Homeಮುಖಪುಟಭಾರತದಲ್ಲಿ ಸಂಪತ್ತಿನ ಅಸಮಾನತೆಯಲ್ಲಿ ಐತಿಹಾಸಿಕ ಮಟ್ಟದಲ್ಲಿ ಹೆಚ್ಚಳ: ವರದಿ

ಭಾರತದಲ್ಲಿ ಸಂಪತ್ತಿನ ಅಸಮಾನತೆಯಲ್ಲಿ ಐತಿಹಾಸಿಕ ಮಟ್ಟದಲ್ಲಿ ಹೆಚ್ಚಳ: ವರದಿ

- Advertisement -
- Advertisement -

ಪ್ಯಾರಿಸ್ ಮೂಲದ ವಿಶ್ವ ಅಸಮಾನತೆಯ ಪ್ರಯೋಗಾಲಯವು(World Inequality Lab) ಭಾರತದಲ್ಲಿ ಆದಾಯ ಮತ್ತು ಸಂಪತ್ತಿನ ಅಸಮಾನತೆ, 1922-2023: ದಿ ರೈಸ್ ಆಫ್ ದಿ ಬಿಲಿಯನೇರ್ ರಾಜ್ ಎಂಬ ಶೀರ್ಷಿಕೆಯಡಿ ವರದಿಯನ್ನು ಬಹಿರಂಗಪಡಿಸಿದ್ದು, ಭಾರತದಲ್ಲಿ ಸಂಪತ್ತಿನ ಅಸಮಾನತೆಯಲ್ಲಿ ಐತಿಹಾಸಿಕವಾಗಿ ಹೆಚ್ಚಳವಾಗಿದೆ ಎಂದು ಹೇಳಿದೆ.

ಭಾರತದ ಜನಸಂಖ್ಯೆಯ ಅಗ್ರ ಶೇ.1ರಷ್ಟು ಜನರು ದೇಶದ ಆದಾಯದ ಹೆಚ್ಚಿನ ಪಾಲು ಹೊಂದಿದ್ದಾರೆ ಎಂದು ವರ್ಲ್ಡ್ ಇನ್ಈಕ್ವಾಲಿಟಿ ಲ್ಯಾಬ್ (ಡಬ್ಲ್ಯುಐಎಲ್)ನ ಅಧ್ಯಯನ ವರದಿಯು ಹೇಳಿದ್ದು, ಒಟ್ಟು ಆದಾಯ ಮತ್ತು ಸಂಪತ್ತಿನಲ್ಲಿ ಅಗ್ರ 1% ಭಾರತೀಯರ ಪಾಲು 2022-23ರಲ್ಲಿ ಅದರ ಅತ್ಯಧಿಕ ಮಟ್ಟವನ್ನು ತಲುಪುವ ನಿರೀಕ್ಷೆಯಿದೆ ಎಂದು ಹೇಳಿದೆ.

World Inequality Lab 1922 ಮತ್ತು 2022ರ ನಡುವಿನ ಡೇಟಾವನ್ನು ವಿಶ್ಲೇಷಿಸಿದೆ. ಈ ವೇಳೆ ಸಂಪತ್ತಿನ ಅಸಮಾನತೆಯು ಐತಿಹಾಸಿಕ ಮಟ್ಟದಲ್ಲಿವೆ. ಇದು ಎಷ್ಟರ ಮಟ್ಟಿಗೆ ಎಂದರೆ ಬ್ರಿಟಿಷರ್ ವಶಾಹತು ಶಾಹಿ ಆಡಳಿತಕ್ಕಿಂತ ಹೆಚ್ಚು ಅಸಮಾನವಾಗಿದೆ ಎಂದು ಹೇಳಿದೆ.

2000 ವಿಷವಿಯ ಆರಂಭದಿಂದಲೂ ಭಾರತದಲ್ಲಿ ಸಂಪತ್ತಿನ ಅಸಮಾನತೆ ಗಗನಕ್ಕೇರಿದೆ, 2022-23ರಲ್ಲಿ ಅಗ್ರ 1 ಶೇಕಡಾ ಜನಸಂಖ್ಯೆಯ ಆದಾಯ ಮತ್ತು ಸಂಪತ್ತಿನ ಪಾಲು ಅನುಕ್ರಮವಾಗಿ ಶೇಕಡಾ 22.6 ಮತ್ತು ಶೇಕಡಾ 40.1ಕ್ಕೆ ಏರಿದೆ. 1980ರ ದಶಕದಿಂದ ಭಾರತದಲ್ಲಿ ಅಸಮಾನತೆಯು ತೀವ್ರವಾಗಿ ಹೆಚ್ಚುತ್ತಿದೆ ಮುಖ್ಯವಾಗಿ 2014-15 ಮತ್ತು 2022-23ರ ನಡುವೆ ಸಂಪತ್ತಿನ ಕೇಂದ್ರೀಕರಣದ ವಿಷಯದಲ್ಲಿ ಅಸಮಾನತೆಯ ಹೆಚ್ಚಳವನ್ನು ಗಮನಿಸಿದೆ.

ಈ ಕುರಿತು ಪ್ರಬಂಧವನ್ನು ಥಾಮಸ್ ಪಿಕೆಟ್ಟಿ (ಪ್ಯಾರಿಸ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ವರ್ಲ್ಡ್ ಇನ್ಈಕ್ವಾಲಿಟಿ ಲ್ಯಾಬ್), ಲ್ಯೂಕಾಸ್ ಚಾನ್ಸೆಲ್ (ಹಾರ್ವರ್ಡ್ ಕೆನಡಿ ಸ್ಕೂಲ್ ಮತ್ತು ವರ್ಲ್ಡ್‌ ಇನ್ಈಕ್ವಾಲಿಟಿ ಲ್ಯಾಬ್) ಮತ್ತು ನಿತಿನ್ ಕುಮಾರ್ ಭಾರ್ತಿ (ನ್ಯೂಯಾರ್ಕ್ ವಿಶ್ವವಿದ್ಯಾಲಯ ಮತ್ತು ವರ್ಲ್ಡ್ ಇನ್ಈಕ್ವಾಲಿಟಿ ಲ್ಯಾಬ್) ಸಿದ್ದಪಡಿಸಿದ್ದಾರೆ.

