Homeಮುಖಪುಟಭಾರತದ ಇಂಟರ್ನೆಟ್ ಸ್ಪೀಡ್ ವಿಶ್ವದಲ್ಲಿಯೇ ಅತ್ಯಂತ ಕಳಪೆ; ಡಿಜಿಟಲ್ ಇಂಡಿಯಾ?

ಭಾರತದ ಇಂಟರ್ನೆಟ್ ಸ್ಪೀಡ್ ವಿಶ್ವದಲ್ಲಿಯೇ ಅತ್ಯಂತ ಕಳಪೆ; ಡಿಜಿಟಲ್ ಇಂಡಿಯಾ?

ಜಗತ್ತಿನ 138 ದೇಶಗಳ ಪೈಕಿ ಭಾರತವು 131ನೇ ಸ್ಥಾನದಲ್ಲಿದೆ

- Advertisement -
- Advertisement -

ಭಾರತದಲ್ಲಿ ನಾವು ಬಳಸುವ ಇಂಟರ್ನೆಟ್ ಸ್ಪೀಡ್ ಜಗತ್ತಿನ ಉಳಿದ ದೇಶಗಳಿಗಿಂತ ಅತ್ಯಂತ ಕೆಳಮಟ್ಟದಲ್ಲಿದ್ದು, ಜಗತ್ತಿನ 138 ದೇಶಗಳ ಪೈಕಿ ಭಾರತವು 131ನೇ ಸ್ಥಾನದಲ್ಲಿದೆ ಎಂಬುದು ಅಧ್ಯಯನದ ವರದಿಯೊಂದರ ಫಲಿತಾಂಶದಿಂದ ತಿಳಿದುಬಂದಿದೆ.

ಮೊಬೈಲ್ ಇಂಟರ್ನೆಟ್/ಡಾಟಾ ಸ್ಪೀಡ್‍ನಲ್ಲಿ ಭಾರತಕ್ಕೆ ವಿಶ್ವದಲ್ಲಿ 131 ನೇ ಸ್ಥಾನ ಲಭಿಸಿದ್ದು, ಈ ಸಲದ Ranking ಗಣನೆಗೆ  ಒಟ್ಟು 138 ದೇಶಗಳನ್ನು ತೆಗೆದುಕೊಳ್ಳಲಾಗಿದೆ. ಕಳೆದ ವರ್ಷ 145 ದೇಶಗಳ ಪೈಕಿ 128ನೇ ಸ್ಥಾನದಲ್ಲಿದ್ದ ಭಾರತ, ಅದಕ್ಕಿಂತ ಹಿಂದಿನ ವರ್ಷ 110 ನೇ ಸ್ಥಾನದಲ್ಲಿತ್ತು. ಸದ್ಯಕ್ಕೆ, ಶ್ರೀಲಂಕಾ, ಪಾಕೀಸ್ಥಾನ ಹಾಗೂ ನೇಪಾಳ ಕೂಡಾ ಭಾರತಕ್ಕಿಂತ ಮೇಲಿನ ಸ್ಥಾನಗಳನ್ನು ಪಡೆದಿವೆ ಎಂದು ಗೆಜೆಟ್ ನೌ ವರದಿ ಮಾಡಿದೆ.

ವಿಶ್ವದ ಸರಾಸರಿ ಡೌನ್‍ಲೋಡ್ ಸ್ಪೀಡ್ 35.26 Mbps (megabit per second) ಆಗಿದ್ದರೆ, ಭಾರತದ ಸರಾಸರಿ ಡೌನ್‍ಲೋಡ್ ಸ್ಪೀಡ್ 12.07 Mbps. ಇನ್ನು ಗಣನೆಗೆ ತೆಗೆದುಕೊಂಡಿರುವ ಎಲ್ಲಾ ದೇಶಗಳ ಸರಾಸರಿ ಅಪ್‍ಲೋಡ್ ಸ್ಪೀಡ್ 11.22 Mbps ಆಗಿದ್ದರೆ, ಭಾರತದ್ದು, 4.31 Mbps.

