Homeಮುಖಪುಟಭಾರತದ ಇಂಟರ್ನೆಟ್ ಸ್ಪೀಡ್ ವಿಶ್ವದಲ್ಲಿಯೇ ಅತ್ಯಂತ ಕಳಪೆ; ಡಿಜಿಟಲ್ ಇಂಡಿಯಾ?

ಭಾರತದ ಇಂಟರ್ನೆಟ್ ಸ್ಪೀಡ್ ವಿಶ್ವದಲ್ಲಿಯೇ ಅತ್ಯಂತ ಕಳಪೆ; ಡಿಜಿಟಲ್ ಇಂಡಿಯಾ?

ಜಗತ್ತಿನ 138 ದೇಶಗಳ ಪೈಕಿ ಭಾರತವು 131ನೇ ಸ್ಥಾನದಲ್ಲಿದೆ

- Advertisement -
- Advertisement -

ಭಾರತದಲ್ಲಿ ನಾವು ಬಳಸುವ ಇಂಟರ್ನೆಟ್ ಸ್ಪೀಡ್ ಜಗತ್ತಿನ ಉಳಿದ ದೇಶಗಳಿಗಿಂತ ಅತ್ಯಂತ ಕೆಳಮಟ್ಟದಲ್ಲಿದ್ದು, ಜಗತ್ತಿನ 138 ದೇಶಗಳ ಪೈಕಿ ಭಾರತವು 131ನೇ ಸ್ಥಾನದಲ್ಲಿದೆ ಎಂಬುದು ಅಧ್ಯಯನದ ವರದಿಯೊಂದರ ಫಲಿತಾಂಶದಿಂದ ತಿಳಿದುಬಂದಿದೆ.

ಮೊಬೈಲ್ ಇಂಟರ್ನೆಟ್/ಡಾಟಾ ಸ್ಪೀಡ್‍ನಲ್ಲಿ ಭಾರತಕ್ಕೆ ವಿಶ್ವದಲ್ಲಿ 131 ನೇ ಸ್ಥಾನ ಲಭಿಸಿದ್ದು, ಈ ಸಲದ Ranking ಗಣನೆಗೆ  ಒಟ್ಟು 138 ದೇಶಗಳನ್ನು ತೆಗೆದುಕೊಳ್ಳಲಾಗಿದೆ. ಕಳೆದ ವರ್ಷ 145 ದೇಶಗಳ ಪೈಕಿ 128ನೇ ಸ್ಥಾನದಲ್ಲಿದ್ದ ಭಾರತ, ಅದಕ್ಕಿಂತ ಹಿಂದಿನ ವರ್ಷ 110 ನೇ ಸ್ಥಾನದಲ್ಲಿತ್ತು. ಸದ್ಯಕ್ಕೆ, ಶ್ರೀಲಂಕಾ, ಪಾಕೀಸ್ಥಾನ ಹಾಗೂ ನೇಪಾಳ ಕೂಡಾ ಭಾರತಕ್ಕಿಂತ ಮೇಲಿನ ಸ್ಥಾನಗಳನ್ನು ಪಡೆದಿವೆ ಎಂದು ಗೆಜೆಟ್ ನೌ ವರದಿ ಮಾಡಿದೆ.

ವಿಶ್ವದ ಸರಾಸರಿ ಡೌನ್‍ಲೋಡ್ ಸ್ಪೀಡ್ 35.26 Mbps (megabit per second) ಆಗಿದ್ದರೆ, ಭಾರತದ ಸರಾಸರಿ ಡೌನ್‍ಲೋಡ್ ಸ್ಪೀಡ್ 12.07 Mbps. ಇನ್ನು ಗಣನೆಗೆ ತೆಗೆದುಕೊಂಡಿರುವ ಎಲ್ಲಾ ದೇಶಗಳ ಸರಾಸರಿ ಅಪ್‍ಲೋಡ್ ಸ್ಪೀಡ್ 11.22 Mbps ಆಗಿದ್ದರೆ, ಭಾರತದ್ದು, 4.31 Mbps.

