Homeಮುಖಪುಟಭಾರತದಲ್ಲಿ ಸಂಪತ್ತಿನ ಅಸಮಾನತೆಯಲ್ಲಿ ಐತಿಹಾಸಿಕ ಮಟ್ಟದಲ್ಲಿ ಹೆಚ್ಚಳ: ವರದಿ

ಭಾರತದಲ್ಲಿ ಸಂಪತ್ತಿನ ಅಸಮಾನತೆಯಲ್ಲಿ ಐತಿಹಾಸಿಕ ಮಟ್ಟದಲ್ಲಿ ಹೆಚ್ಚಳ: ವರದಿ

- Advertisement -
- Advertisement -

ಪ್ಯಾರಿಸ್ ಮೂಲದ ವಿಶ್ವ ಅಸಮಾನತೆಯ ಪ್ರಯೋಗಾಲಯವು(World Inequality Lab) ಭಾರತದಲ್ಲಿ ಆದಾಯ ಮತ್ತು ಸಂಪತ್ತಿನ ಅಸಮಾನತೆ, 1922-2023: ದಿ ರೈಸ್ ಆಫ್ ದಿ ಬಿಲಿಯನೇರ್ ರಾಜ್ ಎಂಬ ಶೀರ್ಷಿಕೆಯಡಿ ವರದಿಯನ್ನು ಬಹಿರಂಗಪಡಿಸಿದ್ದು, ಭಾರತದಲ್ಲಿ ಸಂಪತ್ತಿನ ಅಸಮಾನತೆಯಲ್ಲಿ ಐತಿಹಾಸಿಕವಾಗಿ ಹೆಚ್ಚಳವಾಗಿದೆ ಎಂದು ಹೇಳಿದೆ.

ಭಾರತದ ಜನಸಂಖ್ಯೆಯ ಅಗ್ರ ಶೇ.1ರಷ್ಟು ಜನರು ದೇಶದ ಆದಾಯದ ಹೆಚ್ಚಿನ ಪಾಲು ಹೊಂದಿದ್ದಾರೆ ಎಂದು ವರ್ಲ್ಡ್ ಇನ್ಈಕ್ವಾಲಿಟಿ ಲ್ಯಾಬ್ (ಡಬ್ಲ್ಯುಐಎಲ್)ನ ಅಧ್ಯಯನ ವರದಿಯು ಹೇಳಿದ್ದು, ಒಟ್ಟು ಆದಾಯ ಮತ್ತು ಸಂಪತ್ತಿನಲ್ಲಿ ಅಗ್ರ 1% ಭಾರತೀಯರ ಪಾಲು 2022-23ರಲ್ಲಿ ಅದರ ಅತ್ಯಧಿಕ ಮಟ್ಟವನ್ನು ತಲುಪುವ ನಿರೀಕ್ಷೆಯಿದೆ ಎಂದು ಹೇಳಿದೆ.

World Inequality Lab 1922 ಮತ್ತು 2022ರ ನಡುವಿನ ಡೇಟಾವನ್ನು ವಿಶ್ಲೇಷಿಸಿದೆ. ಈ ವೇಳೆ ಸಂಪತ್ತಿನ ಅಸಮಾನತೆಯು ಐತಿಹಾಸಿಕ ಮಟ್ಟದಲ್ಲಿವೆ. ಇದು ಎಷ್ಟರ ಮಟ್ಟಿಗೆ ಎಂದರೆ ಬ್ರಿಟಿಷರ್ ವಶಾಹತು ಶಾಹಿ ಆಡಳಿತಕ್ಕಿಂತ ಹೆಚ್ಚು ಅಸಮಾನವಾಗಿದೆ ಎಂದು ಹೇಳಿದೆ.

2000 ವಿಷವಿಯ ಆರಂಭದಿಂದಲೂ ಭಾರತದಲ್ಲಿ ಸಂಪತ್ತಿನ ಅಸಮಾನತೆ ಗಗನಕ್ಕೇರಿದೆ, 2022-23ರಲ್ಲಿ ಅಗ್ರ 1 ಶೇಕಡಾ ಜನಸಂಖ್ಯೆಯ ಆದಾಯ ಮತ್ತು ಸಂಪತ್ತಿನ ಪಾಲು ಅನುಕ್ರಮವಾಗಿ ಶೇಕಡಾ 22.6 ಮತ್ತು ಶೇಕಡಾ 40.1ಕ್ಕೆ ಏರಿದೆ. 1980ರ ದಶಕದಿಂದ ಭಾರತದಲ್ಲಿ ಅಸಮಾನತೆಯು ತೀವ್ರವಾಗಿ ಹೆಚ್ಚುತ್ತಿದೆ ಮುಖ್ಯವಾಗಿ 2014-15 ಮತ್ತು 2022-23ರ ನಡುವೆ ಸಂಪತ್ತಿನ ಕೇಂದ್ರೀಕರಣದ ವಿಷಯದಲ್ಲಿ ಅಸಮಾನತೆಯ ಹೆಚ್ಚಳವನ್ನು ಗಮನಿಸಿದೆ.

ಈ ಕುರಿತು ಪ್ರಬಂಧವನ್ನು ಥಾಮಸ್ ಪಿಕೆಟ್ಟಿ (ಪ್ಯಾರಿಸ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ವರ್ಲ್ಡ್ ಇನ್ಈಕ್ವಾಲಿಟಿ ಲ್ಯಾಬ್), ಲ್ಯೂಕಾಸ್ ಚಾನ್ಸೆಲ್ (ಹಾರ್ವರ್ಡ್ ಕೆನಡಿ ಸ್ಕೂಲ್ ಮತ್ತು ವರ್ಲ್ಡ್‌ ಇನ್ಈಕ್ವಾಲಿಟಿ ಲ್ಯಾಬ್) ಮತ್ತು ನಿತಿನ್ ಕುಮಾರ್ ಭಾರ್ತಿ (ನ್ಯೂಯಾರ್ಕ್ ವಿಶ್ವವಿದ್ಯಾಲಯ ಮತ್ತು ವರ್ಲ್ಡ್ ಇನ್ಈಕ್ವಾಲಿಟಿ ಲ್ಯಾಬ್) ಸಿದ್ದಪಡಿಸಿದ್ದಾರೆ.