ಇದನ್ನೂ ಓದಿ: ಡಿಜಿಟಲ್ ಮಾಧ್ಯಮಗಳ ಕಡೆ ಗಮನಹರಿಸಿ: ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರ್ಕಾರ

ಇದನ್ನೂ ಓದಿ: ಭಾರತದ ಡಿಜಿಟಲ್ ಉತ್ತೇಜನಕ್ಕೆ ಗೂಗಲ್‌ನಿಂದ 75,000 ಕೋಟಿ ರೂ. ನಿಧಿ

ಮೊದಲನೆಯ ಸ್ಥಾನದಲ್ಲಿರುವ ದಕ್ಷಿಣ ಕೊರಿಯಾದ ಸರಾಸರಿ ಇಂಟರ್ನೆಟ್ ವೇಗ 121.00 Mbps. ಇದು ಭಾರತದ ಸರಾಸರಿ ಬ್ರಾಡ್‍ಬ್ಯಾಂಡ್ ಸ್ಪೀಡ್‍ 46.47 Mbps ಗಿಂತಾ ಸುಮಾರು ಎರಡೂವರೆ ಪಟ್ಟು ಹೆಚ್ಚು. ಶ್ರೀಲಂಕಾ 19.95 Mbps ಹೊಂದಿದ್ದು 102ನೆಯ ಸ್ಥಾನ ಪಡೆದಿದ್ದರೆ, ಪಾಕೀಸ್ಥಾನ 17.13 Mbps ಸ್ಪೀಡ್‍ನೊಂದಿಗೆ 116ನೆಯ ಸ್ಥಾನದಲ್ಲಿದೆ. ನೇಪಾಳ ಕೂಡಾ 17.12 Mbps ಸ್ಪೀಡ್ ಸರಸಾರಿ ಇಂಟರ್ನೆಟ್‍ನೊಂದಿಗೆ 117ನೆಯ ಸ್ಥಾನದಲ್ಲಿದೆ.

ಭಾರತವನ್ನು ವಿಶ್ವಗುರು ಮಾಡುತ್ತೇವೆ ಎಂದು ಆರ್ಥಿಕತೆ, ಹಸಿವು, ಕೊರನಾ ಸೇರಿದಂತೆ ಕೊನೆಗೆ ಇಂಟರ್ನೆಟ್‌ ಸ್ಪೀಡ್‌ನಲ್ಲೂ ಕಳಪೆ ಪ್ರದರ್ಶನ ನೀಡುತ್ತಿರುವುದಕ್ಕೆ ವಿಮರ್ಶಕರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಡಿಜಿಟಲ್ ಇಂಡಿಯಾ ಮಾಡುತ್ತೇವೆ ಎಂದು ಇಂಟರ್ನೆಟ್ ಬಳಕೆಯ ಸ್ವೀಡ್‌ನಲ್ಲಿ ಜಗತ್ತಿನಲ್ಲಿಯೇ ಅತ್ಯಂತ ಅಗ್ಗದ ಸ್ಪೀಡ್ ಹೊಂದಿರುವ ದೇಶವನ್ನಾಗಿ ಮಾಡಲಾಗಿದೆ. ಪ್ರತಿಯೊಂದನ್ನೂ ಆನ್ಲೈನ್ ಮಾಡುತ್ತೇವೆ ಎಂದು ಹೊರಟಿರುವ ಸರ್ಕಾರ ಭಾರತದ ವಾಸ್ತವವನ್ನು ಅರಿತಂತೆ ಕಾಣುತ್ತಿಲ್ಲ.

ಕೊರೊನಾ ಕಾರಣದಿಂದ ಆನ್ಲೈನ್ ತರಗತಿಗಳಿಗಾಗಿ ಪರದಾಡುತ್ತಿರುವ ಹಳ್ಳಿಯ ಮಕ್ಕಳನ್ನು ನೆನೆಸಿಕೊಂಡರೆ ನಮ್ಮ ಡಿಜಿಟಲ್ ಇಂಡಿಯಾದ ಕಲ್ಪನೆ ಕಣ್ಣಮುಂದೆ ಬರುತ್ತದೆ. ಎಷ್ಟೋ ಬಾರಿ ಸರ್ಕಾರಿ ಕಛೇರಿಗಳಲ್ಲಿಯೇ ಇಂಟರ್ನೆಟ್ ಸ್ಪೀಡ್ ಕಡಿಮೆಯಾಗಿ ಕಛೇರಿಯ ಕೆಲಸಗಳು ನಿಂತುಹೋಗಿರುವ ಉದಾಹರಣೆಗಳು ಸಾಕಷ್ಟಿವೆ. ಹೀಗಿರುವಾಗ ಎಲ್ಲವನ್ನೂ ಡಿಜಿಟಲ್ ಮಾಡುತ್ತೇವೆ ಎನ್ನುವ ಸರ್ಕಾರಕ್ಕೆ ವಾಸ್ತವದ ಅರಿವಿಲ್ಲ ಎಂದೇ ಹೇಳಬೇಕಿದೆ.


ಇದನ್ನೂ ಓದಿ: ಮೋಡಿಯ ಮಾಡಿದವರ ಪರಸಂಗ: ಡಿಜಿಟಲ್ ಕಾಲದಲ್ಲೊಂದು ತಾರತಮ್ಯದ ತಕರಾರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...