ಇದನ್ನೂ ಓದಿ: ಡಿಜಿಟಲ್ ಮಾಧ್ಯಮಗಳ ಕಡೆ ಗಮನಹರಿಸಿ: ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರ್ಕಾರ

ಇದನ್ನೂ ಓದಿ: ಭಾರತದ ಡಿಜಿಟಲ್ ಉತ್ತೇಜನಕ್ಕೆ ಗೂಗಲ್‌ನಿಂದ 75,000 ಕೋಟಿ ರೂ. ನಿಧಿ

ಮೊದಲನೆಯ ಸ್ಥಾನದಲ್ಲಿರುವ ದಕ್ಷಿಣ ಕೊರಿಯಾದ ಸರಾಸರಿ ಇಂಟರ್ನೆಟ್ ವೇಗ 121.00 Mbps. ಇದು ಭಾರತದ ಸರಾಸರಿ ಬ್ರಾಡ್‍ಬ್ಯಾಂಡ್ ಸ್ಪೀಡ್‍ 46.47 Mbps ಗಿಂತಾ ಸುಮಾರು ಎರಡೂವರೆ ಪಟ್ಟು ಹೆಚ್ಚು. ಶ್ರೀಲಂಕಾ 19.95 Mbps ಹೊಂದಿದ್ದು 102ನೆಯ ಸ್ಥಾನ ಪಡೆದಿದ್ದರೆ, ಪಾಕೀಸ್ಥಾನ 17.13 Mbps ಸ್ಪೀಡ್‍ನೊಂದಿಗೆ 116ನೆಯ ಸ್ಥಾನದಲ್ಲಿದೆ. ನೇಪಾಳ ಕೂಡಾ 17.12 Mbps ಸ್ಪೀಡ್ ಸರಸಾರಿ ಇಂಟರ್ನೆಟ್‍ನೊಂದಿಗೆ 117ನೆಯ ಸ್ಥಾನದಲ್ಲಿದೆ.

ಭಾರತವನ್ನು ವಿಶ್ವಗುರು ಮಾಡುತ್ತೇವೆ ಎಂದು ಆರ್ಥಿಕತೆ, ಹಸಿವು, ಕೊರನಾ ಸೇರಿದಂತೆ ಕೊನೆಗೆ ಇಂಟರ್ನೆಟ್‌ ಸ್ಪೀಡ್‌ನಲ್ಲೂ ಕಳಪೆ ಪ್ರದರ್ಶನ ನೀಡುತ್ತಿರುವುದಕ್ಕೆ ವಿಮರ್ಶಕರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಡಿಜಿಟಲ್ ಇಂಡಿಯಾ ಮಾಡುತ್ತೇವೆ ಎಂದು ಇಂಟರ್ನೆಟ್ ಬಳಕೆಯ ಸ್ವೀಡ್‌ನಲ್ಲಿ ಜಗತ್ತಿನಲ್ಲಿಯೇ ಅತ್ಯಂತ ಅಗ್ಗದ ಸ್ಪೀಡ್ ಹೊಂದಿರುವ ದೇಶವನ್ನಾಗಿ ಮಾಡಲಾಗಿದೆ. ಪ್ರತಿಯೊಂದನ್ನೂ ಆನ್ಲೈನ್ ಮಾಡುತ್ತೇವೆ ಎಂದು ಹೊರಟಿರುವ ಸರ್ಕಾರ ಭಾರತದ ವಾಸ್ತವವನ್ನು ಅರಿತಂತೆ ಕಾಣುತ್ತಿಲ್ಲ.

ಕೊರೊನಾ ಕಾರಣದಿಂದ ಆನ್ಲೈನ್ ತರಗತಿಗಳಿಗಾಗಿ ಪರದಾಡುತ್ತಿರುವ ಹಳ್ಳಿಯ ಮಕ್ಕಳನ್ನು ನೆನೆಸಿಕೊಂಡರೆ ನಮ್ಮ ಡಿಜಿಟಲ್ ಇಂಡಿಯಾದ ಕಲ್ಪನೆ ಕಣ್ಣಮುಂದೆ ಬರುತ್ತದೆ. ಎಷ್ಟೋ ಬಾರಿ ಸರ್ಕಾರಿ ಕಛೇರಿಗಳಲ್ಲಿಯೇ ಇಂಟರ್ನೆಟ್ ಸ್ಪೀಡ್ ಕಡಿಮೆಯಾಗಿ ಕಛೇರಿಯ ಕೆಲಸಗಳು ನಿಂತುಹೋಗಿರುವ ಉದಾಹರಣೆಗಳು ಸಾಕಷ್ಟಿವೆ. ಹೀಗಿರುವಾಗ ಎಲ್ಲವನ್ನೂ ಡಿಜಿಟಲ್ ಮಾಡುತ್ತೇವೆ ಎನ್ನುವ ಸರ್ಕಾರಕ್ಕೆ ವಾಸ್ತವದ ಅರಿವಿಲ್ಲ ಎಂದೇ ಹೇಳಬೇಕಿದೆ.


ಇದನ್ನೂ ಓದಿ: ಮೋಡಿಯ ಮಾಡಿದವರ ಪರಸಂಗ: ಡಿಜಿಟಲ್ ಕಾಲದಲ್ಲೊಂದು ತಾರತಮ್ಯದ ತಕರಾರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...