1980ರ ದಶಕದ ಆರಂಭದಲ್ಲಿ, ಭಾರತ ಸರ್ಕಾರವು 1991ರಲ್ಲಿ ಉದಾರೀಕರಣಕ್ಕೆ ಕಾರಣವಾದ ಆರ್ಥಿಕ ಸುಧಾರಣೆಗಳನ್ನು ಪ್ರಾರಂಭಿಸಿದಾಗ, ಅಗ್ರ 1 ಶೇಕಡಾ ಆದಾಯದ ಷೇರುಗಳಲ್ಲಿನ ಕುಸಿತವು ಸ್ಥಗಿತಗೊಂಡಿತ್ತು. 1990ರ ದಶಕದ ಆರಂಭದಲ್ಲಿ, ಅಗ್ರ 1 ಶೇಕಡಾ ಆದಾಯದ ಷೇರುಗಳು ಮುಂದಿನ 30 ವರ್ಷಗಳಲ್ಲಿ ಸ್ಥಿರವಾಗಿ ಹೆಚ್ಚಿದ್ದು, 2022ರಲ್ಲಿ ಸಾರ್ವಕಾಲಿಕ ಗರಿಷ್ಠ 22.6 ಶೇಕಡಾವನ್ನು ತಲುಪಿದೆ. ಅಸಮಾನತೆಯು ಸ್ವಾತಂತ್ರ್ಯದ ನಂತರ 1980ರ ದಶಕದ ಆರಂಭದವರೆಗೆ ಕಡಿಮೆಯಾಯಿತು, ನಂತರ ಅದು ಏರಲು ಪ್ರಾರಂಭಿಸಿತು ಮತ್ತು 2000 ವಿಷವಿಯ ಆರಂಭದಿಂದ ಗಗನಕ್ಕೇರಿದೆ.

ಆದಾಯಗಳು ಮತ್ತು ಸಂಪತ್ತಿನ ಅತಿಯಾದ ಕೇಂದ್ರೀಕರಣವು ಸಮಾಜ ಮತ್ತು ಸರಕಾರದ ಮೇಲೆ ಅಸಮಾನ ಪ್ರಭಾವಕ್ಕೆ ಕಾರಣವಾಗಬಹುದು ಎಂದು ವರದಿ ಹೇಳಿದ್ದು,ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿಯ ವಿವಿಧ ಪ್ರಮುಖ ಸಂಸ್ಥೆಗಳ ಋಜುತ್ವವು ರಾಜಿ ಮಾಡಿಕೊಂಡಿರುವಂತೆ ಕಂಡುಬರುತ್ತಿದೆ. ಇದು ಭಾರತವು ಶ್ರೀಮಂತ ಪ್ರಭುತ್ವದತ್ತ ಜಾರುವ ಸಾಧ್ಯತೆಯನ್ನು ಇನ್ನಷ್ಟು ಸ್ಪಷ್ಟಗೊಳಿಸಿದೆ ಎಂದು ಹೇಳಿದೆ. ಆದಾಯ ಮತ್ತು ಸಂಪತ್ತು ಎರಡನ್ನೂ  ಲೆಕ್ಕ ಹಾಕಲು ತೆರಿಗೆ ಸಂಹಿತೆಯ ಪುನರ್ರಚನೆ ಅಗತ್ಯವಾಗಿದೆ ಎಂದು ವರದಿಯು ತಿಳಿಸಿದೆ.

ಪತ್ರಿಕೆಯ ಸಂಶೋಧನೆ ಪ್ರಬಂಧ ಪ್ರಕಟದ ಬೆನ್ನಲ್ಲಿ 2014ರಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಮೋದಿ ಸರಕಾರವನ್ನು ಟೀಕಿಸಿದ ಕಾಂಗ್ರೆಸ್, ಕೇಂದ್ರದ ತನ್ನ ಸರ್ಕಾರವು ಬಡತನವನ್ನು ನಿರ್ಮೂಲನೆ ಮಾಡಲು ಮತ್ತು ಸಮಾಜದ ಅಂಚಿನಲ್ಲಿರುವ ವರ್ಗದವರಿಗೆ ಆದಾಯ ಮತ್ತು ಜೀವನ ಮಟ್ಟವನ್ನು ಹೆಚ್ಚಿಸಲು ಅವಿರತವಾಗಿ ಕೆಲಸ ಮಾಡಿದೆ ಎಂದು ಬಿಜೆಪಿ ಸುಳ್ಳು ಹೇಳಿದೆ ಎಂದು ಟೀಕಿಸಿದೆ.

ಇದನ್ನು ಓದಿ: ಯೋಗಿ ಆದಿತ್ಯನಾಥ್‌ಗೆ ಶ್ಲಾಘಿಸಿ, ಮುಸ್ಲಿಮರ ವಿರುದ್ಧ ದ್ವೇಷ ಪೂರಿತ ಹೇಳಿಕೆ: ಬರೇಲಿ ಕೋರ್ಟ್ ಜಡ್ಜ್‌ಗೆ ಹೈಕೋರ್ಟ್‌ ತರಾಟೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...