1980ರ ದಶಕದ ಆರಂಭದಲ್ಲಿ, ಭಾರತ ಸರ್ಕಾರವು 1991ರಲ್ಲಿ ಉದಾರೀಕರಣಕ್ಕೆ ಕಾರಣವಾದ ಆರ್ಥಿಕ ಸುಧಾರಣೆಗಳನ್ನು ಪ್ರಾರಂಭಿಸಿದಾಗ, ಅಗ್ರ 1 ಶೇಕಡಾ ಆದಾಯದ ಷೇರುಗಳಲ್ಲಿನ ಕುಸಿತವು ಸ್ಥಗಿತಗೊಂಡಿತ್ತು. 1990ರ ದಶಕದ ಆರಂಭದಲ್ಲಿ, ಅಗ್ರ 1 ಶೇಕಡಾ ಆದಾಯದ ಷೇರುಗಳು ಮುಂದಿನ 30 ವರ್ಷಗಳಲ್ಲಿ ಸ್ಥಿರವಾಗಿ ಹೆಚ್ಚಿದ್ದು, 2022ರಲ್ಲಿ ಸಾರ್ವಕಾಲಿಕ ಗರಿಷ್ಠ 22.6 ಶೇಕಡಾವನ್ನು ತಲುಪಿದೆ. ಅಸಮಾನತೆಯು ಸ್ವಾತಂತ್ರ್ಯದ ನಂತರ 1980ರ ದಶಕದ ಆರಂಭದವರೆಗೆ ಕಡಿಮೆಯಾಯಿತು, ನಂತರ ಅದು ಏರಲು ಪ್ರಾರಂಭಿಸಿತು ಮತ್ತು 2000 ವಿಷವಿಯ ಆರಂಭದಿಂದ ಗಗನಕ್ಕೇರಿದೆ.

ಆದಾಯಗಳು ಮತ್ತು ಸಂಪತ್ತಿನ ಅತಿಯಾದ ಕೇಂದ್ರೀಕರಣವು ಸಮಾಜ ಮತ್ತು ಸರಕಾರದ ಮೇಲೆ ಅಸಮಾನ ಪ್ರಭಾವಕ್ಕೆ ಕಾರಣವಾಗಬಹುದು ಎಂದು ವರದಿ ಹೇಳಿದ್ದು,ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿಯ ವಿವಿಧ ಪ್ರಮುಖ ಸಂಸ್ಥೆಗಳ ಋಜುತ್ವವು ರಾಜಿ ಮಾಡಿಕೊಂಡಿರುವಂತೆ ಕಂಡುಬರುತ್ತಿದೆ. ಇದು ಭಾರತವು ಶ್ರೀಮಂತ ಪ್ರಭುತ್ವದತ್ತ ಜಾರುವ ಸಾಧ್ಯತೆಯನ್ನು ಇನ್ನಷ್ಟು ಸ್ಪಷ್ಟಗೊಳಿಸಿದೆ ಎಂದು ಹೇಳಿದೆ. ಆದಾಯ ಮತ್ತು ಸಂಪತ್ತು ಎರಡನ್ನೂ  ಲೆಕ್ಕ ಹಾಕಲು ತೆರಿಗೆ ಸಂಹಿತೆಯ ಪುನರ್ರಚನೆ ಅಗತ್ಯವಾಗಿದೆ ಎಂದು ವರದಿಯು ತಿಳಿಸಿದೆ.

ಪತ್ರಿಕೆಯ ಸಂಶೋಧನೆ ಪ್ರಬಂಧ ಪ್ರಕಟದ ಬೆನ್ನಲ್ಲಿ 2014ರಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಮೋದಿ ಸರಕಾರವನ್ನು ಟೀಕಿಸಿದ ಕಾಂಗ್ರೆಸ್, ಕೇಂದ್ರದ ತನ್ನ ಸರ್ಕಾರವು ಬಡತನವನ್ನು ನಿರ್ಮೂಲನೆ ಮಾಡಲು ಮತ್ತು ಸಮಾಜದ ಅಂಚಿನಲ್ಲಿರುವ ವರ್ಗದವರಿಗೆ ಆದಾಯ ಮತ್ತು ಜೀವನ ಮಟ್ಟವನ್ನು ಹೆಚ್ಚಿಸಲು ಅವಿರತವಾಗಿ ಕೆಲಸ ಮಾಡಿದೆ ಎಂದು ಬಿಜೆಪಿ ಸುಳ್ಳು ಹೇಳಿದೆ ಎಂದು ಟೀಕಿಸಿದೆ.

ಇದನ್ನು ಓದಿ: ಯೋಗಿ ಆದಿತ್ಯನಾಥ್‌ಗೆ ಶ್ಲಾಘಿಸಿ, ಮುಸ್ಲಿಮರ ವಿರುದ್ಧ ದ್ವೇಷ ಪೂರಿತ ಹೇಳಿಕೆ: ಬರೇಲಿ ಕೋರ್ಟ್ ಜಡ್ಜ್‌ಗೆ ಹೈಕೋರ್ಟ್‌ ತರಾಟೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...