಗ್ರೆಸ್, ಕೇಂದ್ರದ ತನ್ನ ಸರ್ಕಾರವು ಬಡತನವನ್ನು ನಿರ್ಮೂಲನೆ ಮಾಡಲು ಮತ್ತು ಸಮಾಜದ ಅಂಚಿನಲ್ಲಿರುವ ವರ್ಗದವರಿಗೆ ಆದಾಯ ಮತ್ತು ಜೀವನ ಮಟ್ಟವನ್ನು ಹೆಚ್ಚಿಸಲು ಅವಿರತವಾಗಿ ಕೆಲಸ ಮಾಡಿದೆ ಎಂದು ಬಿಜೆಪಿ ಸುಳ್ಳು ಹೇಳಿದೆ ಎಂದು ಟೀಕಿಸಿದೆ.

ಇದನ್ನು ಓದಿ: ಯೋಗಿ ಆದಿತ್ಯನಾಥ್‌ಗೆ ಶ್ಲಾಘಿಸಿ, ಮುಸ್ಲಿಮರ ವಿರುದ್ಧ ದ್ವೇಷ ಪೂರಿತ ಹೇಳಿಕೆ: ಬರೇಲಿ ಕೋರ್ಟ್ ಜಡ್ಜ್‌ಗೆ ಹೈಕೋರ್ಟ್‌ ತರಾಟೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...